ಉಡುಪಿಯಲ್ಲಿ ಧಾರಾಕಾರ ಮಳೆ; ಬಿಸಿಲಿನ ಬೇಗೆಯಿಂದ ಜನರಿಗೆ ನಿರಾಳತೆ
ಉಡುಪಿ, ಜು. 17: ಹಲವು ದಿನಗಳ ವಿರಾಮದ ಬಳಿಕ ಉಡುಪಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಆರಂಭವಾದ ಧಾರಾಕಾರ ಮಳೆ ಶುಕ್ರವಾರವೂ ಮುಂದುವರಿದಿದ್ದು, ಕಳೆದ ಹಲವು ದಿನಗಳಿಂದ ತೀವ್ರ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನರಿಗೆ ನಿರಾಳತೆ ನೀಡಿದೆ. ಕಳೆದ ಸುಮಾರು ಹತ್ತು ದಿನಗಳಿಂದ ಜಿಲ್ಲೆಯಾದ್ಯಂತ ಉಷ್ಣಾಂಶ ಹೆಚ್ಚಾಗಿ ಬೇಸಿಗೆ ವಾತಾವರಣ ನಿರ್ಮಾಣವಾಗಿತ್ತು. ತೀವ್ರ ಬಿಸಿಲಿನಿಂದ ಜನಜೀವನ ಅಸ್ತವ್ಯಸ್ತವಾಗಿದ್ದರೆ, ಕೃಷಿಕರು ಮಳೆಯ ನಿರೀಕ್ಷೆಯಲ್ಲಿದ್ದರು.ಗುರುವಾರ ರಾತ್ರಿ ಸುರಿದ ಉತ್ತಮ ಮಳೆಯಿಂದ ವಾತಾವರಣ ತಂಪಾಗಿದ್ದು, ಭತ್ತ ನಾಟಿ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಹೊಸ…
