ಸುಳ್ಯ ಸಮೀಪ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಕಾಡಾನೆಯೊಂದು ಬಾವಿಗೆ ಬಿದ್ದ ಘಟನೆ: ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ

ಸುಳ್ಯ ಸಮೀಪ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಕಾಡಾನೆಯೊಂದು ಬಾವಿಗೆ ಬಿದ್ದ ಘಟನೆ ಸಂಭವಿಸಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ ನಡೆಸಿ ಬಾವಿಗೆ ಬಿದ್ದ ಕಾಡಾನೆಯನ್ನು ರಕ್ಷಣೆ ಮಾಡಿ ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಅಂದಾಜು 20 ವರ್ಷ ಪ್ರಾಯದ ಗಂಡಾನೆಯೊಂದು ಪೆರಾಜೆ ಸಮೀಪ ಕಲ್ಚರ್ಪೆಯಲ್ಲಿ ಭಾನುವಾರ ರಾತ್ರಿ 11.30ರ ವೇಳೆಗೆ ತೆರೆದ ಬಾವಿಗೆ ಬಿದ್ದಿದೆ. ಕಾಡಿನಿಂದ ನಾಡಿಗೆ ಬಂದ ಆನೆಯು ಅರಣ್ಯದಂಚಿನ ತೋಟದ ಬದಿಯಲ್ಲಿರುವ ಪಾಳು ಬಿದ್ದ ಬಾವಿಗೆ ಆಯ ತಪ್ಪಿ…

Read More

ಪ್ರಯಾಣಿಕರಿದ್ದಾಗಲೇ ಬಸ್‌ಗೆ ಇಂಧನ ತುಂಬಿಕೆ — ಸುರಕ್ಷತೆ ಬಗ್ಗೆ ಆತಂಕ

ಉಪ್ಪಳ :ಪ್ರಯಾಣಿಕರು ತುಂಬಿರುವ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ತುಂಬಲಾಗುತ್ತಿರುವುದು ಪ್ರಯಾಣಿಕರ ಸುರಕ್ಷತೆಗೆ ಗಂಭೀರ ಆತಂಕ ಉಂಟುಮಾಡಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್‌ಗಳು ಕರ್ನಾಟಕದ ತೊಕ್ಕೊಟ್ಟು ಹಾಗೂ ಕೊಟ್ಟೆಕಾರು ಪ್ರದೇಶದ ಪಂಪ್‌ಗಳಲ್ಲಿ ಇಂಧನ ತುಂಬುತ್ತಿರುವುದಾಗಿ ತಿಳಿದುಬಂದಿದೆ. ಈ ವೇಳೆ ಸುಮಾರು 10 ನಿಮಿಷಗಳ ಕಾಲ ಬಸ್ ನಿಲುಗಡೆ ಆಗುತ್ತಿದ್ದು, ಬಳಿಕ ಟೋಲ್ ಪ್ಲಾಜಾಗಳಲ್ಲಿ ಮತ್ತಷ್ಟು ವಿಳಂಬ ಉಂಟಾಗುತ್ತಿರುವುದರಿಂದ ಪ್ರಯಾಣಿಕರಿಗೆ ಸಮಯ ನಷ್ಟವಾಗುತ್ತಿದೆ. ಈ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರೂ, ಸಂಬಂಧಿಸಿದ…

Read More

ನಿಕೋ ಚಾಕೊಲೇಟ್ ಸ್ಟ್ರೀಟ್‌ನ 7 ನೇ ಆವೃತ್ತಿ ಫಿಜಾದಲ್ಲಿ ನೆಕ್ಸಸ್‌ನಲ್ಲಿ.

ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ) ಅಡಿಯಲ್ಲಿ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್, ಏಪ್ರಿಲ್ 11 ಮತ್ತು 12, 2026 ರಂದು ಮಂಗಳೂರಿನ ಪಾಂಡೇಶ್ವರದ ಫಿಜಾ ಬೈ ನೆಕ್ಸಸ್‌ನಲ್ಲಿ ನಿಕೋ ನ ಚಾಕೊಲೇಟ್ ಸ್ಟ್ರೀಟ್‌ನ 7 ನೇ ಆವೃತ್ತಿಯನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮಕ್ಕೆ ಕ್ಯಾಂಪ್ಕೋ ಸಹಕಾರಾಗಿ, ಫಿಜಾ ಬೈ ನೆಕ್ಸಸ್‌ ಪಾಲುದಾರ ಮತ್ತು ಡೈಜಿವರ್ಲ್ಡ್ ಅಧಿಕೃತ ಮಾಧ್ಯಮ ಪಾಲುದಾರರಾಗಿ ಪಾಲ್ಗೊಂಡರು. ಸಹ ಪ್ರಾಧ್ಯಾಪಕ ಸಂಯೋಜಕ ಶ್ರೀ ಪ್ರಕಾಶ್ ಕೆ ಅವರ ಮಾರ್ಗದರ್ಶನದಲ್ಲಿ 3 ನೇ ವರ್ಷದ ಬಿಎ ವಿದ್ಯಾರ್ಥಿಗಳು…

Read More

ವಿಟ್ಲ: ಕೋಳಿ ಅಂಕದ ಅಡ್ಡೆಗೆ ಪೋಲಿಸ್ ದಾಳಿ – ನಾಲ್ವರ ಬಂಧನ, ಇಬ್ಬರಿಂದ ಕರ್ತವ್ಯಕ್ಕೆ ಅಡ್ಡಿ

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರು ಪರಾರಿಯಾಗಿದ್ದಾರೆ. ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ಮತ್ತು ಸಿಬ್ಬಂದಿ ತಂಡ ದಿನಾಂಕ 12-04-2026ರ ಸಂಜೆ ಸ್ಥಳಕ್ಕೆ ದಾಳಿ ನಡೆಸಿದೆ. ಪೊಲೀಸರು ಸ್ಥಳಕ್ಕೆ…

Read More

ಕುಡಿಯುವ ನೀರಿಗಾಗಿ ಬಂಟ್ವಾಳದಲ್ಲಿ ಬೃಹತ್ ಪ್ರತಿಭಟನೆ

ಬಂಟ್ವಾಳ, ಏಪ್ರಿಲ್:ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಖಂಡಿಸಿ ಕೌಡೇಲು ಮತ್ತು ರಂಗೇಲ್ ನಾಗರಿಕ ಸಮಿತಿ ವತಿಯಿಂದ ಬಂಟ್ವಾಳ ಪುರಸಭೆಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಪುರಸಭೆ ಕಚೇರಿಯ ಮುಂದೆ ಬಟ್ಟೆಗಳನ್ನು ನೇತಾಡಿಸಿ, ಕೊಡ ಹಾಗೂ ಬಕೆಟ್‌ಗಳನ್ನು ಇಟ್ಟು ಅಧಿಕಾರಿಗಳಿಗೆ ಧಿಕ್ಕಾರ ಕೂಗಿದರು. ಈ ವೇಳೆ ಮಾತನಾಡಿದ ಕಬೀರ್ ಆಹಮ್ಮದ್ ಅವರು, ಕೌಡೇಲು ಮತ್ತು ರಂಗೇಲ್ ಭಾಗದ ನಿವಾಸಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಸ್ಯೆ ಬಗ್ಗೆ ಹಲವಾರು…

Read More

ಬಂಟ್ವಾಳದಲ್ಲಿ ದಲಿತ ಮಹಿಳಾ ಉದ್ಯೋಗಿಗೆ ಜಾತಿ ನಿಂದನೆ — ಮೂವರ ವಿರುದ್ಧ ಪ್ರಕರಣ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳಾ ಉದ್ಯೋಗಿಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಮಾನಸಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನೆಲೆ ನೆಟ್ಲಮುಡ್ನೂರು ಗ್ರಾಮದ ನೆಕ್ಕರೆ ಮಠ ನಿವಾಸಿ ದೂರುದಾರರಾದ ಶೇಷಮ್ಮ (47 ವರ್ಷ) ಅವರು ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿವಿಧ ಶಾಖೆಗಳಲ್ಲಿ ಕಳೆದ…

Read More

ಶಿಕ್ಷಕರೊಂದಿಗೆ ಈಜಲು ತೆರಳಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ವಿಟ್ಲ: ಶಿಕ್ಷಕರ ಜೊತೆ ಈಜಲು ಹೋಗಿದ್ದ ವಿಟ್ಲದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೊಪ್ಪ ಜಯಪುರದಲ್ಲಿ ವ್ಯಾಸಂಗ ಮಾಡುತ್ತಿದ್ದ ಮೃತ ವಿದ್ಯಾರ್ಥಿಯು ವಿಟ್ಲದ ಬಾಲಕನಾಗಿದ್ದಾನೆ. ಘಟನೆಯ ವಿವರ: ಜಯಪುರದ ಗುರುಕುಲ ಮಾದರಿಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನಿಕೇತ್ (14) ಮೃತಪಟ್ಟ ದುರ್ದೈವಿ. ಭಾನುವಾರ ಮಧ್ಯಾಹ್ನ ಶಿಕ್ಷಕರೊಂದಿಗೆ ಈಜುಕೊಳಕ್ಕೆ ಈಜಲು ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದ ವೇಳೆ ಅನಿಕೇತ್ ನೀರಿನಲ್ಲಿ ಮುಳುಗಿ…

Read More

ಮಂಗಳೂರು ಫಿಸಿಯೋಕಾನ್-2026 ಸಮಾರೋಪ — ಜಾಗತಿಕ ಬೇಡಿಕೆ ಹೆಚ್ಚುತ್ತಿರುವ ಕ್ಷೇತ್ರ

ಮಂಗಳೂರು, ಫಿಸಿಯೋಥೆರಪಿ ಕ್ಷೇತ್ರದಲ್ಲಿ ನಿರಂತರ ಸಂಶೋಧನೆ ಹಾಗೂ ನವೀನತೆಯ ಮೂಲಕ ಮಹತ್ವದ ಸಾಧನೆ ಸಾಧ್ಯವೆಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ನಗರದ ಟಿಎಂಎ ಪೈ ಕನ್ವೆನ್ಶನ್ ಸೆಂಟರ್‌ನಲ್ಲಿ ಸೌತ್ ಕೆನರಾ ಫಿಸಿಯೋಥೆರಪಿ ಟೀಚರ್ಸ್ ಎಸೋಸಿಯೇಶನ್ ಆಯೋಜಿಸಿದ್ದ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ‘ಮಂಗಳೂರು ಫಿಸಿಯೋಕಾನ್-2026’ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಫಿಸಿಯೋಥೆರಪಿಗೆ ಭಾರತದಲ್ಲಷ್ಟೇ ಅಲ್ಲದೆ ಜಾಗತಿಕ ಮಟ್ಟದಲ್ಲಿಯೂ ಹೆಚ್ಚಿನ ಬೇಡಿಕೆ ಇದೆ ಎಂದು ತಿಳಿಸಿದರು. ಮೂರು ದಶಕಗಳ ಹಿಂದೆ ಈ ಕ್ಷೇತ್ರಕ್ಕೆ…

Read More

ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಬಂಧನ

ಉಡುಪಿ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಪುತ್ತೂರು ನೆಲ್ಯಾಡಿ ನಿವಾಸಿ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ, ಪುತ್ತೂರು ಸಬ್ ರಿಜಿಸ್ಟ್ರಾರ್ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಫೆ.17ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದರೆ ಮದುವೆಯಾದ ಕೇವಲ ಒಂದು ತಿಂಗಳಲ್ಲೇ ಮಾ.17ರಂದು ಸುದೀಪ್ ರೈ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುದೀಪ್ ರೈ ಮಾ.30ರಂದು ಮೃತಪಟ್ಟಿದ್ದರು….

Read More

ಎನ್‌ಐಟಿಕೆ ಸುರತ್ಕಲ್ NOMAD, ಏಐ ವೇದಿಕೆಯನ್ನು ತನ್ನ ಕಡಲತೀರ ಕ್ಯಾಂಪಸ್‌ನಲ್ಲಿ ಪ್ರಾರಂಭಿಸಿದೆ

ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ), ಸುರತ್ಕಲ್ NOMAD (Node for Open-source Mobile AI Deployment) ಎಂಬ ಕಾರ್ಯನಿರ್ವಹಣೆಯ, ಕ್ಷೇತ್ರದಲ್ಲಿ ಬಳಸಬಹುದಾದ ಏಐ ಸಂಶೋಧನಾ ವೇದಿಕೆಯನ್ನು ಪ್ರಾರಂಭಿಸಿದೆ. ಇದು ದೂರದ, ಸಂಪನ್ಮೂಲ-ಕಡಿತ ಪ್ರದೇಶಗಳು ಹಾಗೂ ವಿಪತ್ತು-ಪೀಡಿತ ಪರಿಸರಗಳಲ್ಲಿ, ಸಾಮಾನ್ಯ ಕ್ಲೌಡ್ ಮೂಲಸೌಕರ್ಯ ಲಭ್ಯವಿಲ್ಲದ ಸಂದರ್ಭಗಳಲ್ಲಿ ಬಳಸಲು ವಿನ್ಯಾಸಗೊಳಿಸಲಾಗಿದೆ. ಏಐ ವ್ಯವಸ್ಥೆಗಳು ಹೆಚ್ಚಾಗಿ ಕೇಂದ್ರಿತ ಡೇಟಾ ಕೇಂದ್ರಗಳ ಮೇಲೆ ಅವಲಂಬಿತವಾಗುತ್ತಿರುವುದರಿಂದ, ವಿಪತ್ತು ಪ್ರದೇಶಗಳು, ಕಡಲತೀರ ಪ್ರದೇಶಗಳು ಮತ್ತು ಕ್ಷೇತ್ರ ಸಂಶೋಧನಾ ಕೇಂದ್ರಗಳು ಸಂಪರ್ಕ, ವಿದ್ಯುತ್ ಮತ್ತು ಮೂಲಸೌಕರ್ಯಗಳ…

Read More
error: Content is protected !!