ಕೃಷ್ಣ ನಗರಿ ಸಾಗರ ಕಿನಾರೆಯಲ್ಲಿ ಮೂಡಿದ ಪ್ರಧಾನಿ ನರೇಂದ್ರ ಮೋದಿಯ ವಿಶೇಷ ಮರಳು ಕಲಾಕೃತಿ….. !

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನಲೆ . ಕಡಲ ತೀರದಲ್ಲಿ ಕಲಾವಿದರ ಕೈಚಳಕ ಪ್ರತಿಭೆ . ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ವಿಶೇಷ ಕಲಾಕೃತಿ ರಚನೆ . ಮಲ್ಪೆ ಕಡಲ ತೀರದಲ್ಲಿ ಸ್ಯಾಂಡ್ ಥೀಮ್ ಕಲಾವಿದರಿಂದ ಮರಳು ಶಿಲ್ಪ . ಕಡಗೋಲು ಕೃಷ್ಣನ ಜೊತೆ ಪ್ರಧಾನಿ ನರೇಂದ್ರ ಮೋದಿಯ ಚಿತ್ರ ಇದಾಗಿದೆ . ದೇಗುಲದ ಮುಂಭಾಗದಲ್ಲಿ ಕಡಗೋಲು ಹಿಡಿದು ನಿಂತ ಕೃಷ್ಣ. ಕೃಷ್ಣನ ಮುಂದೆ ಪ್ರಧಾನಿ ನರೇಂದ್ರ ಮೋದಿಯ ಚಿತ್ರಣ . ಕಲಾವಿದ ಹರೀಶ್…

Read More

ಪ್ರಧಾನಿ ನರೇಂದ್ರ ಮೋದಿ ಅವಧಿಯಲ್ಲಿ ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ರಫ್ತು ಆಗುತ್ತಿರುವುದು ದುರಂತ : ದಯಾನಂದ ಸ್ವಾಮಿಜಿ

ಉಡುಪಿ :ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರಕಾರದ ಗೋಮಾಂಸ ರಫ್ತು, ಹಾಗೂ ಗೋಹತ್ಯೆ ನಿಷೇಧ ಮಾಡದ ಬಗ್ಗೆ ಟೀಕಿಸಿದ್ದ ನರೇಂದ್ರ ಮೋದಿ, ಮೂರು ಬಾರಿ ಪ್ರಧಾನಿಯಾದರೂ ಇನ್ನೂ ಯಾಕೆ ಗೋಹತ್ಯೆಯನ್ನು ದೇಶದಲ್ಲಿ ನಿಷೇಧ ಮಾಡುತ್ತಿಲ್ಲ. ದುರಂತ ಅಂದರೆ ಮೋದಿ ಅವಧಿಯಲ್ಲಿ ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ರಫ್ತು ಆಗುತ್ತಿದೆ. ಭಾರತ ಗೋಮಾಂಸ ರಫ್ತನಲ್ಲಿ ಇಡೀ ಜಗತ್ತಿನಲ್ಲಿಯೇ ಇಂದು ಎರಡನೇ ಸ್ಥಾನದಲ್ಲಿದೆ ಎಂದು ವಿಶ್ವಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ, ಬೆಂಗಳೂರು ವಿಶ್ವ ಗೋರಕ್ಷಾ ಮಹಾಪೀಠದ ದಯಾನಂದ ಸ್ವಾಮೀಜಿ ಟೀಕಿಸಿದ್ದಾರೆ. ಉಡುಪಿಯಲ್ಲಿಂದು…

Read More

ಮಂಗಳೂರಿನಲ್ಲಿ ನಡುರಾತ್ರಿ ಅಂಗಡಿಗೆ ಎಂಟ್ರಿ ಕೊಟ್ಟ ಕಳ್ಳರು- ಅಂಗಡಿಯೊಳಗಿದ್ದ ನಗದನ್ನು ದೋಚಿ ಪರಾರಿ-ಸಿಸಿ ಟಿವಿಯಲ್ಲಿ ಸೆರೆ

ಮಂಗಳೂರು: ಮಂಗಳೂರು ಅತ್ತಾವರ ಕಟ್ಟೆಯ ಕಸಗ್ರಾಂಡ್ ಕಟ್ಟದಲ್ಲಿರುವ ಅಂಗಡಿಗೆ ಖದೀಮಮರ ತಂಡ ನಡು ರಾತ್ರಿ ೩. ೩೦ ರ ಹೊತ್ತಿಗೆ ಎಂಟ್ರಿ ಕೊಟ್ಟು ಅಂಗಡಿಯೊಳಗಿದ್ದ ನಗದನ್ನು ಮತ್ತು ಕೆಲವು ವಸ್ತನ್ನು ಅಪಹರಿಸಿದ ಘಟನೆ ನಡೆದಿದೆ . ಖದೀಮರು ೪ ಅಂಗಡಿಗೆ ಎಂಟ್ರಿ ಕೊಟ್ಟು ಅಲ್ಲಿನ ನಗದು , ಕೆಲವು ವಸ್ತುಗಳನ್ನು ಅಪರಿಸಿಕೊಂಡು ಹೋಗಿದ್ದಾರೆ . ಕದೀಮರಿಗಾಗಿ ಸ್ಥಳೀಯ ಪೊಲೀಸರು ತೀವ್ರ ಶೋಧ ನಡೆಸುತ್ತಾ ಇದ್ದಾರೆ .

Read More

ಕ್ರೆಡೈ, ಸೆಕ್ಷನ್ ಇನ್ಸಿನ್- 8 ಫೌಂಡೇಶನ ಮತ್ತು ಮಿಷನ್ ಉತ್ತಾನ್ ಸಹಯೋಗದಲ್ಲಿ ‘ಕ್ರೆಡೈ ಬಿಲ್ಡ್‌ಸ್ಮಾರ್ಟ್‌ ಇನೋವೇಶನ್ ಚಾಲೆಂಜ್ 2025

ಮಂಗಳೂರು : ಮಂಗಳೂರಿನ ಕ್ರೆಡೈ, ಸೆಕ್ಷನ್ ಇನ್ಸಿನ್- 8 ಫೌಂಡೇಶನ ಮತ್ತು ಮಿಷನ್ ಉತ್ತಾನ್ ಸಹಯೋಗದಲ್ಲಿ ‘ಕ್ರೆಡೈ ಬಿಲ್ಡ್‌ಸ್ಮಾರ್ಟ್‌ ಇನೋವೇಶನ್ ಚಾಲೆಂಜ್ 2025ಗಾಗಿ ನವೋದ್ಯಮಿಗಳು ಹಾಗೂ ವಿದ್ಯಾರ್ಥಿಗಳಿಂದ ರಿಯಲ್ ಎಸ್ಟೇಟ್‌ಗೆ ಸಂಬಂಧಿಸಿದ ಹೊಸ ಸ್ಟಾರ್ಟ್‌ ಅಪ್ ಹಾಗೂ ನವೀನ ಆಲೋಚನೆಗಳನ್ನು ಆಹ್ವಾನಿಸಲಾಗಿದೆ. ನಗರದ ಪತ್ರಿಕಾಭವನದಲ್ಲಿ ಎಸ್‌ಐ-8ನ ಸಂಸ್ಥಾಪಕ ನಿರ್ದೇಶಕ ವಿಶ್ವಾಸ್ ಯು.ಎಸ್ ಈ ಬಗ್ಗೆ ಮಾಹಿತಿಯನ್ನು ನೀಡಿ ., ಈಗಾಗಲೇ ಸುಮಾರ 30ರಷ್ಟು ನವೋದ್ಯಮಿಗಳು ತಮ್ಮ ಹೊಸ ಸ್ಟಾರ್ಟ್‌ ಅಪ್‌ಗಳ ಕುರಿತಂತೆ ಈ ಚಾಲೆಂಜ್‌ನಲ್ಲಿ ಭಾಗವಹಿಸಲು ಅರ್ಜಿ…

Read More

ದೇವಾಲಯದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಖತಾರ್ನಾಕ್ ಕಳ್ಳಿಯರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು … !

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಕಳ್ಳಿಯರನ್ನು ಧರ್ಮಸ್ಥಳ ಪೊಲೀಸರು ಹುಡುಕಿ ತಂದು ಲಾಕಪ್‌ಗೆ ತಳ್ಳಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸೆಟಲ್ಮೆಂಟ್ 2 ನೇ ಕ್ರಾಸ್ ಗಂಗಾಧರ ನಗರ ನಿವಾಸಿ ಬಿ.ಬಿ.ಜಾನ್(59) ಮತ್ತು ಮಗಳು ಮಸಾಭಿ @ ಆರತಿ (34) ಬಂಧಿತ ಆರೋಪಿಗಳಾಗಿದ್ದಾರೆ. ದೇವಳದ ಒಳಗೆ ಆಂಧ್ರ ಪ್ರದೇಶದಿಂದ ಬಂದಿದ್ದ ಭಕ್ತಾದಿಗಳ ಬ್ಯಾಗ್ ನಿಂದ ಚಿನ್ನಾಭರಣ ಕಳ್ಳತನ ಮಾಡಿ ಬಳಿಕ ಪರಾರಿಯಾಗಿದ್ದರು.ಈ ಖತಾರ್ನಾಕ್ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಯಶಸ್ವಿ ಕಾರ್ಯಾಚರಣೆ…

Read More

ಪ್ರಧಾನಿ ರೋಡ್‌ಶೋ : ಖಾಕಿ ಭದ್ರ ಕೋಟೆಯಾದ ಕೃಷ್ಣ ನಗರಿ … !

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿಗೆ ಆಗಮಿಸುತ್ತಿದ್ದು ಅಕ್ಷರಶಃ ಉಡುಪಿ ಖಾಕಿ ಭದ್ರ ಕೋಟೆಯಾಗಿ ಮಾರ್ಪಾಡಾಗಿದೆ. ಶುಕ್ರವಾರ ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದಿಂದ ಕಲ್ಸಂಕದ ವರೆಗೂ ಪ್ರಧಾನಿ ರೋಡ್‌ಶೋ ನಡೆಯಲಿದೆ. ಎರಡು ಕಡೆಗಳಲ್ಲೂ ಬ್ಯಾರಿಕೇಡ್ ನಿರ್ಮಾಣ ಮಾಡಲಾಗಿದೆ. ಅಲ್ಲದೆ ಈ ರಸ್ತೆಯ ಎರಡೂ ಬದಿಗಳಲ್ಲಿರುವ ಅಂಗಡಿ ಮಾಲಕರಿಗೆ ಅಂದು ಅಂಗಡಿ ತೆರೆಯದಂತೆ ಸೂಚನೆಯನ್ನು ಜಿಲ್ಲಾಡಳಿತ ರವಾನಿಸಿದೆ. ಪ್ರಧಾನಿಯವರ ಆಗಮನದ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪರಿಪಾಲನೆಗೆ ಜಿಲ್ಲಾಡಳಿತ ಹೆಚ್ಚಿನ ಆದ್ಯತೆ ನೀಡಿದೆ. ಎಲ್ಲಿಯೂ ಯಾವುದೇ ರೀತಿಯಲ್ಲೂ ವ್ಯತ್ಯಾಸ,…

Read More

ಬಸ್ ಚಾಲಕನ ಅತಿವೇಗ ತಿಥಿ ವೇಗಕ್ಕೆ ಸಾರ್ವಜನಿಕರ ತಡೆ! ಖಾಸಗಿ ಬಸ್ಸನ್ನು ವಶಕ್ಕೆ ಪಡೆದ ಖಾಕಿ … !

ಮಂಗಳೂರು: ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಲಾಲ್‌ಬಾಗ್‌ನಿಂದ ಮಂಗಳಾದೇವಿ ಕಡಗೆ ತೆರಳುತ್ತಿದ್ದ ಖಾಸಗಿ ಬಸ್ಸನ್ನು ಬಸ್ ಚಾಲಕನ ಅತಿವೇಗ ಮತ್ತು ನಿರ್ಲಕ್ಷದ ಚಾಲನೆಯ ಆರೋಪ ಹಿನ್ನಲೆ ಬುಧವಾರ(ನ.26) ಸಾರ್ವಜನಿಕರು ತಡದ ಘಟನೆ ನಡೆದಿದೆ. ಜಂಕ್ಷನ್‌ನಲ್ಲಿ ಕಾಯುತ್ತಿದ್ದ ಬೈಕರ್‌ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ ಕೂಡಲೇ ಪ್ರತಿಕ್ರಿಯಿಸಿದ ಸಾರ್ವಜನಿಕರು ವಾಹನವನ್ನು ತಡೆದು ಸಂಚಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಸ್ಸನ್ನು ವಶಪಡಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

Read More

ವಿಷ ಕುಡಿದು ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿದ್ದ ಯುವಕ ಸಾವು …. !

ಕಡಬ: ಯಾವುದೋ ಕಾರಣಕ್ಕೆ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನ.26 ಮುಂಜಾನೆ ವರದಿಯಾಗಿದೆ. ಕಡಬದ ಕುಟ್ರುಪ್ಪಾಡಿ ಗ್ರಾಮದ ಉಳಿಪ್ಪು ನಿವಾಸಿ ರಾಕೇಶ್ ಕೆ.ಎಸ್ (37 ವ) ಮೃತ ದುರ್ದೈವಿ. ನ.19 ರಂದು ಸಂಜೆ ಕಡಬ ಬಜಾಜ್ ಶೋ ರೂಂ ಹಿಂದುಗಡೆ ಅಮಲು ಪದಾರ್ಥದೊಂದಿಗೆ ಇಲಿಪಾಷಾನ ಸೇವಿಸಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದ. ಅಸ್ವಸ್ಥಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ…

Read More

ಯಕ್ಷಗಾನ ರಂಗದ ಶ್ರೇಷ್ಠ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಕುಂದಾಪುರ: ಯಕ್ಷಗಾನ ರಂಗದ ಶ್ರೇಷ್ಠ ಸಾಧಕ, ಪ್ರಸಂಗಕರ್ತ, ಖ್ಯಾತ ಶಿಕ್ಷಕ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ಬೆಳಗ್ಗೆ (ನ.26) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ರಘುರಾಮ ಶೆಟ್ಟಿ ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದಲೇ ಪ್ರಸಿದ್ಧರಾಗಿದ್ದರು.ಕಂದಾವರ ರಘುರಾಮ ಶೆಟ್ಟಿಯವರು ದಕ್ಷಿಣ ಕನ್ನಡದ ಕುಂದಾಪುರ ತಾಲೂಕಿನ ಬಳ್ಳೂರು ಗ್ರಾಮದ…

Read More

ಅನಾಮಿಕ ಮಹಿಳೆಯೋರ್ವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ…. !

ಬಂಟ್ವಾಳ: ಅನಾಮಿಕ ಮಹಿಳೆಯೋರ್ವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ ಹಾಕಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್. ಐ.ಸಂದೀಪ್ ಶೆಟ್ಟಿ ತಿಳಿಸಿದ್ದಾರೆ. ಸುಮಾರು (60) ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಅಂದಾಜು ಪ್ರಕಾರ ಇಂದು ಬೆಳಿಗ್ಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ.ಅಪರಿಚಿತ ಮಹಿಳೆಯ ಮೃತದೇಹದ ಪತ್ತೆಗಾಗಿ ಬಂಟ್ವಾಳ ಪೋಲೀಸರು ತಿಳಿಸಿದ್ದು, ಮಹಿಳೆಯ ಸಂಬಂಧಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

Read More
error: Content is protected !!