ಬಂಟ್ವಾಳ: ಆತ್ಮಿ ಶೆಟ್ಟಿಯ ಭರತನಾಟ್ಯ ರಂಗಪ್ರವೇಶ ಏಪ್ರಿಲ್ 4ರಂದು
ಬಂಟ್ವಾಳ: ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ), ಕಲ್ಲಡ್ಕದ ಭರತನಾಟ್ಯ ವಿದ್ಯಾರ್ಥಿನಿ ಕುಮಾರಿ ಆತ್ಮಿ ಶೆಟ್ಟಿ ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವು ಏಪ್ರಿಲ್ 4ರಂದು ಸಂಜೆ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಲಿದೆ ಎಂದು ನೃತ್ಯಗುರು ವಿದುಷಿ ವಿದ್ಯಾ ಮನೋಜ್ ತಿಳಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮಿ ಶೆಟ್ಟಿ ಕಳೆದ 12 ವರ್ಷಗಳಿಂದ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದು, ಪ್ರಸ್ತುತ ವಿದ್ವತ್ ಅಂತಿಮ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಿದರು. ವಿವಿಧ ಪ್ರತಿಷ್ಠಿತ ವೇದಿಕೆಗಳಲ್ಲಿ ನೃತ್ಯ…
