ಕಡಲ ನಗರಿಯಲ್ಲಿ ನವರಾತ್ರಿ ಸಮಾಪ್ತಿಗೆ ಕ್ಷಣಗಣೆಯ ರಾತ್ರಿ ….!!!

ಮಂಗಳೂರು: ಕರಾವಳಿಯಲ್ಲಿ ನವರಾತ್ರಿ ಸಂಭ್ರಮ ಇಂದು ರಾತ್ರಿ ಸಮಾರೋಪಗೊಳ್ಳುತ್ತಿದೆ. ನವರಾತ್ರಿ ಹಬ್ಬ, ಕುದ್ರೋಳಿ ದಸರಾ ಮತ್ತು ಉಚ್ಚಿಲ ದಸರಾಗಳು ಕರಾವಳಿಗೆ ಬಹು ಸಂಖ್ಯೆಯಲ್ಲಿ ಭಕ್ತರು, ಯಾತ್ರಿಕರನ್ನು ಆಕರ್ಷಿಸಿವೆ. ಉಡುಪಿಯ ಕೊಲ್ಲೂರು, ಮಂಗಳೂರಿನ‌ ಮಂಗಳಾದೇವಿ ಕ್ಷೇತ್ರ ಸೇರಿದಂತೆ ಸಾಂಪ್ರದಾಯಿಕ ನವರಾತ್ರಿ ಆಚರಣೆ ಜಾರಿಯಲ್ಲಿರುವ ಕ್ಷೇತ್ರಗಳಲ್ಲಿಯೂ ಭಕ್ತ ಸಂದಣಿ ಹೆಚ್ಚಾಗಿತ್ತು.ನವರಾತ್ರಿ ದೀಪಾಲಂಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿಶೇಷ ಆಕರ್ಷಣೆಯಾಗಿತ್ತು. ನವರಾತ್ರಿಯಲ್ಲಿ ಶಾರದಾ ಪ್ರತಿಷ್ಟಾಪನೆ ಮಾಡಿದ ವಿವಿಧ ಮಂಡಳಿಗಳು ಶಾರದಾ ಮಾತೆ ವಿಸರ್ಜನೆಗೆ ತಯಾರಾಗಿವೆ. ಕುದ್ರೋಳಿಯಲ್ಲಿ ಲಕ್ಷಾಂತರ ಭಕ್ತರನ್ನು…

Read More

ಖಂಬದಕೋಣೆ; ಸೇತುವೆಗೆ ಡಿಕ್ಕಿ ಹೊಡೆದ ಕಂಟೈನ‌ರ್; ತಪ್ಪಿದ ಬಾರಿ ಅನಾಹುತ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಖಂಬದಕೋಣೆ ಸೇತುವೆಗೆ ಕಂಟೈನರ್‌ವೊಂದು ಡಿಕ್ಕಿ ಹೊಡೆದಿದ್ದು, ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ.ಕಂಟೈನರ್ ಡಿಕ್ಕಿ ಹೊಡೆದ ರಭಸಕ್ಕೆ ನದಿಗೆ ಉರುಳುವ ಸಾಧ್ಯತೆ ಇದ್ದು, ಅದೃಷ್ಟವಶಾತ್ ಪಾರಾಗಿದೆ.ಕಂಟೈನರ್ ಮಂಗಳೂರಿನಿಂದ ಗೋವಾ ಕಡೆಗೆ ಸಾಗುತ್ತಿದ್ದು, ಕಂಟೈನರ್‌ನಲ್ಲಿದ್ದ ಚಾಲಕ ಹಾಗೂ ಕೀನ‌ರ್ ಅಪಾಯದಿಂದ ಪಾರಾಗಿದ್ದಾರೆ.

Read More

ದಸರಾ ಹಬ್ಬದ ಸಂಭ್ರಮವನ್ನು ಸಿದ್ದರಾಮಯ್ಯ ನೇತೃತ್ವದ ಸರಕಾರ ಸಮೀಕ್ಷೆಯಿಂದ ನುಂಗಿ ನೀರು ಕುಡಿದಿದೆ ; ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಮಂಗಳೂರು: ದಸರಾ ಹಬ್ಬದ ಸಂಭ್ರಮವನ್ನು ಸಿದ್ದರಾಮಯ್ಯ ನೇತೃತ್ವದ ಸರಕಾರ ಸಮೀಕ್ಷೆಯಿಂದ ನುಂಗಿ ನೀರು ಕುಡಿದಿದೆ ; ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರಾಜ್ಯದಲ್ಲಿ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಈ ದಸರಾ ಸಂಭ್ರಮದ ಸಮಯದಲ್ಲಿ ಆರಂಭಿಸಿದ್ದು ಹಿಂದೂ ಭಾವನೆಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಗುಡುಗಿದರು.ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಹಬ್ಬದ ಹಿಂದೆ ಈ ಸಮೀಕ್ಷೆಯನ್ನು ನಡೆಸುವುದರ ಹಿಂದೆ ದೊಡ್ಡ ಷಡ್ಯಂತರ ಇದೆ ಎಂದರು. ಹಬ್ಬದ ಹಿನ್ನಲೆಯಲ್ಲಿ ಶಿಕ್ಷಕರಿಗೆ…

Read More

ಗಾಂಧೀಜಿಯವರ ತತ್ವ, ಆದರ್ಶ ಮನುಷ್ಯನಲ್ಲಿ ಮುಖ್ಯವಾಗಿ ಬೇಕು ; ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಮಂಗಳೂರು ಮಹಾನಗರ ಪಾಲಿಕೆ , ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ , ಭಾರತ ಸೇವಾದಳದ ನೇತ್ರಿತ್ವದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬ ಗಾಂಧಿ ಜಯಂತಿಯನ್ನು ನಗರದ ರಾಜಾಜಿ ಪಾರ್ಕ್ನನಲ್ಲಿ ಗಣ್ಯರ ಸಮ್ಮುಖದಲ್ಲಿ ಆಚರಿಸಲಾಯಿತು . ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೆರವೇರಿಸಿ ಮಾತನಾಡಿ, ಗಾಂಧೀಜಿಯವರ ತತ್ವ, ಆದರ್ಶ…

Read More

ತುಂಬೆ: ಶ್ರೀ ಶಾರದಾ ಸಮುದಾಯ ಭವನ ಲೋಕಾರ್ಪಣಾ ಕಾರ್ಯಕ್ರಮ.

ಬಂಟ್ವಾಳ: ತುಂಬೆ ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ವತಿಯಿಂದ ತುಂಬೆ ಶ್ರೀರಾಮ ನಗರ ರಾಮಲ್ ಕಟ್ಟೆಯಲ್ಲಿ ಸುಮಾರು 1.5ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಶಾರದಾ ಸಮುದಾಯ ಭವನವನ್ನು ಸೆ 28ರಂದು ಆದಿತ್ಯವಾರ ಮಂಗಳೂರು ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರಾದ ಡಾ ಎಂ ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಶಾಂತಿ ಪ್ರಿಯರಾದ ನಾವು ಎಲ್ಲರನ್ನು…

Read More

ಪೆಟ್ರೋಲ್‌ ಕಳ್ಳತನ ಪ್ರಕರಣ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ.

ಬೆಳ್ತಂಗಡಿ: ನೆರಿಯ ಪೆಟ್ರೋನೆಟ್ ಪೈಪ್ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ನಿವಾಸಿ ತಮ್ಮಯ್ಯ(35) ಬಂಧಿತ ಆರೋಪಿ . ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.28 ರಂದು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದವನನ್ನು ನೋಡಿ ಸುರತ್ಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಉಮೇಶ್ ಅವರು ವಶಕ್ಕೆ…

Read More

ಉಡುಪಿ: ಅ. 4ರಿಂದ 12ರವರೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಸಪ್ತಾಹ

ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ಲಯನ್ಸ್ ಡಿಸ್ಟ್ರಿಕ್ಟ್ 317C – ಲಯನ್ಸ್ ಕ್ಲಬ್, ಮಣಿಪಾಲ್, ಮತ್ತು ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಅ. 4ರಿಂದ 12ರವರೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಸಪ್ತಾಹವನ್ನು ಆಯೋಜಿಸಲಾಗಿದೆ ಎಂದು ಲಯನ್ಸ್ ಡಿಸ್ಟ್ರಿಕ್ಟ್ 317ಸಿ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಸಪ್ತಾಹದಲ್ಲಿ ಮಕ್ಕಳು, ಮಹಿಳೆಯರು, ವಯಸ್ಕರು, ಉದ್ಯೋಗಿಗಳು ಹಾಗೂ ಹಿರಿಯ ನಾಗರಿಕರನ್ನು ಎಲ್ಲರ…

Read More

ಕುದ್ರೋಳಿ ದಸರಾ ಅದ್ದೂರಿ ಶಾರದಾ ಮೆರವಣಿಗೆ ಅಕ್ಟೋಬರ್ ೨ ಕ್ಕೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾಯಾತ್ರೆ ಅ. 2ರಂದು ಅದ್ದೂರಿಯಾಗಿ ನಡೆಯಲಿದೆ . ಈಗಾಗಲೇ ಶೋಭಾಯಾತ್ರೆ ಗೆ ಪೂರ್ವ ಸಿದ್ದತೆಗಳು ನಡೆಸಲಾಗಿದೆ ಎನ್ನಲಾಗಿದೆ . ಸಂಜೆ 4ರಿಂದ ಶ್ರೀ ಶಾರದಾಂಬೆಯ ಶೋಭಾಯಾತ್ರೆಯು ಶ್ರೀ ಕ್ಷೇತ್ರದಿಂದ ಹೊರಡಲಿದೆ. ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ನಗರದಲ್ಲಿ ಸಾಗಿಬರಲಿದೆ. ಕುದ್ರೋಳಿ ಕ್ಷೇತ್ರದಿಂದ ಹೊರಟು ಕಂಬಾರ…

Read More

ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಳ್ಳದೇ ಉಂಟಾಗಿರುವ ತೊಂದರೆಯ ಬಗ್ಗೆ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರೈಲ್ವೆ ಇಲಾಖೆಯ ನಿಧಾನಗತಿಯ ಕಾಮಗಾರಿಯನ್ನು ಖಂಡಿಸಿ ಪ್ರತಿಭಟನೆ

ಮಂಗಳೂರು :ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಳ್ಳದೇ ಉಂಟಾಗಿರುವ ತೊಂದರೆಯ ಬಗ್ಗೆ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರೈಲ್ವೆ ಇಲಾಖೆಯ ನಿಧಾನಗತಿಯ ಕಾಮಗಾರಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಕಳೆದ 4 ವರ್ಷಗಳ ಹಿಂದೆ ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಂಡಿದ್ದರೂ, ಇನ್ನು ಅದನ್ನು ಸಾರ್ವಜನಿಕರಿಗೆ ಬಿಟ್ಟುಕೊಡದೇ ಇದ್ದು ಇಲ್ಲಿ ನೀರು ತುಂಬಿ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿದ ಬಗ್ಗೆ ದೂರುಗಳು ಇದ್ದರೂ ರೈಲ್ವೆ ಇಲಾಖೆಯವರು ಸಾರ್ವಜನಿಕ ಉಪಯೋಗಕ್ಕೆ ಬಿಟ್ಟುಕೊಡದೇ ಇರುವುದನ್ನು ಖಂಡಿಸಿ ಮಂಗಳೂರು ದಕ್ಷಿಣ ಬ್ಲಾಕ್…

Read More

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು.

ಬೆಂಗಳೂರು:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಮಂಗಳವಾರ ಖರ್ಗೆ ಅವರು ಉತ್ಸಾಹದಿಂದ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. 83 ರ ಹರೆಯದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಚಿಕಿತ್ಸೆಗಾಗಿ ದಾಖಲಿಸಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read More
error: Content is protected !!