ಸೇವೆ, ಕರ್ತವ್ಯ ಮತ್ತು ಸಮರ್ಪಣೆಯೇ ಜೀವನದ ನಿಜವಾದ ಮಾರ್ಗ: ರಾಜ್ಯಪಾಲರು
ದಕ್ಷಿಣ ಕನ್ನಡ ಜಿಲ್ಲೆ: “ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಸಹೋದರತ್ವ, ವಿಶ್ವ ಕಲ್ಯಾಣ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ಪ್ರಪಂಚದಾದ್ಯಂತದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದತ್ತ ನೋಡುತ್ತಿದೆ” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶ್ರೀ ಕೋದಂಡರಾಮ, ಪಂಚಮುಖಿ ಆಂಜನೇಯ ಕ್ಷೇತ್ರ, ಹನುಮಾನಗಿರಿ ದೇವಸ್ಥಾನದ ಗೋಪುರ ಮತ್ತು ಮಂಟಪದ ಉದ್ಘಾಟನೆ ಮತ್ತು ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು….
