ಬಂಟ್ವಾಳದಲ್ಲಿ ಮನೆಯಲ್ಲೇ ಮಾದಕ ವಸ್ತು ಮಾರಾಟ: 17.97 ಗ್ರಾಂ MDMA ವಶ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಪ್ರದೇಶದಲ್ಲಿ ಮನೆಯಲ್ಲೇ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ವಾಳದ ನೇರಳಕಟ್ಟೆ ಇಂದಿರಾ ನಗರದಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಅಶ್ರಫ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿ.ಎಂ.ಎ (MDMA) ಅನ್ನು ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತು. ಈ ಮಾಹಿತಿ ಆಧರಿಸಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್…

Read More

ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡವನನ್ನು ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಶರತ್ ಎಸ್, ಬಂಧಿತ ವ್ಯಕ್ತಿ. ದಿನಾಂಕ 24.03.2022 ರ ರಾತ್ರಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022 ಕಲಂ 457, 380 ಐಪಿಸಿ) ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶರತ್ ಎಸ್ (24) ಎಂಬಾತನನ್ನು ಬೆಳ್ಳಾರೆ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ನ್ಯಾಯಾದೀಶರಾದ ಶಿವಣ್ಣ ಹೆಚ್ ಆರ್…

Read More

ಮಂಗಳೂರು – ತಿರುನಲ್ವೇಲಿ ವಾರದ ರೈಲಿಗೆ ಚಾಲನೆ ….!

ಮಂಗಳೂರು – ತಿರುನಲ್ವೇಲಿ ಎಕ್ಸ್‌ಪ್ರೆಸ್ (16707/16708): ತಿರುನಲ್ವೇಲಿಯಿಂದ ಬುಧವಾರ ಅಪರಾಹ್ನ 3.45ಕ್ಕೆ ಹೊರಟು ಸಂಜೆ 5.55ಕ್ಕೆ ಮಧುರೈ ತಲುಪಲಿದೆ. ಗುರುವಾರ ಬೆಳಗ್ಗೆ 6.55ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಗುರುವಾರ ಅಪರಾಹ್ನ 1ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಸಂಜೆ 4.30ಕ್ಕೆ ಮಧುರೈ ತಲುಪಲಿದೆ. ಶುಕ್ರವಾರ ಬೆಳಗ್ಗೆ 7.45ಕ್ಕೆ ತಿರುನಲ್ವೇಲಿ ತಲುಪಲಿದೆ. ತಿರುನಲ್ವೇಲಿ – ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ತಿರುನಲ್ವೇಲಿ ಮತ್ತು ಕರಾವಳಿ ಕರ್ನಾಟಕದ ನಡುವೆ ಕೇರಳದ ಪ್ರಮುಖ ಜಿಲ್ಲೆಗಳ ಮೂಲಕ ಪ್ರಮುಖ ಸಂಪರ್ಕವನ್ನು ಒದಗಿಸುತ್ತದೆ. ಇದು ಕೋವಿಲ್‌ಪಟ್ಟಿ, ಸತ್ತೂರು,…

Read More

ಎಂ ಎ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ರಾಂಕ್ ನೊಂದಿಗೆ ಚಿನ್ನದ ಪದಕ ಪಡೆದ ದೀಕ್ಷಾ.ಟಿ …. !

ಮಂಗಳೂರು: ಪ್ರಸ್ತುತ 2023-2025 ನೇ ಸಾಲಿನ ಎಂ ಎ (ಇತಿಹಾಸ ಮತ್ತು ಪುರಾತತ್ವಶಾಸ್ತ್ರ) ಅಂತಿಮ ಪರೀಕ್ಷೆಯಲ್ಲಿ ದೀಕ್ಷಾ ಟಿ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ. ಇವರು ತಚ್ಚಮ್ಮೆ ಮನೆ,ಪೆರುವಾಯಿ ಗ್ರಾಮದವರಾಗಿದ್ದು ಶ್ರೀ ರಾಜೇಶ್ ಮಣಿಯಾಣಿ ಮತ್ತು ಶ್ರೀಮತಿ ಸುಮಿತ್ರ ದಂಪತಿಗಳ ಪುತ್ರಿಯಾಗಿದ್ದಾರೆ . ಸ್ನಾತಕೋತ್ತರ ಪದವಿಯನ್ನು ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪೂರೈಸಿದ್ದಾರೆ .

Read More

ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ : ವಿಎಸ್ ಗ್ರೂಪ್ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೆ

ಮಂಗಳೂರು: ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾನು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ ಎಂದು ಪಿವಿಎಸ್ ಗ್ರೂಪ್ನ ಅಧ್ಯಕ್ಷೆ ಹಾಗೂ ಆಡಳಿತ ನಿರ್ದೇಶಕಿ ಸರೋಜಿನಿ ಎಂ. ಕುಶೆ ಹೇಳಿಕೆಯನ್ನು ಅವರ ಪರವಾಗಿ ವೈಶ್ಯ ಎಜುಕೇಶನ್ ಸೊಸೈಟಿಯ ಸಂತೋಷ್ ಚಂದ್ರ ಹೇಳಿದರು . ನಗರದ ಪ್ರೆಸ್ ಕ್ಲಬ್ ನಲ್ಲಿ ಸರೋಜಿನಿ ಎಂ. ಕುಶೆ ಅವರ ಅಭಿಪ್ರಾಯವನ್ನು ತಿಳಿಸುತ್ತಾ , ‘ನಮ್ಮ ಜೊತೆಯಲ್ಲಿದ್ದು, ಲೆಕ್ಕಪತ್ರ ನೋಡಿಕೊಳ್ಳುತ್ತಿದ್ದ ಕೆಲ ವ್ಯಕ್ತಿಗಳು ನಮ್ಮ ಸಂಸ್ಥೆ ಹಾಗೂ ಆಸ್ತಿಪಾಸ್ತಿ ಕಬಳಿಸುವ ದುರುದ್ದೇಶದಿಂದ ಕೃಷ್ಣದತ್ತ ಎಂಬ…

Read More

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ. 31 ರಿಂದ ಎ. 2 ರವರೆಗೆ ಶ್ರೀ ಮುಖ್ಯಪ್ರಾಣನ ಶಿಲಾಮೂರ್ತಿ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಧಾರ್ಮಿಕ ಸಮಾರಂಭ … !

ಮಂಗಳೂರು: ಹಿಂದೂ ಬಾಂಧವರ ಐಕ್ಯತೆ ಮತ್ತು ಏಳಿಗೆಯ ಮಹಾ ಸಂಕಲ್ಪದಲ್ಲಿ 19 ಅಡಿ ಎತ್ತರದ ಶ್ರೀ ಮುಖ್ಯಪ್ರಾಣನ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ. 31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಜರಗಲಿದೆ ಎಂದು ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಯಿ ಮಠದ ಪೀಠಾಧಿಪತಿ ಶ್ರೀ ಸಾಯಿ ಈಶ್ವರ್ ಗುರೂಜಿ ಹೇಳಿದರು. ಅವರು ನಗರದ ಪತ್ರಿಕಾ ಭವನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸುಮಾರು 11 ವರ್ಷಗಳಿಂದ ಧಾರ್ಮಿಕ,…

Read More

ಮಾರ್ಚ್ 13 ಮತ್ತು 14 ರಂದು ಇಂಡಿಯಾನಾ ಆಸ್ಪತ್ರೆಯಲ್ಲಿ ಮೂತ್ರಪಿಂಡ ತಪಾಸಣೆ ರಿಯಾಯತಿ ದರದಲ್ಲಿ …. !

ಮಂಗಳೂರು: ಇಂದು ಪ್ರಪಂಚದಾದಂತ್ಯ ವಿಶ್ವ ಮೂತ್ರಪಿಂಡ ದಿನವನ್ನು ಆಚರಿಸಲಾಗುತ್ತಿದ್ದು ಇದು ಮೂತ್ರಪಿಂಡದ ಆರೋಗ್ಯ ರಕ್ಷಣೆಯ ಬಗ್ಗೆ ಹೇಳುತ್ತದೆ . ಎಲ್ಲರಿಗೂ ಮೂತ್ರಪಿಂಡದ ಆರೋಗ್ಯ – ಜನರ ಆರೈಕೆ, ಗ್ರಹವನ್ನು ರಕ್ಷಿಸುವುದು” ಎಂಬ ಥೀಮ್ ನಂತೆ ಜಾಗತಿಕವಾಗಿ ಈ ದಿನವನ್ನು ಆಚರಿಸಲಾಗುತ್ತಿದ್ದು ಈ ಹಿನ್ನಲೆಯಲ್ಲಿ ನಮ್ಮ ಆಸ್ಪತ್ರೆಯು ಮಾರ್ಚ್ 13 ಮತ್ತು 14 ರಂದು 2 ದಿನಗಳವರೆಗೆ ರೂ. 2250/= ರ ಮೂತ್ರಪಿಂಡ ತಪಾಸಣೆ / ಸ್ಕ್ರೀನಿಂಗ್ ಪ್ಯಾಕೇಜ್ ಅನ್ನು ಕೇವಲ ರೂ. 999/= ಗೆ ನೀಡುತ್ತಿದೆ ಎಂದು…

Read More

ರಾಮಕುಂಜದಲ್ಲಿ ಬಾವಿ ತೋಡುವ ವೇಳೆ ಸ್ಪೋಟಕ ಸ್ಫೋಟ, ಮನೆಗಳಿಗೆ ಹಾನಿ – ಡಿವೈಎಸ್‌ಪಿ ಭೇಟಿ

ಕಡಬ : ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಸ್ಫೋಟಿಸಿರುವುದರಿಂದ ಮನೆಗಳಿಗೆ ಹಾನಿಯಾಗಿರುವ ರಾಮಕುಂಜ ಗ್ರಾಮದ ಕಂಪಕ್ಕೆ ಬೆಳ್ತಂಗಡಿ ಡಿವೈಎಸ್‌ಪಿ ರೋಹಿಣಿ ಸಿ.ಕೆ.ಅವರು ಮಾ.೧೧ರಂದು ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮಕುಂಜ ಗ್ರಾಮದ ಕಂಪ ಎಂಬಲ್ಲಿ ಮೈಸೂರು ನಿವಾಸಿ ಸೋಮಶೇಖರ ಎಂಬವರು ತಮ್ಮ ಜಾಗದಲ್ಲಿ ನೀರಿಗಾಗಿ ಬಾವಿ ತೋಡುವ ಕೆಲಸ ಮಾಡಿಸುತ್ತಿದ್ದು ಈ ವೇಳೆ ಕೋಡಿಂಬಾಳ ನಿವಾಸಿ ಶಿವರಾಮ ಎಂಬವರು ಬಾವಿಯೊಳಗೆ ಕಲ್ಲು ಹುಡಿ ಮಾಡಲು ಸ್ಫೋಟಕ ಸ್ಫೋಟಿಸಿದ ಪರಿಣಾಮ ಪರಿಸರದ ವಾಮನ ಮೂಲ್ಯ ಹಾಗೂ ಕೆ.ಟಿ.ಮೋಹನ…

Read More

ಮೂತ್ರಪಿಂಡ ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ : ನೆಫ್ರಾಲಜಿ ತಜ್ಞ, ಡಾ ಅಶೋಕ್ ಭಟ್

ಮಂಗಳೂರು: ವಿಶ್ವ ಕಿಡ್ನಿ ದಿನವನ್ನು ಪ್ರತಿ ವರ್ಷ ಮಾರ್ಚ್ ತಿಂಗಳ ಎರಡನೇ ಗುರುವಾರದಂದು ವಿಶ್ವ ಕಿಡ್ನಿ ದಿನವನ್ನು ಆಚರಿಸಲಾಗುತ್ತದೆ . ವಿಶ್ವ ಕಿಡ್ನಿ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ಮಂಗಳೂರು , ಶೀಘ್ರು ರೋಗ ಪತ್ತೆ, ಚಿಕಿತ್ಸೆ ಮತ್ತು ಕಿಡ್ನಿ ಸಮಸ್ಯೆಯ ದೀರ್ಘ ಕಾಲದ ನಿರ್ವಹಣೆಯನ್ನು ಗುರಿಯಾಗಿಸಿ ತನ್ನ ಸಮಗ್ರ ಕಿಡ್ನಿ ಆರೈಕೆಯನ್ನು ನೆಫ್ರಾಲಜಿ ವಿಭಾಗವು ದಿನದ 24 ಗಂಟೆಯೂ ನೀಡುತ್ತಾ ಬಂದಿದೆ ಎಂದು ನೆಫ್ರಾಲಜಿ ತಜ್ಞ, ಡಾ ಅಶೋಕ್ ಭಟ್ ತಿಳಿಸಿದರು . ಅವರು ನಗರದ…

Read More

ಮಾ.15ರಂದು ಪುತ್ತೂರಿನಲ್ಲಿ ಜಿಲ್ಲಾ ಶೈಕ್ಷಣಿಕ ಸಮಾವೇಶ, ಪದಗ್ರಹಣ ಹಾಗೂ ಪ್ರಶಸ್ತಿ ಪ್ರದಾನ

ಮಂಗಳೂರು: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಪುತ್ತೂರು ಮತ್ತು ಕಡಬ ತಾಲೂಕು ಘಟಕಗಳ ಆಶ್ರಯದಲ್ಲಿ ಜಿಲ್ಲೆಯ ಶಿಕ್ಷಣ ಇಲಾಖೆಯ ನೌಕರರ ಜಿಲ್ಲಾ ಶೈಕ್ಷಣಿಕ ಸಮಾವೇಶ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 15ರಂದು ಪುತ್ತೂರಿನ ಬಂಟರ ಭವನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಪ್ರೇಮನಾಥ ಶೆಟ್ಟಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಕಾರ್ಯಕ್ರಮವನ್ನು…

Read More
error: Content is protected !!