ರಬ್ಬರ್ ಬೆಳೆಗಾರರ ಸಮಸ್ಯೆಯ ಪರಿಹಾರಕ್ಕೆ ನವೆಂಬರ್ 29 ರಂದು ಉಜಿರೆಯಲ್ಲಿ ರಾಜ್ಯಮಟ್ಟದ ಒಂದು ದಿನದ ರಬ್ಬರ್ ಬೆಳೆಗಾರರ ಸಮ್ಮೇಳನ …. !

ಮಂಗಳೂರು: ಕರ್ನಾಟಕ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ. ಉಜಿರೆ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ನಿ., ಉಜಿರೆ ಹಾಗೂ ಕರ್ನಾಟಕ ರಾಜ್ಯದ ರಬ್ಬರು ಮಾರ್ಕೆಟಿಂಗ್ ಸೊಸೈಟಿಗಳ ಜಂಟಿ ಆಶ್ರಯದಲ್ಲಿ ನವೆಂಬರ್ 29 ರಂದು ಕೃಷ್ಣಾನುಗ್ರಹ ಸಭಾಭವನ ಉಜಿರೆಯಲ್ಲಿ ಪೂರ್ವಾಹ್ನ ೧೦ ರಿಂದ ರಾಜ್ಯಮಟ್ಟದ ಒಂದು ದಿನದ ರಬ್ಬರ್ ಬೆಳೆಗಾರರ ಸಮ್ಮೇಳನ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಶ್ರೀಧರ್ ಭಿಡೆ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ…

Read More

ನವೆಂಬರ್ 28 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದಿವ್ಯ ಹಸ್ತದಿಂದ ಗೋಕರ್ಣ ಪರ್ತಗಾಳಿಯಲ್ಲಿ 77 ಅಡಿ ಎತ್ತರದ ಕಂಚಿನ ಶ್ರೀರಾಮನ ಪ್ರತಿಮೆಯ ಲೋಕಾರ್ಪಣೆ … !

ಮಂಗಳೂರು: ಗೋವಾ ಕಾಣಕೋಣ: ಸಮೀಪದ ಪರ್ತಗಾಳಿ ಕೇಂದ್ರ ಮಠದಲ್ಲಿ ನವೆಂಬರ್ 27 ರಿಂದ ಡಿಸೆಂಬರ್ 07 ರ ತನಕ 11 ದಿನಗಳ ಸಾರ್ಧಪಂಚ ಶತಮಾನೋತ್ಸವ ಕಾರ್ಯಕ್ರಮವು ನಡೆಯಲಿದೆ . ಇದರ ಭಾಗವಾಗಿ ನವೆಂಬರ್ 28 ರಂದು ಮಧ್ಯಾಹ್ನ 3.30 ರಿಂದ ಸಾಯಂಕಾಲ 5.00 ಗಂಟೆ ತನಕ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ನಡೆಯಲಿದ್ದು . ಈ ಸಂದರ್ಭದಲ್ಲಿ ಅವರು ಪ್ರಭು ಶ್ರೀ ರಾಮನ ಮೂರ್ತಿಯ ಅನಾವರಣದ ಜೊತೆಗೆ ಶ್ರೀ ರಾಮಾಯಣ ಥೀಮ್ ಪಾರ್ಕ,…

Read More

ಬೀಡಿ ಮಾಲಕರ ವಂಚನೆಯ ವಿರುದ್ಧ ಬೀದಿಗಿಳಿದ ಬೀಡಿ ಕಾರ್ಮಿಕರು – ರಾತ್ರಿ ಹಗಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಉದ್ಘಾಟನೆ

ಮಂಗಳೂರು : ಕಳೆದ 7 ವರ್ಷಗಳಿಂದ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ಮೀನಾ ಮೇಷ ಎಣಿಸುವ ರಾಜ್ಯ ಸರಕಾರದ ವಿರುದ್ದ ಬೀಡಿ ಕಾರ್ಮಿಕರು CITU ನೇತ್ರತ್ವದಲ್ಲಿ ಇಂದಿನಿಂದ (24-11-2025) ನಗರದ ಕ್ಲಾಕ್ ಟವರ್ ಬಳಿಯಲ್ಲಿ ರಾತ್ರಿ ಹಗಲು ಧರಣಿ ಸತ್ಯಾಗ್ರಹವನ್ನು ಆರಂಭಿಸಿದರು.ಪ್ರಾರಂಭದಲ್ಲಿ ಧರಣಿನಿರತರು ಬೀಡಿ ಮಾಲಕರು ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡಿದ…

Read More

ಡಿಸೆಂಬರ್ 16ರಂದು ಬೆಳ್ತಂಗಡಿಯಲ್ಲಿ ಮಹಿಳಾ ನ್ಯಾಯ ಸಮಾವೇಶ , ಜಾಥಾ ಮತ್ತು ಮಹಿಳೆಯರನ್ನು ಕೊಂದವರು ಯಾರು ಎನ್ನುವ ಜನಾದೋಲನ ಕಾರ್ಯಕ್ರಮ … !

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಸತ್ಯವನ್ನು ಬೆಳಕಿಗೆ ತರುವ ಉದ್ದೇಶದಿಂದ “ಕೊಂದವರು ಯಾರು?” ಅಭಿಯಾನವನ್ನು ಡಿಸೆಂಬರ್ 16ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮಹಿಳಾ ನ್ಯಾಯ ಸಮಾವೇಶ ಮತ್ತು ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನ ಸದಸ್ಯೆಯರು ಘೋಷಿಸಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು ದಹಲಿಯ ನಿರ್ಭಯಾ ಪ್ರಕರಣ ನಡೆದ ದಿನವಾದ ಡಿಸೆಂಬರ್ 16 ಅನ್ನು ಮಹಿಳಾ ಸಂಘಟನೆಗಳು ದೇಶವ್ಯಾಪಿ ಅತ್ಯಾಚಾರ ವಿರೋಧಿ ದಿನವೆಂದು ಆಚರಿಸುತ್ತಿವೆ. ಇದೇ ಹಿನ್ನೆಲೆಯಲ್ಲಿ ಅದೇ…

Read More

ಸಂತ ಅಲೋಶಿಯಸ್ ಉರ್ವಾದ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಂಗಳೂರು: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಜೇನ್ ಜೆರುಶ ಪಿಂಟೋ ಹಾಸನದಲ್ಲಿ ನಡೆದ ರಾಜ್ಯಮಟ್ಟದ ಗುಂಡು ಎಸೆತ ಹಾಗೂ ಚಕ್ರಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನುಗಳಿಸಿ ಮಧ್ಯ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕರು ವಂ ಗುರುಗಳಾದ ಬೆಂಜಮಿನ್ ಪಿಂಟೋ , ಶಾಲಾ ಮುಖ್ಯ ಶಿಕ್ಷಕರಾದ ಶ್ರೀಯುತ ಅಲೋಶಿಯಸ್ ಡಿಸೋಜ ,ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್, ಸುಧಾಕರ್ ಮತ್ತು ಹರಿಣಾಕ್ಷಿ ಇವರು ಶಾಲಾವತಿಯಿಂದ ಅಭಿನಂದಿಸಿ ಶುಭ ಹಾರೈಸಿದರು.

Read More

ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ “ಇನ್ನೋವೇಷನ್ ಶೋಕೆಸ್–2025” ಮತ್ತು “ಸಿಥೇರಿಯನ್–2025 ಹ್ಯಾಕಥಾನ್” ಭವ್ಯ ಉದ್ಘಾಟನೆ

ಮಂಗಳೂರು: ಮಂಗಳೂರಿನ ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್ನಿಕಲ್ ಆಕ್ಟಿವಿಟಿ ಸೆಲ್ ಹಾಗೂ CSE, ISE, AI & ML, ECE, CSD ಮತ್ತು CSBS ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ “ಇನ್ನೋವೇಷನ್ ಶೋಕೆಸ್: ಮೇಜರ್ ಪ್ರಾಜೆಕ್ಟ್ ಎಕ್ಸಿಬಿಷನ್–2025” ಮತ್ತು “ಸಿಥೇರಿಯನ್–2025: 24-ಗಂಟೆಗಳ ಹ್ಯಾಕಥಾನ್” ಕಾರ್ಯಕ್ರಮಗಳು ನವೆಂಬರ್ 22 ಮತ್ತು 23, 2025 ರಂದು ಭವ್ಯವಾಗಿ ಜರುಗಿದವು. ಉದ್ಘಾಟನಾ ಸಮಾರಂಭವು ಡಾ. ಪಿ. ದಯಾನಂದ ಪೈ – ಪಿ. ಸತೀಶ್ ಪೈ ಸಭಾಂಗಣದಲ್ಲಿ ನೆಡೆಯಿತು. ಮುಖ್ಯ ಅತಿಥಿ ಡಾ. ನಿರಂಜನ್…

Read More

ಕೇಂದ್ರ ಸರಕಾರ ಜಾರಿ ಮಾಡಿದ ಕಾರ್ಮಿಕ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ

ಮಂಗಳೂರು: ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿ ಮಾಡಿದ ಕಾರ್ಮಿಕ ವಿರೋಧಿಯಾದ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಹಾಗೂ ಕರ್ನಾಟಕ ರಾಜ್ಯ ಸರಕಾರ ಈ ಸಂಹಿತೆಗಳಿಗೆ ನಿಯಮಗಳನ್ನು ರೂಪಿಸಬಾರದು ಎಂದು ಒತ್ತಾಯಿಸಿ ಇಂದು(22-11-2025) ದೇಶಾದ್ಯಂತ ಕಾರ್ಮಿಕರಿಂದ ಸ್ವಯಂಪ್ರೇರಿತ ಪ್ರತಿಭಟನೆ ನಡೆಸಬೇಕೆಂದು CITU ಕರೆ ನೀಡಿದ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು, ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡುವ ಕೇಂದ್ರದ ನರೇಂದ್ರ ಮೋದಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ…

Read More

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ .ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು.ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ…

Read More

ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಗೆ ಮೇಲ್ಛಾವಣೆ , ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆ

ಮಂಗಳೂರು: ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಗೆ ಮೇಲ್ಛಾವಣೆ ಅಳವಡಿಸಲಾಗಿದ್ದು ಅದರ ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭಾಗವಹಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯರ ಬೇಡಿಕೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿನ ಅಶ್ವಥ ಕಟ್ಟೆಗೆ ಹಾಗೂ ಮೇಲ್ಛಾವಣಿಗೆ ಸಹಕಾರ ನೀಡಿರುವುದು ತೃಪ್ತಿ ತಂದಿದೆ. ಎಲ್ಲರಿಗೂ ಇದರಿಂದ ಉಪಯೋಗವಾದರೆ ಅದೇ ತೃಪ್ತಿ ಎಂದರು. ವಾರ್ಡ್ ಅಧ್ಯಕ್ಷ ಕೆ. ನಾರಾಯಣ ರವರು ಮಾತನಾಡಿ, ಕೆಲವು…

Read More

ದಿಲ್ಲಿ ಕಾರ್ ಸ್ಪೋಟ ಖಂಡಿಸಿ ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ , ರಾಜಕೀಯ ನಾಯಕರ ಸಾಥ್ …. !

ಮಂಗಳೂರು : ದಿಲ್ಲಿ ಕಾರ್ ಸ್ಪೋಟ ಖಂಡಿಸಿ ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಯಿತು. ದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ವಿಧ್ವಂಸಕ ಕೃತ್ಯ ಮತ್ತು ‘ವೋಟ್ ಚೋರಿ’ ವಿರುದ್ಧ ಬೃಹತ್ ಪಂಜಿನ ಮೆರವಣಿಗೆ ಕೃಷ್ಣಾಪುರ ಕ್ರಾಸ್ ನಿಂದ ಸುರತ್ಕಲ್ ಪೇಟೆಯವರೆಗೆ ನಡೆಯಿತು.ಬಳಿಕ ನಡೆದ ಸಭೆಯಲ್ಲಿ ಮಾತಾಡಿದ ಇನಾಯತ್ ಅಲಿ ಅವರು, “ಬಿಜೆಪಿ ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ವಾಮಮಾರ್ಗವನ್ನು ಅನುಸರಿಸುತ್ತಿರುವುದು ಖಂಡನೀಯ. ಮತಗಳ್ಳತನ ಈಗಾಗಲೇ…

Read More
error: Content is protected !!