ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ
ಮಂಗಳೂರು:ಈಶ್ವರನ ಹೂದೋಟ ಎಂದೇ ಪ್ರಸಿದ್ದಿ ಪಡೆದ ಪ್ರಶಾಂತ, ಪ್ರಕೃತಿಯ ಸೊಬಗು, ಹಸಿರು ಸಿರಿಯ ಮಧ್ಯೆ ಇರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿದೆ. ಏಪ್ರಿಲ್ 7ರಂದು ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ. ಅರುಣ ಶ್ಯಾಮ್ ಹೇಳಿದರು. ಭಾರತದ ಏಕಾದಶ ಪುಣ್ಯ ನದಿಗಳ ತೀರ್ಥದೊಂದಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿರುವುದು ವಿಶೇಷವಾಗಿದೆ, (ಗಂಗೆ,…
