ಮಂಗಳೂರು ವಿವಿಯಲ್ಲಿ ಮಾತೃಭಾಷೆ ತುಳುವಿಗೆ ಉಳಿವಿಲ್ಲ: ಲತೇಶ್ ಬಾಕ್ರಬೈಲು

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ಭಾಷಾ ವಿಭಾಗಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಹಾಗೂ ಅವುಗಳನ್ನು ಹಂತ ಹಂತವಾಗಿ ಮುಚ್ಚುತ್ತಿರುವ ಕ್ರಮವನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ತೀವ್ರವಾಗಿ ಖಂಡಿಸಿದೆ. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಲತೇಶ್ ಬಾಕ್ರಬೈಲು, ಕರಾವಳಿ ಮತ್ತು ಮಲೆನಾಡು ಭಾಗದ ಉನ್ನತ ಶಿಕ್ಷಣದ ಪ್ರಮುಖ ಕೇಂದ್ರವಾಗಿರುವ ಮಂಗಳೂರು ವಿಶ್ವವಿದ್ಯಾನಿಲಯವು ಭಾಷೆ ಹಾಗೂ ಸಂಸ್ಕೃತಿಯ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿರಬೇಕಾದ ಸಂಸ್ಥೆಯಾಗಿದ್ದು, ಇತ್ತೀಚಿನ ಆಡಳಿತಾತ್ಮಕ ನಿರ್ಧಾರಗಳು ಶೈಕ್ಷಣಿಕ ವಾತಾವರಣಕ್ಕೆ ಗಂಭೀರ…

Read More

ಬಿ.ಸಿ.ರೋಡ್ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಬಂಧನ……?!!!

ಮಂಗಳೂರು, ಜು.17:* ಬಿ.ಸಿ.ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳನ್ನು ತಲ್ವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಚೇತನ್‌ನನ್ನು ಪೊಲೀಸರು ಶುಕ್ರವಾರ ಬೆಳಿಗ್ಗೆ ಮಂಗಳೂರು ಸಮೀಪ ಬಂಧಿಸಿರುವುದಾಗಿ ತಿಳಿದುಬಂದಿದೆ. ಬಂಧಿತ ಆರೋಪಿ ಚೇತನ್ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿಯಾಗಿದ್ದು, ಮೃತ ಲಾವಣ್ಯ (ಕಕ್ಯಪದವು ನಿವಾಸಿ) ಅವರನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಲಾವಣ್ಯ ಆತನ ಪ್ರೀತಿಯನ್ನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುರುವಾರ ಸಂಜೆ ಬಿ.ಸಿ.ರೋಡ್ ಸರ್ಕಾರಿ ಬಸ್…

Read More

ಬಿ.ಸಿ.ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ: ಆರೋಪಿಗೆ ಕಠಿಣ ಶಿಕ್ಷೆಯಾಗಲಿ – ಕೆ.ಎ. ಅಸ್ಮ ಹಸೈನಾರ್

ಬಂಟ್ವಾಳ: ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ, ಕಲ್ಲಡ್ಕ ನರ್ಸಿಂಗ್ ಆಸ್ಪತ್ರೆಯ ಸಿಬ್ಬಂದಿಯಾಗಿದ್ದ ಲಾವಣ್ಯ ಎಂಬ ಯುವತಿಯನ್ನು ಹಾಡುಹಗಲೇ ಸಾರ್ವಜನಿಕರ ಎದುರಲ್ಲೇ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಅಮಾನವೀಯ ಘಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗೆ ನಡೆದ ಹಲವು ಘಟನೆಗಳು ಇದಕ್ಕೆ ಸಾಕ್ಷಿಯಾಗಿವೆ…

Read More

ನಾಗೋರಿ ಭೂಕುಸಿತ, ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಎಸ್.ಎಲ್. ಭೋಜೆಗೌಡ ಭೇಟಿ

ಮಂಗಳೂರು: ಮುಂಗಾರು ಮಳೆಯಿಂದ ಹಾನಿಗೊಳಗಾದ ದಕ್ಷಿಣ ಕನ್ನಡ ಜಿಲ್ಲೆಯ ನಾಗೋರಿ ಭೂಕುಸಿತ ಹಾಗೂ ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಅಧ್ಯಯನ ತಂಡದ ಅಧ್ಯಕ್ಷ ಎಸ್.ಎಲ್. ಭೋಜೆಗೌಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಾಗೋರಿ ಭೂಕುಸಿತ ಪ್ರದೇಶದಲ್ಲಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ಅವರು, ಮೃತರ ಕುಟುಂಬಗಳಿಗೆ ಸಾಂತ್ವನ ಸೂಚಿಸಿ, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ಭೂಕುಸಿತ ತಡೆಗೆ ಶಾಶ್ವತ ಕ್ರಮ, ವೈಜ್ಞಾನಿಕ ಅಧ್ಯಯನ ಹಾಗೂ ಅಪಾಯದ ಪ್ರದೇಶಗಳ ಗುರುತಿಸುವಿಕೆ ಅಗತ್ಯವೆಂದು ಅವರು…

Read More

ಬಿಸಿ ರೋಡ್ KSRTC ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳ ಹತ್ಯೆ ಅತ್ಯಂತ ದುರದೃಷ್ಟಕರ : ಮಹಿಳೆಯರಿಗೆ ರಕ್ಷಣೆ ನೀಡಿ – ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಸೂರ್ಯವಂಶಿ

ಹಾಡು ಹಗಲೇ ಕರಾವಳಿಯನ್ನು ಬೆಚ್ಚಿ ಬಿಳಿಸುವ ಘಟನೆ ಬಿಸಿ ರೋಡ್ KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದು ಬಸ್ ಗೆ ಕಾಯುತ್ತಿದ್ದ ಲಾವಣ್ಯ ಅವರನ್ನು ಸಾರ್ವಜನಿಕ ಸ್ಥಳದಲ್ಲಿ ಹತ್ಯೆ ಮಾಡಿರುವಂತದ್ದು ದೇಶವೇ ಬೆಚ್ಚಿ ಬೀಳುವಂತೆ ಮಾಡಿದೆ. ಇದು ಮಹಿಳೆಯರಲ್ಲಿ ಆತಂಕ ಮೂಡಿಸುವಂತೆ ಆಗಿದ್ದು ಈ ಹಿಂದೆಯೂ ಈ ರೀತಿಯ ಘಟನೆ ನಡೆದಿದ್ದು ಕಾನೂನು ವ್ಯವಸ್ಥೆ ಸಡಿಲ ಇರುವ ಕಾರಣ ಈ ರೀತಿಯ ಘಟನೆ ಪುನರವರ್ತನೆ ಆಗುತ್ತಿದೆ ಹಾಗಾಗಿ ಯಾವುದೇ ಧರ್ಮವಾಗಲಿ ಯಾವುದೇ ಜಾತಿಯಾಗಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಆ…

Read More

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ

ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ ಮಂಗಳೂರು: ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ…

Read More

ಬಿಸಿ ರೋಡಿನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ – ಸಿಪಿಐಎಂ

ಮಹಿಳೆಯರ ಮೇಲಿನ ಹಿಂಸಾಚಾರ ತಡೆಯಲು ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕುಬಿಸಿ ರೋಡಿನಲ್ಲಿ ಇಂದು ನಡೆದ ಯುವತಿಯ ಬರ್ಬರ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದ್ದು, ಈ ಅಮಾನವೀಯ ಕೃತ್ಯವನ್ನು ಸಿಪಿಐ(ಎಂ) ಮಂಗಳೂರು ನಗರ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರ ಹಿಂಸಾಚಾರವನ್ನು ಕೇವಲ ಅಪರಾದ ಕೃತ್ಯವನ್ನಾಗಿ ಮಾತ್ರ ನೋಡದೆ, ಮಹಿಳೆಯನ್ನು ಕೀಳಾಗಿ ಕಾಣುವ ಪುರುಷಪ್ರದಾನ ಸಮಾಜದ ಕೀಳು ಮನೋಭಾವ, ಸಾಮಾಜಿಕ ಅಸಮಾನತೆ ಮತ್ತು ಮಾನವೀಯ ಮೌಲ್ಯಗಳ ಕುಸಿತದ ಪರಿಣಾಮವನ್ನು ಗಂಬೀರವಾಗಿ ಪರಿಗಣಿಸಬೇಕು. ಮಹಿಳೆಯರ ಸ್ವಾತಂತ್ರ್ಯ, ಸಮಾನತೆ…

Read More

ಬಿ.ಸಿ.ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ: ಏಕಪಕ್ಷೀಯ ಪ್ರೀತಿಯ ಶಂಕೆ, ಆರೋಪಿ ಪರಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಭೀಕರ ಘಟನೆಯಲ್ಲಿ 21 ವರ್ಷದ ಯುವತಿ ಲಾವಣ್ಯ ಮಾರಕಾಸ್ತ್ರದ ದಾಳಿಗೆ ಬಲಿಯಾಗಿದ್ದಾರೆ. ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿಯು ಯುವತಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಲಾವಣ್ಯ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚೇತನ್ ಎಂಬಾತ ಈ ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ಮೃತ ಯುವತಿಯ ದೂರದ…

Read More

ಬಂಟ್ವಾಳ ಬಸ್‌ ನಿಲ್ದಾಣದಲ್ಲಿ ಯುವತಿಯ ಮೇಲೆ ಮಾರಕಾಸ್ತ್ರ ದಾಳಿ; ಚಿಕಿತ್ಸೆ ಫಲಿಸದೆ ಸಾವು

ಬಂಟ್ವಾಳ ಕೆಎಸ್‌ಆರ್‌ಟಿಸಿ ಹೊಸ ಬಸ್‌ ನಿಲ್ದಾಣದ ಸಮೀಪ ಬಸ್‌ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳ ಮೇಲೆ ಅಪರಿಚಿತ ಯುವಕನೋರ್ವ ಹರಿತವಾದ ಆಯುಧದಿಂದ ದಾಳಿ ನಡೆಸಿದ ಪರಿಣಾಮ, ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿರುವ ದುರ್ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಯುವತಿ ಕಕ್ಯಪದವು ಗ್ರಾಮದ ನಿವಾಸಿಯಾಗಿದ್ದು, ದಾಳಿ ನಡೆದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ತಕ್ಷಣವೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಯನ್ನು ಚೇತನ್ ಎಂದು…

Read More

ಭೋವಿ ಜಾತಿ ಪ್ರಮಾಣ ಪತ್ರಕ್ಕೆ ವಲಸೆ ಪ್ರಮಾಣ ಪತ್ರ ಕಡ್ಡಾಯವಲ್ಲ: ಪವನ್ ಶಿರ್ವ

ಕರ್ನಾಟಕ ಅವಿಭಾಜ್ಯ ಜಿಲ್ಲೆಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 70,000 ಭೋವಿ ಜನಾಂಗದವರು ವಾಸವಾಗಿದ್ದು ಸುಮಾರು 7-8 ವರ್ಷಗಳಿಂದ ಅಧಿಕಾರಿಗಳು ಜಾತಿ ಪ್ರಮಾಣ ಪತ್ರ ನೀಡದಿರುವುದು ಖಂಡನಿಯ ಎಂದು ಸಾಮಾಜಿಕ ಹೋರಾಟಗಾರ ಪವನ್ ಕುಮಾರ್ ಶಿರ್ವ ಆಕ್ರೋಶ ವ್ಯಕ್ತಪಡಿಸಿದರು. ಭಾರತ ಸರ್ಕಾರದ ಅಧಿಸೂಚನೆ ಸಂಖ್ಯೆ BC12016/34/76-SCT-5 ರ ದಿನಾಂಕ 27-07-1997 ರಂದು ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ 101 ಪರಿಶಿಷ್ಟ ಜಾತಿಗಳನ್ನು ನಮೋದಿಸಲಾಗಿದ್ದು ಕ್ರಮ ಸಂಖ್ಯೆ 23ರಲ್ಲಿ ಭೋವಿ ಜನಾಂಗವನ್ನು ನಮೂದಿಸಿದೆ ಎಂದು ಹೇಳಿದರು.. ಇಂದಿನ…

Read More
error: Content is protected !!