ಚಾರ್ಮಾಡಿ ಘಾಟ್ ಅಪಘಾತ: ಗಾಯಾಳು ವೃದ್ಧರೊಬ್ಬರು ಮೃತ್ಯು

ಚಾರ್ಮಾಡಿ: ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಶೇಖರಪ್ಪ (59) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೇಲನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಘಟನೆಯ ವಿವರಗಳ ಪ್ರಕಾರ, ಮೇಲನಹಳ್ಳಿ ಗ್ರಾಮದ ಒಟ್ಟು 10 ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾರ್ಮಾಡಿ ಘಾಟ್‌ನ ಒಂಬತ್ತನೇ ತಿರುವಿನಲ್ಲಿ ವಾಹನದ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಒಂಬತ್ತು…

Read More

ಮಾದರಿ ನಾಯಕತ್ವದ ಪ್ರತಿರೂಪ: ಶಾಸಕ ಡಾ. ಮಂಜುನಾಥ ಭಂಡಾರಿ

ವಿಧಾನ ಪರಿಷತ್ ಶಾಸಕರಲ್ಲಿ ವಿಭಿನ್ನ ಚಿಂತನೆ, ಕಾರ್ಯಶೈಲಿ ಮತ್ತು ಜನಸಂಪರ್ಕದ ಮೂಲಕ ತಮ್ಮದೇ ಆದ ಗುರುತನ್ನು ಮೂಡಿಸಿರುವವರು ಡಾ. ಮಂಜುನಾಥ ಭಂಡಾರಿ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಜನಪ್ರತಿನಿಧಿಗಳಿಂದ ನಿರೀಕ್ಷಿಸುವ ಗುಣಗಳನ್ನು ಸಮರ್ಥವಾಗಿ ಅನಾವರಣಗೊಳಿಸಿರುವ ಅವರ ಕಾರ್ಯಪದ್ಧತಿ ಇತರರಿಗೆ ಮಾದರಿಯಾಗಿದೆ. ರಾಜಕೀಯವನ್ನು ಕೇವಲ ಅಧಿಕಾರದ ಸಾಧನವಾಗಿ ನೋಡುವುದಕ್ಕೆ ಬದಲಾಗಿ, ಸೇವೆಯ ಮಾರ್ಗವಾಗಿ ರೂಪಾಂತರಗೊಳಿಸಿರುವ ಅವರ ದೃಷ್ಟಿಕೋನವೇ ಅವರನ್ನು ಇತರರಿಂದ ಭಿನ್ನಗೊಳಿಸಿದೆ. ಪಕ್ಷ ರಾಜಕೀಯದಿಂದ ಚುನಾವಣಾ ರಾಜಕೀಯದ ಮೂಲಕ ಸಕ್ರಿಯ ಸೇವೆಯತ್ತಹಿಂದೆ ವಿಧಾನ ಪರಿಷತ್ ಸದಸ್ಯರೆಂದರೆ ಅಧಿವೇಶನಗಳಿಗೆ ಮಾತ್ರ ಸೀಮಿತವಾಗಿರುವುದು…

Read More

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆಯಲ್ಲಿ ಬದಲಾವಣೆ: ಪ್ಯಾಸೆಂಜರ್ ರೈಲುಗಳು ರದ್ದು, ಎಕ್ಸ್‌ಪ್ರೆಸ್‌ಗಳಿಗೆ ವಿಳಂಬ

ಮಂಗಳೂರು: ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ನಡುವೆ ಸಂಚರಿಸುವ ಪ್ರಯಾಣಿಕ ರೈಲು ಸೇವೆಗಳಲ್ಲಿ ಪ್ರಮುಖ ಬದಲಾವಣೆಗಳನ್ನು ರೈಲ್ವೆ ಇಲಾಖೆ ಘೋಷಿಸಿದೆ. ರೈಲು ಸಂಖ್ಯೆ 56629 (ಮಂಗಳೂರು–ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್) ಹಾಗೂ ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರಸ್ತೆ–ಮಂಗಳೂರು ಪ್ಯಾಸೆಂಜರ್) ರೈಲುಗಳನ್ನು ಒಟ್ಟು 35 ದಿನಗಳ ಕಾಲ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಈ ರೈಲುಗಳು ಮಾರ್ಚ್ 23ರಿಂದ ಏಪ್ರಿಲ್ 14ರವರೆಗೆ ಹಾಗೂ ಜೂನ್ 10ರಿಂದ ಜೂನ್ 21ರವರೆಗೆ ಸಂಚರಿಸುವುದಿಲ್ಲ ಎಂದು ಇಲಾಖೆ ತಿಳಿಸಿದೆ. ಇದರೊಂದಿಗೆ, ಏಪ್ರಿಲ್ ತಿಂಗಳಲ್ಲಿ ಹಲವಾರು ಎಕ್ಸ್‌ಪ್ರೆಸ್…

Read More

ಸಿಸಿಬಿ ಕಾರ್ಯಾಚರಣೆ: ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಫರಾಜ್ @ ಮೊಹಮ್ಮದ್ ಫರಾಜ್, ಬಂಧಿತ ಯುವಕ. ಈತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿ ಒಟ್ಟು ಸುಮಾರು 10 ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಿಂದ ಜಾಮೀನಿನ…

Read More

ಕೋಟಿಮುರ-ಸರಿಪಳ್ಳ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ: 1.80 ಕೋಟಿ ಅನುದಾನ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 36ನೇ ಪದವು ಪೂರ್ವ ವಾರ್ಡಿನ ಕೋಟಿಮುರ – ಸರಿಪಳ್ಳ ಸಂಪರ್ಕಿಸುವ ಮುಖ್ಯ ರಸ್ತೆಯು 1.80 ಕೋಟಿ ರೂ. ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಸುಮಾರು 900 ಮೀಟರ್ ಉದ್ದದ ಈ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ-2 ನೇ ಹಂತದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯ ಅಗತ್ಯತೆಯ ಕುರಿತು ಸ್ಥಳೀಯ ಬಿಜೆಪಿ ಪ್ರಮುಖರು, ಕಾರ್ಯಕರ್ತರು,…

Read More

ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿಯಿಂದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಆಶೀರ್ವಾದ

ಬಂಟ್ವಾಳ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಬಿ. ಜನಾರ್ದನ ಪೂಜಾರಿ ಅವರು ಸಂಸದನಾಗಿ ಕಾರ್ಯನಿರ್ವಹಣೆ ಕುರಿತು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೊಂದಿಗೆ ಚರ್ಚೆ ನಡೆಸಿ, ಉತ್ತಮವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳುವಂತೆ ಶುಭಹಾರೈಸಿದರು. ಈ ಶಿಷ್ಟಾಚಾರ ಭೇಟಿಯ ವೇಳೆ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ಕೂಡ ಉಪಸ್ಥಿತರಿದ್ದರು.

Read More

ಜೂಜು ರಹಿತ ಕೋಳಿ ಅಂಕಕ್ಕೆ ಅವಕಾಶ ನೀಡಿ: ಸರ್ಕಾರಕ್ಕೆ ವೇದಿಕೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಸಾಂಪ್ರದಾಯಿಕ ಜೂಜು ರಹಿತ ಕೋಳಿ ಅಂಕಗಳಿಗೆ ಅವಕಾಶ ನೀಡುವಂತೆ ಜಿಲ್ಲೆಯ ಶಾಸಕರ ಜೊತೆ ಬೆಂಗಳೂರು ವಿಧಾನ ಸೌಧಕ್ಕೆ ತೆರಳಿ ರಾಜ್ಯ ಸರಕಾರಕ್ಕೆ ಒತ್ತಡವನ್ನು ಹಾಕಿದ್ದೇವೆ ಎಂದು ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ಗೌರವಾಧ್ಯಕ್ಷ ಶಿವಣ್ಣ ಗೌಡ ಕಡಬ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಂಪ್ರದಾಯಿಕ ಕೋಳಿ ಅಂಕಗಳನ್ನು ನಡೆಸಲು ಅವಕಾಶ ನೀಡುವ ಸಲುವಾಗಿ ಜಿಲ್ಲೆಯ ರೈತರು ಸೇರಿಕೊಂಡು ಜಿಲ್ಲಾ ಮಟ್ಟದ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆಯನ್ನು ಮಾಡಿದ್ದೇವೆ,ಇದೀಗ…

Read More

ಇಂದ್ರಾಳಿಯಲ್ಲಿ ಬೃಹತ್ ಹೆಬ್ಬಾವಿನ ರಕ್ಷಣೆ: ಗಾಯಗೊಂಡ ಹಾವಿಗೆ ಚಿಕಿತ್ಸೆ

ಉಡುಪಿ: ನಗರದಲ್ಲಿನ ಇಂದ್ರಾಳಿ ರೈಲ್ವೆ ನಿಲ್ದಾಣದ ಸಮೀಪ ಬೃಹತ್ ಗಾತ್ರದ ಹೆಬ್ಬಾವೊಂದನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಇಂದ್ರಾಳಿ ರೈಲ್ವೆ ನಿಲ್ದಾಣದ ಆಟೋ ಸ್ಟ್ಯಾಂಡ್ ಹತ್ತಿರ, ರೈಲ್ವೆ ಪ್ರಯಾಣಿಕರ ಸಂಚಾರ ಜೋರಾಗಿರುವ ಪ್ರದೇಶದಲ್ಲಿ ಹೆಬ್ಬಾವಿನ ಚಲನವಲನವನ್ನು ಗಮನಿಸಿದ ಆಟೋ ಚಾಲಕ ಪ್ರಶಾಂತ್ ಅವರು, ತಕ್ಷಣ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಒಳಕಾಡು ಅವರು, ಹಾವು ಹಿಡಿಯುವ ಪರಿಣಿತಿ ಹೊಂದಿರುವ ಆಟೋ ಚಾಲಕ ಬಶೀರ್ ಅವರನ್ನು ಕರೆಯಿಸಿಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸಿದರು….

Read More

ಮಾ.25ರಂದು ವಿಧಾನಸೌಧದ ಮುಖ್ಯ ಪ್ರವೇಶ ದ್ವಾರ ರಾಜ್ಯ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ : ಸ್ಪೀಕ‌ರ್ ಯು.ಟಿ.ಖಾದರ್

ಮಂಗಳೂರು :ವಿಧಾನಸೌಧದ ಮುಖ್ಯ ದ್ವಾರವನ್ನು ರಾಜ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾರ್ಚ್ 25 ರಂದು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕ‌ರ್ ಯು.ಟಿ.ಖಾದರ್ ತಿಳಿಸಿದ್ದಾರೆ ಅವರು ಮಂಗಳೂರಿನ ಜೆಪ್ಪಿನಮೊಗರು ಎಂ ಎಸ್ ಗಾರ್ಡನ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಈ ಪ್ರವೇಶ ದ್ವಾರವು ಅತ್ಯಂತ ಸುಂದರವಾದ ಕಲಾಕೃತಿಯ ಕೆತ್ತನೆಗಳೊಂದಿಗೆ ಕರ್ನಾಟಕ ಶೈಲಿಯನ್ನು ಹೊಂದಿದ್ದು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಮತ್ತು ಲೋಕೋಪಯೋಗಿ ಇಲಾಖೆ ಮೂಲಕ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು . ವಿಧಾನಸೌಧದ…

Read More

ಗೂನಡ್ಕ ಲಾಡ್ಜ್‌ನಲ್ಲಿ ಯುವಕನ ಆತ್ಮಹತ್ಯೆ

ಬಂಟ್ವಾಳ: ತಾಲೂಕಿನ ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್‌ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ, ನಾರಾಯಣ ಕುಲಾಲ್ ಅವರ ಪುತ್ರ ತಿಲಕರಾಜ್ (28) ಎಂದು ಗುರುತಿಸಲಾಗಿದೆ. ತಿಲಕರಾಜ್ ಅವರು ಮಾರ್ಚ್ 19ರಂದು ಅನಂತಾಡಿ ಪ್ರದೇಶದ ಮನೆಯೊಂದರಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಕೆಲಸಕ್ಕಾಗಿ ಅಗತ್ಯ ಸಾಮಗ್ರಿಗಳನ್ನು ಹಾಕಿ ಬಂದಿದ್ದರು. ಮಾರ್ಚ್ 20ರ ಸಂಜೆಯಿಂದ ಕುಟುಂಬದವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಇವರು…

Read More
error: Content is protected !!