ಉಪ್ಪಿನಂಗಡಿಯಲ್ಲಿ ಖೋಟಾ ನೋಟು ಮುದ್ರಣ ಘಟಕ ಪತ್ತೆ: 8 ಮಂದಿ ಬಂಧನ, ಮುದ್ರಣ ಯಂತ್ರ ಸೇರಿ ಅಪಾರ ಸಾಮಗ್ರಿ ವಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖೋಟಾ ನೋಟು ಮುದ್ರಣ ಘಟಕವನ್ನು ಜಿಲ್ಲಾ ಪೊಲೀಸರು ಭೇದಿಸಿದ್ದು, ಕಾರ್ಯಾಚರಣೆಯಲ್ಲಿ ಏಳು ಆರೋಪಿಗಳನ್ನು ಹಾಗೂ ಬಾಡಿಗೆ ಕಟ್ಟಡ ಒದಗಿಸಿದ್ದ ಸ್ಥಳೀಯ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆ ಅಧಿಕಾರಿಗಳು ಪದ್ಮುಂಜ ಗ್ರಾಮದ ಅಡೆಂಜದಲ್ಲಿರುವ ಬಾಡಿಗೆ ಕಟ್ಟಡದ ಮೇಲೆ ತಡರಾತ್ರಿ ದಾಳಿ ನಡೆಸಿದ ವೇಳೆ ಖೋಟಾ ನೋಟು ತಯಾರಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಸ್ಥಳದಲ್ಲಿದ್ದ ಆರೋಪಿಗಳನ್ನು…

Read More

ದೆಹಲಿ-ಮಂಗಳೂರು ಡ್ರಗ್ಸ್ ಜಾಲ ಭೇದಿಸಿದ ಸಿಸಿಬಿ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ, ಇಬ್ಬರ ಬಂಧನ

ಮಂಗಳೂರು: ನಗರ ಸಿಸಿಬಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ದೆಹಲಿಯಿಂದ ಎಂಡಿಎಂಎ (MDMA) ಮಾದಕ ವಸ್ತುವನ್ನು ಮಂಗಳೂರಿಗೆ ಸಾಗಿಸಿ ಕರಾವಳಿ ಭಾಗದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಸುಮಾರು ₹5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ವಸ್ತು, ಒಂದು ಕಾರು ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುದೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್…

Read More

ಮುನಿರಾಜು ಕೆ.ಸಿ.ಗೆ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’

ಮಂಗಳೂರು:ಕೋಲಾರ ಜಿಲ್ಲೆಯ ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ಅಧಿಕಾರಿ (ಸಿಆರ್‌ಪಿ) ಹಾಗೂ ಅತ್ಯುತ್ತಮ ಸಿಆರ್‌ಪಿ ಪ್ರಶಸ್ತಿ ಪುರಸ್ಕೃತ ಮುನಿರಾಜು ಕೆ.ಸಿ. ಅವರನ್ನು ಕನ್ನಡ ಭವನ ನೀಡುವ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’ಗೆ ಆಯ್ಕೆ ಮಾಡಲಾಗಿದೆ.ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ ‘ಕರ್ನಾಟಕ ಗಡಿನಾಡು…

Read More

ಬಂಟ್ವಾಳದಲ್ಲಿ ಆ. 9ರಂದು ಹಿರಿಯರ ಚಿಂತನಾ ಸಮಾವೇಶ

ಬಂಟ್ವಾಳ: ಆ. 9ರಂದು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದಿಂದ ಹಿರಿಯರ ಚಿಂತನಾ ಸಮಾವೇಶಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ.), ಮೆಲ್ಲಾರ್–ಬಂಟ್ವಾಳ ವತಿಯಿಂದ ಹಿರಿಯರಿಗಾಗಿ ವಿಶೇಷ ‘ಹಿರಿಯರ ಚಿಂತನಾ ಸಮಾವೇಶ’ವನ್ನು ಆಗಸ್ಟ್ 9ರಂದು ಐತಿಹಾಸಿಕ ಪ್ರಸಿದ್ಧ ಕ್ಷೇತ್ರವಾದ ಪಾಣೆಮಂಗಳೂರಿನ ಹಳೆ ಸೇತುವೆ ಸಮೀಪದ ನೇತ್ರಾವತಿ ನದಿ ತಟದಲ್ಲಿರುವ ಶ್ರೀ ಭಯಂಕೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ತಿಳಿಸಿದ್ದಾರೆ. ಈ ಕುರಿತು ಬಿಸಿರೋಡಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

Read More

ಡಾ. ಶರಣಪ್ಪ ಗಬ್ಬೂರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಮಂಗಳೂರು: ಸಾಹಿತಿ ಹಾಗೂ ಬೆಂಗಳೂರು ಕೆ.ಆರ್.ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶರಣಪ್ಪ ಗಬ್ಬೂರು (ಕೋಲಾರ) ಅವರಿಗೆ ಕನ್ನಡ ಭವನ ನೀಡುವ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026” ಘೋಷಿಸಲಾಗಿದೆ. ಜುಲೈ 26ರಂದು ನಡೆಯಲಿರುವ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ…

Read More

ಎ. ಚಂದ್ರಶೇಖರ್‌ಗೆ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’

ಮಂಗಳೂರು, ಜು.16:ಕೋಲಾರದ ರಂಗ ನಿರ್ದೇಶಕ ಹಾಗೂ ಸಿನಿಮಾ ನಟ ಎ. ಚಂದ್ರಶೇಖರ್ ಅವರನ್ನು ಕನ್ನಡ ಭವನ ನೀಡುವ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’ಗೆ ಆಯ್ಕೆ ಮಾಡಲಾಗಿದೆ. ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಹಾಗೂ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದ ಅಂಗವಾಗಿ ನಡೆಯುವ ಸಮಾರಂಭದಲ್ಲಿ ಎ. ಚಂದ್ರಶೇಖರ್ ಅವರಿಗೆ ಪ್ರಶಸ್ತಿ…

Read More

ಡಾ. ಇಂಚರ ನಾರಾಯಣಸ್ವಾಮಿ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’

ಮಂಗಳೂರು:ಕೋಲಾರ ಜಿಲ್ಲೆಯ ಖ್ಯಾತ ಸಾಹಿತಿ, ರಂಗ ನಿರ್ದೇಶಕ ಹಾಗೂ ರಂಗ ಇಂಚರ ಟ್ರಸ್ಟ್‌ನ ಅಧ್ಯಕ್ಷ ಡಾ. ಇಂಚರ ನಾರಾಯಣಸ್ವಾಮಿ ಅವರನ್ನು ಪ್ರತಿಷ್ಠಿತ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ಗೆ ಆಯ್ಕೆ ಮಾಡಲಾಗಿದೆ. ಸಾಹಿತ್ಯ, ರಂಗಭೂಮಿ ಹಾಗೂ ಕನ್ನಡ ಭಾಷೆಯ ಬೆಳವಣಿಗೆಗೆ ನೀಡಿರುವ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಡಾ. ಇಂಚರ ನಾರಾಯಣಸ್ವಾಮಿ ಅವರು 2025ರಲ್ಲಿ ಕೋಲಾರ ಕನ್ನಡ ಭವನ ಜಿಲ್ಲಾ ಘಟಕ, ಮೇಘಮೈತ್ರಿ ಸಾಹಿತ್ಯ ಸಂಘ…

Read More

ಕೋತ್ವಾಲ್ ಪದ್ಮನಾಭ ಶೇರುಗಾರ್‌ಗೆ ‘ಕನ್ನಡ ಪಯಸ್ವಿನಿ–ಉದ್ಯೋಗ ರತ್ನ’ ಪ್ರಶಸ್ತಿ

ಮಂಗಳೂರು:ಉದ್ಯೋಗದಾತ, ಸಮಾಜಸೇವಕ ಹಾಗೂ ಧಾರ್ಮಿಕ ಸೇವಾಕರ್ತರಾಗಿ ಗುರುತಿಸಿಕೊಂಡಿರುವ ವರ್ಷಿಣಿ ಎಂಟರ್‌ಪ್ರೈಸಸ್‌ನ ಸಂಸ್ಥಾಪಕ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರನ್ನು 2026ನೇ ಸಾಲಿನ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ–ಉದ್ಯೋಗ ರತ್ನ’ ಅಚೀವ್‌ಮೆಂಟ್ ಅವಾರ್ಡ್‌ಗೆ ಆಯ್ಕೆ ಮಾಡಲಾಗಿದೆ. ಬೆಳ್ಳಾರಿಯಲ್ಲಿ ವರ್ಷಿಣಿ ಎಂಟರ್‌ಪ್ರೈಸಸ್ ಮೂಲಕ ನೂರಾರು ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಅವರು, ಸಮಾಜಸೇವೆ, ಧಾರ್ಮಿಕ ಕಾರ್ಯಗಳು ಹಾಗೂ ದಾನಧರ್ಮಗಳ ಮೂಲಕವೂ ಸಮಾಜದಲ್ಲಿ ವಿಶಿಷ್ಟ ಗುರುತನ್ನು ಪಡೆದಿದ್ದಾರೆ. ವಿವಿಧ ಸಂಘ-ಸಂಸ್ಥೆಗಳಲ್ಲಿ ಪದಾಧಿಕಾರಿ, ನಿರ್ದೇಶಕ ಹಾಗೂ ಪೋಷಕರಾಗಿ ಸೇವೆ ಸಲ್ಲಿಸುತ್ತಿರುವ ಅವರು, ವಿಶ್ವ ರಾಮ ಕ್ಷತ್ರಿಯ ಮಹಾಸಂಘ…

Read More

200ಕ್ಕೂ ಅಧಿಕ ತಂಡಗಳೊಂದಿಗೆ ಜುಲೈ 22ರಿಂದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ವತಿಯಿಂದ 28ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಅಂತರಶಾಲಾ ಹಾಗೂ ಅಂತರ ಕಾಲೇಜು ಫುಟ್ಬಾಲ್ ಪಂದ್ಯಾವಳಿಯು ಜುಲೈ 22ರಿಂದ ನಗರದ ಸ್ಮಾರ್ಟ್ ಸಿಟಿ ಟರ್ಫ್ ಫುಟ್ಬಾಲ್ ಮೈದಾನದಲ್ಲಿ ಆರಂಭಗೊಳ್ಳಲಿದೆ ಎಂದು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ಡಿ.ಎಂ. ಅಸ್ಲಂ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 25 ದಿನಗಳ ಕಾಲ ನಡೆಯುವ ಪಂದ್ಯಾವಳಿಯಲ್ಲಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ, ಪದವಿ, ಇಂಜಿನಿಯರಿಂಗ್, ವೈದ್ಯಕೀಯ ಹಾಗೂ…

Read More

ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ಅಷ್ಟಮ ಸಂಭ್ರಮ ಜು.20ರಂದು

ಮಂಗಳೂರು:ಅಂಬುರುಹ ಯಕ್ಷ ಕಲಾ ಕೇಂದ್ರ, ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಜುಲೈ 20ರಂದು ಮುಲ್ಲಕಾಡು, ಕಾವೂರು ಶ್ರೀ ಕೋಟದ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಂಘದ ಪ್ರಮುಖರಾದ ಕಲಾ ಸಾರಥಿ ಕುಮಾರ್ ಮಾಲೆಮಾರ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಯಕ್ಷಗಾನ ಪರಂಪರೆಯನ್ನು ಮಕ್ಕಳಲ್ಲಿ ಬೆಳೆಸುವ ಉದ್ದೇಶದಿಂದ ಅಂಬುರುಹ ಯಕ್ಷ ಕಲಾ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಪ್ರತಿವರ್ಷ ಮಕ್ಕಳಿಗೆ ವೇದಿಕೆ ಕಲ್ಪಿಸುವ…

Read More
error: Content is protected !!