ಎಸ್.ಎನ್.ಇ.ಸಿ. ಪ್ರವೇಶ ಪರೀಕ್ಷೆ, ಉಜ್ವಲ ಭವಿಷ್ಯ ರೂಪಿಸಲು ಶಿಕ್ಷಣ ಅನಿವಾರ್ಯ : ಕೆ.ಪಿ. ಅಹ್ಮದ್ ಹಾಜಿ

ಪುತ್ತೂರು : ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ. ವ್ಯಕ್ತಿಯ ಉಜ್ವಲ ಭವಿಷ್ಯವನ್ನು ರೂಪಿಸಲು ಶಿಕ್ಷಣ ಅನಿವಾರ್ಯ ಆದ್ದರಿಂದ ಪ್ರತಿಯೊಬ್ಬರೂ ಇದರ ಮಹತ್ವವನ್ನು ಅರಿತು ಕಾರ್ಯಪ್ರವೃತ್ತರಾಗಬೇಕು ಎಂದು ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಪಿ. ಅಹ್ಮದ್ ಹಾಜಿ ಆಕರ್ಷಣ್ ಅವರು ಹೇಳಿದರು.ಅವರು ಸಾಲ್ಮರ ದಾರುಲ್ ಹಸನಿಯಾ ಅಕಾಡೆಮಿಯ ಕರ್ನಾಟಕ ಸೆಂಟರ್ ವತಿಯಿಂದ ‘ಸಮಸ್ತ’ ಸಂಸ್ಥೆಯ ಎಸ್.ಎನ್.ಇ.ಸಿ. ಶರೀಅ ಪ್ಲಸ್ ಸಮನ್ವಯ ಶಿಕ್ಷಣದ 2026-27ನೇ ಸಾಲಿನ ವಿದ್ಯಾರ್ಥಿಗಳ…

Read More

ನಿಯಂತ್ರಣ ತಪ್ಪಿದ ಓಮ್ನಿ ಕಾರು ಪಾದಚಾರಿಗಳ ಮೇಲೆ ಪಲ್ಟಿ – ಮಹಿಳೆ ಗಂಭೀರ ಗಾಯ

ಮಂಗಳೂರು:ನಿಯಂತ್ರಣ ತಪ್ಪಿದ ಕಾರೊಂದು ಪಾದಚಾರಿಗಳ ಮೇಲೆ ಪಲ್ಟಿಯಾದ ಘಟನೆ ನಡೆದಿದೆ.ಅತಿ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಘಟನೆ ಕೊಲ್ಪೆದಬೈಲು ಎಂಬಲ್ಲಿ ಆದಿತ್ಯವಾರ ಮಧ್ಯಾಹ್ನ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಮೂವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ವೇಗವಾಗಿ ಬಂದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಮಕ್ಕಳಿಬ್ಬರು…

Read More

ಬೆಂಗರೆಯಲ್ಲಿ ಬ್ರಹ್ಮಕಲಶೋತ್ಸವ: ಏ.17ರಿಂದ ಧಾರ್ಮಿಕ–ಸಾಂಸ್ಕೃತಿಕ ಕಾರ್ಯಕ್ರಮಗಳ ಆರಂಭ

ಮಂಗಳೂರು: ಬೆಂಗರೆಯ ಸ್ಯಾಂಡ್ಸ್‌ಪಿಟ್ ಪ್ರದೇಶದಲ್ಲಿರುವ ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳು ಏಪ್ರಿಲ್ 17ರಿಂದ 20ರವರೆಗೆ ಭಕ್ತಿಭಾವದಿಂದ ಮೇಳೈಸಲಿದೆ ಎಂದು ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರ ಇದರ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಮೋಹನ್ ಬೆಂಗ್ರೆ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸೀತಾ ರಾಮ ಲಕ್ಷ್ಮಣ ಹನುಮಾನ್ ಸಮೇತ ಪಟ್ಟಾಭಿರಾಮ ದೇವರ ಬಿಂಬ ಪ್ರತಿಷ್ಠೆ ಹಾಗೂ ವೀರ ಮಾರುತಿ ದೇವರ…

Read More

ಕಾರ್ಕಳ ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್

ಉಡುಪಿ: ಕಾರ್ಕಳದ ಗೊಮ್ಮಟೇಶ್ವರ ಬೆಟ್ಟದಲ್ಲಿ ಕ್ರಿ.ಶ.1432ರಲ್ಲಿ ಪ್ರತಿಷ್ಠಾಪನೆಗೊಂಡಿರುವ ಭಗವಾನ್ ಶ್ರೀಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಮುಂದಿನ ಕಾರ್ಯಕ್ರಮ 2027ರ ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ. ಇದಕ್ಕಾಗಿ ಎಲ್ಲಾ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಹಾಮಸ್ತಕಾಭಿಶೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ತಿಳಿಸಿದ್ದಾರೆ. ಕಾರ್ಕಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಲಯದ ಉದ್ಘಾಟನೆ ಮತ್ತು ಮಹಾಮಸ್ತಕಾಭಿಷೇಕದ ದಿನಾಂಕ ಘೋಷಣೆಯ ಕಾರ್ಯಕ್ರಮ ಎ.19ರಂದು ಬೆಳಿಗ್ಗೆ 10:30ಕ್ಕೆ ಕಾರ್ಕಳದ ದಾನಶಾಲೆ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಲಿದೆ…

Read More

ಮಂಗಳೂರಿನಲ್ಲಿ ಕಾರ್ ಮಾಡಿಫಿಕೇಷನ್ ಸೆಂಟರ್‌ನಲ್ಲಿ ಬೆಂಕಿ ಅವಘಡ – 2 ಬಿಎಂಡಬ್ಲ್ಯು ಕಾರುಗಳಿಗೆ ಹಾನಿ

ಮಂಗಳೂರು: ನಗರದ ಫಳ್ನೀರ್ ಸಮೀಪದ ಟೋಪಾಜ್ ಕಾರ್ ಸೆಂಟರ್‌ನಲ್ಲಿ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಎರಡು ಬಿಎಂಡಬ್ಲ್ಯು ಕಾರುಗಳು ಹಾನಿಗೊಳಗಾಗಿ ಅಪಾರ ಸ್ವತ್ತು ನಾಶವಾಗಿದೆ. ಇಂದು ಬೆಳಗ್ಗೆ ಸುಮಾರು 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಬೆಂಕಿ ತೀವ್ರತೆಯಿಂದ ಸೆಂಟರ್‌ನಲ್ಲಿ ಇದ್ದ ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.ಈ ಸಂಸ್ಥೆ ಮಾಜಿ ಶಾಸಕ ಮೊಯ್ದೀನ್ ಬಾವ ಅವರ ತಂಗಿಯ ಮಗ ಸಿಯಾಜ್ ಅವರಿಗೆ ಸೇರಿದ್ದಾಗಿದೆ.ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಶ್ರಮಿಸಿದ್ದು, ಹೆಚ್ಚಿನ ಹಾನಿಯನ್ನು…

Read More

ಓವರ್‌ಟೇಕ್ ದುರಂತ: ಬೈಕ್ ಸವಾರ ಟಿಪ್ಪರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ಮಂಗಳೂರು:ಓವರ್ ಟೇಕ್ ಮಾಡುವ ಭರದಲ್ಲಿ ತನ್ನ ಪಾಡಿಗೆ ಹೋಗುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮೈನ್ಸ್ ಒಯ್ಯುತ್ತಿದ್ದ ಭಾರೀ ಗಾತ್ರದ ಟಿಪ್ಪರ್ ಗೆ ಬಡಿದು ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರು ಬಳಿ ನಡೆದಿದೆ. ತಾರಾಯಿತೋಟ ಎಂಬಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಮಧ್ಯ ವಯಸ್ಕ ಛಾಯಾಗ್ರಾಹಕರಾಗಿದ್ದ ವ್ಯಕ್ತಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾರೆ. ಭೀಕರ ಘಟನೆಯ ದೃಶ್ಯವು ಟೆಂಪೋವೊಂದರ ಡ್ಯಾಷ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಧರ್ಮಸ್ಥಳ ಕಾರ್ಯತಡ್ಕ ನಿವಾಸಿ ಗೋಪಾಲಕೃಷ್ಣ (27) ಮೃತ…

Read More

ಕಾನಿಪ ಸಂಘದ 40ನೇ ರಾಜ್ಯ ಸಮ್ಮೇಳನಕ್ಕೆ ತೆರೆ

ಪತ್ರಕರ್ತರು ಸತ್ಯದ ಪರವಾಗಿರಬೇಕು: ಸಭಾಧ್ಯಕ್ಷ ಯು ಟಿ ಖಾದರ್ ಸಲಹೆ ಬೀದರ :ಪತ್ರಿಕೋದ್ಯಮವು ಸಾಮಾಜಿಕ ಜವಾಬ್ದಾರಿಯ ಪ್ರತೀಕವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಅವರು ಹೇಳಿದರು.ಬೀದರ ಜಿಲ್ಲೆಯಲ್ಲಿ ಕರ್ನಾಟಕ ಕಾರ್ಯನಿರತ‌ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದಿಂದ ನಗರದ ಝೀರಾ ಕನ್ವೆನ್ಶನ್ ಹಾಲನಲ್ಲಿಏಪ್ರಿಲ್ 12ರಂದು ನಡೆದ 40ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜ, ದೇಶ ಕಟ್ಟುವಲ್ಲಿ ಮಹತ್ವದ ಪಾತ್ರ ವಹಿಸುವ ಪತ್ರಕರ್ತರ ಪೆನ್ನು ಸದಾಕಾಲ ಸತ್ಯದ ಪರವಾಗಿರಬೇಕು ಎಂದು…

Read More

ಎಸ್‌ಎಸ್‌ವಿಪಿ ಮಂಗಳೂರು ಸೆಂಟ್ರಲ್ ಕೌನ್ಸಿಲ್‌ನ ಅಧ್ಯಕ್ಷೆಯಾಗಿ ಮೊದಲ ಮಹಿಳೆ ಪ್ರಮಾಣ ವಚನ ಸ್ವೀಕಾರ

ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಿತು. ಬೆಂದೂರು ಕಾನ್ಫರೆನ್ಸ್‌ಗೆ ಸೇರಿದ ಪ್ರೀತಾ ಲೋಬೊ ಅವರಿಗೆ ಆಧ್ಯಾತ್ಮಿಕ ಸಲಹೆಗಾರರಾದ ರೆ. ಫ್ಲೇವಿಯನ್ ಲೋಬೊ ಅವರು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಆಧ್ಯಾತ್ಮಿಕ ಸಲಹೆಗಾರ ರೆ. ಫ್ರಾನ್ಸಿಸ್ ಡಿಸೋಜಾ ಮತ್ತು ಬೆಂದೂರು ಚರ್ಚ್‌ನ ಧರ್ಮಗುರು ರೆ. ವಾಲ್ಟರ್ ಡಿಸೋಜಾ…

Read More

ಶತಾಯುಷಿ ಕುಜುಂಬ ಅಜಿಲ ನಿಧನ — ಗ್ರಾಮದಲ್ಲಿ ಸಂತಾಪ

ಕಡಬ, ಏಪ್ರಿಲ್:ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಾಡೋಳಿ ನಿವಾಸಿಯಾದ ಶತಾಯುಷಿ ಕುಜುಂಬ ಅಜಿಲ (105) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಸಂಜೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ದೈವನರ್ತಕರಾಗಿ ಗುರುತಿಸಿಕೊಂಡಿದ್ದು, ತಮ್ಮ ಜೀವನವನ್ನು ಸಂಪ್ರದಾಯ ಹಾಗೂ ಸೇವೆಗೆ ಅರ್ಪಿಸಿಕೊಂಡಿದ್ದರು. ಶತಾಯುಷಿಯಾಗಿ ದೀರ್ಘಾಯುಷ್ಯ ಹೊಂದಿದ್ದ ಅವರು ಸ್ಥಳೀಯ ಸಮಾಜದಲ್ಲಿ ಗೌರವಾನ್ವಿತರಾಗಿದ್ದರು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಬಳಗ ಹಾಗೂ ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

Read More

ಡೆಮ್ಮoಗರ ಮಸೀದಿಯಲ್ಲಿ ಜಲಾಲಿಯ್ಯ ರಾತೀಬ್

ಪುತ್ತೂರು /ಬೆಟ್ಟoಪಾಡಿ : K K ಮಸ್ಜಿದ್ & ಬುಸ್ತಾನುಲ್ ಉಲೂಮ್ ದರ್ಸ್ ಅಹ್ದಲಿಯ ನಗರ ಡೆಮ್ಮoಗರ, ಬೆಟ್ಟoಪಾಡಿ ಇದರ ಆಶ್ರಯದಲ್ಲಿ 3 ತಿಂಗಳಿಗೊಮ್ಮೆ ನಡೆಸಿಕೊoಡು ಬರುತ್ತಿರುವ ಜಲಾಲಿಯ್ಯ ರಾತೀಬ್ ಕಾರ್ಯಕ್ರಮವು ಬಹು | ಅಸ್ಸಯ್ಯದ್ ಮುಖ್ತಾರ್ ತಂಗಳ್ ಕುಂಬೋಲ್ ಇವರ ನೇತೃತ್ವದಲ್ಲಿ ನಡೆಯಿತು. ಬಹು | ಅಸ್ಸಯ್ಯದ್ ಹಾಶಿಮ್ ತಂಗಳ್ ಕೊರಿಂಗಿಲ, ಬಹು|ಅಬ್ಬಾಸ್ ಸಅದಿ ಮುದರ್ರಿಸ್ ಡೆಮ್ಮoಗರ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕಛೇರಿ ಹಾಗೂ ಕಂಪ್ಯೂಟರ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮವನ್ನು ಬಹು | ಅನ್ವರ್ ತಂಗಳ್…

Read More
error: Content is protected !!