ಮತದಾರರ ಪಟ್ಟಿ ಪರಿಷ್ಕರಣೆ ಅವ್ಯವಸ್ಥೆ ಆರೋಪ: ಐವನ್ ಡಿ’ಸೋಜಾ ನೇತೃತ್ವದಲ್ಲಿ ಡಿಸಿಗೆ ಮನವಿ

ಮಂಗಳೂರು, ಜು. 18: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಎನ್ಯುಮರೇಷನ್ ಪ್ರಕ್ರಿಯೆಯಲ್ಲಿ ಅಕ್ರಮಗಳು ಮತ್ತು ಅವ್ಯವಸ್ಥೆಗಳು ನಡೆಯುತ್ತಿವೆ ಎಂದು ಆರೋಪಿಸಿ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗವು ಶುಕ್ರವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿ’ಸೋಜಾ, ಜಿಲ್ಲೆಯಾದ್ಯಂತ ಎಸ್‌ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆಯಲು ಕಾಂಗ್ರೆಸ್ ಪಕ್ಷವು 1,750ಕ್ಕೂ ಅಧಿಕ ಬೂತ್ ಮಟ್ಟದ ಏಜೆಂಟರನ್ನು…

Read More

ಲಾವಣ್ಯ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ: ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ

ಮಂಗಳೂರು: ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣವನ್ನು ಖಂಡಿಸಿ ನವಸಹಜ ಸಮುದಾಯ ಸಂಘಟನೆಯ ನೇತೃತ್ವದಲ್ಲಿ ಶನಿವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಸದಸ್ಯರು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ನವಸಹಜ ಸಮುದಾಯ ಸಂಘಟನೆಯ ಅಧ್ಯಕ್ಷೆ ನಿಖಿಲಾ, “ಜುಲೈ 16ರಂದು ನಡೆದ ಅಮಾಯಕ ಯುವತಿಯ ಭೀಕರ ಹತ್ಯೆ ಇಡೀ ಸಮಾಜವನ್ನು ಬೆಚ್ಚಿಬೀಳಿಸಿದೆ. ಇಂತಹ ಅಮಾನುಷ ಕೃತ್ಯ ಎಸಗಿದವರಿಗೆ ಯಾವುದೇ ರೀತಿಯ…

Read More

ಸರಕಾರಿ ಆಸ್ಪತ್ರೆ ಕಡೆಗಣಿಸುವಲ್ಲಿ ಬಿಜೆಪಿ ಕಾಂಗ್ರೇಸನದ್ದು ಒಂದೇ ಬಗೆಯ ನೀತಿ – ಸುನೀಲ್ ಕುಮಾರ್ ಬಜಾಲ್

ಸರಕಾರಿ ಆಸ್ಪತ್ರೆಗಳನ್ನು ಸಕಲ ಮೂಲಭೂತ ಸೌಕರ್ಯಗಳ ಸಹಿತ ಮೇಲ್ದರ್ಜೆಗೇರಿಸುವ ಬದಲಾಗಿ ಖಾಸಗೀ ಆಸ್ಪತ್ರೆಗಳ ಹಿತಾಸಕ್ತಿಯನ್ನೇ ಬಯಸುವವರಲ್ಲಿ ಆಳುವ ಪಕ್ಷ ಕಾಂಗ್ರೇಸಾಗಲಿ ಅಥವಾ ಬಿಜೆಪಿಯಾಗಲಿ ಇವರಿಬ್ಬರು ಒಂದೇ ಬಗೆಯ ನೀತಿ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ )ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್ ಅವರು ಇಂದು ( 18-7-26) ಪಡೀಲು ಜಂಕ್ಷನ್, ನಗರ ಆರೋಗ್ಯ ಕೇಂದ್ರದ ಬಳಿ ಸಿಪಿಐಎಂ ಬಜಾಲ್ ವಿಭಾಗ ಸಮಿತಿ ನೇತೃತ್ವದಲ್ಲಿ ನಡೆದ ಮಾನವ ಸರಪಳಿ ಪ್ರತಿಭಟನೆಯನ್ನು ಉದ್ದೇಶಿಸಿ…

Read More

ಪಂಪ್‌ವೆಲ್ ಆಧಾರ್ ಸೇವಾ ಕೇಂದ್ರಕ್ಕೆ ಐವನ್ ಡಿ’ಸೋಜಾ ದಿಢೀರ್ ಭೇಟಿ

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ ಅವರು ಶನಿವಾರ ಮಂಗಳೂರು ನಗರದ ಪಂಪ್‌ವೆಲ್‌ನಲ್ಲಿರುವ ಆಧಾರ್ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ, ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.ಟೋಕನ್ ಪಡೆಯಲು ಸರದಿಯಲ್ಲಿ ನಿಂತಿದ್ದ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದ ಅವರು, ಸೇವಾ ಕೇಂದ್ರದಲ್ಲಿ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಅಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಕೇಂದ್ರದ ಸೆಂಟ್ರಲ್ ಮ್ಯಾನೇಜರ್ ರಾಘವೇಂದ್ರ ಅವರನ್ನು ಭೇಟಿ ಮಾಡಿದ ಐವನ್ ಡಿ’ಸೋಜಾ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸುಗಮ, ಶೀಘ್ರ…

Read More

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ

ವಿಟ್ಲ: ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆವಿಟ್ಲ ಸಮೀಪದ ಉಕ್ಕುಡ ಬಳಿ ಜು.೧೭ರಂದು ರಾತ್ರಿ ನಡೆದಿದೆ.ಗಾಯಾಳುಗಳನ್ನು ಪುತ್ತೂರು ಮೂಲದ ದಿನೇಶ್ ಮತ್ತು ಅಂಕಿತ್ ಎಂದು ಗುರುತಿಸಲಾಗಿದೆ. ವಿಟ್ಲ-ಅಡ್ಯನಡ್ಕ ರಸ್ತೆಯ ಉಕ್ಕುಡ ದರ್ಬೆ ಎಂಬಲ್ಲಿನ ಅಪಾಯಕಾರಿ ರಸ್ತೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಉಕ್ಕುಡ ಕಡೆಯಿಂದ ಕುದ್ದುಪದವು ಕಡೆಗೆ ಸಂಚರಿಸುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ…

Read More

ಮೂಡಬಿದಿರೆಯಲ್ಲಿ ವಿವಾಹಿತೆ ಮೃತ ಸ್ಥಿತಿಯಲ್ಲಿ ಪತ್ತೆ; ಪೊಲೀಸ್ ತನಿಖೆ

ಮಂಗಳೂರು :ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ.

Read More

ಉರ್ವ ಮನೆ ಕಳವು ಪ್ರಕರಣಕ್ಕೆ ಟ್ವಿಸ್ಟ್ ;ಮೂವರು ಅಂತಾರಾಜ್ಯ ಕಳ್ಳರು ಅರೆಸ್ಟ್

ಮಂಗಳೂರು:ನಗರದ ಉರ್ವ ಮಾರ್ಕೆಟ್ ಸಮೀಪದ ಮಠದಕಣಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಮೂವರು ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ನೇಪಾಳದ ತಿಲಕ್ ಕುಮಾರ್ ಖಡ್ಕ ಯಾನೆ ತಿಲಕ್ ಖಡ್ಕ (36) ಮತ್ತು ಅಶೋಕ್ ರಾಜ್ ಯಾನೆ ಅಶೋಕ್ ಸಿಂಗ್ ಯಾನೆ ಅಶೋಕ್ ಸಿಂಗ್ ಠಾಕುರಿ (33) ಹಾಗೂ ದಿಪೆಂದರ್ ರಸೈಲಿ (25) ಎಂದು ಗುರುತಿಸಲಾಗಿದೆ. ಜು.11ರಂದು ಸಂಜೆ 5:30ಕ್ಕೆ ಮನೆಮಂದಿ ಮನೆಗೆ ಲಾಕ್ ಮಾಡಿಕೊಂಡು ಬಂಟ್ವಾಳ ತಾಲೂಕಿನ ವಿಟ್ಲ ಕಡಂಬು ಎಂಬಲ್ಲಿರುವ ಸಂಬಂಧಿಕರ…

Read More

ಅಂಬಲಪಾಡಿ ಮಹಾಕಾಳಿ ಸನ್ನಿಧಿಯಲ್ಲಿ ಪುಷ್ಪ ವೈಭವ: ಭಕ್ತರನ್ನು ಸೆಳೆದ ಚಿಕ್ಕಬಳ್ಳಾಪುರದ ಭಕ್ತರ ಸೇವೆ

ಉಡುಪಿ: ಜಿಲ್ಲೆಯ ಪ್ರಸಿದ್ಧ ಅಂಬಲಪಾಡಿ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪುಷ್ಪಾಲಂಕಾರ ನೆರವೇರಿದ್ದು, ದೇವಾಲಯವು ವರ್ಣರಂಜಿತ ಹೂವಿನ ಅಲಂಕಾರದಿಂದ ಕಂಗೊಳಿಸಿತು. ಲಕ್ಷಾಂತರ ರೂಪಾಯಿ ಮೌಲ್ಯದ ವಿವಿಧ ಬಗೆಯ ಹೂವುಗಳಿಂದ ದೇವಾಲಯದ ಒಳಾಂಗಣ ಹಾಗೂ ಹೊರಾಂಗಣವನ್ನು ಅಲಂಕರಿಸಲಾಗಿದ್ದು, ಸಾವಿರಾರು ಭಕ್ತರ ಗಮನ ಸೆಳೆಯಿತು. ಚಿಕ್ಕಬಳ್ಳಾಪುರದ ಭಕ್ತವೃಂದವು ಹಲವು ವರ್ಷಗಳಿಂದ ಪ್ರತಿವರ್ಷ ಭಕ್ತಿಭಾವದಿಂದ ಈ ವಿಶೇಷ ಪುಷ್ಪಾಲಂಕಾರ ಸೇವೆಯನ್ನು ಸಲ್ಲಿಸುತ್ತಿದ್ದು, ಈ ಬಾರಿಯೂ ತಮ್ಮ ಕೈಯಾರೆ ದೇವಾಲಯವನ್ನು ಅಲಂಕರಿಸಿದರು. ದೇವಿಯ ಅನುಗ್ರಹದಿಂದ ತಮ್ಮ ಬದುಕಿನಲ್ಲಿ ಶುಭ ಬದಲಾವಣೆಗಳಾಗಿವೆ…

Read More

ರಾಶಿ ರಾಶಿ ಬೂತಾಯಿ ಮೀನು.ಉಳ್ಳಾಲದ ಸಮುದ್ರ ತೀರದವರಿಗೆ ಮೀನಿನ ಸುಗ್ಗಿ

ಉಳ್ಳಾಲ: ಒಂದೇ ಸಮನೆ ಬೂತಾಯಿ ಮೀನಿನ ಸಾಲುಗಳು ದಡಕ್ಕೆ ಅಪ್ಪಳಿಸಿದ್ದು, ಉಳ್ಳಾಲ ಸಮುದ್ರ ತೀರದ ಮಂದಿಗೆ ಬೂತಾಯಿ ಮೀನಿನ ಸುಗ್ಗಿಯಾಗಿದೆ.ದೋಣಿಯೊಂದು ಸಾಗುವ ಸಂದರ್ಭ ಅದರಿಂದ ಕೇಳಿಬಂದ ಸದ್ದಿನಿಂದ ಸಾಲುಸಾಲಾಗಿ ಸಾಗುವ ಬೂತಾಯಿ ಮೀನುಗಳು ಹಾದಿ ಬದಲಿಸಿದ್ದು, ಪರಿಣಾಮ ಸಮುದ್ರ ತೀರಕ್ಕೆ ಅಪ್ಪಳಿಸಿದೆ. ಮಧ್ಯಾಹ್ನ 11 ರವೇಳೆಗೆ ಅಪ್ಪಳಿಸಿದ ಮೀನಿನ ರಾಶಿಯನ್ನು ಗಮನಿಸಿದ ಸ್ಥಳೀಯರು ನಾಮುಂದು ತಾ ಮುಂದು ಅನ್ನುತ್ತಾ ಅಲೆಗಳ ಅಬ್ಬರದ ನಡುವೆಯೂ ಮೀನನ್ನು ಸಂಗ್ರಹಿಸಿದರು. ಹಲವರು ವ್ಯವಹಾರವನ್ನು ನಡೆಸಿದರೆ, ಇನ್ನು ಕೆಲವರು ಮನೆಯಲ್ಲಿ ಸಾರು ಮಾಡಿದರು….

Read More

ನವೀಕೃತ ಬಂಟ್ವಾಳ ರೈಲ್ವೆ ನಿಲ್ದಾಣ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ಪ್ರಧಾನಿ ಮೋದಿ: ಕೊಂಕಣ ರೈಲ್ವೆ ಭಾರತ ರೈಲ್ವೆ ಜೊತೆ ವಿನಿಯೋಗವಾಗಲಿ ಸಂಸದ ಕ್ಯಾ. ಚೌಟ

ಬಂಟ್ವಾಳ ರೈಲ್ವೆ ನಿಲ್ದಾಣವೂ ಸೇರಿ ಅಮೃತ ಭಾರತ ನಿಲ್ದಾಣ ಯೋಜನೆಯಡಿ ಮರುಅಭಿವೃದ್ಧಿಗೊಂಡ ರಾಷ್ಟ್ರದ 75 ರೈಲ್ವೆ ನಿಲ್ದಾಣಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್ ನ ಜಲಂಧರ್ ಕ್ಯಾಂಟ್ ರೈಲ್ವೆ ನಿಲ್ದಾಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಬಂಟ್ವಾಳ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ನಲ್ಲಿ ಹಾಕಲಾದ ಬೃಹತ್ ಎಲ್.ಇ.ಡಿ. ಪರದೆಯಲ್ಲಿ ಈ ದೃಶ್ಯವನ್ನು ನೇರಪ್ರಸಾರದ ಮೂಲಕ ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಹಿತ ಪ್ರಮುಖರು ವೀಕ್ಷಿಸಿದರು. ನೈಋತ್ಯ ರೈಲ್ವೆಯ ಮೈಸೂರು…

Read More
error: Content is protected !!