ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ವಿವಿಧ ಯೋಜನೆಗಳು: ಜಾಗೃತಿ ಅಭಿಯಾನ – ಪಿ.ಎಂ. ಮಾಲತೇಶ್
ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರ ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿರುವುದು ಸಂತಸದ ವಿಷಯವಾಗಿದ್ದು, ಈ ಯೋಜನೆಗಳ ಕುರಿತು ರಾಜ್ಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪಿ.ಎಂ. ಮಾಲತೇಶ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮಾರ್ಗದರ್ಶನದಲ್ಲಿ ಕಾರ್ಮಿಕ ಇಲಾಖೆ, ಧಾರ್ಮಿಕ ದತ್ತಿ ಇಲಾಖೆ ಹಾಗೂ ನಿಗಮದ ವಿವಿಧ ಯೋಜನೆಗಳ ಮಾಹಿತಿ ಕೈಪಿಡಿ ಮೂಲಕ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ…
