ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚಾಲನೆ: ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವರು

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭವಾಗಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಲ್ಲೇಶ್ವರಂನ 13ನೇ ಅಡ್ಡರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ (ಕೆಪಿಎಸ್) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅವರು ಆತ್ಮಸ್ಥೈರ್ಯ ತುಂಬಿ ಶುಭ ಹಾರೈಸಿದರು. ಈ ವರ್ಷ ರಾಜ್ಯಾದ್ಯಂತ ಒಟ್ಟು 8,65,988 ವಿದ್ಯಾರ್ಥಿಗಳು 2,870 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ವಿಶೇಷವಾಗಿ 16 ದೃಷ್ಟಿಮಾಂದ್ಯ ಮಕ್ಕಳು ಬರಹಗಾರರ ಸೌಲಭ್ಯ ಬಳಸದೆ,…

Read More

“ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರೈಸ್ತ ಅಲ್ಲ ಹಿಂದೂ!” ಸ್ಪಷ್ಟನೆ ನೀಡಿದ ಕುಟುಂಬ , ಡಾ ರತಿ ಹೇಳಿಕೆಗೆ ಕ್ಷಮೆಯಾಚೆನೆಗೆ ಪಟ್ಟು

“ಕಳೆದ ಮಾರ್ಚ್ 13 ರಂದು ಸುದ್ದಿಗೋಷ್ಠಿ ನಡೆಸಿದ್ದ ಡಾ.ರತಿ ಅವರು ಕರಾವಳಿಯಲ್ಲಿ ದೈವ ನರ್ತನ ಸೇವೆಯನ್ನು ಪಂಬದ, ಪಾಣಾರ ಸುಮಾರು 16 ಜಾತಿಗಳವರು ಮಾಡಬೇಕು ಆದರೆ ಮಂಗಳೂರಿನ ಬೋಳೂರಿನಲ್ಲಿ ಜಾರಂದಾಯ ದೈವಸ್ಥಾನದ ಬಂಟ ದೈವಕ್ಕೆ ಕ್ರಿಶ್ಚಿಯನ್ ಮಹಿಳೆಗೆ ಹುಟ್ಟಿದ ಯುವಕನಿಂದ ನರ್ತನ ಸೇವೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಅವರ ಈ ಆರೋಪಕ್ಕೆ ಬೇಕಾದ ಜಾತಿ ಪ್ರಮಾಣಪತ್ರ ನಮ್ಮಲ್ಲಿದ್ದು ನರ್ತನ ಸೇವೆ ಮಾಡಿರುವ ಸುಶಾಂತ್ ಬಂಗೇರ ಒಬ್ಬ ಹಿಂದೂ ಆಗಿದ್ದು ಪಂಬದ ಸಮಾಜಕ್ಕೆ ಸೇರಿದವನು“ ಎಂದು ದೈವನರ್ತಕ ಸೂರಜ್…

Read More

ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಆರೋಪ: ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಮೂಡುಬಿದಿರೆ: ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಬಿ ಜಿ ಅವರನ್ನು ಅಮಾನತುಗೊಳಿಸಲಾಗಿದೆ. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದಾಗಿ ಆರೋಪಿಸಿ ಆಡಿಯೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ತನಿಖೆ ನಡೆಸಲು ಮಂಗಳೂರು ಉತ್ತರ ಉಪವಿಭಾಗದ ಎಸಿಪಿಗೆ ಸೂಚಿಸಲಾಗಿತ್ತು. ಅವರಿಂದ ಸಲ್ಲಿಸಲಾದ ತನಿಖಾ ವರದಿಯ…

Read More

ಉಡುಪಿ: ಅಸಹಾಯಕ ಸ್ಥಿತಿಯಲ್ಲಿದ್ದ ಕಾಡುಬೆಕ್ಕಿನ ರಕ್ಷಣೆ

ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿ ಪತ್ತೆಯಾದ ಕಾಡುಬೆಕ್ಕನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಘಟನೆ ಉಡುಪಿ ಜಿಲ್ಲೆಯ ಕಲ್ಯಾಣಪುರ ಹಾಳೆಕಟ್ಟೆ ಪ್ರದೇಶದಲ್ಲಿ ನಡೆದಿದೆ. ಬೀದಿನಾಯಿಗಳ ದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಕಾಡುಬೆಕ್ಕು ರಸ್ತೆಯ ಬದಿಯಲ್ಲಿ ಅಸಹಾಯಕವಾಗಿ ಪಡಕೊಂಡಿರುವುದನ್ನು ಸ್ಥಳೀಯರಾದ ರವಿ (ಮೆಸ್ಕಾಂ) ಗಮನಿಸಿ, ತಕ್ಷಣ ನಿತ್ಯಾನಂದ ಒಳಕಾಡು ಅವರ ಗಮನಕ್ಕೆ ತಂದರು. ಮಾಹಿತಿ ಪಡೆದ ಅವರು ಸ್ಥಳಕ್ಕೆ ಧಾವಿಸಿ ಕಾಡುಬೆಕ್ಕನ್ನು ಸುರಕ್ಷಿತವಾಗಿ ರಕ್ಷಿಸಿದರು. ನಂತರ ಅರಣ್ಯ ಇಲಾಖೆಗೆ ಹಸ್ತಾಂತರಿಸಲ್ಪಟ್ಟ ಕಾಡುಬೆಕ್ಕಿಗೆ ಗಸ್ತು ಅರಣ್ಯಪಾಲಕರು…

Read More

ಹೆಣ್ಣುಮಕ್ಕಳ ವಿರುದ್ಧ ಭೇದಭಾವ ತೊಡೆದುಹಾಕಿ: ಕಾರ್ಯಾಗಾರದಲ್ಲಿ ಕರೆ -ಡಾ. ಶಿವಪ್ರಕಾಶ್

ಮಂಗಳೂರು: ಲಿಂಗಾನುಪಾತ ಹದಗೆಡಲು ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗು ಪ್ರಮುಖ ಕಾರಣವಾಗಿದ್ದು, ಈ ದುಷ್ಪ್ರಥೆಯನ್ನು ನಿರ್ಮೂಲನೆ ಮಾಡಬೇಕಾಗಿದೆ ಎಂದು ವೆನ್‍ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್ ಅಭಿಪ್ರಾಯಪಟ್ಟರು. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ–1994 ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಮಗು ಹುಟ್ಟಿದರೆ…

Read More

ಭೂ ವ್ಯವಹಾರ ತಕರಾರು: ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಿಂದ ಯುವಕನೋರ್ವ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ವ್ಯಕ್ತಿಯನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಗಾಯಗೊಂಡವರನ್ನು ಮೋಹನ್ ದಾಸ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿ ಮೊಹಮ್ಮದ್ ಶರೀಫ್ ಆಗಿದ್ದು, ಈತನ ತಂದೆ ಮಹಮ್ಮದ್ ಇಕ್ಬಾಲ್ ಜೊತೆಗೆ ಮೋಹನ್ ದಾಸ್ ಶೆಟ್ಟಿ ಅವರ ನಡುವೆ ಭೂ ವ್ಯವಹಾರ ನಡೆದಿದೆ. ಸುರತ್ಕಲ್‌ನ ಖಾನ ಮತ್ತು ವಾಮಂಜೂರು ಪ್ರದೇಶಗಳಲ್ಲಿ ಸುಮಾರು 2…

Read More

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಮಂಗಳೂರಲ್ಲಿ ಬಂಧನ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು Nawaz ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2014ರ ಅ.ಕ್ರ. 375/2014ರಡಿ ಐಪಿಸಿ ಕಲಂ 393, 398 ಹಾಗೂ 34ರಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು ದಸ್ತಗಿರಿ ನಡೆಸಿದೆ. ಬಂಧಿತನನ್ನು ಮಂಗಳೂರು ನಗರದ 7ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು…

Read More

ಹೆದ್ದಾರಿ ಪಕ್ಕ ಪ್ಲೆಕ್ಸ್ ಹಾವಳಿ: ಅಪಘಾತ ಭೀತಿ ನಡುವೆ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಬಂಟ್ವಾಳ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ವಿವಿಧ ಕಾರ್ಯಕ್ರಮಗಳಿಗೆ ಶುಭಕೋರುವ ಹೆಸರಿನಲ್ಲಿ ನೂರಾರು ಪ್ಲೆಕ್ಸ್ ಮತ್ತು ಬ್ಯಾನರ್‌ಗಳು ಅಕ್ರಮವಾಗಿ ಅಳವಡಿಕೆಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪ್ಲಾಸ್ಟಿಕ್ ಪ್ಲೆಕ್ಸ್‌ಗಳಿಗೆ ಸರ್ಕಾರ ನಿಷೇಧ ಹೇರಿದ್ದರೂ, ಹೆದ್ದಾರಿ ಬದಿಯಲ್ಲಿ ಸಾಲುಸಾಲಾಗಿ ಬ್ಯಾನರ್‌ಗಳು ರಾರಾಜಿಸುತ್ತಿರುವುದು ಕಂಡುಬರುತ್ತಿದೆ. ವಿಶೇಷವಾಗಿ ಬಿಸಿರೋಡು ಪ್ರದೇಶದಲ್ಲಿ ರಸ್ತೆ ಅಂಚನ್ನು ಆಕ್ರಮಿಸಿಕೊಂಡು ಅಳವಡಿಸಿರುವ ಭಾರೀ ಗಾತ್ರದ ಬ್ಯಾನರ್‌ಗಳು ಯಾವ ಕ್ಷಣದಲ್ಲಾದರೂ ಕುಸಿದು ರಸ್ತೆ ಮೇಲೆ ಬೀಳುವ ಅಪಾಯ ಉಂಟಾಗಿದೆ. ಕೆಲವು ಬ್ಯಾನರ್‌ಗಳು ಈಗಾಗಲೇ ಸೊಂಟಮುರಿದು ರಸ್ತೆಯ ಕಡೆಗೆ ವಾಲಿ ನಿಂತಿದ್ದು,…

Read More

ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದ ಅಧಿಕಾರಿಣಿ – ಬಂಧನ ತಪ್ಪಿಸಲು ಆತ್ಮಹತ್ಯೆ ಯತ್ನ ನಾಟಕ

ಮಹಿಳಾ ಅಧಿಕಾರಿಯೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.ಮುಳ್ಳೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸ್ವಾಮಿ ಎಂಬವರು ಗ್ರಾಮದಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದರು. ಅವರು ನಿಧನರಾದ ನಂತರ, ಅವರ ಪುತ್ರ ಮಹದೇವ್ ಅವರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗಿತ್ತು. ಸ್ವಾಮಿ ಅವರು ಸೇವೆ ಸಲ್ಲಿಸಿದ ಅವಧಿಗೆ ಸಂಬಂಧಿಸಿದಂತೆ ಸುಮಾರು ಎರಡು ವರ್ಷದ ಬಾಕಿ ಸಂಬಳ, ಅಂದಾಜು ₹4 ಲಕ್ಷ ರೂಪಾಯಿ ಬಿಡುಗಡೆ ಆಗಬೇಕಿತ್ತು. ಈ ಬಾಕಿ ಸಂಬಳ…

Read More

ಉಳ್ಳಾಲದಲ್ಲಿ DYFI ಘಟಕ ಸಮ್ಮೇಳನ – ಸಮಾಜ ಕಟ್ಟಲು ಒಗ್ಗಟ್ಟಿನ ಕರೆ

ಉಳ್ಳಾಲ:ಡಿವೈಎಫ್‌ ಐ ಕುತ್ತಾರು ಬಟ್ಟೆದಡಿ ಘಟಕದ ಆಶ್ರಯದಲ್ಲಿ ಡಿವೈಎಫ್‌ ಐ ಘಟಕ ಸಮ್ಮೇಳನ ಹಾಗೂ ಬಹಿರಂಗ ಸಭೆ ಕುತ್ತಾರಿನ ಕಾಂ. ಯೋಗೀಶ ಕುತ್ತಾರು ವೇದಿಕೆಯಲ್ಲಿ ನಡೆಯಿತು. ಬಹಿರಂಗ ಸಭೆ ಯನ್ನು ಉದ್ದೇಶಿಸಿ ಪತ್ರಕರ್ತ ನವೀನ್‌ ಸೂರಿಂಜೆ ಮಾತನಾಡಿ ಸಾಹಿತಿಗಳು, ಬರಹಗಾರರು, ಚಳುವಳಿಗಾರರು, ಪತ್ರಕರ್ತರು ಒಗ್ಗಟ್ಟಾಗಬೇಕಿದೆ. ಸರಕಾರದ ತಪ್ಪುಗಳನ್ನು ತಿಳಿಸುವ ಕಾರ್ಯವನ್ನು ಮಾಡುವ ಮೂಲಕ ಸಮಾಜವನ್ನು ಕಟ್ಟಬೇಕಿದೆ ಎಂದು ಪತ್ರಕರ್ತ ನವೀನ್‌ ಸೂರಿಂಜೆ ಹೇಳಿದರು. ಕಾರ್ಯಕ್ರಮದಲ್ಲಿ ಪತ್ರಕರ್ತ ನವೀನ್ ಸೂರಿಂಜೆ, DYFI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಕಾರ್ಯದರ್ಶಿ…

Read More
error: Content is protected !!