ಅಶ್ರಫ್ ಗುಂಪು ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು

ಮಂಗಳೂರು: ಅಶ್ರಫ್ ಗುಂಪು ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಮಂಗಳೂರಿಗೆ ಹೊರವಲಯದ ಕುಡುಪು ಬಳಿ ಎಪ್ರಿಲ್ 27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಮನೀಶ್ ಶೆಟ್ಟಿ ಮತ್ತು ಅನಿಲ್‌ ಕುಮಾರ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

Read More

ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಕನ್ನಡ ಕಲಿಕೆಯ ಬಗ್ಗೆ ಪ್ರೀತಿಯನ್ನು ಪಾಲಕರು ಬೆಳೆಸಿದರೆ ಮಾತ್ರ ಕನ್ನಡದ ಉಳಿವು ಸಾಧ್ಯ : ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್

ಮಂಗಳೂರು:ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ನಾವು ಕೈಕಟ್ಟಿ ಕುಳಿತುಕೊಳ್ಳಬಾರದು. ಆಧುನಿಕ ಶಿಕ್ಷಣ ಕ್ರಮದಿಂದ ಕನ್ನಡ ಕಲಿಕೆಯ ಬಗ್ಗೆ ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಇನ್ನಷ್ಟು ಪ್ರೀತಿ ಮತ್ತು ಕಾಳಜಿ ಮೂಡುವಂತೆ ಪಾಲಕರು ಗಮನಹರಿಸಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು . ಅವರು ನಗರದ ನೆಹರೂ ಮೈದಾನದಲ್ಲಿ ಶನಿವಾರ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿ ,ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು….

Read More

ನವೆಂಬರ್ 16ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹ, ಮಂಗಳೂರಿನಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ- ಡಾ.ಎಂ.ಎನ್‌. ರಾಜೇಂದ್ರ ಕುಮಾರ್ ಹೇಳಿಕೆ

ಮಂಗಳೂರು: “ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ” ಧ್ಯೇಯದೊಂದಿಗೆ ನವೆಂಬರ್ 16ರಂದು ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾಹಿತಿ ನೀಡಿದರು. ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ ಪ್ರಧಾನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, “ಸಹಕಾರ ತತ್ವ ಮತ್ತು ಆಚರಣೆಯಲ್ಲಿ ಅಪಾರ ವಿಶ್ವಾಸವನ್ನು ಇರಿಸಿಕೊಂಡಿದ್ದ ಭಾರತದ ಪ್ರಥಮ ಪ್ರಧಾನಿ ಪಂಡಿತ ಜವಾಹರಲಾಲ್ ನೆಹರೂರವರು ಸಹಕಾರ ತತ್ವದ ಮೂಲಕ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಬಹುದೆಂಬ ಆಶಯವನ್ನು…

Read More

ಜಿಲ್ಲೆಯಲ್ಲಿ ಹಿಂದೂಗಳ ಧಮನಕಾರಿ ಯತ್ನ ಸಹಿಸುವುದಿಲ್ಲ:- ಶಾಸಕ ಕಾಮತ್

ಹಿಂದೂ ಮುಖಂಡ ಶರಣ್ ಪಂಪ್ವೆಲ್ ರವರ ಬಂಧನದ ಯತ್ನವು ದುರುದ್ದೇಶಪೂರಿತವಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ಧಮನಿಸಲೆಂದೇ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಹಿಂದೂ ಮುಖಂಡರನ್ನು ಠಾಣೆಗೆ ಕರೆಸಿ ಕಿರುಕುಳ ನೀಡುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶರಣ್ ಪಂಪ್ವೆಲ್ ಬಂಧನದ ಯತ್ನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಕಾಮತ್ ರವರು ಕದ್ರಿ ಠಾಣೆಗೆ ಧಾವಿಸಿ ಪ್ರಕರಣದ ಬಗ್ಗೆ ಸಮರ್ಪಕ ಮಾಹಿತಿ ನೀಡದ ಪೊಲೀಸರ ವಿರುದ್ಧ ಹರಿಹಾಯ್ದರು. ಪೊಲೀಸರು ವಿಚಾರಣೆ ನಡೆಸುವುದಾದರೆ ಸುಪ್ರೀಂ ಕೋರ್ಟ್…

Read More

ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ದೊಡ್ಡ ದಡ್ಡನೆಂದು ನನಗೆ ಮೊದಲೇ ಗೊತ್ತಿತ್ತು ; ವಿಧಾನ ಪರಿಷತ್‌ ಶಾಸಕ ಐವನ್ ಡಿ’ಸೋಜಾ

ಮಂಗಳೂರು : ವಿಧಾನಸೌಧ ಮತ್ತು ಶಾಸಕರ ಭವನದ ನವೀಕರಣ ಮತ್ತು ಸೌಂದರ್ಯೀಕರಣಕ್ಕಾಗಿ ಹಣವನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹಾಲಿ ಸ್ಪೀಕ‌ರ್ ಯು.ಟಿ. ಖಾದರ್ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪವು ಆಧಾರರಹಿತ ಮತ್ತು ಸಂವಿಧಾನಬಾಹಿರವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್ ಡಿ’ಸೋಜಾ ಗುಡುಗಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಸ್ಪೀಕರ್ ಆಗಿದ್ದ ಸಮಯದಲ್ಲಿ ಕಾಗೇರಿ ಮಾಡಿರುವ ಆರೋಪಗಳು…

Read More

ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ಪೊಲೀಸ್‌ ವಶಕ್ಕೆ…. !

ಮಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್‌ವೊಂದನ್ನು ಟ್ಯಾಗ್ ಮಾಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. RSS ಮುಖಂಡರ ಒಂದು ಭಾಷಣಕ್ಕೆ ಸಂಬಂಧಿಸಿದ ವಿಡಿಯೋ ತುಣುಕುನ್ನು ವಿಕಾಸ್ ಪುತ್ತೂರು ಎಂಬುವವರು ಸಾಮಾಜಿಕ ಜಾಲತಾಣದಲ್ಲಿ “ಮುಸ್ಲಿಂರ ಜನಸಂಖ್ಯೆ ಜಿಹಾದ್ ಮೆಟ್ಟಿ ನಿಲ್ಲೋಣ” ಎಂಬ ವಾಕ್ಯದೊಂದಿಗೆ ಶೇರ್ ಮಾಡಿದ್ದರು. ಇದನ್ನು ಶರಣ್ ಪಂಪ್‌ವೆಲ್ ಅವರು ಮತ್ತೊಮ್ಮೆ ಶೇರ್ ಮಾಡಿ ಜನಸಂಖ್ಯೆ ಬೆಳವಣಿಗೆಯ ಬಗ್ಗೆ ಚರ್ಚೆಯನ್ನು…

Read More

ನವೆಂಬರ್ 2 ರಂದು ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ಸುವರ್ಣ ಮಹೋತ್ಸ ಕಾರ್ಯಕ್ರಮ … !

ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ಮಂಗಳೂರು ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವು ನವೆಂಬರ್ 2 ರಂದು ಸಂಜೆ 4.00 ಗಂಟೆಗೆ ನಗರದ “ ಕುದ್ಮಲ್ ರಂಗರಾವ್ ಪುರಭವನ” ಮಂಗಳೂರು ಇಲ್ಲಿ ನಡೆಯಲಿದೆ ಎಂದು ವಿಧಾನ ಪರಿಷತ್‌ ಶಾಸಕರಾದ ಐವನ್‌ ಡಿ’ಸೋಜಾ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಮಂಗಳೂರು ಮಹಾನಗರದಲ್ಲಿ ಆಟೋರಿಕ್ಷಾ ಮತ್ತು ಕಾರು ಚಾಲಕರ ಹಳೆ ವಾಹನಗಳಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ…

Read More

 ಕೇರಳದ ಪ್ರಪ್ರಥಮ ಒಲಿಂಪಿಕ್ ಪದಕ ವಿಜೇತ ಹಾಕಿ ಪಟು ಮ್ಯಾನ್ಯುಯೆಲ್ ಫ್ರೆಡ್ರಿಕ್ ನಿಧನ .

ಕಣ್ಣೂರು/ಬೆಂಗಳೂರು: ಕೇರಳದ ಪ್ರಪ್ರಥಮ ಒಲಿಂಪಿಕ್ ಪದಕ ವಿಜೇತ ಹಾಕಿ ಪಟು ಮ್ಯಾನ್ಯುಯೆಲ್ ಫ್ರೆಡ್ರಿಕ್ ಅವರು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಫ್ರೆಡ್ರಿಕ್ ಮ್ಯಾನ್ಯುಯೆಲ್ ಗೆ 78 ವರ್ಷ ವಯಸ್ಸಾಗಿತ್ತು. ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯವರಾದ ಫ್ರೆಡ್ರಿಕ್ ಮ್ಯಾನ್ಯುಯೆಲ್, 1972ರ ಮ್ಯೂನಿಚ್ ಒಲಿಂಪಿಕ್ಸ್ ನಲ್ಲಿ ಹಾಲೆಂಡ್ ಎದುರು ನಡೆದಿದ್ದ ಪಂದ್ಯದಲ್ಲಿ ಭಾರತ ಹಾಕಿ…

Read More

ನ.1ರಂದು ಲೇಡಿಗೋಷನ್ ಆಸ್ಪತ್ರೆಯಲ್ಲಿ ಕಾರುಣ್ಯ ಯೋಜನೆ ಉದ್ಘಾಟನೆ

ಮಂಗಳೂರು: ಮಂಗಳೂರಿನ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜೊತೆಗಾರರಿಗೆ ರಾತ್ರಿ ಊಟ ನೀಡುವ ಕಾರುಣ್ಯ ಯೋಜನೆಯ ಉದ್ಘಾಟನೆ ನವೆಂಬರ್ 1ರಂದು ಸಂಜೆ 4.00 ಗಂಟೆಗೆ ಲೇಡಿಗೋಷನ್ ಆಸ್ಪತ್ರೆಯ ಯೋಗಾಭ್ಯಾಸ ಧ್ಯಾನ ಕೇಂದ್ರದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ಯೋಜನೆಗೆ ಚಾಲನೆ ನೀಡಲಿದ್ದು, ಶಾಸಕರಾದ ಡಿ.ವೇದವ್ಯಾಸ ಕಾಮತ್, ಐವನ್ ಡಿಸೋಜ, ಮಂಜುನಾಥ ಭಂಡಾರಿ, ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್…

Read More

ಕದ್ರಿ ಪಾರ್ಕ್ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ತೆರೆದಿದ್ದ ಗೂಡಂಗಡಿಗಳ ತೆರವು …. !

ಮಂಗಳೂರು: ಅನಧಿಕೃತ ವಾಗಿ ಇದ್ದ ಚುರುಮುರಿ ಸ್ಟಾಲ್, ಕಬ್ಬಿನ ಜ್ಯೂಸ್ ಅಂಗಡಿ, ಪಾನಿಪುರಿ ಅಂಗಡಿಗಳನ್ನ ಮಹಾ ನಗರ ಪಾಲಿಕೆಯ ಅಧಿಕಾರಿಗಳು ತೆರವು ಗೊಳಿಸಿದರು. ಈ ಅಂಗಡಿಗಳಲ್ಲಿ ಸ್ವಚ್ಚತೆ ಪಾಲನೆಯಾಗುತ್ತಿರಲಿಲ್ಲ. ತ್ಯಾಜ್ಯ ವಸ್ತುಗಳ ರಾಶಿಯೇ ಉಳಿದು ಪಾರ್ಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ದುರ್ವಾಸನೆ ಬೀರುತ್ತಿತ್ತು ಎಂದು ದೂರುಗಳು ಬಂದಿದ್ದವು. ಮಾತ್ರವಲ್ಲದೆ ಇಲ್ಲಿ ಅಂಗಡಿಗಳನ್ನು ಏಲಂ ಮೂಲಕ ಪಡೆದುಕೊಂಡವರು ತಮ್ಮ ವ್ಯವಹಾರಕ್ಕೆ ತೊಂದರೆಯಾಗುತ್ತದೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

Read More
error: Content is protected !!