ಸೆಪ್ಟೆಂಬರ್ 30 ರಂದು ಕುಡ್ಲದ ಪಿಲಿಪರ್ಬ- 4 ನೇ ಆವೃತ್ತಿ:-

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾ‌ರ್ ಕಟೀಲ್ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಹೇಳಿದರು. ನಂತರ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಭವ್ಯ ವಿಶಾಲ ವೇದಿಕೆಯಲ್ಲಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟದಲ್ಲಿ ಕರಾವಳಿ ಭಾಗದ ಅತ್ಯಂತ ಜನಪ್ರಿಯ ಎಂಬ ಹೆಗ್ಗಳಿಕೆ ಹೊಂದಿರುವ 10…

Read More

‘ ಟೈಮ್ ಪಾಸ್’ ಕನ್ನಡ ಚಲನಚಿತ್ರ ಅಕ್ಟೋಬರ್ 17 ರಂದು ‌ಕರ್ನಾಟಕದಾದ್ಯಂತ ಬಿಡುಗಡೆ.

ಶ್ರೀ ಚೇತನ ಸರ್ವಿಸಸ್ ಬ್ಯಾನರ್ ಮೂಲಕ ಗುಂಡೂರು ಶೇಖರ್, ಕಿರಣ್ ಕುಮಾರ್ ಶೆಟ್ಟಿ, ಎಂ.ಹೆಚ್‌.ಕೃಷ್ಣಮೂರ್ತಿ ನಿರ್ಮಾಣದ ಇಮ್ರಾನ್ ಪಾಷಾ, ವೈಸಿರಿ ಕೆ.ಗೌಡ, ರಕ್ಷಾರಾಮ್ ನಟನೆಯ’ ಟೈಮ್ ಪಾಸ್’ ಕನ್ನಡ ಚಲನಚಿತ್ರ ಇದೇ ಬರುವ ಅಕ್ಟೋಬರ್ 17 ರಂದು ‌ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕರಾದ ಚೇತನ್ ಜೋಡಿದಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . `ಟೈಮ್ ಪಾಸ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಂಡು ಒಂದಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗಷ್ಟೇ ಈ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ. ಅದರ ಬಗ್ಗೆಯೂ…

Read More

ಶಿಕ್ಷಕರ ಕಾರ್ಯಚಟುವಟಿಕೆಗಳಿಗೆ, ಅವರ ಸಂಘಗಳ ಸಭೆಗಳಿಗೆ ತಮ್ಮ ಕಚೇರಿಯನ್ನು ನೀಡುವುದಾಗಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಭರವಸೆ

ಮಂಗಳೂರು :ಶಿಕ್ಷಕರ ಕಾರ್ಯಚಟುವಟಿಕೆಗಳಿಗೆ, ಅವರ ಸಂಘಗಳ ಸಭೆಗಳಿಗೆ ತಮ್ಮ ಕಚೇರಿಯನ್ನು ನೀಡುವುದಾಗಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಭರವಸೆ ನೀಡಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಮಹಾನಗರ ಪಾಲಿಕೆ ಕಟ್ಟಡದ ಮೊದಲ ಮಹಡಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರ ಕಚೇರಿ ಗುರುವಾರದಂದು ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು. ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಸೇರಿದಂತೆ ಅನೇಕ ಗಣ್ಯರು ಕಚೇರಿ ಉದ್ಘಾಟನೆ ಸಂದರ್ಭ ಉಪಸ್ಥಿತರಿದ್ದು ಶುಭ ಹಾರೈಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಭೋಜೇಗೌಡ ಅವರು ತಾನು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದರಿಂದ ಶಿಕ್ಷಕರ…

Read More

ಕೊಲ್ಲಮೊಗ್ರು ಪಂಚಾಯತ್‌ ನಲ್ಲಿ ಕಳ್ಳರು ಯಾರು? ಅಂಗಡಿ ಮುಂಗಟ್ಟು ಬಂದ್ – ಗ್ರಾಮಸ್ಥರಿಂದ ಮುತ್ತಿಗೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿನ ಸೊತ್ತುಗಳನ್ನು ಅಲ್ಲಿನ ಗುಮಾಸ್ತನೇ ಕಳವು ಮಾಡಿದ್ದರೂ ಆತನ ವಿರುದ್ಧ ಪಂಚಾಯತ್ ಸೂಕ್ತ ಕ್ರಮ ಜರುಗಿಸಿಲ್ಲ, ಪಂಚಾಯತ್ ಸಿಸಿ ಟಿವಿ ಅಳವಡಿಸಿ ಜನರ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಅದನ್ನು ವಾಟ್ಸ್ಯಾಪ್‌ನಲ್ಲಿ ಹರಿಯಬಿಡಲಾಗುತ್ತದೆ‌ ಎಂದು ಆರೋಪಿಸಿದ ಗ್ರಾಮಸ್ಥರು ಗುರುವಾರ ಬೆಳಗ್ಗೆ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯತ್ ಗೆ ಸಂಬಂಧಪಟ್ಟ ಸಿಸಿ ಟಿವಿ ಪರಿಕರ, ಸೌಂಡ್ ಸಿಸ್ಟಮ್‌ ಗಳನ್ನು ಖಾಸಗಿ…

Read More

ಮಂಗಳೂರು ದಸರಾದಲ್ಲಿ ಮುದ್ದು ಶಾರದೆ ಕಲರವ

ಮಂಗಳೂರು: ಶೃಂಗೇರಿ ಶಾರದಾ ಪೀಠದ ವೈಭವ, ವೀಣೆಯ ನುಡಿಸುತ್ತಾ ಮುಗುಳ್ನಗುವ ಕಂದಮ್ಮಗಳು, ಕೈಯೊಲು ತಾವರೆ, ಪುಸ್ತಿಕೆಗಳಿಂದ ಶೋಭಿಸುವ ವಿದ್ಯಾಧಿದೇವತೆ. ಈ ಮಧ್ಯೆ ನವರೂಪಗಳಲ್ಲಿ ಶೋಭಿಸುವ ನವದುರ್ಗೆಯರು. ಇದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಬುಧವಾರ ನಡೆದ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆಯ ಝಲಕ್.ಪಿ.ಕೆ.ಲೋಹಿತ್ ಸ್ಮರಣಾರ್ಥ ಪಿ.ಕೆ ದೂಜ ಪೂಜಾರಿ ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಆಭರಣ ಜುವೆಲರ್ಸ್ ಮತ್ತು ಅದಿರಾ ಪ್ರಾಪರ್ಟಿಸ್ ಸಹಕಾರದೊಂದಿಗೆ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ನೂರಾರು ಮಂದಿ…

Read More

ನೆಕ್ಸ್ಟ್‌ಜೆನ್ ಸ್ಕಿಲ್ ಕಾನ್ಕ್ಲೇವ್ – 2025ರಲ್ಲಿ ಶ್ರೀನಿವಾಸ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ8 ಪ್ರಶಸ್ತಿ ಪಡೆದು ಸಾಧನೆ

[5:22 am, 24/9/2025] Reporter Girish Mangalore: ಮಂಗಳೂರು: ವಲಚ್ಚಿಲ್‌ನ ಶ್ರೀನಿವಾಸ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಪ್ರತಿಷ್ಠಿತ ನೆಕ್ಸ್ಟ್‌ಜೆನ್ ಸ್ಕಿಲ್ ಕಾನ್ಕ್ಲೇವ್ – 2025ರಲ್ಲಿ ಅನೇಕ ಆಲ್-ಇಂಡಿಯಾ ಟಾಪ್ 5 ಪ್ರಶಸ್ತಿಗಳನ್ನು ಗಳಿಸಿದೆ. ಈ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವು ಸೆಪ್ಟೆಂಬರ್ 17ರಿಂದ 19ರವರೆಗೆ ಶಿಮ್ಲಾದ ಈಸ್ಟ್ ಬೋರ್ಣ್ ರೆಸಾರ್ಟ್‌ನಲ್ಲಿ ನಡೆಯಿತು. ದೇಶದ ಪ್ರಮುಖ ಶಿಕ್ಷಣ ಸಂಸ್ಥೆಗಳು, ಅಕಾಡೆಮಿಷಿಯನ್ನರು, ಉದ್ಯಮ ತಜ್ಞರು ಹಾಗೂ ನೀತಿ ರೂಪಕರು ಒಂದೇ ವೇದಿಕೆಯಲ್ಲಿ ಸೇರಿ ಕೌಶಲ್ಯಾಭಿವೃದ್ಧಿ, ಕೃತಕ ಬುದ್ಧಿಮತ್ತೆ ಹಾಗೂ ಕೈಗಾರಿಕಾ ಹೊಂದಾಣಿಕೆಯ…

Read More

ಬಡ ವರ್ಗದ ಪಾಲಿಗೆ ವರವಾದ 2.0 ಜಿ ಎಸ್ ಟಿ

ಮಂಗಳೂರು: ಐತಿಹಾಸಿಕ 2.0 ಜಿ ಎಸ್ ಟಿ ಭಾರತದಾದಂತ್ಯ ಜಾರಿಗೆ ಬಂದಿದ್ದು ಇದು ಜನ ಸಾಮಾನ್ಯರಲ್ಲಿ ಸಾಕಷ್ಟು ಉಳಿತ್ತಾಯ ಮಾಡುವ ಕಾರಣ ಇದನ್ನು ಉಳಿತಾಯದ ಉತ್ಸವವಾಗಿ ಭಜತ್ ಉತ್ಸವವಾಗಿ ಬಿಜೆಪಿ ಮುಖಂಡರು ಕಾರ್ಯಕರ್ತರು ದೇಶದಾದಂತ್ಯ ಆಚರಿಸ್ತಾ ಇದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಜಿ ಎಸ್ ಟಿ ಯನ್ನು ಸರಳೀಕರಣ ಮಾಡಲಾಗಿದ್ದು ಇದರಿಂದ ಸಾಕಷ್ಟು ಉಳಿತ್ತಾಯವಾಗುವ…

Read More

ಧರ್ಮಸ್ಥಳ ಪ್ರಕರಣ. ನಾವು ಅವರ ಪರ, ಇವರ ಪರ ಇಲ್ಲ. ನಾವು ಸತ್ಯದ ಪರ ಇದ್ದೇವೆ-; ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ಆರೋಪದ ಕುರಿತು ತನಿಖೆ ಮಾಡಲೆಂದು ನಾವೇ ಎಸ್‌ಐಟಿ ರಚನೆ ಮಾಡಿದ್ದು. ನಾವು ಅವರ ಪರ, ಇವರ ಪರ ಇಲ್ಲ. ನಾವು ಸತ್ಯದ ಪರ ಇದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮಂಗಳೂರಿನಲ್ಲಿ ಟಿಎಂಎ ಪೈ ಕನ್ವೆನ್ಶನಲ್ ಸೆಂಟರ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಇಂದು ಆಗಮಿಸಿದ್ದ ಅವರನ್ನು ಸುದ್ದಿಗಾರರು ಎಸ್‌ಐಟಿ ತನಿಖೆ ಕುರಿತಂತೆ ಪ್ರಶ್ನಿಸಿದಾಗ ಈ ಸ್ಪಷ್ಟನೆ ನೀಡಿದ್ದಾರೆ. ಈ ಪ್ರಕರಣವನ್ನು ತನಿಖೆ…

Read More

ಮಂಗಳೂರು ಚಾಲಕರು ಸಮುದಾಯ ಚಾಲಿತ ಟ್ಯಾಕ್ಸಿ ಪರಿಹಾರವಾಗಿ ಟೌನೆರ್ ಅಪ್ಲಿಕೇಶನ್.

ಮಂಗಳೂರಿನ ಚಾಲಕರ ಸಮುದಾಯ, ಪೂರ್ಣೇಶ್ ಮತ್ತು ಸಂದೀಪ್ ಡಿಸಿಲ್ವಾ ಮತ್ತು ಅವರ ತಂಡದ ಪ್ರತಿನಿಧಿತ್ವದಲ್ಲಿ, ಸ್ಥಳೀಯ ಟ್ಯಾಕ್ಸಿ ಸೇವೆಗಳಿಗೆ ಆದ್ಯತೆಯ ಡಿಜಿಟಲ್ ಪರಿಹಾರವಾಗಿ ಟೌನೆರ್ ಮೊಬೈಲ್ ಟ್ಯಾಕ್ಸಿ ಮೀಟರ್ ಅಪ್ಲಿಕೇಶನ್ ಇಂದು ಅಳವಡಿಸಿಕೊಳ್ಳಲಿದೆ ಎಂದು ಒನ್ ಇಂಡಿಯಾ ಒನ್ ಟ್ಯಾಕ್ಸಿ ಇದರ ಕಾರ್ಯ ನಿರ್ವಹಣಾ ಅಧಿಕಾರಿಯಾದ ರಘು ತಿಳಿಸಿದರು . ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದ ಅವರು , ಕಳೆದ ಒಂದು ತಿಂಗಳಿಂದ ಅಪ್ಲಿಕೇಶನ್ನನ್ನು ಪರಿಶೀಲಿಸಿದ ಬಳಿಕ, ಚಾಲಕರು ಇದರ ನ್ಯಾಯವಾದ ಬೆಲೆ ನಿಗದಿ, ಪಾರದರ್ಶಕತೆ…

Read More

ಶರಧಿ ಪ್ರತಿಷ್ಠಾನದಿಂದ ಮುದ್ದು ಶಾರದೆ, ನವದುರ್ಗೆ ವೇಷ ಸ್ಪರ್ಧೆ ಸೆಪ್ಟೆಂಬರ್ 28ರಂದು.

ಮಂಗಳೂರು: ಕರಾವಳಿಯಲ್ಲಿ ಆಚರಿಸಲಾಗುವ ನವರಾತ್ರಿ ಉತ್ಸವ ದೇಶ ವಿದೇಶದಲ್ಲಿ ಪ್ರಸಿದ್ಧಿ ಪಡೆದಿದೆ. ಇಂತಹ ಪುಣ್ಯ ಪರ್ವಕಾಲ ನವರಾತ್ರಿಯ ಶುಭ ಸಂದರ್ಭದಲ್ಲಿ ತುಳುವರ ಸಂಸ್ಕೃತಿ, ಕಲೆ ಹಾಗೂ ಹಿಂದುತ್ವದ ಅರಿವು ಮೂಡಿಸುವ ಉದ್ದೇಶದಿಂದ ದಸರಾ ನವರಾತ್ರಿಯ ಸಂದರ್ಭದಲ್ಲಿ ಮಂಗಳೂರಿನ ಶರಧಿ ಪ್ರತಿಷ್ಠಾನವು ಸೆಪ್ಟೆಂಬರ್ 28 ರಂದು ಶಾರದಾ ವಿದ್ಯಾಲಯ,ಮಂಗಳೂರು ಇಲ್ಲಿ ಮೂರನೇ ವರ್ಷದ ಅದ್ದೂರಿ ಮಕ್ಕಳ ಮುದ್ದು ಶಾರದೆ ಮತ್ತು ನವದುರ್ಗೆಯರ ವೇಷ ಸ್ಪರ್ಧೆಯು 1 ರಿಂದ 14 ತನಕದ ವಯೋಮಾನ ಹೊಂದಿರುವ ಮಕ್ಕಳಿಗೆ ಆಯೋಜಿಸಲಾಗುವುದೆಂದು ಆಯೋಜಿಸಲಿದೆ ಎಂದು…

Read More
error: Content is protected !!