ರಜೆ ಮಾಡದ ರಾಜ ಹಾಸ್ಯಗಾರ ವಳಕುಂಜ ಅವರಿಗೆ ಕದ್ರಿ ವಿಷ್ಣು ಪ್ರಶಸ್ತಿ

ಮಂಗಳೂರು: 27 ವರ್ಷ ಗಳ ಶ್ರೀ ಕಟೀಲು ಮೇಳದ ತಿರುಗಾಟದಲ್ಲಿ 19 ವರ್ಷ ಒಂದೇ ಒಂದು ರಜೆ ಪಡೆಯದೆ ದಾಖಲೆ ಮಾಡಿರುವ ಅಪೂರ್ವ ಕಲಾರಾಧಕ, ತೆಂಕು ತಿಟ್ಟಿನ ಪ್ರಾತಿನಿಧಿಕ ಯಕ್ಷಗಾನ ರಾಜ ಹಾಸ್ಯಗಾರ ರವಿಶಂಕರ್ ವಳಕುಂಜ ಅವರಿಗೆ ” ಕದ್ರಿ ವಿಷ್ಣು ಪ್ರಶಸ್ತಿ -2025″ ನೀಡಿ ಗೌರವಿಸಲಾಯಿತು.ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕರಾದ ಲಕ್ಷ್ಮೀ ನಾರಾಯಣ ಆಸ್ರಣ್ಣ ಅವರು ಕಳೆದ 9 ವರ್ಷ ಗಳಿಂದ ಕದ್ರಿ ದೇವಸ್ಥಾನದ ಅಂಗಣದಲ್ಲಿ ಕಟೀಲು ಮೇಳದ ಸೇವೆ ಬಯಲಾಟ ನಡೆಸಿಕೊಂಡು ಬರುತ್ತಿರುವ ಕದ್ರಿ…

Read More

ಆಮ್ ಆದಿ ಪಾರ್ಟಿ ಮಂಗಳೂರು- ನಾಗರಿಕ ಅಹವಾಲು ಪೋರ್ಟಲ್ ಪ್ರಾರಂಭ

ಮಂಗಳೂರು: ಇಂದಿನಿಂದ ಮಂಗಳೂರಿನ ನಾಗರಿಕರು ಮಂಗಳೂರು ನಗರಸಭೆಯ ವ್ಯಾಪ್ತಿಯ ನಾಗರಿಕ ಸಮಸ್ಯೆಗಳ ಕುರಿತು ಅಹವಾಲುಗಳನ್ನು https://aapdakshinakannada.org/Grievance/ ಎನ್ನುವ ಪೋರ್ಟಲ್ ಮುಖಾಂತರ ಆನ್‌ಲೈನ್‌ನಲ್ಲಿ ದಾಖಲಿಸಬಹುದು ಎಂದುಪೋರ್ಟಲ್ ಸಂಚಾಲಕರಾದ ನೈಜಲ್ ಅಲ್ಬುಕರ್ಕ್ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ತಿಳಿಸಿ , ಸುತ್ತುಮುತ್ತಲಿನ ಸಮಸ್ಯೆಗಳ ಫೋಟೋಗಳು, ವೀಡಿಯೋಗಳು ಮತ್ತು ಸಮಸ್ಯೆಗಳ ಕುರಿತಾದ ವಿವರಣೆಗಳನ್ನು ಕೂಡ ನಾಗರಿಕ ಅಹವಾಲು ಪೋರ್ಟಲ್ ಸೇರಿಸಬಹುದಾಗಿದೆ . ಸ್ವಚ್ಛತೆ , ನೀರು , ರಸ್ತೆ ಮತ್ತು ಚರಂಡಿ ವ್ಯವಸ್ಥೆ , ಘನ…

Read More

ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಿದ್ದ …. !

ಮಂಗಳೂರು: ಕನ್ನಡ ಭಾಷೆಯ ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಾಯಕ ನಟರಾದ ಲಿಖಿತ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಮೂರು ವರ್ಷಗಳ ಕಾಲ ಈ ಸಿನಿಮಾಕ್ಕೆ ದುಡಿದಿದ್ದು ಕಥೆ ತುಂಬಾ ಚೆನ್ನಾಗಿದೆ. ಚಿತ್ರದ ನಿರ್ದೇಶಕ ವಿನಾಯಕ್ ಇನ್ಸ್ಟಾಗ್ರಾಮ್ ಮೂಲಕ ನನ್ನನ್ನು ಸಂಪರ್ಕಿಸಿದರು. ಅವರು ಹೇಳಿದ ಕಥೆ ಕೇಳಿ ಖುಷಿಯಾಗಿ ಸಿನಿಮಾಕ್ಕೆ ಬಂಡವಾಳ ಹಾಕಿದ್ದೇನೆ. ಒರಿಯರ್ದೊರಿ ಅಸಲ್, ಮದಿಮೆ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಟ್ಟು ನನ್ನನ್ನು ಬೆಳೆಸಿರುವ ಹಿರಿಯ ರಂಗಭೂಮಿ ಕಲಾವಿದ ವಿಜಯ್…

Read More

ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿಗಳು ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿಯ ಭೇಟಿ …. !

ಉಡುಪಿ: ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿಗಳು ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಬಿಲ್ಲವ ಸಮಾಜದ ಹಿರಿಯ ಮುಖಂಡರಾದ ಮಂಜುನಾಥ ಪೂಜಾರಿಯವರನ್ನು ಹೆಬ್ರಿಯಲ್ಲಿ ಭೇಟಿ ಮಾಡಿದರು . ಈ ಸಂದರ್ಭದಲ್ಲಿ ಡಿಸೆಂಬರ್ 7ನೇ ತಾರೀಕು ಮಂಗಳೂರು ಮತ್ತು ಉಡುಪಿ ಜಿಲ್ಲೆಗಳ ಐತಿಹಾಸಿಕ ಪಾದಯಾತ್ರೆಯ ಪೂರ್ವಭಾವಿ ಸಭೆಯ ಕುರಿತು ಚರ್ಚೆಯನ್ನು ನಡೆಸಲಾಯಿತು . ಮಂಜುನಾಥ ಪೂಜಾರಿ ಅವರನ್ನು ಭೇಟಿ ಮಾಡಿ ನಿಗಮದ ಹಲವಾರು ವಿಷಯಗಳ ಬಗ್ಗೆ ಸುಮಾರು 2…

Read More

ಕಾರ್ಕಳ ಕ್ಷೇತ್ರದ ಶಾಸಕರಾದ ಸುನಿಲ್ ಕುಮಾರ್ ಭೇಟಿಯಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿ …. !

ಕಾರ್ಕಳ: ಕಾರ್ಕಳ ಕ್ಷೇತ್ರದ ಶಾಸಕರಾದ ಸುನಿಲ್ ಕುಮಾರ್ ರವರನ್ನು ಕಾರ್ಕಳದಲ್ಲಿ ಶ್ರೀಗಳು ಭೇಟಿಯಾಗಿ ಐತಿಹಾಸಿಕ ಪಾದಯಾತ್ರೆಯ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಆಹ್ವಾನವನ್ನು ನೀಡಿದರು , ಪಾದಯಾತ್ರೆ ನಡೆಯುವ ಸಂದರ್ಭ ದಲ್ಲಿ ದೊಡ್ಡ ಮಟ್ಟದ ಬಹಿರಂಗ ಸಭೆಯಲ್ಲಿ ಗಂಗಾವತಿ ನಗರದಲ್ಲಿ ಭಾಗವಹಿಸಲು ಶ್ರೀಗಳು ತಿಳಿಸಿದರು. ಈಡಿಗ, ಬಿಲ್ಲವ, ನಾಮಧಾರಿ ಧೀವರ ಸೇರಿದಂತೆ 26 ಪಂಗಡಗಳ ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗಾಗಿ 2026ರ ಜನವರಿ 6 ರಂದು ಶಕ್ತಿಪೀಠ ಕರದಾಳದಿಂದ ಬೆಂಗಳೂರು ತನಕ 41 ದಿನಗಳ 700 ಕಿಲೋ ಮೀಟರ್…

Read More

ಸೌತ್ ಕೆನರಾ ಬೀಡಿ ವರ್ಕರ್ಸ್ ಪೆಡರೇಶನ್ ವತಿಯಿಂದ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿಯನ್ನು ಜಾರಿಗೊಳಿಸುವಂತೆ ನವೆಂಬರ್ 24 ರಿಂದ ಮಂಗಳೂರಿನಲ್ಲಿ ಅಹೋರಾತ್ರಿ ಧರಣಿ…!

ಮಂಗಳೂರು: ಸೌತ್ ಕೆನರಾ ಬೀಡಿ ವರ್ಕರ್ಸ್ ಪೆಡರೇಶನ್ ವತಿಯಿಂದ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ನವೆಂಬರ್ 24 ರಿಂದ 27 ರ ತನಕ ಅಹೋರಾತ್ರಿ ಧರಣಿಯನ್ನು ನಗರದ ಮಿನಿ ವಿಧಾನ ಸೌಧದ ಎದುರು ನಡೆಸಲಾಗುವುದು ಇದಕ್ಕೆ ಪರಿಹಾರ ಸಿಗದೇ ಹೋದಲ್ಲಿ ನವೆಂಬರ್ 28ಕ್ಕೆ ಮಂಗಳೂರಿನ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯನ್ನು ಮುತ್ತಿಗೆ ಹಾಕಲಾಗುವುದೆಂದು ಸೌತ್ ಕೆನಾರ ಬೀಡಿ ವರ್ಕರ್ಸ್ ಫೆಡರೇಶನ್ ನ ಪ್ರಧಾನ ಕಾರ್ಯದರ್ಶಿಗಳಾದ ಜೆ ಬಾಲಕೃಷ್ಣ ಶೆಟ್ಟಿ ಎಚ್ಚರಿಕೆ ನೀಡಿದರು. ಅವರು ನಗರದ…

Read More

41 ದಿನಗಳ 700 ಕಿಲೋ ಮೀಟರ್ ಉದ್ದದ ಐತಿಹಾಸಿಕ ಪಾದಯಾತ್ರೆ ಕೈಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿ …. !

ಮಂಗಳೂರು: ಈಡಿಗ , ಬಿಲ್ಲವ, ನಾಮಧಾರಿ ಧೀವರ ಸೇರಿದಂತೆ 26 ಪಂಗಡಗಳ ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗಾಗಿ 2026ರ ಜನವರಿ 6 ರಂದು ಶಕ್ತಿಪೀಠ ಕರದಾಳದಿಂದ ಫೆಬ್ರವರಿ 12 ಬೆಂಗಳೂರ ತನಕ 41 ದಿನಗಳ 700 ಕಿಲೋ ಮೀಟರ್ ಉದ್ದದ ಐತಿಹಾಸಿಕ ಪಾದಯಾತ್ರೆ ಕೈಗೊಳ್ಳುವುದಾಗಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿ ತಿಳಿಸಿದ್ದಾರೆ .ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಸಮುದಾಯದ ಹಕ್ಕುಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುವಂತೆ…

Read More

ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ .ಮೂವರು ಸಾವು

ಮಂಗಳೂರು :ಪಣಂಬೂರು ಬಳಿ ಎರಡು ಟ್ಯಾಂಕರ್ ಲಾರಿಗಳ ನಡುವೆ ರಿಕ್ಷಾ ಸಿಲುಕಿ ಮೂವರು ಮೃತಪಟ್ಟ ದಾರುಣ ಘಟನೆ‌ ನಡೆದಿದೆ.ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನಪ್ಪಿದ್ದಾರೆ.ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್ ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದಿನಿಂದ ಆಟೊ ರಿಕ್ಷಾ ಮತ್ತು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ…

Read More

ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಸಹಕಾರ ಕ್ಷೇತ್ರ ಅಪಾರ ಕೊಡುಗೆ ನೀಡಿದೆ : ಸ್ಪೀಕರ್ ಯು ಟಿ ಖಾದರ್

ಮಂಗಳೂರು: ಸಹಕಾರ ಕ್ಷೇತ್ರವು ದೇಶದ ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡುವ ಮೂಲಕ ಗ್ರಾಮೀಣ ಜನರಿಗೆ ಶಕ್ತಿ ನೀಡಿದೆ. ದೇಶದ ಅಭಿವೃದ್ಧಿಗೆ ಸಹಕಾರ ರಂಗವು ಅಪಾರ ಕೊಡುಗೆ ನೀಡುತ್ತಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು ಎಂಬ ಧ್ಯೇಯ ವಾಕ್ಯ ದೊಂದಿಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ…

Read More

ಸಮಾಜಕ್ಕೆ ಮಾದರಿ ಮಕ್ಕಳ ಕೃಷಿ ಕಾಯಕಕ್ಕೆ ಒಲಿದ ಫಲವತ್ತೆಯ ಧ್ಯಾನ ದೇವತೆ …. !

ಬಂಟ್ವಾಳ: ಬೆಳೆವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ಇಲ್ಲಿನ ನಾಲ್ವರು ಮಕ್ಕಳು ತಮ್ಮ ಬಾಲ್ಯವೆಂಬ ಮೊಳಕೆಯಲ್ಲಿಯೇ ಬದುಕಿನ ಬೆಳೆಯನ್ನು ತೆಗೆದು ಮಾದರಿ ಯಾಗಿದ್ದಾರೆ. ಬಂಟ್ವಾಳ ತಾಲ್ಲೂಕು ಕನ್ಯಾನ ಗ್ರಾಮದ ಕಣಿಯೂರು ಎಂಬುದು ಕಲೆಂಜಿಮಲೆ ಎಂಬ ರಕ್ಷಿತಾರಣ್ಯದ ಹಸಿರ ತಪ್ಪಲಿನಲ್ಲಿರುವ ಸಣ್ಣ ಊರು. ಊರಿನ ಹೆಬ್ಬಾಗಿಲಿ ನಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಪುಣ್ಯ ಸನ್ನಿಧಿಯಿದೆ.ಪರಮ ಪೂಜ್ಯ ಮಹಾಭಲೇಶ್ವರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಈ ಕ್ಷೇತ್ರ ಧಾರ್ಮಿಕ, ಸಾಮಾಜಿಕ, ಶ್ರದ್ದಾ ಕೇಂದ್ರವಾಗಿ ಬೆಳಗುತ್ತಿದೆ. ಈ ಕ್ಷೇತ್ರದ ಎದುರಿನ ಹೊರ ಭಾಗದಲ್ಲಿ ನೆರೆಹೊರೆಯ…

Read More
error: Content is protected !!