ಮಂಗಳೂರು ನಗರದ ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದ ಗೋವುಗಳಿಗೆ ಗೋ ಪೂಜೆ

ಮಂಗಳೂರು: ಮಂಗಳೂರು ನಗರದ ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದ ವಠಾರದಲ್ಲಿರುವ ಶ್ರೀಯುತ ಗುರುರಾಜ್ ಭಟ್ ರವರ ಮಾಲೀಕತ್ವದ ಗೋ – ಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ 33 ಕೋಟಿ ದೇವತೆಗಳ ಅವಾಸಸ್ಥಾನವಾಗಿರುವ ಗೋ- ಮಾತೆಯ ಪೂಜೆಯನ್ನು ಆಚರಿಸಲಾಯಿತು. ಹಿಂದೂ ಧರ್ಮದಲ್ಲಿ ಹಸುವಿಗೆ ವಿಶೇಷ ಸ್ಥಾನ, ಮಾನ, ಗೌರವವಿದೆ. ಹಸುವನ್ನು ಪೂಜನೀಯ ಭಾವನೆಯಿಂದ ಕಾಣಲಾಗುತ್ತದೆ. ಅಷ್ಟು ಮಾತ್ರವಲ್ಲ ಹಿಂದೂ ಧರ್ಮಗ್ರಂಥಗಳಲ್ಲಿ ಹಸುವಿಗೆ ತಾಯಿಯ ಸ್ಥಾನವನ್ನು ನೀಡಲಾಗಿದೆ. ಹಸುವಿನಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿದ್ದಾರೆಂದು ನಂಬಲಾಗುತ್ತದೆ – ಸಾಮರಸ್ಯ ಮಂಗಳೂರು ಅಧ್ಯಕ್ಷೆ…

Read More

ಯಂಗ್‌ ಇಂಡಿಯನ್ಸ್ ಆಲೋಚನೆಗಳಿಂದ ಶ್ರೀಮಂತವಾಗಲಿದೆ ಕರಾವಳಿಯ ಕಡಲ ಕಿನಾರೆ …. !

ಮಂಗಳೂರು: ಯಂಗ್‌ ಇಂಡಿಯನ್ಸ್ (Yi) ಎನ್ನುವುದು ಭಾರತದ ಯುವಕರು ಒಟ್ಟುಗೂಡಿ, ನಾಯಕತ್ವ ವಹಿಸಿ, ಸಹಸ್ರಜನಶೀಲತೆಯ ಮೂಲಕ ಭಾರತದ ಭವಿಷ್ಯವನ್ನು ಪ್ರಭಾವಿತಗೊಳಿಸುವ ಚಳುವಳಿಯಾಗಿದೆ. ಇದು ಭಾರತೀಯ ಕೈಗಾರಿಕಾ ಪರಿಷತ್ (Confederation of Indian Industry – CII)ನ ಅವಿಭಾಜ್ಯ ಅಂಗವಾಗಿದ್ದು ಸರ್ಕಾರೇತರ, ಲಾಭರಹಿತ, ಕೈಗಾರಿಕೆ ಮುನ್ನಡೆಸುವ ಮತ್ತು ನಿರ್ವಹಿಸುವ ಸಂಸ್ಥೆಯಾಗಿದೆ ಇದು ಭಾರತದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಸಕ್ರಿಯ ಪಾತ್ರವಹಿಸುವ ಸಂಸ್ಥೆಯಾಗಿದ್ದು ಈಗಾಗಲೇ ಸಾಕಷ್ಟು ಸಾಹಸ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸಿದೆ ಎಂದು ಸಾಲೋಮೆ ಲೋಬೊ ಪೆರೇರಾ ತಿಳಿಸಿದರು . ನಗರದ…

Read More

11 ತಿಂಗಳ ಮಗು ನೀರಿನ ಟಬ್ ಗೆ ಬಿದ್ದು ಸಾವು !

ಬೆಂಗಳೂರು: ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನೀರಿನ ಟಬ್ ಗೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತ ಬಾಲಕಿಯನ್ನು ಖುಷಿ ಎಂದು ಗುರುತಿಸಲಾಗಿದೆ. ಚನ್ನಪಟ್ಟಣದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಶಂಷಾದ್ ಕೆಲಸ ಮುಗಿಸಿಕೊಂಡು ಮನೆಗೆ ಬಂದ ನಂತರ ತೀವ್ರ ಬಾಯಾರಿಕೆಯಿಂದ ಪತ್ನಿ ಮುಸ್ಕಾನ್ ಅವರ ಬಳಿ ಕುಡಿಯಲು ನೀರು ಕೇಳಿದ್ದರು. ಪತಿಗಾಗಿ ನೀರು ತರಲು ಮುಸ್ಕಾನ ಅಡುಗೆ ಮನೆಗೆ ತೆರಳಿದ್ದಾಗ, ಮನೆಯೊಳಗೆ ಆಟವಾಡುತ್ತಿದ್ದ ಮಗು ಖುಷಿ ಟಬ್‌ನಲ್ಲಿದ್ದ ನೀರಿನೊಳಗೆ ಬಿದ್ದಿದೆ….

Read More

ಕಾರ್ಕಳ: ಯುವಕನ ಆತ್ಮಹತ್ಯೆ ಪ್ರಕರಣ; ವಿಧಿವಿಜ್ಞಾನ ವಿಶ್ಲೇಷಣೆಗೆ ಮೊಬೈಲ್ ಫೋನ್ ರವಾನೆ

ಉಡುಪಿ, ಅ. 21 : ಕಾರ್ಕಳದ ಬೆಳ್ಮಣ್‌ನ ಲಾಡ್ಜ್‌ನಲ್ಲಿ ಇತ್ತೀಚೆಗೆ ನಡೆದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತನ ಮೊಬೈಲ್ ಫೋನ್ ಅನ್ನು ಹೆಚ್ಚಿನ ತನಿಖೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. “ತನಿಖಾ ತಂಡವು ಫೋನ್ ದತ್ತಾಂಶ, ಬ್ಯಾಂಕ್ ವಹಿವಾಟುಗಳು ಮತ್ತು ಚಾಟ್ ದಾಖಲೆಗಳ ಆಧಾರದ ಮೇಲೆ ಆರೋಪಿಯನ್ನು ಪ್ರಶ್ನಿಸಿದೆ. ಆರೋಪಿಯ ಡಿಜಿಟಲ್ ಸಾಧನಗಳನ್ನು ಸಹ ಪರಿಶೀಲಿಸಲಾಗಿದೆ. ಇದರ ಜೊತೆಗೆ, ಮೃತನ ಸ್ನೇಹಿತರು, ಸಂಬಂಧಿಕರು ಮತ್ತು ಆಪ್ತರನ್ನೂ ವಿಚಾರಣೆ…

Read More

ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪುತ್ತೂರು: ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇವರ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಶೋಕ ಜನ-ಮನ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಅಶೋಕ್ ಅವರು ಕಾಂಗ್ರೆಸ್ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ಪ್ರತಿ ವರ್ಷ ವಸ್ತ್ರದಾನ ಮಾಡುವ ಕಾರ್ಯವನ್ನು 13 ವರ್ಷಗಳಿಂದ ಮಾಡ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. ಇತರರಿಗೆ ಅವರು ಸ್ಫೂರ್ತಿಯಾಗಲಿ…

Read More

ಸೌತ್ ಕೆನರಾ ಫೊಟೋಗ್ರಾಫರ್ ಅಸೋಸಿಯೇಷನ್ ನಿಂದ ಹಿರಿಯರ ಅನಾಥಶ್ರಮದಲ್ಲಿ ದೀಪಾವಳಿ ಸಂಭ್ರಮ

ಮಂಗಳೂರು 20: ಸೌತ್ ಕೆನರಾ ಫೊಟೋಗ್ರಾಫರ್ ಅಸೋಸಿಯೇಷನ್ , ದಕ್ಷಿಣ ಕನ್ನಡ ಜಿಲ್ಲೆ – ಉಡುಪಿ ಜಿಲ್ಲೆ, ಮಂಗಳೂರು ವಲಯದ ವತಿಯಿಂದರಜತ ಸಂಭ್ರಮ 2025-26 ಅಂಗವಾಗಿ ಲಲಿತಾ ಗೀತಾ ಅನಾಥಶ್ರಮದಲ್ಲಿ ಹಿರಿಯರ ಜೊತೆ ದೀಪಾವಳಿ ಹಬ್ಬದ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಿಕರ್ಣಕಟ್ಟೆಯ ಬಳಿಯ ಲಲಿತಾ ಗೀತಾ ಅನಾಥಶ್ರಮ ಸಂಸ್ಥೆಯು ಸುಮಾರು 4 ವರ್ಷಗಳಿಂದ ನಿರಾಶ್ರಿತರಿಗೆ ಆಶ್ರಯ ನೀಡುತ್ತಿದೆ. ಈ ಸಂಸ್ಥೆಯ ಮುಖ್ಯಸ್ಥೆಯಾದ ಗೀತಾ ಅವರು ಮೂರು ನಿರಾಶ್ರಿತರಿಂದ ಸರಿಪಳ್ಳ ಪರಿಸರದಲ್ಲಿ ಆರಂಭ ಮಾಡಿದ ಈ ಅನಾಥಶ್ರಮ, ಈಗ…

Read More

ಪುತ್ತೂರಿನಲ್ಲಿ ಸಿದ್ದರಾಮಯ್ಯ ಪಾಲ್ಗೊಂಡ ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕು ನುಗ್ಗಲು,11ಕ್ಕೂ ಹೆಚ್ಚು ಮಂದಿ ಅಸ್ವಸ್ಥ .

ಪುತ್ತೂರು : ಪುತ್ತೂರಿನಲ್ಲಿ ಅಶೋಕ್ ರೈ ನೇತೃತ್ವದಲ್ಲಿ ಅಶೋಕ ಜನಮನ ಕಾರ್ಯಕ್ರಮ ನಡೆದಿತ್ತು .ಈ ಕಾರ್ಯಕ್ರಮಕ್ಕೆ ಸಿ.ಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು, ಉಂಟಾಗಿದ್ದು 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. 11ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದು ಇದರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ. ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿಯಾಗಿದ್ದು ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಅಸ್ವಸ್ಥರಾಗಿದ್ದರೆಂದು ತಿಳಿದುಬಂದಿದೆ ಕೆಸರು ತುಂಬಿದ್ದ ಮೈದಾನದಲ್ಲಿ ಅವ್ಯವಸ್ಥೆ ಉಂಟಾಗಿದ್ದು ಕುಡಿಯಲು ನೀರು…

Read More

ಮನೆ ಮೇಲೆ ಬೃಹತ್ ಗಾತ್ರದ ತೆಂಗಿನ ಮರ ಬಿದ್ದು ಹಾನಿ: ಸ್ಥಳಕ್ಕೆ ಶಾಸಕರ ಭೇಟಿ .

ಸುರತ್ಕಲ್ ಸಮೀಪದ ಕುಚಿಗುಡ್ಡೆ ಸಮೀಪ ಮನೆಯೊಂದರ ಮೇಲೆ ಬೃಹತ್ ತೆಂಗಿನ ಮರ ಬಿದ್ದು ಮನೆಯ ಮೇಲ್ಚಾವಣಿ ಎರಡು ಹೋಳಾದ ಘಟನೆ ನಡೆದಿದ್ದು, ಶಾಸಕರಾದ ಡಾ. ಭರತ್ ಶೆಟ್ಟಿ ವೈ ಭೇಟಿ ನೀಡಿ ಹಾನಿಗೀಡಾದ ಮನೆ ಪರಿಶೀಲನೆ ನಡೆಸಿದರು.ಹಾನಿಗೀಡಾದ ಮನೆಗೆ ಭೇಟಿ ನೀಡಿದ ಶಾಸಕರು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಪ್ರಕೃತಿ ವಿಕೋಪದಡಿ ಮನೆಯ ಪುನರ್ ನಿರ್ಮಾಣಕ್ಕೆ ಬೇಕಾದ ಪರಿಹಾರ ಒದಗಿಸುವಂತೆ ಸೂಚಿನೆ ನೀಡಿದರು. ಈ ಸಂದರ್ಭ, ನಿಕಟಪೂರ್ವ ಪಾಲಿಕೆಯ ಸದಸ್ಯೆ ನಯನ ಆರ್ ಕೋಟ್ಯಾನ್, ರಾಘವೇಂದ್ರ ಶೆಣೈ, ದಿನಕರ…

Read More

ಆಟೋ ಚಾಲಕನ ಮೇಲೆ ಸಂಚಾರಿ ಪೊಲೀಸರ ದರ್ಪ; ಪುತ್ತೂರಿನಲ್ಲಿ ಆಟೋ ಚಾಲಕರ ಯೂನಿಯನ್ ಪ್ರತಿಭಟನೆ .

ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆನ್ನಟ್ಟಿಕೊಂಡು ಬಂದು ಆಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆಗೆ ಸಂಬಂಧಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಇಬ್ಬರು ಸಂಚಾರಿ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಪುತ್ತೂರು ಆಟೋ ಚಾಲಕರ ಯೂನಿಯನ್ ವತಿಯಿಂದ ಪುತ್ತೂರು…

Read More

ಮಂಗಳೂರು: ಏಕ ದಿನ ಸಾಹಿತ್ಯ ಅಭಿಯಾನ .

ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನ ದಿನಾಂಕ 17.10.2015 ರಂದು ಪೂರ್ವಾಹ್ನ 11.00 ರ ವೇಳೆಗೆ ಸಿ ಎಸ್ ಐ ಇಂಗ್ಲಿಷ್ ಮೀಡಿಯಂ ಶಾಲೆ ಕಾರ್ನಾಡ್ ಮುಲ್ಕಿ ಇಲ್ಲಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಆಗಿರುವ ಶ್ರೀಮತಿ ಎಲಿಜಬೆತ್ ಪುಷ್ಪಲತಾ ಬಂಗೇರ ಕಾರ್ಯಕ್ರಮದ ಉದ್ಘಾಟನೆಗೈದರು. ಕಾರ್ಯಾಧ್ಯಕ್ಷರು ಕನ್ನಡ…

Read More
error: Content is protected !!