34 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡಿದ ವಿಟ್ಲ ಠಾಣಾ ಪೊಲೀಸರು
ಬಂಟ್ವಾಳ: ಅಕ್ರಮವಾಗಿ ಕಾರಿನಲ್ಲಿ ಪೆಟ್ರೋಲ್ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾತನನ್ನು ವಿಟ್ಲ ಪೋಲೀಸರ ತಂಡ ಬಂಧಿಸಿದೆ. 1992 ರ ಇಸವಿಯ ಅ.14 ರಂದು ಕಾರೊಂದರಲ್ಲಿ ಅಕ್ರಮವಾಗಿ ಪೆಟ್ರೋಲ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿತರಾದ ಕಾಸರಗೋಡು ಮಂಜೇಶ್ವರ ನಿವಾಸಿ ಇಬ್ರಾಹಿಂ (28) ಹಾಗೂ ಸಿದ್ದೀಕ್ ಎಂಬವರುಗಳ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ: 124/1992 ಕಲಂ:3 ಮತ್ತು ಕಲಂ: 23 ಪೆಟ್ರೋಲಿಯಂ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪೈಕಿ ಸಿದ್ದೀಕ್ ಎಂಬಾತನು ಮಾನ್ಯ…