ಬ್ರಹ್ಮರಕೋಟ್ಲು ಟೋಲ್ ಗೇಟ್ ಮುಚ್ಚಲು ಬಂಟ್ವಾಳದಲ್ಲಿ ಭಾರೀ ಧರಣಿ
ಬಂಟ್ವಾಳ: ಕಳೆದ 23 ವರ್ಷಗಳಿಂದ ಟೋಲ್ ಸಂಗ್ರಹಿಸುತ್ತಿರುವ ,ಅಂತರದ ಸಹಿತ ಹಲವು ನಿಯಮಗಳನ್ನು ಉಲ್ಲಂಘಿಸಿರುವ ಬ್ರಹ್ಮರಕೋಟ್ಲು ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ,ಮಾಜಿ ಸಚಿವ ಬಿ.ರಮಾನಾಥ ರೈ ನೇತ್ರತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಧರಣಿ ನಡೆಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ ನಿಯಮಬಾಹಿರವಾದ ,ಕಾನೂನು ಬಾಹಿರವಾದ ಸುಲಿಗೆಯ ಕೇಂದ್ರವಾಗಿರುವ ಬ್ರಹ್ಮರಕೋಟ್ಲು ಟೋಲ್ ತೆರವು ಹೋರಾಟಕ್ಕೆ ಎಲ್ಲರ ಸಹಮತವಿದೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.ಟೋಲ್ ತೆರವು ಮಾಡಿ ಎಂಬುದು ನಮ್ಮ ಪೂರ್ಣಪ್ರಮಾಣದ ನ್ಯಾಯಯುತವಾದ ಬೇಡಿಕೆಯಾಗಿದೆ….
