ಮಂಗಳೂರಿನಲ್ಲಿ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

ಮಂಗಳೂರು: ಕನ್ನಡ ಮತ್ತು ಸಂಸ್ಕತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಗಳ ಸಹಯೋಗದಲ್ಲಿ ೨೦೨೫ ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಧಾನ , ಪುಸ್ತಕ ಬಿಡುಗಡೆ ಮತ್ತು ವಾದ್ಯ ಪರಿಕರಗಳ ವಿತರಣೆಯು ನಗರದ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು . ಕಾರ್ಯವನ್ನು ಉದ್ಘಾಟನೆ ಮಾಡಿ ಮಾತನಾಡಿದ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮಾತನಾಡಿ ,…

Read More

ಉಡುಪಿ: ರಸ್ತೆ ಬದಿಯ ಕಾಂಪೌಂಡ್‌ಗೆ ಸ್ಕೂಟರ್ ಡಿಕ್ಕಿ; ಮಹಿಳೆ ಮೃತ್ಯು, ಪುತ್ರ ಗಂಭೀರ

ಉಡುಪಿ: ಸ್ಕೂಟರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ನಿಟ್ಟೂರು ಸಮೀಪ ಶುಕ್ರವಾರ ಸಂಜೆ ಸಂಭವಿಸಿದೆ. ಘಟನೆಯಲ್ಲಿ ಮಹಿಳೆಯ ಪುತ್ರ ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ಕಟಪಾಡಿ ಮೂಲದ ಹೆಲೆನ್ ಸೋನ್ಸ್ (50) ಎಂದು ಗುರುತಿಸಲಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಅವರ ಪುತ್ರ ಶೆರ್ವಿನ್ (20) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ತಾಯಿ ಮತ್ತು ಮಗ ಚಲಿಸುತ್ತಿದ್ದ ಸ್ಕೂಟರ್ ನಿಟ್ಟೂರು ರಸ್ತೆ ಬದಿಯಲ್ಲಿರುವ ಬಬ್ಬುಸ್ವಾಮಿ ದೈವಸ್ಥಾನದ ಕಾಂಪೌಂಡ್ ಗೋಡೆಗೆ ವೇಗವಾಗಿ ಅಪ್ಪಳಿಸಿದೆ….

Read More

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಮದುಮಗಳ ಶೃಂಗಾರ ಕಾರ್ಯಕ್ರಮ ಯಶಸ್ವಿ

ಬಂಟ್ವಾಳ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ( ರಿ.), ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಮಾತೃ ಶ್ರೀ ಡಾ.ಹೇಮಾವತಿ ಹೆಗ್ಗಡೆಯವರ ಅಶ್ರೀರ್ವಾದದೊಂದಿಗೆ ಮತ್ತು ಬಂಟ್ವಾಳ ,ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ಇವರ ಆಶ್ರಯದಲ್ಲಿ “ಮದುಮಗಳ ಶೃಂಗಾರ” ಕಾರ್ಯಕ್ರಮದ ಸಮಾರೋಪ ಸಮಾರಂಭ ಬಂಟ್ವಾಳದ ಉನ್ನತಿ ಸೌಧದ ಸಭಾಂಗಣದಲ್ಲಿ ನಡೆಯಿತು. ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ವರ್ತಕರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಮಾತನಾಡಿ, ಮಹಿಳೆಯರ ಸೌಂದರ್ಯ ಹೆಚ್ಚಿಸುವ ಅತ್ಯಂತ ಅವಶ್ಯಕತೆ ಮತ್ತು ಪ್ರಸ್ತುತ ದಿನಗಳಲ್ಲಿ ಬಹಳ…

Read More

ಬಂಟ್ವಾಳ: ಅಮೃತ ನಗರೋತ್ಥಾನ ಯೋಜನೆ ( ಹಂತ -4) ಯಡಿಯಲ್ಲಿ ದ.ಕ‌.ಜಿಲ್ಲೆಯ ಬಂಟ್ವಾಳ ಪುರಸಭೆ

ಬಂಟ್ವಾಳ: ಅಮೃತ ನಗರೋತ್ಥಾನ ಯೋಜನೆ ( ಹಂತ -4) ಯಡಿಯಲ್ಲಿ ದ.ಕ‌.ಜಿಲ್ಲೆಯ ಬಂಟ್ವಾಳ ಪುರಸಭೆಅನುಮೋದನೆಯಾಗಿರುವ ಕ್ರಿಯಾಯೋಜನೆಯಲ್ಲಿ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾದ ರೂ. 2 ಕೋಟಿ 56 ಲಕ್ಷ ವೆಚ್ಚದಲ್ಲಿ ಕಾಮಗಾರಿಗಳಿಗೆ ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಡ್ಡಕಟ್ಟೆ ನೇತ್ರಾವತಿ ನದಿ ಕಿನಾರೆಯಲ್ಲಿ ಗಿಡ ನೆಡುವ ಮೂಲಕ ಶಿಲಾನ್ಯಾಸ ನೆರವೇರಿಸಿದರು. ಪುರಸಭಾ ವ್ಯಾಪ್ತಿಯ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದ್ದು, ಕೋಟ್ಯಾಂತರ ರೂ ಅನುದಾನ ನೀಡಲಾಗಿದೆ. ಈ ಹಿಂದೆ ಬಿಜೆಪಿ ಸರಕಾರ ಇರುವ ಸಮಯದಲ್ಲಿ ಸುಮಾರು…

Read More

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ: ಬಂಟ್ವಾಳದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ: ಶುಕ್ರವಾರ ಬೆಳಿಗ್ಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ.ಕಾಡಬೆಟ್ಟು ನಿವಾಸಿ ಯಶೋಧರ ಅವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಯಶೋಧರ ಅವರ ಪತ್ನಿ ಮನೆ ಮಣಿನಾಲ್ಕೂರು ಗ್ರಾಮದ ಅಗರಗಂಡಿಯಾಗಿದ್ದು, ಅವರು ಶುಕ್ರವಾರ ಬೆಳಿಗ್ಗೆ ಸರಪಾಡಿ ಸಮೀಪ ನದಿ ಬದಿಯಲ್ಲಿ ಶರ್ಟ್ ,ಚಪ್ಪಲಿ ಇಟ್ಟು ನೇತ್ರಾವತಿ ನದಿಗೆ ಹಾರಿದ್ದ. ಮಧ್ಯಾಹ್ನ ವೇಳೆ ಬೆಳಕಿಗೆ ಬಂದು ನದಿಯಲ್ಲಿ ಸ್ಥಳೀಯರು ಹುಡುಕಾಡಿದ್ದರು.ಇಂದು ಬೆಳಿಗ್ಗೆ ಸ್ಥಳೀಯ ನಿವಾಸಿ ದೋಣಿ ನಾವಿಕ ಇಸಾಕ್ ಎಂಬವರಿಗೆ ಮೃತದೇಹ ಪತ್ತೆಯಾಗಿದ್ದು,…

Read More

ಕರಾವಳಿಯ ದೈವಾರಾಧನಾ ಪರಂಪರೆಗೆ ಘೋರ ಅಪಚಾರ – ನೇಮದಲ್ಲಿ ಕ್ರಿಶ್ಚಿಯನ್ ವ್ಯಕ್ತಿಯಿಂದ ದೈವ ನರ್ತನ ಸೇವೆ….? : ಪಂಬದ ಸಮುದಾಯದ ಸಂಶೋಧಕಿ ಡಾ. ರತಿ

ಮಂಗಳೂರು: ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ಎಂದೂ ಕೇಳರಿಯದ ಘಟನೆಯೊಂದು ಸಂಭವಿಸಿದ್ದು, ಪವಿತ್ರ ನೇಮದ ಸಂದರ್ಭದಲ್ಲಿ ಅನ್ಯಕೋಮಿನ (ಕ್ರಿಶ್ಚಿಯನ್) ವ್ಯಕ್ತಿಯನ್ನು ದೈವ ನರ್ತನ ಸೇವೆಗೆ ಬಳಿಸಿಕೊಳ್ಳುವ ಮೂಲಕ ಸನಾತನ ಕಟ್ಟುಕಟ್ಟಳೆಗಳನ್ನು ಗಾಳಿಗೆ ತೂರಲಾಗಿದೆ ಎಂದು ತುಳು ವಿದ್ವಾಂಸರು ಹಾಗೂ ಪಂಬದ ಸಮುದಾಯದ ಸಂಶೋಧಕಿ ಡಾ. ರತಿ ಗಂಭೀರ ಆರೋಪ ಮಾಡಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆಯನ್ನು ನೀಡಿ, ದಿನಾಂಕ 01.02.2026ರಂದು ಮಂಗಳೂರಿನ ಬೋಳೂರು ಜಾರಂದಾಯ ದೈವಸ್ಥಾನದಲ್ಲಿ ನಡೆದ ನೇಮದಲ್ಲಿ ಈ ಘಟನೆ ನಡೆದಿದೆ….

Read More

ಮಗಳ ಹುಟ್ಟುಹಬ್ಬದ ಮುನ್ನವೇ ತಂದೆ ಸಾವಿಗೆ ಬಲಿ – ಬಂಟ್ವಾಳದಲ್ಲಿ ದುರ್ಘಟನೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ರಾತ್ರಿ ಸಂಭವಿಸಿದ ಎರಡು ಬೈಕ್‌ಗಳ ನಡುವಿನ ಭೀಕರ ಅಪಘಾತದಲ್ಲಿ ಪ್ರತಿಭಾವಂತ ಯುವ ಛಾಯಾಗ್ರಾಹಕರೊಬ್ಬರು ದುರ್ಮ*ಣಕ್ಕೀಡಾಗಿದ್ದಾರೆ. ಶಂಭೂರು ನಿವಾಸಿಯಾದ ರಕ್ಷಿತ್ ಶೆಟ್ಟಿ (43) ಮೃ*ಪಟ್ಟ ದುರ್ದೈವಿ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಬಂಟ್ವಾಳ ವಲಯದ ಛಾಯಾಗ್ರಾಹಕ ಸಂಘದ ಸಕ್ರಿಯ ಸದಸ್ಯರಾಗಿದ್ದ ರಕ್ಷಿತ್ ಶೆಟ್ಟಿ ಅವರು ವೃತ್ತಿಯಲ್ಲಿ ಅತ್ಯುತ್ತಮ ವಿಡಿಯೋಗ್ರಾಫರ್ ಆಗಿ ಗುರುತಿಸಿಕೊಂಡಿದ್ದರು. ಇಡೀ ಘಟನೆಯಲ್ಲಿ ಅತ್ಯಂತ ನೋವಿನ ಸಂಗತಿಯೆಂದರೆ,…

Read More

ಬೆಂಗಳೂರು : ತುಳು ಚಿತ್ರ ‘ಕಟ್ಟೆಮಾರ್’ 50 ದಿನಗಳ ಸಂಭ್ರಮ: ಹಾಗೂ ಕನ್ನಡದಲ್ಲಿ ಬಿಡುಗಡೆಗೊಳ್ಳಲಿರುವ ಕಟ್ಟೆಮಾರ್ ಚಿತ್ರದ ಸೆಲೆಬ್ರೆಟಿ ಶೋ

ತುಳು ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡ “ಕಟ್ಟೆಮಾರ್” ಚಿತ್ರದ 50 ದಿನಗಳ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಚಿತ್ರದ ನಿರ್ಮಾಪಕರು ಲಂಚುಲಾಲ್ ಕೆ .ಎಸ್ ,ಕನ್ನಡ ಚಲನಚಿತ್ರದ ಖ್ಯಾತ ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಶಿ, ಕನ್ನಡ ನಟಿ ತಾರಾ, ವಾಣಿಶ್ರೀ ಸೇರಿದಂತೆ ಹಲವು ಕಲಾವಿದರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಚಿತ್ರತಂಡದ ಸದಸ್ಯರು, ಕಲಾವಿದರು ಹಾಗೂ ಅಭಿಮಾನಿಗಳು ಸೇರಿಕೊಂಡು ಬೆಂಗಳೂರಿನಲ್ಲಿ ಕೇಕ್ ಕತ್ತರಿಸಿ ಈ ಯಶಸ್ಸನ್ನು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಚಿತ್ರತಂಡದ ಪ್ರಮುಖರು ಭಾಗವಹಿಸಿ, ಪ್ರೇಕ್ಷಕರ ಬೆಂಬಲವೇ…

Read More

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ, ಬೊಳ್ಕಲ್ ಗ್ರಾಮ, ಅತ್ತಾವರ ದೈವಸ್ಥಾನದ ಮೇಲ್ಛಾವಣಿ ಕಾಮಗಾರಿಯ ಗುದ್ದಲಿ ಪೂಜೆ

ದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ, ಬೊಳ್ಕಲ್ ಗ್ರಾಮ, ಅತ್ತಾವರ ದೈವಸ್ಥಾನದ ಮೇಲ್ಛಾವಣಿ ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಹಲವಾರು ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ದಾರಕ್ಕೆ, ಅಭಿವೃದ್ಧಿಗೆ ಹೆಗಲು ಕೊಡುವ ಯೋಗ ಲಭಿಸಿರುವುದು ನನ್ನ ಪಾಲಿನ ಸೌಭಾಗ್ಯವೆಂದೇ ಭಾವಿಸುತ್ತೇನೆ. ಶೀಘ್ರದಲ್ಲಿ ಇಲ್ಲಿನ ಮೇಲ್ಛಾವಣಿ ಕಾಮಗಾರಿಯು ಪೂರ್ಣಗೊಳ್ಳಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಮೋಹನ್ ಪೂಜಾರಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಲಲೇಶ್…

Read More

ಚಿರತೆ ಭೀತಿಯಿಂದ ಗ್ರಾಮಸ್ಥರಲ್ಲಿ ಆತಂಕ – ಅರಣ್ಯ ಇಲಾಖೆಗೆ ಮನವಿ ಸಲ್ಲಿಕೆ

ಕುಂದಾಪುರ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಹಾಗೂ ಸುತ್ತಮುತ್ತಲಿನ ಗ್ರಾಮ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಗಳ ಸಂಚರಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಉಡುಪಿ ವಿಭಾಗದ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಶುಕ್ರವಾರ (13-03-2026) ಬೆಳಿಗ್ಗೆ 11.30ಕ್ಕೆ ಮನವಿ ಸಲ್ಲಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಇನ್ನಂಜೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾತ್ರಿ ವೇಳೆಯಲ್ಲಿ ವಾಸಸ್ಥಾನಗಳ ಹತ್ತಿರ ಚಿರತೆ ಕಾಣಿಸಿಕೊಳ್ಳುತ್ತಿರುವ ಘಟನೆಗಳು ಹಲವು ಬಾರಿ…

Read More
error: Content is protected !!