ಇ-ಖಾತಾ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರು ಹೈರಾಣು:- ಶಾಸಕ ಕಾಮತ್ ಆಕ್ರೋಶ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ–ಖಾತಾಕ್ಕಾಗಿ ಜನಸಾಮಾನ್ಯರು ಅನುಭವಿಸುತ್ತಿರುವ ತೊಂದರೆ ಮುಂದುವರಿದಿದ್ದು ಇನ್ನೂ ಸಹ ಅದನ್ನು ಸರಿಪಡಿಸುವ ಗೋಜಿಗೆ ಹೋಗದ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೊನ್ನೆಯವರೆಗೆ ಇದ್ದ ಬದ್ದ ಅಧಿಕಾರಿಗಳನ್ನೆಲ್ಲಾ ಅವೈಜ್ಞಾನಿಕ ಸಮೀಕ್ಷೆಗೆ ನಿಯೋಜಿಸಿಕೊಂಡ ಪರಿಣಾಮ ಎಷ್ಟೇ ತುರ್ತು ಪರಿಸ್ಥಿತಿಯಿದ್ದರೂ ಸಾರ್ವಜನಿಕರಿಗೆ ಇ-ಖಾತಾ ಲಭಿಸಿರಲಿಲ್ಲ. ಇದೀಗ ಸಮೀಕ್ಷೆ ಮುಗಿದು ಅಧಿಕಾರಿಗಳು ಬಂದಿದ್ದಾರೆ. ಆದರೆ ಸರ್ವರ್ ಇಲ್ಲ ಎನ್ನುತ್ತಿದ್ದು ಸಾರ್ವಜನಿಕರ ತಾಳ್ಮೆಯ ಕಟ್ಟೆಯೊಡೆಯುತ್ತಿದೆ. ಕಳೆದ…

Read More

ನ.9 ರಂದು : ಗೋವನಿತಾಶ್ರಯ ಟ್ರಸ್ಟ್ ವತಿಯಿಂದ ಸಾಮೂಹಿಕ ಗೋಪೂಜೆ ಹಾಗೂ ಗೋವಿಗಾಗಿ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ

ಮಂಗಳೂರು : ಗೋವು ನಮ್ಮೆಲ್ಲರ ಸಂಪೂಜ್ಯತೆಯ ಪ್ರತೀಕ, ಮನುಕುಲಕ್ಕೆ ಸದಾ ಉಪಕಾರಿ, ಗೋವಂಶದ ಉಳಿವಿಗಾಗಿ ವಿಶ್ವಹಿಂದೂ ಪರಿಷತ್ ಹಲವಾರು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ. ಗೋವುಗಳ ಪಾಲನೆ- ಪೋಷಣೆಯ ನಿಟ್ಟಿನಲ್ಲಿ ಕಳೆದ 25 ವರ್ಷಗಳಿಂದ ವಿಶ್ವಹಿಂದೂ ಪರಿಷತ್ತಿನ ನೇತೃತ್ವದಲ್ಲಿ ಗೋವನಿತಾಶ್ರಯ ಟ್ರಸ್ಟಿನ ಮುಖಾಂತರ ಗೋಶಾಲೆಯನ್ನು ನಡೆಸಿಕೊಂಡು ಬರುತ್ತಿದ್ದು ಸುಮಾರು 450ಕ್ಕೂ ಹೆಚ್ಚು ದನಕರುಗಳ ಪಾಲನೆ- ಪೋಷಣೆ ಮಾಡುತ್ತಿದ್ದೇವೆ. ಮಂಗಳೂರು ಮಹಾನಗರದಿಂದ 22ಕಿ.ಮೀ. ದೂರದ ಪಜೀರಿನಲ್ಲಿ 11 ಎಕರೆ ವಿಶಾಲ ನಿವೇಶನದಲ್ಲಿ ಈ ಗೋಶಾಲೆ ಇದ್ದು ನಿರ್ಗತಿಕ…

Read More

ಯೆನೆಪೋಯ ವರ್ಲ್ಡ್ ಸ್ಕೂಲ್ನಲ್ಲಿ ಪ್ರೀಮಿಯರ್ ಅಂತರ್-ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ …. !

ಮಂಗಳೂರು ಕ್ವಿಜಿಂಗ್ ಫೌಂಡೇಶನ್ ಸಹಯೋಗದೊಂದಿಗೆ, ಯೆನ್‌ಕ್ವಿಝ್ 2025 ಸ್ಪರ್ಧೆಯು ನವೆಂಬರ್ 14 ಮತ್ತು 15 ರಂದು ಯೆನೆಪೋಯ ವರ್ಲ್ಡ್ ಸ್ಕೂಲ್ ಜೆಪ್ಪಿನಮೊಗರಿನ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಯೆನೆಪೋಯ ವರ್ಲ್ಡ್ ಸ್ಕೂಲ್ ಇದರ ಪ್ರಾಂಶುಪಾಲರಾದ ಅಂಥೋನಿ ಜೋಸೆಫ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ವಿದ್ಯಾರ್ಥಿಗಳಲ್ಲಿ ಕೌತುಕ ಹುಟ್ಟುಹಾಕಲು, ಶೈಕ್ಷಣಿಕ ಅರಿವು ಮತ್ತು ಆರೋಗ್ಯಕರ ಸ್ಪರ್ಧಾ ಮನೋಭಾವವನ್ನು ಹೆಚ್ಚಿಸಲು ಈ ಅಂತರ್-ಶಾಲಾ ರಸಪ್ರಶ್ನೆ ಸ್ಪರ್ಧೆಯು ಸಹಕಾರಿ ಯಾಗಲಿದೆ…

Read More

ಎಸ್.ಕೆ. ಗೋಲ್ಡ್‌ ಸ್ಮಿತ್‌ನ 60 ವರ್ಷಗಳ ಕನಕ ಯಾತ್ರೆ : ನ. 9 ರಂದು ನೂತನ ವಿಶ್ವಸೌಧ ಲೋಕಾರ್ಪಣೆ , ವಜ್ರ ಮಹೋತ್ಸವದ ಸಮಾರೋಪ ಸಮಾರಂಭ

ಮಂಗಳೂರು: ಕೊಟ್ಟಾರ ಚೌಕಿಯಲ್ಲಿ ನವೆಂಬರ್ 9ರಂದು ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಇದರ ನವೀಕೃತ ವಿಶ್ವಸೌಧ ಕಟ್ಟಡದ ಉದ್ಘಾಟನೆ ಮತ್ತು ವಜ್ರಮಹೋತ್ಸವದ ಸಮಾರೋಪ ಸಮಾರಂಭ ಜರಗಲಿದೆ ಎಂದು ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಮಾಹಿತಿ ನೀಡಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ -ಆಪರೇಟಿವ್ ಸೂಸೈಟಿ 60 ಸಂವತ್ಸರಗಳನ್ನು ಪೂರೈಸಿ ವಜ್ರಮಹೋತ್ಸವ ವರ್ಷಾಚರಣೆಯನ್ನು ಆಚರಿಸುತ್ತಿದೆ. ಆ ಪ್ರಯುಕ್ತ 60 ಸಾಮಾಜಿಕ, ಧಾರ್ಮಿಕ ಮತ್ತು…

Read More

ಕೊಳತ್ತಮಜಲು ಅವರಿಗೆ ಕದ್ರಿ ಕಂಬಳ ಗುತ್ತು ಪ್ರಶಸ್ತಿ

ಮಂಗಳೂರು: ಪಾವಂಜೆ ಮೇಳದ ಕಲಾವಿದ, ಪ್ರಬಂಧಕ “ಯಕ್ಷ ರಾಮ ” ಬಿರುದಾಂಕಿತ ಮಾಧವ ಬಂಗೇರ ಕೊಳತ್ತಮಜಲು ಅವರಿಗೆ ಕದ್ರಿ ದೇವಸ್ಥಾನದಲ್ಲಿ ನಡೆದ ಕದ್ರಿ ಯಕ್ಷ ಬಳಗದ ಪಾವಂಜೆ ಮೇಳದ ಸೇವೆ ಆಟದ ವೇದಿಕೆಯಲ್ಲಿ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ ನೀಡಿ ಸನ್ಮಾನಿಸ ಲಾಯಿತು.ಹಿರಿಯ ವೈದ್ಯ ಡಾ. ಜಯಶಂಕರ್ ಮಾರ್ಲ, ಉದ್ಯಮಿ ಜಿತೇಂದ್ರ ಕೊಟ್ಟಾರಿ, ದಿವಾಕರ ಶೆಟ್ಟಿ, ಯಕ್ಷಗಾನ ಅಕಾಡೆಮಿ ಸದಸ್ಯ ವಿಜಯ ಕುಮಾರ್ ಮೊಯ್ಲೊಟ್ಟು, ಸಂಜಯ್ ಕುಮಾರ್ ಗೋಣಿಬೀಡು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು….

Read More

ನವೆಂಬರ್ 28 ರಂದು ಬಹ್ರೈನ್‌ನಲ್ಲಿ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ 2025’ ಕಾರ್ಯಕ್ರಮ

ಮಂಗಳೂರು: ನವೆಂಬರ್ 28 ರಂದು ಸಂಜೆ 5 ಗಂಟೆಗೆ ಬಹ್ರೈನ್‌ನ ಇಂಡಿಯನ್ ಕ್ಲಬ್ ಓಪನ್ ಗ್ರೌಂಡ್ ನಲ್ಲಿ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ 2025’ ಕಾರ್ಯಕ್ರಮ ನಡೆಯಲಿದೆ ಎಂದು NRI ಬಹ್ರೈನ್‌ ಫೋರಮ್ ಇದರ ಅಧ್ಯಕ್ಷರಾದ ರಾಜ್ ಕುಮಾರ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , NRI ಫೋರಮ್ ನನ್ನು ಕರ್ನಾಟಕ- ಬಹ್ರೈನ್‌ ಮೂಲಕ ಆಯೋಜಿಸಲಾದ ಈ ಸಾಂಸ್ಕೃತಿಕ ಉತ್ಸವವು ಕರ್ನಾಟಕದ ಶ್ರೀಮಂತ ಪರಂಪರೆ, ಸಂಸ್ಕೃತಿ ಮತ್ತು ಕಲೆಯ ಭವ್ಯ ಪ್ರದರ್ಶನವಾಗಿದ್ದು, ಸಾಂಪ್ರದಾಯಿಕ…

Read More

ನವೆಂಬರ್ 9 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ವಿಶುಕುಮಾ‌ರ್ ತುಳು ಸಾಹಿತ್ಯೋತ್ಸವ – ಪ್ರಶಸ್ತಿ ಪ್ರಧಾನ

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಸಸಿಹಿತ್ಲು ಘಟಕದ ಆತಿಥ್ಯದಲ್ಲಿ , ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಕಾರದೊಂದಿಗೆ , ವಿಶುಕುಮಾರ್ ದತ್ತಿನಿಧಿ ಸಂಚಾಲನ ಸಮಿತಿ ಸಹಯೋಗದಲ್ಲಿ ವಿಶುಕುಮಾ‌ರ್ ತುಳು ಸಾಹಿತ್ಯೋತ್ಸವ ಕಾರ್ಯಕ್ರಮವು ನವೆಂಬರ್ 9 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬೆಳ್ಳಿಗೆ 8. ರಿಂದ ಸಂಜೆ 6 ಗಂಟೆಯ ತನಕ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ…

Read More

ಶ್ರೀ ನಾರಾಯಣ ಗುರು ಧರ್ಮ ಸಮ್ಮೇಳನ- ಮುಂದೂಡಿಕೆ

ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನದ ವತಿಯಿಂದ ದಿನಾಂಕ: 9-11-2025 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಬೇಕಿದ್ದ ಶ್ರೀ ನಾರಾಯಣ ಗುರು ಧರ್ಮ ಸಮ್ಮೇಳನವನ್ನು ಮುಂದೂಡಲಾಗಿದೆ

Read More

ಉಮೀದ್ ಪೋರ್ಟಲ್ ಮುಖಾಂತರ ವಫ್ಫ್ ಆಸ್ತಿಯನ್ನು ಬೇಗನೆ ನೋಂದಣಿ ಮಾಡಿಕೊಳ್ಳಿ : ಸ್ಪೀಕರ್ ಯುಟಿ ಖಾದರ್

ಮಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಹಾಗೂ ಜಿಲ್ಲಾ ವಕ್ಫ್ ಇಲಾಖೆಯ ಸಹಯೋಗದಲ್ಲಿ ಉಮೀದ್ ಪೋರ್ಟಲ್-2025 ಈ ವಿಷಯದ ಬಗ್ಗೆ ಮಾಹಿತಿ ಕಾರ್ಯಗಾರವು ನಗರದ ಪುರಭವನ ಮಿನಿ ಟೌನ್‍ಹಾಲ್‍ನಲ್ಲಿ ನಡೆಯಿತು. ಕರ್ನಾಟಕ ಸ್ಪೀಕರ್ ಯುಟಿ ಖಾದರ್ ಉಮೀದ್ ಪೋರ್ಟಲ್ ಕಾರ್ಯಕಾರದ ಮಾಹಿತಿಯನ್ನು ನೀಡಿ , ಉಮೀದ್ ಪೋರ್ಟಲ್ ಮುಖಾಂತರ ವಫ್ಫ್ ಆಸ್ತಿಯನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇದು ಆನ್ಲೈನ್ ವೇದಿಕೆ ಆಗಿರುವುದರಿಂದ ಇತರೆಡೆಗಳಲ್ಲಿ ಇದ್ದರೂ ನೋಂದಣಿಗೆ ಅವಕಾಶ ಇದೆ. ಉಮೀದ್ ಪೋರ್ಟಲ್ ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗುವ ಸಾದ್ಯತೆ…

Read More

ಟಿಪ್ಪು ಸುಲ್ತಾನ್ ಹೆಸರಲ್ಲಿ ಪ್ರಶಸ್ತಿ ನೀಡುವಂತೆ ಹಾಗು ಪಠ್ಯಪುಸ್ತಕಗಳಲ್ಲಿ ಟಿಪ್ಪು ಚರಿತ್ರೆ ಅಳವಡಿಸಿ, ಜನ್ಮದಿನ ಆಚರಣೆಗೆ ಕ್ರಮ ಕೈಗೊಳ್ಳಬೇಕು – ಮುಸ್ಲಿಂ ಲೀಗ್ ಒತ್ತಾಯ

ಮಂಗಳೂರು: ಟಿಪ್ಪು ಸುಲ್ತಾನ್ ಹೆಸರಲ್ಲಿ ಪ್ರಶಸ್ತಿ ನೀಡುವಂತೆ ಹಾಗು ಪಠ್ಯಪುಸ್ತಕಗಳಲ್ಲಿ ಟಿಪ್ಪು ಚರಿತ್ರೆ ಅಳವಡಿಸಿ, ಜನ್ಮದಿನ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಲೀಗ್ ಒತ್ತಾಯ ಮಾಡಿದೆ. ಶಹೀದ್ ಟಿಪ್ಪು ಸುಲ್ತಾನ್ ಅವರ ಜನ್ಮ ದಿನಾಚರಣೆಯನ್ನು ಆಚರಿಸುವುದರೊಂದಿಗೆ ಶಾಲಾ ಕಾಲೇಜುಗಳ ಪುಸ್ತಕಗಳಲ್ಲಿ ಅವರ ಚರಿತ್ರೆಯನ್ನು ಅಳವಡಿಸಬೇಕು. ಸಾಹಸಿಗರಿಗೆ ಅವರ ಹೆಸರಲ್ಲಿ ಪ್ರಶಸ್ತಿಯನ್ನು ಕೊಡಬೇಕು ಎನ್ನುವುದು ಮುಸ್ಲಿಂ ಲೀಗಿನ ಬೇಡಿಕೆಯಾಗಿದೆ. ಒಂದು ವೇಳೆ ನಮ್ಮ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದರೆ, ಬಿಜೆಪಿ ಹೇಗೆ ಪತನಗೊಂಡಿತೋ ಅದೇ ರೀತಿ ಕಾಂಗ್ರೆಸ್…

Read More
error: Content is protected !!