ಮಂಗಳೂರು ವಿವಿಯಲ್ಲಿ ಮಾತೃಭಾಷೆ ತುಳುವಿಗೆ ಉಳಿವಿಲ್ಲ: ಲತೇಶ್ ಬಾಕ್ರಬೈಲು
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ಭಾಷಾ ವಿಭಾಗಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಹಾಗೂ ಅವುಗಳನ್ನು ಹಂತ ಹಂತವಾಗಿ ಮುಚ್ಚುತ್ತಿರುವ ಕ್ರಮವನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ತೀವ್ರವಾಗಿ ಖಂಡಿಸಿದೆ. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಲತೇಶ್ ಬಾಕ್ರಬೈಲು, ಕರಾವಳಿ ಮತ್ತು ಮಲೆನಾಡು ಭಾಗದ ಉನ್ನತ ಶಿಕ್ಷಣದ ಪ್ರಮುಖ ಕೇಂದ್ರವಾಗಿರುವ ಮಂಗಳೂರು ವಿಶ್ವವಿದ್ಯಾನಿಲಯವು ಭಾಷೆ ಹಾಗೂ ಸಂಸ್ಕೃತಿಯ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿರಬೇಕಾದ ಸಂಸ್ಥೆಯಾಗಿದ್ದು, ಇತ್ತೀಚಿನ ಆಡಳಿತಾತ್ಮಕ ನಿರ್ಧಾರಗಳು ಶೈಕ್ಷಣಿಕ ವಾತಾವರಣಕ್ಕೆ ಗಂಭೀರ…
