ಮಿಥುನ್ ರೈ ಅವರ ಸಮಾಜ ಸ್ಪಂದನೆಯೇ ಸ್ಪೂರ್ತಿ : ಅಶೋಕ್ ಪೂಜಾರ್

ಮೂಲ್ಕಿ: ಸಮಾಜದ ಎಲ್ಲ ವರ್ಗದ ಜನರೊಂದಿಗೆ ಸದಾ ಬೆರೆತು ಸಾಮಾಜಿಕ ಸ್ಪಂದನೆ ನೀಡುವ ಯುವನೇತಾರ ಮಿಥುನ್ ರೈ ಅವರೇ ನಮಗೆ ಸ್ಪೂರ್ತಿಯಾಗಿದ್ದು ಅವರ ಹುಟ್ಟು ಹಬ್ಬದ ದಿನದಂದು ಸಮಾಜದ ಚಿಂತನೆ ಮಾಡುವ ಅವಕಾಶ ನಮಗೆಲ್ಲರಿಗೂ ಸಿಕ್ಕಿದೆ ಎಂದು ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷ ಅಶೋಕ್ ಪೂಜಾರ್ ಹೇಳಿದರು. ಅವರು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಣ್ಣು ಹಂಪಲನ್ನು ವಿತರಿಸಿ ಮಾತನಾಡಿದರು. ಆಸ್ಪತ್ರೆಯ ಡಾ….

Read More

HORN’ ಹಾರ್ನ್’ ಕಿರು ಚಿತ್ರದ ಮುಹೂರ್ತ ಸಮಾರಂಭ.

ಮಂಗಳೂರು : ಈಗ ಪ್ರತಿಭಾವಂತ ಯುವಕರು ಸಿನಿಮಾ ರಂಗಕ್ಕೆ ಸೇರಿಕೊಳ್ಳುವ ಮೊದಲು ಈ ರೀತಿ ಕಿರುಚಿತ್ರ ಮಾಡುವುದು ವಾಡಿಕೆ ಆಗಿದೆ ಅದರಂತೆಯೇ ಕಿರುಚಿತ್ರಕ್ಕೆ ಬೇಡಿಕೆ ಕೂಡಾ ಬಂದಿದೆ. ನಾವು ಈಗ ಹೇಳುತ್ತಿರುವ ಕಿರುಚಿತ್ರದಲ್ಲಿ ತುಂಬಾ ವಿಶೇಷಕರ ಸಂಗತಿಗಳಿವೆ. ಆ ವಿಶೇಷಕರ ವಿಷಯಗಳಿಂದ ತುಂಬ ಸದ್ದು ಮಾಡುತ್ತಿರುವ ಕಿರುಚಿತ್ರದ ಹೆಸರು HORN’ ಹಾರ್ನ್’. ಈ ಕಿರು ಚಿತ್ರದ ಮುಹೂರ್ತ ಸಮಾರಂಭ ಶಕ್ತಿನಗರದ ಮಹಾ ಗಣಪತಿ ದೇವಸ್ಥಾನದಲ್ಲಿ ನಡೆಯಿತು.ಉಮೇಶ್ ಶೆಣೈಯವರು ಈ ಕಿರುಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರು. ಹಾರ್ನ್…

Read More

ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದ ಸ್ಥಳೀಯರು, ಶಾರದೆಯನ್ನ ರಸ್ತೆಯಲ್ಲಿರಿಸಿ ಪ್ರತಿಭಟನೆ ನಿರತರಾದ ಉಳ್ಳಾಲ ಜನರು …. !

ಮಂಗಳೂರು : ನಿನ್ನೆ ರಾತ್ರಿ ನಡೆದ ದಸರಾ ಶೋಭಾಯಾತ್ರೆಯಲ್ಲಿ ಮಧ್ಯರಾತ್ರಿ ಆಗುತ್ತಿದ್ದಂತೆ ಪೊಲೀಸರು ಟ್ಯಾಬ್ಲೊಗಳ ಧ್ವನಿವರ್ಧಕ ಸ್ಥಗಿತಗೊಳಿಸಿದ್ದು ಪೋಲೀಸರು ಮತ್ತು ಸಾರ್ವಜನಿಕರ ನಡುವೆ ಘರ್ಷಣೆಗೆ ಕಾರಣವಾಯಿತು.ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮೂವರು ಯುವಕರನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದರು. ಬಂಧಿತರನ್ನ ಬಿಡುಗಡೆ ಮಾಡಲು ಆಗ್ರಹಿಸಿ ಶೋಭಾಯಾತ್ರೆ ಸ್ಥಗಿತಗೊಳಿಸಿ ಠಾಣೆಯ ಎದುರಲ್ಲಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.ಬಿಜೆಪಿ ಮುಖಂಡರ ಮಧ್ಯಪ್ರವೇಶದಿಂದ ಪೊಲೀಸರು ಇಬ್ಬರು ಯುವಕರನ್ನು ಬಿಡುಗಡೆಗೊಳಿಸಿದರು. ಉಳ್ಳಾಲದ ಶಾರದಾ ನಿಕೇತನದಲ್ಲಿ ಪೂಜಿಸಲ್ಪಟ್ಟ ಸಾರ್ವಜನಿಕ ಶಾರದಾ ವಿಗ್ರಹದ ಜಲಸ್ತಂಭನದ ಪ್ರಯುಕ್ತ ನಡೆದ…

Read More

ಸಿದ್ದರಾಮಯ್ಯ ಸಿಎಂ ಹುದ್ದೆ ಕಳೆದುಕೊಳ್ಳುತ್ತಾರೆ ನಿಜವಾಗುತ್ತಾ ಆರ್.ಅಶೋಕ್ ನುಡಿಯುತ್ತಿರುವ ಭವಿಷ್ಯ …… ?

ಬೆಳಗಾವಿ: ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಸಿದ್ದರಾಮಯ್ಯ ಸಿ. ಎಂ ಹುದ್ದೆ ಕಳೆದುಕೊಳ್ಳುವುದು ನೂರಕ್ಕೆ ನೂರರಷ್ಟು ನಿಜ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ . ಬೆಳಗಾವಿಯಲ್ಲಿ ಮಾತನಾಡಿದ ಅವರು, “ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದ ಆಗಿರುವುದು ನಿಜ. ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಕಾಂತ್ರಿ ಅಂತ ಹೇಳಿ ಒಬ್ಬರು ಸಚಿವರು ಈಗ ಮನೆಗೆ ಹೋಗಿದ್ದಾರೆ. ಒಪ್ಪಂದ ಆಗಿರೋದು ನಿಜ. ಈಗ ಜಗಳ ಆರಂಭವಾಗಿದೆ” ಎಂದು ತಿಳಿಸಿದ್ದಾರೆ.“ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ, ಡಿಕೆಶಿ ಹಠ ಬಿಡ್ತಿಲ್ಲ. ಕಾಂಗ್ರೆಸ್ ಜಗಳದಲ್ಲಿ ಸರ್ಕಾರ ಪತನವಾದ್ರೆ…

Read More

ಉಕ್ಕಿನಡ್ಕದಲ್ಲಿರುವ ಕಾಸರಗೋಡು ಮೆಡಿಕಲ್ ಕಾಲೇಜಿನ ಬಹುಕಾಲದ ಬೇಡಿಕೆಯ ಎಂಬಿಬಿಎಸ್ ವಿಷಯಕ್ಕೆ ಚಾಲನೆ ನೀಡಿದ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಾಸರಗೋಡು: ಜನರ ಬಹುಕಾಲದ ಕಾತರಕ್ಕೆ ಇಂದು ತೆರೆ ಬಿದ್ದಿದೆ . ಉಕ್ಕಿನಡ್ಕದಲ್ಲಿರುವ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಅಧ್ಯಯನ ವಿಷಯ ಆರಂಭಗೊಂಡಿದ್ದು ವಿದ್ಯಾರ್ಥಿಗಳಲ್ಲಿ ಸಂತಸವನ್ನು ಮೂಡಿಸಿದೆ . ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಉಕ್ಕಿನಡ್ಕದಲ್ಲಿರುವ ಮೆಡಿಕಲ್ ಕಾಲೇಜು ಕಟ್ಟಡದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ನೆರವೇರಿಸಿದರು .ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದರು.ಜಿಲ್ಲಾಧಿಕಾರಿ ಇಂಬ ಶೇಖರ್ ಸ್ವಾಗತಿಸಿದರು. ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್,ಉದುಮ ಶಾಸಕ ಸಿ.ಎಚ್.ಕುಂಞಂಬು,…

Read More

ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯ ಮುಟ್ಟುಗೋಲು

ಮಂಗಳೂರು:ಬಂಟ್ವಾಳ : ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ಪ್ರಕರಣ ವರದಿಯಾಗಿದೆ. ದ.ಕ. ಜಿಲ್ಲೆಯಲ್ಲಿ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಸಮೀಪದ ಪಾಡಿ ಎಂಬಲ್ಲಿ ನಡೆದಿದೆ. ಪುದು ಗ್ರಾಮದ ಪಾಡಿ ನಿವಾಸಿ ಹಸನಬ್ಬಗೆ ಸೇರಿದ ಮನೆಯನ್ನು ಅಕ್ರಮ ಕಸಾಯಿ ಖಾನೆ ನಡೆಸಿದ ಆರೋಪದಲ್ಲಿ ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ.ಹಸನಬ್ಬ ವಿರುದ್ಧ ಗೋ ಕಳವು, ಗೋವಧೆಯಂತಹ ಪ್ರಕರಣಗಳು ದಾಖಲಾಗಿವೆ. ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ…

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ದ ಭವ್ಯ ಶೋಭಾಯಾತ್ರೆ.

ಮಂಗಳೂರು: ನಗರವೆಲ್ಲ ಬೆಳಕಿನ ಶೃಂಗಾರದಿಂದ ಕಂಗೊಳಿಸುತ್ತಿದ್ದ ಹಾಗೂ ಭಕ್ತಿ ಭಾವದ ಸಮ್ಮಿಲನದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ದ ಭವ್ಯ ಶೋಭಾಯಾತ್ರೆ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಗುರುವಾರ ಸಂಜೆ ಆರಂಭಗೊಂಡು, ಶುಕ್ರವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು. ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಜರಗಿದ ಭವ್ಯ ಶೋಭಾಯಾತ್ರೆಯನ್ನು ಸಹಸ್ರಾರು ಜನರು ಕಣ್ಣುಂಬಿಕೊಂಡರು. ಶ್ರೀ ಕ್ಷೇತ್ರ ಕುದ್ರೋಳಿಯಿಂದ ಗುರುವಾರ ಸಂಜೆ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ…

Read More

ಡಿ ಎನ್ ಎ ಪರೀಕ್ಷೆಯಲ್ಲಿ ತಂದೆಯೆಂದು ಸಾಬೀತಾದ ಕೃಷ್ಣ ಜಿ ರಾವ್ ಮದುವೆಯಾಗಲು ಹಿಂದೇಟು ಹಾಕುವುದೇಕೆ ….. ? ; ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ

ಮಂಗಳೂರು: ಕೃಷ್ಣ ಜಿ ರಾವ್ನ ಡಿ ಎನ್ ಎ ಪರೀಕ್ಷೆಯ ಮೂಲಕ ಈತನದ್ದೇ ಮಗುವೆನ್ನುವ ಸತ್ಯ ಇದೀಗ ಹೊರ ಬಂದಿದೆ , ಈತನೇ ತಂದೆ ಎಂದು ಸಾಬೀತಾದರೂ ಕೂಡ ಬಾಲಕಿಯನ್ನು ವಿವಾಹವಾಗಲು ಹಿಂದೇಟು ಹಾಕುತ್ತಿದ್ದಾನೆ , ಈ ಹಿಂದೂ ಹೆಣ್ಣು ಮಗಳಿಗೆ ಆದ ಅನ್ಯಾಯವನ್ನು ಯಾವ ಹಿಂದೂ ಮುಖಂಡರಾಗಲಿ , ಸ್ವಾಮೀಜಿಗಳಾಗಲಿ , ರಾಜಕೀಯ ವ್ಯಕ್ತಿಗಳಾಗಲಿ ಮಾತನಾಡದೇ ಇರುವುದು ದುರಂತ . ಆದರೆ ಶ್ರೀಮಂತ , ರಾಜಕೀಯವಾಗಿ ಪ್ರಬಲ ಕುಟುಂಬದ ಹೆಣ್ಣಾಗಿದ್ದರೆ ಈ ಅನ್ಯಾಯ ಆಗುತ್ತಿತ್ತಾ…. ?…

Read More

ಬಂಟ್ವಾಳ: ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬಂಟ್ವಾಳ, ಅ. 03 : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್ ನಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್ ಮೂಲ್ಯ (44) ಮೃತ ದುರ್ದೈವಿ.ಲೋಕೇಶ್ ಅವರು ಕಲ್ಲಡ್ಕದ ನಾಯರ ಪೆಟ್ರೋಲ್ ಪಂಪ್ ನ ಮುಂಭಾಗದಲ್ಲಿ ರಸ್ತೆಯನ್ನು ದಾಟುವ ವೇಳೆ ಅತೀ ವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೋಕೇಶ್…

Read More

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಕಾರ್ಯಕ್ರಮ.

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಕಾರ್ಯಕ್ರಮ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮಹಾತ್ಮ ಗಾಂಧಿ ಅವರು ಬ್ರಿಟಿಷರ, ದಬ್ಬಾಳಿಕೆ, ದೌರ್ಜನ್ಯವನ್ನು ಮೆಟ್ಟಿನಿಂತು ದೇಶದ ಜನತೆಯ ಪ್ರೀತಿ, ವಿಶ್ವಾಸಗಳಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಅವರ ನಡೆ-ನುಡಿ, ಚಿಂತನೆ, ಆದರ್ಶ, ಜೀವನ ಶೈಲಿ ದೇಶದಲ್ಲಿ ಇನ್ನೂ ಜೀವಂತವಾಗಿದ್ದರಿಂದ ಪ್ರಜಾಪ್ರಭುತ್ವ ಉಳಿದಿದೆ. ಗಾಂಧಿ…

Read More
error: Content is protected !!