ಬ್ರಹ್ಮಾವರ: ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್: ಚಾಲಕ ಸ್ಥಳದಲ್ಲೇ ಮೃತ್ಯು… !
ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಟಿಪ್ಪರ್ ಚಾಲಕ ಶ್ರೀಕಾಂತ್(26) ಎಂದು ಗುರುತಿಸಲಾಗಿದೆ. ನಿಟ್ಟೂರಿನ ರಂಜನ್ ಶೆಟ್ಟಿ ಎಂಬವರ ಮಾಲಕತ್ವದ ಟಿಪ್ಪರ್ನ್ನು ಚಾಲಕ ಶ್ರೀಕಾಂತ್, ನಿಟ್ಟೂರಿನಿಂದ ಜೆಲ್ಲಿ ಲೋಡ್ಗಾಗಿ ಚಲಾಯಿಸಿಕೊಂಡು ಹೋಗಿದ್ದರು. ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಹೋಗುತ್ತಿದ್ದ ಟಿಪ್ಪರ್, ರಸ್ತೆಯ ತಿರುವಿನಲ್ಲಿರುವ ರಸ್ತೆ ಹೊಂಡಕ್ಕೆ ಬಿದ್ದಿದ್ದು, ಇದರಿಂದ ನಿಯಂತ್ರಣ ತಪ್ಪಿದ ಟಿಪ್ಪರ್,…