ಸಮುದ್ರ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ.4 ಕಿ.ಮೀ ಹೆಗಲ ಮೇಲಿಟ್ಟು ಆಂಬುಲೆನ್ಸ್ ವಾಹನಕ್ಕೆ ಸಾಗಿಸಿ ಮಾನವೀಯತೆ ಮೆರೆದ ಶಿವಾಜಿ ಜೀವ ರಕ್ಷಕ ಈಜುಗಾರರ ಸಂಘದ ಸದಸ್ಯರು.
ಉಳ್ಳಾಲ : ಕೊಳೆತ ಸ್ಥಿತಿಯಲ್ಲಿದ್ದ ಮೃತದೇ ಹ ಉಳ್ಳಾಲ ಸಮುದ್ರ ತೀರದ ಅಳಿವೆಬಾಗಿಲು ಬ್ರೇಕ್ ವಾಟರ್ ಕಲ್ಲುಗಳ ಮಧ್ಯೆ ಸಿಲುಕಿರುವುದನ್ನು ಉಳ್ಳಾಲ ಮೊಗವೀರಪಟ್ನ ಶಿವಾಜಿ ಜೀವ ರಕ್ಷಕ ಈಜುಗಾರರ ಸಂಘದ ಸದಸ್ಯರು 3-4 ಕಿ.ಮೀ ದೂರ ಎತ್ತಿಕೊಂಡು ಸಾಗಿ ಆಂಬುಲೆನ್ಸ್ ವಾಹನಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಿವಾಜಿ ಜೀವ ರಕ್ಷಕ ಈಜುಗಾರರ ಸಂಘದ ಸದಸ್ಯರುಗಳಾದ ಯೋಗೀಶ್ ಅಮೀನ್, ಪ್ರಸಾದ್ ಸುವರ್ಣ, ಚಂದ್ರಹಾಸ್ ಸುವರ್ಣ ಎಂಬವರು ತೀರ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ವನ್ನು ಹೆಗಲ ಮೇಲೆ ಇಟ್ಟು…