ಮಂಗಳೂರಿನಲ್ಲಿ ರೌಡಿಶೀಟರ್ ಆರಿಫ್ ಹತ್ಯೆ ಪ್ರಕರಣ: ಬಳಕೆಯಾದ ಕಾರು ಬುಡೋಳಿಯಲ್ಲಿ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟ್ಯಾಬ್ಲೆಟ್ ಆರಿಫ್’ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಪತ್ತೆಯಾಗಿದೆ. ಹತ್ಯೆ ನಡೆದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರೆಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬುಡೋಳಿಯಲ್ಲಿ ಶಂಕಾಸ್ಪದವಾಗಿ ನಿಲ್ಲಿಸಿದ್ದ ಕಾರನ್ನು ಪತ್ತೆಹಚ್ಚಿದ್ದಾರೆ. ಈ ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ….

Read More

ಮುಳಿಯ ಗೋಲ್ಡ್ & ಡೈಮಂಡ್ಸ್‌ನ “ಡೈಮಂಡ್ ಫೆಸ್ಟ್” ಮಾರ್ಚ್ 27ರಿಂದ ಆರಂಭ

ಪುತ್ತೂರು: ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸಿದೆ. ‘ವೈಡೆಸ್ಟ್ ರೇಂಜ್, ಎಂಡ್‌ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರನ್ನು ಆಕರ್ಷಿಸುತ್ತಿದೆ. ಉತ್ಸವದ ಅಂಗವಾಗಿ ₹50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಖಚಿತ ಉಡುಗೊರೆ ನೀಡಲಾಗುತ್ತಿದೆ. ಜೊತೆಗೆ ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ ಎಲೆಕ್ಟ್ರಿಕ್ ಸ್ಕೂಟರ್ ಗೆಲ್ಲುವ ಅವಕಾಶವೂ ಗ್ರಾಹಕರಿಗೆ ಲಭ್ಯವಿದೆ. ವಿವಿಧ ವಿನ್ಯಾಸಗಳ ವಜ್ರಾಭರಣಗಳನ್ನು ಪ್ರದರ್ಶನ ಹಾಗೂ…

Read More

ಮಂಗಳೂರಿಗೆ ‘ಅಪೋಲೊ ಓಷಿಯನ್’ ಎಲ್‌ಪಿಜಿ ಟ್ಯಾಂಕರ್ ಆಗಮನ – ಇಂಧನ ಭದ್ರತೆಗೆ ಬಲ

ಮಂಗಳೂರಿನ ಇಂಧನ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಗುಜರಾತ್‌ನಿಂದ ಹೊರಟಿದ್ದ ‘ಅಪೋಲೊ ಓಷಿಯನ್’ ಬೃಹತ್ ಎಲ್‌ಪಿಜಿ ಟ್ಯಾಂಕರ್ ಬುಧವಾರ ರಾತ್ರಿ ನವ ಮಂಗಳೂರು ಬಂದರನ್ನು ತಲುಪಿದೆ. ಈ ಹಡಗು ಸುಮಾರು 17,600 ಮೆಟ್ರಿಕ್ ಟನ್ ಎಲ್‌ಪಿಜಿ ಅನಿಲವನ್ನು ಹೊತ್ತು ತಂದಿದ್ದು, ಈ ಸರಕು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮತ್ತು ಭಾರತ್ ಪೆಟ್ರೋಲಿಯಂ ಸಂಸ್ಥೆಗಳಿಗೆ ಸೇರಿದ್ದಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ವ್ಯಕ್ತವಾಗಿತ್ತು. ಆದರೆ ಇಂತಹ ಹಡಗುಗಳ ನಿರಂತರ…

Read More

ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ರೌಡಿಶೀಟರ್ ಆರಿಫ್ ಹತ್ಯೆ

ಮಂಗಳೂರು ಸಮೀಪದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಇಂದು ಮುಂಜಾನೆ ಭೀಕರ ಹತ್ಯೆ ಘಟನೆ ನಡೆದಿದೆ. ಕಿನ್ಯ ಅಜ್ಜಿನಡ್ಕ ನಿವಾಸಿಯಾಗಿರುವ ಆರಿಫ್ ಎಂಬ ರೌಡಿಶೀಟರ್ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದಾನೆ. ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದ ಆರಿಫ್, ಮುಂಜಾನೆ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದಾಗ ತೊಕ್ಕೊಟ್ಟು ಫ್ಲೈಓವರ್ ಬಳಿ ದುಷ್ಕರ್ಮಿಗಳು ಅವನನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳನ್ನು ಬಳಸಿ ಹಲ್ಲೆ ನಡೆಸಿದ ಪರಿಣಾಮ ಆರಿಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆರಿಫ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆ, ಈ ಹತ್ಯೆ ಹಳೆಯ ವೈಮನಸ್ಸಿನ ಪರಿಣಾಮವಾಗಿರಬಹುದೆಂದು…

Read More

ಬೆಂಗ್ರೆ ವಾರ್ಡ್‌ನಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 60ನೇ ಬೆಂಗ್ರೆ ವಾರ್ಡ್‌ನ ಪಡುಹೊಯ್ಗೆ ಮೊಗವೀರ ಗ್ರಾಮ ಸಭಾ ಬೆಂಗರೆ (ರಿ.) ವ್ಯಾಪ್ತಿಯ ಸ್ಯಾಂಡ್ ಪಿಟ್ ಬೆಂಗರೆ ಬಳಿ ವಿಶೇಷ ಅನುದಾನದಡಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗೆ ಇತ್ತೀಚೆಗೆ ಭೂಮಿ ಪೂಜೆ ನೆರವೇರಿತು. ಕಾರ್ಯಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವ ವಹಿಸಿದ್ದರು. ಭೂಮಿ ಪೂಜೆ ಬಳಿಕ ಮಾತನಾಡಿದ ಅವರು, ಸ್ಥಳೀಯರ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ ಅಗತ್ಯ ಅನುದಾನವನ್ನು ಸಂಗ್ರಹಿಸಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ…

Read More

ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ-ಮಮತಾ ಗಟ್ಟಿ

ಮಂಗಳೂರು,ಮಾ.26; ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಅಗತ್ಯ,ಜಿಲ್ಲೆಯ ಮಹಿಳೆಯರು ತಮ್ಮ ಕುಟುಂಬದ ಆರ್ಥಿಕ ನಿರ್ವಹಣೆಯನ್ನು ಕಷ್ಟಪಟ್ಟು ಎಚ್ಚರಿಕೆ ಯಿಂದ ಮಾಡುತ್ತಾ ಬಂದಿದ್ದಾರೆ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ.ಅವರು ಮಹಿಳಾ ದಿನಾಚರಣೆಯ ಅಂಗವಾಗಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಛೇರಿ ಸಭಾಂಗಣ ಗುರುವಾರ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಮಂಗಳೂರುಇದರ ಸಂಯುಕ್ತ ಆಶ್ರಯ ದಲ್ಲಿಮಹಿಳಾ ದಿನಾಚರಣೆ ಮತ್ತುಮಹಿಳಾ…

Read More

ಮಂಗಳೂರಿನಲ್ಲಿ ಚಿರತೆ ಸೆರೆ: ಸ್ಥಳೀಯರಲ್ಲಿ ಆತಂಕಕ್ಕೆ ತೆರೆ

ಮಂಗಳೂರು: ನಗರದ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಸಂಚರಿಸುತ್ತಿದ್ದ ಬೃಹತ್ ಗಾತ್ರದ ಚಿರತೆಯನ್ನು ಅರಣ್ಯ ಇಲಾಖೆಯವರು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಕೆಲರಾಯ್ ಕ್ರಾಸ್‌ನ ನೆಕ್ಕರೆ ಪದವು ಪ್ರದೇಶದಲ್ಲಿ ಬೋನು ಅಳವಡಿಸಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿರತೆಯ ಸಂಚಾರದ ಬಗ್ಗೆ ಆತಂಕಗೊಂಡ ಸ್ಥಳೀಯರು ಮಾಜಿ ಕಾರ್ಪೊರೇಟರ್ ಹಾಗೂ ಮಾಜಿ ಮೇಯರ್ ಭಾಸ್ಕರ್ ಕೆ. ಅವರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ ಸ್ಪಂದಿಸಿ ಅರಣ್ಯ ಇಲಾಖೆಗೆ…

Read More

ಸಂವಿಧಾನ ಪೀಠಿಕೆ ಜಾಗೃತಿ: ಬ್ಯಾಂಕ್‌ಗಳು, ಸಹಕಾರ ಸಂಘಗಳಲ್ಲಿ ಬೋರ್ಡ್ ಅಳವಡಿಕೆ ಅಭಿಯಾನ

ಮಂಗಳೂರು: ನೇತಾಜಿ ಸುಭಾಸ್‌ಚಂದ್ರಬೋಸ್ ಗ್ರಾಮೀಣ ಸೇವಾ ಅಭಿವೃದ್ಧಿ ಸಂಸ್ಥೆ, ಹುಬ್ಬಳ್ಳಿ ವತಿಯಿಂದ ಮಂಗಳೂರು ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ವ್ಯವಸ್ಥಾಪಕ ಸಂಗೊಳ್ಳಿ ಸೋಮಣ್ಣ ಮಾತನಾಡಿ, ಸಹಕಾರ ಇಲಾಖೆ ಅಡಿಯಲ್ಲಿ ಬರುವ ಖಾಸಗಿ ಬ್ಯಾಂಕ್‌ಗಳು, ಪತ್ತಿನ ಸಹಕಾರ ಸಂಘಗಳು, ಕೋಆಪರೇಟಿವ್ ಸಂಸ್ಥೆಗಳು ಹಾಗೂ ಕೆಎಂಎಫ್ ಡೈರಿ ಮತ್ತು ಹಾಲು ಉತ್ಪಾದಕರ ಸಂಘಗಳಲ್ಲಿ ಭಾರತದ ಸಂವಿಧಾನದ ಪೀಠಿಕೆ ಬೋರ್ಡ್ ಅಳವಡಿಸಲು ಅನುಮತಿ ದೊರೆತಿದೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಸಂಸ್ಥೆ…

Read More

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ

ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಹೆಲಿಪ್ಯಾಡ್ ಬಳಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಉಪಚುನಾವಣೆಯಲ್ಲಿ ಆಡಳಿತದಲ್ಲಿರುವ ಪಕ್ಷದ ಪರ ಮತದಾರರ ಒಲವು ಇರುತ್ತದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆಮನೆಗೂ ತಲುಪಿದ್ದು, ಜನರ ಆದಾಯವೂ ಹೆಚ್ಚಾಗಿದೆ. ವಿಶೇಷವಾಗಿ…

Read More

‘ಪುತ್ತೂರು ಶಾಪಿಂಗ್ ಹಬ್ಬ’ ಮೆಗಾ ಡ್ರಾ ಮಾ.29ರಂದು

ಪುತ್ತೂರು: ಸ್ಥಳೀಯ ಗ್ರಾಹಕರನ್ನು ಪುತ್ತೂರಿನಲ್ಲೇ ಉಳಿಸಿಕೊಳ್ಳುವ ಉದ್ದೇಶದಿಂದ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಪ್ರಥಮ ಬಾರಿಗೆ ಆಯೋಜಿಸಿರುವ ‘ಪುತ್ತೂರು ಶಾಪಿಂಗ್ ಹಬ್ಬ’ದ ಮೆಗಾ ಡ್ರಾ ಮಾ.29ರಂದು ಸಂಜೆ 5.30ಕ್ಕೆ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ರವಿಕೃಷ್ಣ ಕಲ್ಲಾಜೆ ಮಾತನಾಡಿ, ಕಳೆದ ಎರಡು ತಿಂಗಳಿನಿಂದ ನಡೆಯುತ್ತಿರುವ ಶಾಪಿಂಗ್ ಹಬ್ಬದ ಅಂಗವಾಗಿ ವಿವಿಧ ವಾಣಿಜ್ಯ ಮಳಿಗೆಯಲ್ಲಿ ಖರೀದಿ ಮಾಡಿದ ಗ್ರಾಹಕರಿಗೆ ಗಿಫ್ಟ್ ಕೂಪನ್‌ಗಳನ್ನು ವಿತರಿಸಲಾಗಿದ್ದು, ಕಳೆದ 8 ವಾರಗಳಿಂದ ಪ್ರತಿ ವಾರ…

Read More
error: Content is protected !!