ಕರಾವಳಿಯ ಜನಪ್ರಿಯ ನಾಯಕರು ಜೆಡಿಎಸ್‌ಗೆ ಸೇರ್ಪಡೆ: ಎಂ.ಬಿ. ಸದಾಶಿವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭವಿಷ್ಯದ ದೃಷ್ಟಿಯಿಂದ ಜೆಡಿಎಸ್ ಪಕ್ಷವನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಕರಾವಳಿ ಭಾಗದ ಕೆಲವು ಜನಪ್ರಿಯ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಂ.ಬಿ. ಸದಾಶಿವ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನಪ್ರಿಯ ನಾಯಕರು ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಶಶಿರಾಜ್ ಶೆಟ್ಟಿ ಕೊಳಂಬೆ, ಯೋಗೀಶ್ ಕುಮಾರ್ ಜೆಪ್ಪು ಮತ್ತು ಧರ್ಮೇಂದ್ರ ಅವರು ಮಾರ್ಚ್ 5ರಂದು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಹೆಚ್.ಡಿ….

Read More

ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಭವ್ಯ ಇಫ್ತಾರ್ ವ್ಯವಸ್ಥೆ

ಪವಿತ್ರ ರಂಜಾನ್ ಮಾಸ ಆರಂಭವಾಗುತ್ತಿದ್ದಂತೆ ಎಲ್ಲೆಡೆ ಸಂಭ್ರಮದ ವಾತಾವರಣ ಮನೆಮಾಡಿದೆ. ಈ ನಡುವೆ ಮಂಗಳೂರಿನ ದೇರಳಕಟ್ಟೆಯ ಪ್ರಸಿದ್ಧ ಬದ್ರಿಯಾ ಜುಮಾ ಮಸೀದಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಸಾರ್ವಜನಿಕರಿಗಾಗಿ ಬೃಹತ್ ಇಫ್ತಾರ್ ವ್ಯವಸ್ಥೆಯನ್ನು ಮಾಡಲಾಗಿದೆ. ಮಂಗಳೂರು ತಾಲೂಕಿನ ದೇರಳಕಟ್ಟೆ ಅಂದ್ರೆ ಅದೊಂದು ಪ್ರಮುಖ ಸಿಟಿ ಭಾಗ. ಇಲ್ಲಿ ನಿತ್ಯವೂ ಸಾವಿರಾರು ಜನ ಓಡಾಡುತ್ತಿರುತ್ತಾರೆ. ಇದನ್ನೇ ಗಮನದಲ್ಲಿಟ್ಟುಕೊಂಡು, ಇಲ್ಲಿನ ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ಸಮಿತಿಯವರು ಕಳೆದ ಹಲವಾರು ವರ್ಷಗಳಿಂದ ಅತ್ಯಂತ ವ್ಯವಸ್ಥಿತವಾಗಿ ಇಫ್ತಾರ್ ಕೂಟವನ್ನು ಆಯೋಜಿಸುತ್ತಾ ಬಂದಿದ್ದಾರೆ….

Read More

ಪಳ್ಳಿ ಫಿಶ್ ಮೀಲ್ ವಿರುದ್ಧ ಜಿಲ್ಲಾಧಿಕಾರಿ ಸ್ಪಂದನೆ: ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ

ಕಾರ್ಕಳ: ಪಳ್ಳಿ ಗ್ರಾಮದ ಕೊಡಿಮಲೆ ಪರಿಸರದಲ್ಲಿ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿರುವ ಅನಧಿಕೃತ ಫಿಶ್ ಮೀಲ್ ಘಟಕ ನಿರ್ಮಾಣದ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸ್ಪಂದಿಸಿದ್ದು, ನಿಯಮಬಾಹಿರವಾಗಿ ಕಾಮಗಾರಿ ನಡೆಯುತ್ತಿದ್ದರೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಮಾರ್ಚ್ 6ರಂದು ಸುಮಾರು 50ಕ್ಕೂ ಹೆಚ್ಚು ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಯವರು, “ಯಾವುದೇ ಬೃಹತ್ ಕೈಗಾರಿಕೆ ಅಥವಾ ಕಟ್ಟಡ ನಿರ್ಮಾಣಕ್ಕೆ ಸ್ಥಳೀಯ ಗ್ರಾಮ ಪಂಚಾಯತ್‌ನ ಪೂರ್ವಾನುಮತಿ…

Read More

ಸಬಳೂರು ಅಯೋಧ್ಯಾನಗರ ಶ್ರೀರಾಮ ಭಜನಾ ಮಂದಿರಕ್ಕೆ ಧರ್ಮಸ್ಥಳದ ಅನುದಾನ ಚೆಕ್ ವಿತರಣೆಸಂಸ್ಕಾರ–ಸಂಸ್ಕೃತಿ ಉಳಿವಿಗೆ ಭಜನಾ ಮಂದಿರಗಳು ಪ್ರೇರಣೆ: ಪ್ರಕಾಶ್ ಕುಮಾರ್

ಕಡಬ, ಮಾ.6: ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯ ಉಳಿವಿಗೆ ಭಜನಾ ಮಂದಿರಗಳು ಮಹತ್ತರ ಕೊಡುಗೆ ನೀಡುತ್ತಿದ್ದು, ಸಮಾಜದಲ್ಲಿ ಧರ್ಮಜಾಗೃತಿ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಹೇಳಿದರು. ಅವರು ಶುಕ್ರವಾರ ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಭಜನಾ ಮಂದಿರದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬಿಡುಗಡೆಯಾದ ₹1 ಲಕ್ಷ ಅನುದಾನದ ಚೆಕ್ ವಿತರಣಾ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು. ಮಕ್ಕಳಿಗೆ…

Read More

ಮಲ್ಪೆ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಉಡುಪಿ: ಮಲ್ಪೆ ಬಂದರಿನ ದಕ್ಕೆಯ ಸಮೀಪ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.ಮೃತ ವ್ಯಕ್ತಿಯ ಹೆಸರು ಮತ್ತು ವಿಳಾಸ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಯ ಕುರಿತು ಮಾಹಿತಿ ಪಡೆದ ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ನಾಗರಾಜ್ ಮತ್ತು ಮಲ್ಲಿಕಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಮೃತದೇಹವನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸಲಾಯಿತು. ಈ ಕಾರ್ಯದಲ್ಲಿ ಹರೀಶ್ ಪೂಜಾರಿ ಹಾಗೂ ಭುವನೇಶ್…

Read More

ಪವನ್ ಕುಮಾರ್ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ – ಪ್ರಮೋದ್ ಮಧ್ವರಾಜ್ ಅವರಿಗೆ “ಬಡವರ ಬಂದು” ಪ್ರಶಸ್ತಿ

ಉಡುಪಿ: ಪವನ್ ಕುಮಾರ್ ಚಾರಿಟೇಬಲ್ ಟ್ರಸ್ಟ್‌ನ ಉದ್ಘಾಟನಾ ಕಾರ್ಯಕ್ರಮವು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರ ಅಮ್ಮುಂಜೆ ನಿವಾಸದಲ್ಲಿ ನಡೆಯಿತು. ಟ್ರಸ್ಟ್ ಅನ್ನು ಪ್ರಮೋದ್ ಮಧ್ವರಾಜ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಮಾಜಿ ಸಚಿವರು, ಕೊಡುಗೈ ದಾನಿ ಹಾಗೂ ಬಡವರ ನೆರವಿಗೆ ಸದಾ ಮುಂದಾಗುವ ವ್ಯಕ್ತಿಯಾಗಿ ಗುರುತಿಸಿಕೊಂಡಿರುವ ಪ್ರಮೋದ್ ಮಧ್ವರಾಜ್ ಅವರಿಗೆ ಸಂಸ್ಥಾಪಕ ಪವನ್ ಕುಮಾರ್ ಶಿರ್ವ ಅವರು “ಬಡವರ ಬಂದು” ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥಾಪಕ ಪವನ್…

Read More

ಸಮಾಜ ಸೇವಾ ರತ್ನ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

ಬೆಂಗಳೂರಿನ ದಿವ್ಯ ಚೇತನ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ 2026ನೇ ಸಾಲಿನ ಪ್ರತಿಷ್ಠಿತ “ಸಮಾಜ ಸೇವಾ ರತ್ನ” ಪ್ರಶಸ್ತಿಗೆ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 11ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ತುಮಕೂರಿನ ಶ್ರೀ ವಾಲ್ಮೀಕಿ ಆಶ್ರಮದ ಶ್ರೀ ಶ್ರೀ ಸಂಜಯ…

Read More

ಸಿದ್ದರಾಮಯ್ಯ ಸರ್ಕಾರದ ಬಜೆಟ್ ಕುರಿತು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರದ ಇತ್ತೀಚಿನ ಬಜೆಟ್ ಕುರಿತು ಮಾಜಿ ಶಾಸಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಟೀಕಾತ್ಮಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಸಾಲದ ಪ್ರಮಾಣ ಹೆಚ್ಚುತ್ತಿರುವುದು ಮತ್ತು ಕೆಲವು ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಕರ್ಣಿಕ್ ಅವರ ಹೇಳಿಕೆಯ ಪ್ರಕಾರ, ರಾಜ್ಯದ ಒಟ್ಟು ಸಾಲವು ಸುಮಾರು ₹8.24 ಲಕ್ಷ ಕೋಟಿಗೆ ಏರಿದ್ದು, ಬಜೆಟ್ ಗಾತ್ರವು ಸುಮಾರು ₹4.48 ಲಕ್ಷ ಕೋಟಿಯಷ್ಟಿದೆ. ಈ ಸಾಲಿನಲ್ಲಿ ಬಹಿರಂಗ…

Read More

ಸಿದ್ದರಾಮಯ್ಯ ಅವರ 17ನೇ ದಾಖಲೆಯ ಬಜೆಟ್: ಅಭಿವೃದ್ಧಿಗೆ ದಿಕ್ಕು ತೋರಿದ ಕಾರ್ಯಕ್ರಮಗಳು – ಕೆ. ಹರೀಶ್ ಕುಮಾರ್

ಮಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ ದಾಖಲೆಯ 17ನೇ ಬಜೆಟ್‌ನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಹಲವಾರು ಮಹತ್ವದ ಕಾರ್ಯಕ್ರಮಗಳನ್ನು ರೂಪಿಸಿರುವುದು ಶ್ಲಾಘನೀಯ ಎಂದು ಕೆ . ಹರೀಶ್ ಕುಮಾರ್ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ರೈತ ಕಲ್ಯಾಣ, ಕೈಗಾರಿಕಾ ಪ್ರಗತಿ, ಪ್ರವಾಸೋದ್ಯಮ, ನೀರಾವರಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರ, ಗ್ರಾಮೀಣಾಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ…

Read More

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ರಾಜ್ಯ ಬಜೆಟ್: ಶಾಸಕ ಮಂಜುನಾಥ ಭಂಡಾರಿ ಶ್ಲಾಘನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ ಕರಾವಳಿಯ ಆರ್ಥಿಕತೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವಂತಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಕುರಿತು ಸಮಗ್ರ ವಿಶ್ಲೇಷಣೆ ನಡೆಸಿರುವ ಅವರು, ಇದು ಕೇವಲ ಅಂಕಿ-ಅಂಶಗಳ ಬಜೆಟ್ ಆಗಿರದೆ, ದೂರದೃಷ್ಟಿಯ ‘ಅಭಿವೃದ್ಧಿ ಪತ್ರ’ವಾಗಿದೆ ಎಂದು ಬಣ್ಣಿಸಿದ್ದಾರೆ. ಕರಾವಳಿ ಅಭಿವೃದ್ಧಿಗೆ ಹೊಸ ಆಯಾಮ:ಬಜೆಟ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಗೆ ಪೂರಕವಾದ ಅಂಶಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, “ಮೀನುಗಾರಿಕೆ…

Read More
error: Content is protected !!