ಕರಾವಳಿಗೆ ಮೋದಿ ಭೇಟಿ ಹಿನ್ನಲೆ : ಭರದಿಂದ ಸಾಗಿದ ರಸ್ತೆ, ಹೆಲಿಪಾಡ್ ನಿರ್ಮಾಣ ಕಾರ್ಯ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರು ನ.28ರಂದು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಸ್ವಚ್ಛತೆ ಸಹಿತ ವಿವಿಧ ಕಾಮಗಾರಿಗಳು ಚುರುಕು ಗೊಂಡಿವೆ ಮತ್ತು ಆದಿಉಡುಪಿಯಲ್ಲಿ ನಾಲ್ಕನೇ ಹೆಲಿಪ್ಯಾಡ್ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಪ್ರಧಾನಿಯವರ ಹೆಲಿಕಾಪ್ಟ‌ರ್ ಇಳಿಯಲು ಅನುಕೂಲ ಆಗುವಂತೆ ಅದಿಉಡುಪಿ ಹೆಲಿಪ್ಯಾಡ್ ಪ್ರದೇಶದಲ್ಲಿ ಹೊಸದಾಗಿ ಹೆಲಿಕಾಪ್ಟರ್‌ ಲಾಂಚರ್ ನಿರ್ಮಾಣ ಕಾಮಗಾರಿ ಈಗಾಗಲೇ ಶುರುವಾಗಿದೆ. ಹೆಲಿಪ್ಯಾಡ್ ನಿರ್ಮಾಣ ಸಂಬಂಧ ಇತ್ತೀಚಿಗೆ ನಡೆದ ಸಭೆ ಯಲ್ಲಿ ಜಿಲ್ಲಾಡಳಿತ ತೀರ್ಮಾನ ತೆಗೆದುಕೊಂಡಿತ್ತು. ಆದಿಉಡುಪಿ ಹೆಲಿಪ್ಯಾಡ್‌ನಲ್ಲಿ ಮೂರು ಹೆಲಿಕಾಪ್ಟರ್ ಲಾಂಚರ್ ಇದೆ. ಇದರ ನಿರ್ವಹಣೆ…

Read More

ಮಂಗಳೂರಿನ ಡಾ.ಟಿ.ಎಂ.ಎ. ಪೈ ಕನ್ ವೆನ್ಶನ್ ಸೆಂಟರ್ ನಲ್ಲಿ ಫಿಲಾನಮಿಸ್ಟ್ ಅಂಚೆಚೀಟಿಗಳು ಮತ್ತು ನಾಣ್ಯಗಳ ಪ್ರದರ್ಶನ

ಮಂಗಳೂರು: ದೇಶದ ಪ್ರಮುಖ ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಹಕಾರಾದ ಮಂಗಳೂರಿನ ಎಂ. ಪ್ರಶಾಂತ್ ಶೇಟ್ ಅವರಿಂದ ಫಿಲಾನಮಿಸ್ಟ್ ಅಂಚೆಚೀಟಿಗಳು ಮತ್ತು ನಾಣ್ಯಗಳ ಪ್ರದರ್ಶನ ಇಂದು ಮತ್ತು ನಾಳೆ ಮಂಗಳೂರಿನ ಡಾ.ಟಿ.ಎಂ.ಎ. ಪೈ ಕನ್ ವೆನ್ಶನ್ ಸೆಂಟರ್ ನಲ್ಲಿ ನಡೆಯುತ್ತಿದ್ದು ಇದು ಸಾರ್ವಜನಿಕರಿಗೆ ಉಚಿತ ಪ್ರವೇಶವಾಗಿದೆ . ಇತಿಹಾಸದ ಬಗ್ಗೆ ಆಸಕ್ತಿ ಉಳ್ಳವರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ. ವಿಶೇಷತೆ ಜಗತ್ತಿನಲ್ಲೇ ಮೊದಲ ಬಾರಿಗೆ ಬಳಕೆಗೆ ಬಂದ 17 ನೇ ಶತಮಾನದ ಆಫ್ರಿಕನ್ ನಾಣ್ಯ, ಚೀನಾ, ಜಪಾನ್ ,…

Read More

ಯುವಕನ ದುರಂತ ಸಾವು ತಂದೆ-ತಾಯಿಯಂತೆಯೇ ಮಗನೂ ಆತ್ಮಹತ್ಯೆಗೆ ಶರಣು

ಪುತ್ತೂರು:ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ.ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಶೋರೂಮ್‌ ವರ್ಕ್‌ಶಾಪ್‌ ಒಂದರಲ್ಲಿ ಉದ್ಯೋಗದಲ್ಲಿದ್ದ ಪ್ರತೀಕ್, ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಗುರುವಾರ ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ನೋಡುತ್ತಾ ಕುಳಿತಿದ್ದ ಅವರು, ಏಕಾಏಕಿ ನಾಪತ್ತೆಯಾಗಿದ್ದರು. ಅನುಮಾನಗೊಂಡು ಮನೆಯವರು ಹುಡುಕಾಡಿದಾಗ, ಪ್ರತೀಕ್ ಮನೆಯ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡ…

Read More

ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು.ಆರೋಪಿಗಳ ಬಂಧನ

ಮಂಗಳೂರು :: ಬೆಳ್ತಂಗಡಿಯ ನಿಟ್ಟಡೆ ಗ್ರಾಮದ ಪಾಣೂರು ಗುರುನಾರಾಯಣ ಸರ್ಕಲ್ ಬಳಿ ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಬೈಕನ್ನು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ವೇಣೂರು ಗ್ರಾಮದ ಕೆರೆಕೋಡಿ ನಿವಾಸಿ ಮಹಮ್ಮದ್ ಇರ್ಷಾದ್ (25) ಹಾಗೂ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ಸಾದಿಕ್ ಖಾನ್ (26) ಬಂಧಿತರು. ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನ. 11ರಂದು ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾ‌ರ್ ತನ್ನ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣ…

Read More

ನ.28 ಬೆಳ್ಳಿ ತೆರೆಯ ಮೇಲೆ : “ಅಪರೇಷನ್ ಲಂಡನ್ ಕೆಫೆ”ರಾಜ್ಯಾದ್ಯಂತ ಭರ್ಜರಿ ಬಿಡುಗಡೆ ಸಿದ್ದ … !

ಮಂಗಳೂರು: “ಬಹು ನಿರೀಕ್ಷಿತ ಮಾಸ್ ಮತ್ತು ಆಕ್ಷನ್ ಪೋಸ್ಟರ್ಸ್, ಟೀಸರ್, ಟ್ರೈಲರ್ ಹಾಗೂ ರೈ ರೈ ರೈ ಅದ್ಭುತ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟೂ ಕುತೂಹಲ ಮೂಡಿಸಿರುವ ಅಪರೇಷನ್ ಲಂಡನ್ ಕೆಫೆ ಕನ್ನಡ ಚಿತ್ರವು ಇದೇ ನವೆಂಬ‌ರ್ 28ರಂದು ಏಕಕಾಲಕ್ಕೆ ಕನ್ನಡ ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ” ಎಂದು ನಟ ಅರ್ಜುನ್ ದೇವ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಚಿತ್ರಕ್ಕೆ ಸಾಕಷ್ಟು ಬಂಡವಾಳ ಹಾಕಿ ಸಿನಿಮಾ ಮಾಡಿದ್ದಾರೆ. ಮರಾಠಿ ಭಾಷೆ ಬಾರದೆ…

Read More

ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ನಡೆದ ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ ಕಾರ್ಯಕ್ರಮ

ಮಂಗಳೂರು : ಮಂಗಳೂರುನಗರದ ಕದ್ರಿ ಜೋಗಿ ಮಠ ಸಮೀಪದ ಉಳ್ಳಾಲ ಶ್ರೀನಿವಾಸ ಮಲ್ಯ ಉದ್ಯಾವನದಲ್ಲಿ ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ನಡೆದ ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀಯುತ ಅರ್ಜುನ್ ಭಂಡಾರ್ಕರ್ ರವರನ್ನು ಹಾಗೂ ಮಲ್ಯ ಕುಟುಂಬಸ್ಥರಾದ ಉಳ್ಳಾಲ ನರಹರಿ ಮಲ್ಯರವರನ್ನು ಗೌರವಿಸಲಾಯಿತು.ಸಮಿತಿಯ…

Read More

ನ.23ರಂದು ‘ಅಸ್ಮಿತಾ’ ಮಹಿಳೆಯರ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ

ಮಂಗಳೂರು: ರಾಜ್ಯಮಟ್ಟದ ಖೇಲೋ ಇಂಡಿಯಾ ಮಹಿಳೆಯರ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ ಅಸ್ಮಿತಾ’ ನ.23ರಂದು ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ದ.ಕ. ಕಿಕ್ ಬಾಕ್ಸಿಂಗ್ ಅಸೋಸಿಯೇಶನ್‌ನ ಚೇರ್‌ಮ್ಯಾನ್ ಸತ್ಯಜಿತ್ ಸುರತ್ಕಲ್ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಕ್ರೀಡಾಕೂಟವನ್ನು ಬೆಳಗ್ಗೆ 9ಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದು ಫಾದರ್ ಮುಲ್ಲ‌ರ್ ಸಂಸ್ಥೆಯ ಆಡಳಿತಾಧಿಕಾರಿ ರೆ.ಫಾ. ಮೈಕಲ್ ಸಾಂತುಮಯೋರ್ ಆಶೀರ್ವಚನ ನೀಡಲಿದ್ದಾರೆ ಎಂದರು . ದ.ಕ. ಜಿಲ್ಲೆಯ 150 ಮಂದಿ…

Read More

ನ.26ರಂದು ಕದ್ರಿ ಯುದ್ಧ ಸ್ಮಾರಕದಲ್ಲಿ ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮ

ಮಂಗಳೂರು: ಮುಂಬೈ ನಗರದ ಮೇಲೆ 2008ರ ನ.26ರಂದು ನಡೆದ ಭಯೋತ್ಪಾದನಾ ದಾಳಿಯ ಸಂದರ್ಭ ಉಗ್ರರ ವಿರುದ್ಧ ವೀರಾವೇಶದಿಂದ ಹೋರಾಡಿ ನಾಗರಿಕರನ್ನು ರಕ್ಷಿಸಿದ ವೀರ ಯೋಧರನ್ನು ಸ್ಮರಿಸಿ ನುಡಿನಮನ ಸಲ್ಲಿಸುವ ಸಲುವಾಗಿ ಮಂಗಳೂರಿನ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ವತಿಯಿಂದ ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮ ನ.26ರಂದು ಸಂಜೆ 4ಕ್ಕೆ ಕದ್ರಿ ಯುದ್ಧ ಸ್ಮಾರಕದಲ್ಲಿ ನಡೆಯಲಿದೆ ಎಂದು ವೇದಿಕೆಯ ಸ್ಥಾಪಕ ಫ್ರ್ಯಾಂಕ್ಲಿನ್ ಮೊಂತೆರೋ ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಸೈಂಟ್ ಅಲೋಶಿಯಸ್…

Read More

ದ.ಕ. ಜಿಲ್ಲಾ ಕಾರ್ಯನಿರತ ಪತ್ರರ್ಕರಸಂಘದ ನೂತನ ಸಮಿತಿ ಪದಗ್ರಹಣ

ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 202528ನೆ ಸಾಲಿನ ನೂತನ ಸಮಿತಿಯ ಪದ್ರಹಣ ಸಮಾರಭ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆಯಿತು.ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಅವರು ನೂತನ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಕೋಶಾಧಿಕಾರಿ ವಿಜಯ್ ಕೋಟ್ಯಾನ್ ಸೇರಿದಂತೆ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದರು. ಸಂಘದ ಪೂರ್ವಾ‘ಕ್ಷ ಆನಂದ ಶೆಟ್ಟಿ ಕೆ., ಜಗನ್ನಾಥ ಶೆಟ್ಟಿ ಬಾಳ, ಹರ್ಷ ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳು…

Read More

ರಾಜ್ಯ ಬಜೆಟ್ ನಲ್ಲಿ ಕಂಬಳಕ್ಕೆ 5 ಕೋಟಿ ಅನುದಾನ ಬಿಡುಗಡೆ ಮಾಡಬೇಕು:ಕಂಬಳ ಅಸೋಸಿಶಿಯನ್ ಅಧ್ಯಕ್ಷರಾದ ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ

ಮಂಗಳೂರು: ಕರಾವಳಿ ಕರ್ನಾಟಕದ ಕಂಬಳ ಕ್ರೀಡೆಯು ಅಂತರಾಷ್ಟ್ರೀಯ ಮನ್ನಣೆ ಪಡೆದಿರುವ ಸಾಹಸ ಕ್ರೀಡೆ. ಕರ್ನಾಟಕ ಸರಕಾರ ಕ್ರೀಡಾ ಪ್ರಾಧಿಕಾರದಡಿ ಮಾನ್ಯತೆ ನೀಡಿ ರಾಜ್ಯ ಕಂಬಳ ಅಸೋಸಿಯೇಶನ್ (ರಿ.) ಅಸ್ಥಿತ್ವಕ್ಕೆ ಬಂದಿರುವುದರಿಂದ ಕಂಬಳದ ಗೌರವ ಹೆಚ್ಚಿದೆ. ಇದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮತ್ತು ನಮ್ಮ ಉಭಯ ಜಿಲ್ಲೆಯ ಜನಪ್ರತಿನಿಧಿಗಳಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ರಾಜ್ಯ ಕಂಬಳ ಅಸೋಸಿಶಿಯನ್ ಇದರ ಅಧ್ಯಕ್ಷರಾದ ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ ಹೇಳಿದರು. ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ…

Read More
error: Content is protected !!