ನೆಲ್ಯಾಡಿ ಪೇಟೆಯಲ್ಲಿ ಸರಣಿ ಅಪಘಾತ: ಅಂಗಡಿಗೆ ನುಗ್ಗಿದ ಈಚರ್ ಗಾಡಿ

ನೆಲ್ಯಾಡಿ:ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಪೇಟೆಯ ಮಧ್ಯಭಾಗದಲ್ಲಿ ಬುಧವಾರ ಸಂಜೆ ಸರಣಿ ಅಪಘಾತ ಸಂಭವಿಸಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.ನೆಲ್ಯಾಡಿಯ ಗಣೇಶ್ ಸ್ಟೋರ್ ಬಳಿ ನಿಲ್ಲಿಸಿದ್ದ ಉಜಿರೆ ಮಹಾವೀರ ಸಂಸ್ಥೆಗೆ ಸೇರಿದ ಲೈನ್ ಸೇಲ್ಸ್ ಈಚರ್ ಗಾಡಿ, ಪಶು ಆಹಾರ ಸಾಗಿಸುತ್ತಿದ್ದ ಗೂಡ್ಸ್ ಟೆಂಪೋ ಗೆ ಎಸ್‌ಎಲ್‌ವಿ ಸಂಸ್ಥೆಗೆ ಸೇರಿದ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಈಚರ್ ಲಾರಿ ನೇರವಾಗಿ ಗಣೇಶ್ ಸ್ಟೋರ್ ಅಂಗಡಿಗೆ ನುಗ್ಗಿ ಭೀತಿಯ ವಾತಾವರಣ ನಿರ್ಮಾಣವಾಯಿತು….

Read More

ನೆಟ್ಟಣ ರೈಲು ನಿಲ್ದಾಣದ ಹಳಿಗೆ ಉರುಳಿದ ಕ್ರೇನ್‌.. !

ಕಡಬ:ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುವ ವೇಳೆ ಅಡಿಭಾಗ ಕುಸಿದು ಕ್ರೇನ್ ರೈಲು ಹಳಿಗೆ ಉರುಳಿ ಬಿದ್ದ ಘಟನೆ ಬುಧವಾರ ಕಡಬ ತಾಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಸಂಭವಿಸಿದೆ. ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕ್ರೇನ್ ಪ್ಲಾಟ್ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಉರುಳಿ ರೈಲು ಹಳಿ ಮೇಲೆ ಅಡ್ಡಲಾಗಿ ಬಿದ್ದಿದೆ. ಪ್ಲಾಟ್ ಫಾರ್ಮ್‌ನ ಸೈಡ್ ನಲ್ಲಿದ್ದ ಕ್ರೇನ್ ಪ್ಲಾಟ್ ಫಾರ್ಮ್ನ ಬದಿ ಕುಸಿದ ಪರಿಣಾಮ ನಿಯಂತ್ರಣ ತಪ್ಪಿ ರೈಲು…

Read More

ಕಾರ್ ಗೆ ಬೈಕ್ ಢಿಕ್ಕಿ : ಇಬ್ಬರ ಪರಿಸ್ಥಿತಿ ಗಂಭೀರ…. !

ಉಳ್ಳಾಲ:ಕಾರ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರ್ ಬಳಿ ಬುಧವಾರ ಸಂಜೆ ನಡೆದಿದೆ. ಗಾಯಗೊಂಡ ವರನ್ನು ನಿಖಿಲ್,ಗಗನ್ ಜೀತ್ ಎಂದು ಗುರುತಿಸಲಾಗಿದೆ.ಇವರಿಬ್ಬರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರಿನ ಹಿಂಭಾಗಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗ್ಗೆ ಮಂಗಳೂರು ಗ್ರಾಮಾಂತರ ಸಂಚಾರ ಠಾಣೆಯಲ್ಲಿ ಪ್ರಕರಣ…

Read More

ದೇಶಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸಿ ರಾಷ್ಟ್ರೀಯ ಆರ್ಥಿಕತೆಯನ್ನು ಬಲಪಡಿಸಿ : ರವಿ ಮುನಿಸ್ವಾಮಿ

ಪುತ್ತೂರು:`ಸ್ವದೇಶಿ ಬಳಸಿ ದೇಶ ಬೆಳೆಸಿ’ ಎಂಬ ಘೋಷವಾಕ್ಯದಡಿ, ಸಾಫ್ಟ್‌ವೇರ್ ಉತ್ಪನ್ನಗಳಿಂದ ಹಿಡಿದು ನಿತ್ಯೋಪಯೋಗಿ ವಸ್ತುಗಳ ತನಕ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸಿ ರಾಷ್ಟ್ರೀಯ ಆರ್ಥಿಕತೆಯನ್ನು ಬಲಪಡಿಸುವ ಉದ್ದೇಶದಿಂದ ಬೆಂಗಳೂರಿನ ಶ್ರೀ ಪರಿಪೂರ್ಣ ಸನಾತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾರತೀಯ ಮಾಜಿ ಸೇನಾ ಅಧಿಕಾರಿ ಹಾಗೂ ಕರ್ನಾಟಕ ಸರಕಾರದ ಮಾಜಿ ನಿರ್ದೇಶಕ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸ್ವದೇಶಿ ಜಾಗರಣ ಸೈಕ್ಲಿಂಗ್ ಅಭಿಯಾನ ಪುತ್ತೂರಿಗೆ ಆಗಮಿಸಿತು. ಸುಳ್ಯ ಮಾರ್ಗವಾಗಿ ಪುತ್ತೂರಿಗೆ ಆಗಮಿಸಿದ ಅವರನ್ನು ದರ್ಬೆ ವಿನಾಯಕ…

Read More

ಡಿ 28 ರಂದು ಬಂಟರ ಸಂಘ ಬಜಪೆ ವಲಯದ ಆಶ್ರಯದಲ್ಲಿ ಪಾಲ್ದಟ್ಟೆಡ್ ಬಂಟೆರೆ ಪರ್ಬ-2025

ಮಂಗಳೂರು: ಪಾಲ್ದಟ್ಟೆಡ್ ಬಂಟೆರೆ ಪರ್ಬ-2025 ಕಾರ್ಯಕ್ರಮವು ಡಿ 28 ರವಿವಾರ ಬಂಟರ ಸಂಘ ಬಜಪೆ ವಲಯದ ಆಶ್ರಯದಲ್ಲಿ ನಡೆಯಲಿರುವುದು . ಈ ಕ್ರಾಯಕ್ರಮದಲ್ಲಿ ನೂತನ ಅಧ್ಯಕ್ಷರ ಪದಗ್ರಹಣ, ಬಂಟರ ಸಂಘಗಳ ಸಾಂಸ್ಕೃತಿಕ ಸ್ಪರ್ಧೆ , ಗೌರವ ಅಭಿನಂದನೆ, ವಿದ್ಯಾನಿಧಿಯ ಉದ್ಘಾಟನೆ, ಆರ್ಥಿಕ ಸಹಾಯಧನ ವಿತರಣಾ ಕಾರ್ಯಕ್ರಮವುಬಜಪೆಯ ತಾರಿಕಂಬಳ ಬಂಟರ ಸಂಘದ ನಿವೇಶನದಲ್ಲಿ ನಡೆಯಲಿರುವುದು ಎಂದು ಸಂಘದ ಉಪಾಧ್ಯಕ್ಷರಾದ ಸುಕೇಶ್ ಶೆಟ್ಟಿ ಮುಂಡಾರುಗುತ್ತು ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ…

Read More

ಕನ್ನಡ ಭವನದ “ಕನ್ನಡದ ನಡಿಗೆ -ಶಾಲೆಯ ಕಡೆಗೆ “ಶೀರ್ಷಿಕೆಯೇ ಮನ ಮುಟ್ಟುವಂತಹದ್ದು -ಡಾ. ನೆಗಳಗುಳಿ

ಮಂಗಳೂರು :ಎಳೆಯರಲ್ಲಿ, ವಿದ್ಯಾರ್ಥಿಗಳಲ್ಲಿ ಕನ್ನಡಾಭಿಮಾನ, ಸಾಹಿತ್ಯಾಭಿಮಾನ ಮೂಡಿಸಬೇಕಾದದ್ದು ಕಾಲಘಟ್ಟದ ಅನಿವಾರ್ಯ. ಈ ನಿಟ್ಟಿನಲ್ಲಿ ಕನ್ನಡ ಭವನ ದ. ಕ. ಜಿಲ್ಲಾ ಘಟಕದ ವಿನೂತನ ಪ್ರಯೋಗ “ಕನ್ನಡದ ನಡಿಗೆ -ಶಾಲೆಯ ಕಡೆಗೆ “ಎಂಬ ಏಕ ದಿನ ಸಾಹಿತ್ಯ ಅಭಿಯಾನ ಪ್ರಾಯೋಗಿಕ ಹಾಗೂ ಅನುಕರಣೀಯ ಎಂದು ಮಂಗಳೂರಿನ ಹಿರಿಯ ವೈದ್ಯ ಗಝಲ್ ಕವಿ ಸಾಹಿತಿ ಡಾ. ಸುರೇಶ್ ನೆಗಳಗುಳಿ ಅಭಿಪ್ರಾಯ ಪಟ್ಟರು. ಇವರು ಮಂಗಳೂರಿನ ಕ್ರಾಸ್ತಿಯ ಪ್ರೌಢ ಶಾಲೆ ಜೆಪ್ಪು ಇಲ್ಲಿನ ಸಭಾಂಗಣದಲ್ಲಿ, ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ…

Read More

ಕರಾವಳಿ ಪ್ರದೇಶದ ಸಾರ್ವಜನಿಕರು ಭೂ ಅಭಿವೃದ್ಧಿ ಹಾಗೂ ಕಟ್ಟಡ ಲೈಸೆನ್ಸ್ ಪಡೆಯುವ ಸಂದರ್ಭದಲ್ಲಿ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಕುರಿತು ಸದನದಲ್ಲಿ ಗಮನ ಸೆಳೆದ ಎಂ ಎಲ್ ಸಿ ಕಿಶೋರ್ ಕುಮಾರ್ ಪುತ್ತೂರು

ಬೆಳಗಾವಿ: ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್ತಿನ ಅಧಿವೇಶನದ ಶೂನ್ಯ ವೇಳೆಯಲ್ಲಿ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಕರಾವಳಿ ಪ್ರದೇಶದ ಸಾರ್ವಜನಿಕರು ಭೂ ಅಭಿವೃದ್ಧಿ ಹಾಗೂ ಕಟ್ಟಡ ಲೈಸೆನ್ಸ್ ಪಡೆಯುವ ಸಂದರ್ಭದಲ್ಲಿ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಕುರಿತು ಸದನದ ಗಮನ ಸೆಳೆದರು. ಶಾಸಕರು ಮಾತನಾಡುತ್ತಾ, ರಾಜ್ಯದ ಕರಾವಳಿ ಗ್ರಾಮೀಣ ಭಾಗದ ಒಬ್ಬ ಸಾಮಾನ್ಯ ನಾಗರಿಕನು ತನ್ನ ಸ್ವಂತ ಜಮೀನಿನಲ್ಲಿ ಮನೆ ನಿರ್ಮಿಸಲು ಮುಂದಾದಾಗ, ಸರ್ಕಾರದ ವಿವಿಧ ಇಲಾಖೆಗಳ ಅನುಮೋದನೆ ಪಡೆಯುವ ಪ್ರಕ್ರಿಯೆಗಳು ಅತ್ಯಂತ ಜಟಿಲವಾಗಿದ್ದು,…

Read More

ಜೀವ ರಕ್ಷಣೆಯ ಪಾಠ: ಅಗ್ನಿಶಾಮಕ ಠಾಣೆಗೆ ನಂದಗೋಕುಲದ ಮಕ್ಕಳು

ಮಂಗಳೂರು:ಮಕ್ಕಳಲ್ಲಿ ಅಗ್ನಿ ಸುರಕ್ಷತೆಯ ಜಾಗೃತಿ ಮೂಡಿಸುವುದು ಹಾಗೂ ತುರ್ತು ಸಂದರ್ಭಗಳಲ್ಲಿ ಜೀವ ಮತ್ತು ಆಸ್ತಿಯನ್ನು ರಕ್ಷಿಸುವ ಅಗ್ನಿಶಾಮಕ ದಳದವರ ಮಹತ್ವದ ಪಾತ್ರವನ್ನು ಪರಿಚಯಿಸುವ ಉದ್ದೇಶದಿಂದ ಕೆನರಾ ನಂದಗೋಕುಲ ಶಾಲೆ ಕೋಡಿಯಾಲ್ ಬೈಲ್ ಹಾಗೂ ಪದವಿನಂಗಡಿ ಶಾಖೆಗಳ ಮಕ್ಕಳು ಶೈಕ್ಷಣಿಕ ಕ್ಷೇತ್ರಪ್ರವಾಸದ ಅಂಗವಾಗಿ ಪಾಂಡೇಶ್ವರದ ಅಗ್ನಿಶಾಮಕ ಠಾಣೆಗೆ ಭೇಟಿ ನೀಡಿದರು . ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿ, ಅಗ್ನಿಶಾಮಕ ದಳದವರ ಕರ್ತವ್ಯಗಳು, ಅಗ್ನಿ ಸುರಕ್ಷತಾ ಸಾಧನಗಳು, ಅಗ್ನಿಶಾಮಕ ಹಾಗೂ ರಕ್ಷಣಾ ವಾಹನಗಳ ಕಾರ್ಯವಿಧಾನವನ್ನು ವಿವರಿಸಿದರು. ಬೆಂಕಿಯನ್ನು…

Read More

ಮತ್ತೆ ‘ಧರ್ಮ’ದೇಟು . .. ! ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕ, ಸಿಬ್ಬಂದಿಯಿಂದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ಆರೋಪ… !

ಬೆಳ್ತಂಗಡಿ:ಸಂತೆಕಟ್ಟೆ ಬಳಿಯ ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಮೂವರು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತಂತೆ ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವೇಣೂರು ಸಮೀಪದ ಮೂವರು ವಿದ್ಯಾರ್ಥಿಗಳು ಸೋಮವಾರ ಶಾಲೆಗೆ ರಜೆ ಹಾಕಿ, ಮಧ್ಯಾಹ್ನದ ಬಳಿಕ ಬೆಳ್ತಂಗಡಿ ಪೇಟೆಯಲ್ಲಿ ಪ್ರತಿ ಸೋಮವಾರ ನಡೆಯುವ ಸಂತೆಗೆ ಬಂದಿದ್ದರು. ಸಂತೆ ವೀಕ್ಷಿಸಿದ ನಂತರ ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ಪಕ್ಕದಲ್ಲಿ ಕುಳಿತು ಮೊಬೈಲ್‌ನಲ್ಲಿ ಆಟವಾಡುತ್ತಿದ್ದ…

Read More

ಅಕ್ರಮ ಎಂಡಿಎಂಎ ಸಾಗಾಟ ವೇಳೆ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ .. ಪರಾರಿಯಾಗಲು ಯತ್ನಿಸಿದ ರೌಡಿಶೀಟರ್‌ನ ಬೆನ್ನೆಟ್ಟಿ ಹಿಡಿದ ಖಾಕಿ … ! ಪೊಲೀಸರ ಕಾರ್ಯಾಚರಣೆಗೆ ಮೆಚ್ಚುಗೆ .. !

ಮೂಡುಬಿದಿರೆ: ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ರೌಡಿ ಶೀಟರ್ ಓರ್ವನನ್ನು ಮೂಡುಬಿದಿರೆ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿರುವ ಘಟನೆ ಕೊಡಂಗಲ್ಲು ಎಂಬಲ್ಲಿ ಮಂಗಳವಾರ ಸಂಜೆ ವರದಿಯಾಗಿದೆ. ಬಂಧಿತನನ್ನು ಕಲ್ಲಡ್ಕ ನಿವಾಸಿ ತೌಸೀಫ್ ಎಂದು ಗುರುತಿಸಲಾಗಿದೆ. ಬಂಧಿತನಿಂದ ಸುಮಾರು 50ಸಾವಿರ ರೂ. ಮೌಲ್ಯದ 10.800 ಗ್ರಾಂ ತೂಕದ ಎಂಡಿಎಂಎ, ಕೃತ್ಯಕ್ಕೆ ಬಳಸಿದ್ದ ಸುಮಾರು 3ಲಕ್ಷ‌ ರೂ.‌ಮೌಲ್ಯದ ಕಾರು, ಈತನ ಕಾರಿನಲ್ಲಿ ಪತ್ತೆಯಾಗಿದ್ದ ತಲವಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡುಬಿದಿರೆ ತಾಲೂಕಿನ ಶಿರ್ತಾಡಿಯಿಂದ ಕೊಡಂಗಲ್ಲು – ಮಹಾವೀರ…

Read More
error: Content is protected !!