ನೀರಿನ ಕೊಳವೆ ಒಡೆದು ಹೋದ ಪ್ರದೇಶಕ್ಕೆ ಶಾಸಕರ ಭೇಟಿ … !
ಮಂಗಳೂರು: ನಗರ ಭಾಗಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಕೊಳವೆ ಒಡೆದು ಹೋಗಿ ಮೂರ್ನಾಲ್ಕು ದಿನಗಳು ಕಳೆದಿದ್ದು ಇನ್ನೂ ಸಹ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಬಗ್ಗೆ ಶಾಸಕರುಗಳಾದ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿಯವರು ಸ್ಥಳಕ್ಕೆ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಮಾತನಾಡಿದ ಶಾಸಕ ಕಾಮತ್ ರವರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಅಂತ್ಯಗೊಂಡು ಒಂದು ವರ್ಷವಾಗುತ್ತಾ ಬಂದಿದ್ದು ಸದ್ಯ ಯಾವುದೇ ಚುನಾಯಿತ ಪ್ರತಿನಿಧಿಗಳಿಲ್ಲದ್ದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರವೇ ಆಡಳಿತಾಧಿಕಾರಿ ಮೂಲಕ…