ಆಕಸ್ಮಿಕ ಬೆಂಕಿ ಅವಘಡ: ಗುಜರಿ ಅಂಗಡಿ ಸುಟ್ಟು ಕರಕಲು
ಮಂಗಳೂರು: ಆಕಸ್ಮಿಕ ಬೆಂಕಿ ಅವಘಡಕ್ಕೆ ಗುಜರಿ ಅಂಗಡಿ ಸುಟ್ಟು ಕರಕಲಾಗಿದೆ.ಈ ಘಟನೆ ಉಳ್ಳಾಲದ ರಾಷ್ಟ್ರೀಯ ಹೆದ್ದಾರಿ 66 ರ ಸೋಮೇಶ್ವರ ಉಚ್ಚಿಲ ಜಂಕ್ಷನ್ ಬಳಿ ಸಂಭವಿಸಿದೆ. ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಆದಿತ್ಯವಾರ ಮಧ್ಯಾಹ್ನ ತಲಪಾಡಿ ಉಚ್ಚಿಲದ ಅಂಡರ್ ಪಾಸ್ ಬಳಿಯ ಇಕ್ಬಾಲ್ ಹಾಗೂ ಇಬ್ರಾಹಿಂ ಅವರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿರುವಾಗಲೇ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಹೊತ್ತಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದ್ದು ದಟ್ಟ ಹೊಗೆಯು ಉಚ್ಚಿಲ, ತಲಪಾಡಿ,…