ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಪುನ‌ರ್ ಪ್ರತಿಷ್ಠೆ ಕಲಶಾಭಿಷೇಕ ಪ್ರಯುಕ್ತ ಹೊರೆಕಾಣಿಕೆ ಮೆರವಣಿಗೆ. ಮುಸ್ಲಿಮ್ ಬಾಂಧವರ ಭಾವೈಕ್ಯತೆ ಯ ಸ್ವಾಗತ.

ಮಂಗಳೂರು: ಬಜಾಲ್ ನಂತೂರಿನ ಅಮೇವು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಪುನ‌ರ್ ಪ್ರತಿಷ್ಠೆ ಕಲಶಾಭಿಷೇಕ ಪ್ರಯುಕ್ತ ಸಂಜೆ ಇಲ್ಲಿ ನಡೆದ ಹೊರೆ ಕಾಣಿಕೆ ಮೆರವಣಿಗೆಯನ್ನು ಮುಸ್ಲಿಮ್ ಬಾಂಧವರು ಸ್ವಾಗತಿಸಿ ಭಾವೈಕ್ಯತೆ ಮೆರದಿದ್ದಾರೆ. ಶ್ರೀ ಕ್ಷೇತ್ರಕ್ಕೆ ದೇವಸ್ಥಾನದ ಮುಖ್ಯಸ್ಥ ವಿಠಲ್ ಪೂಜಾರಿ ನೇತೃತ್ವದ ಹೊರೆ ಕಾಣಿಕೆ ಮೆರವಣಿಗೆ ಬಜಾಲ್ ನಂತೂರಿನ ಬದ್ರಿಯಾ ಜುಮಾ ಮಸೀದಿ ಎದುರಾಗಿ ಸಾಗುತ್ತಿದ್ದ ವೇಳೆ ಜಮಾಅತ್ ಆಡಳಿತ ಕಮಿಟಿ ಮುಖಂಡರು ಭಕ್ತಾದಿಗಳನ್ನು ಸ್ವಾಗತಿಸಿ ಸಿಹಿ ತಿಂಡಿ,ತಂಪು ಪಾನೀಯ, ಐಸ್ ಕ್ರೀಮ್ ವಿತರಿಸಿ ಸೌಹಾರ್ದತೆ ಸಾರಿದ್ದಾರೆ….

Read More

ನಕಲಿ ಮದ್ಯ ತಯಾರಿಕಾ ಅಡ್ಡೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು.ಆರೋಪಿಯ ವಿರುದ್ಧ ಪ್ರಕರಣ ದಾಖಲು.

ನಕಲಿ ಮದ್ಯ ತಯಾರಿಕಾ ಅಡ್ಡೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಮಂಗಳೂರು‌ ನಗರದ ಕದ್ರಿ ಲೋಬೊ ಲೇನ್‌ನಲ್ಲಿ ನಡೆದಿದೆ. ಸುಮಾರು 5,57,690 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಮೈಕಲ್ ಬ್ಲೈಸ್ ಮಿನೇಜಸ್ ಎಂಬಾತನ ಮನೆಯಲ್ಲಿ ನಕಲಿ ಮದ್ಯ ತಯಾರಿಸಲಾಗುತ್ತದೆ ಎಂಬ ಖಚಿತ ವರ್ತಮಾನ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದರು. ಮೈಕಲ್ ಬ್ಲೈಸ್ ಮಿನೇಜಸ್‌ನ ಮನೆಯಲ್ಲಿ ತಯಾರಿಸಿಟ್ಟಿದ್ದ ನಕಲಿ ವೈನ್ – 238.500 ಲೀಟರ್, ವೈನ್ ತಯಾರಿಸುವ ಕೊಳೆ – 1,500 ಲೀಟರ್ , ಮದ್ಯ –…

Read More

ಧರ್ಮಸ್ಥಳ ಬುರುಡೆ ಪ್ರಕರಣ .ಜಡ್ಜ್‌ ಮುಂದೆ ಚಿನ್ನಯ್ಯನ ಹೇಳಿಕೆ.

ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಮಂಗಳವಾರ ಶಿವಮೊಗ್ಗ ಜೈಲಿನಿಂದ ಪೊಲೀಸರು ಬೆಳ್ತಂಗಡಿ ಕೋರ್ಟ್ ಗೆ ಕರೆದುಕೊಂಡು ಬಂದು ಹಾಜರುಪಡಿಸಿದರು.ಈ ಪ್ರಕರಣದ ಬಗ್ಗೆ ಚಿನ್ನಯ್ಯ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು. ಆರೋಪಿ ಚಿನ್ನಯ್ಯ 3 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ ಎಚ್.ಟಿ ಮುಂದೆ ಹಾಜರು ಪಡಿಸಿ ಹೇಳಿಕೆ ದಾಖಲಿಸುವ ಕಾರ್ಯ ಆರಂಭಿಸಲಾಗಿತ್ತು. ಸಂಜೆ ನ್ಯಾಯಾಲಯದ ಪ್ರಕ್ರಿಯೆಗಳನ್ನು ಮುಗಿಸಿ ಆತನನ್ನು ವಾಪಸ್ ಶಿವಮೊಗ್ಗ…

Read More

‘ಎಲ್ಲ ಭಾಷೆಗಳ ಉದ್ದೇಶ ಮನುಕುಲದ ಉದ್ಧಾರ. ಇಲ್ಲಿ ಯಾವುದೇ ಭಾಷೆಯನ್ನು ಸಾಯಲು ಬಿಡಬಾರದು’ – ಡಾ.ಪುರುಷೋತ್ತಮ ಬಿಳಿಮಲೆ

ಮಂಗಳೂರು: ಭಾರತ ಹಲವು ಭಾಷೆಗಳ ರಂಗೋಲಿ. ಎಲ್ಲ ಭಾಷೆಗಳ ಉದ್ದೇಶ ಮನುಕುಲದ ಉದ್ಧಾರ. ಇಲ್ಲಿ ಯಾವುದೇ ಭಾಷೆಯನ್ನು ಸಾಯಲು ಬಿಡಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ- 2025ರ ಅಂಗವಾಗಿ ರಂಗ ಸಂಗಾತಿ‌ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಸಹಯೋಗದಲ್ಲಿ ಮಂಗಳವಾರ ಆಯೋಜಿಸಲಾದ 2ನೇ ವರ್ಷದ ಬಹುಭಾಷಾ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಕೆಲವು ಭಾಷೆಗಳು ಪತನಮುಖಿಯಾಗಿವೆ. ಇಂತಹ ಬಿಕ್ಕಟ್ಟಿನ ಸನ್ನಿವೇಶದಲ್ಲಿ ಬಹುಭಾಷಾ ಕವಿಗೋಷ್ಠಿ ಪೂರಕ. ಕವಿಗಳು ಹೊಸಲೋಕವನ್ನು…

Read More

ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ರಹ್ಮಾನ್ ಭಟ್ಕಳ್ ನಿಧನ.

ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ರಹ್ಮಾನ್ ಭಟ್ಕಳ್ (72) ಮಂಗಳವಾರ ಮುಂಜಾನೆ ಹೃದಯಾಘಾತದಿಂದ ಬೆಂಗಳೂರಿನ ಫ್ರೇಜರ್ ಟೌನ್ ನಗರದ ನಿವಾಸದಲ್ಲಿ ನಿಧನರಾದರು. ಭಟ್ಕಳ ಮೂಲದವರಾಗಿದ್ದ ಅಬ್ದುಲ್ ರಹ್ಮಾನ್ ಅವರು ಮಂಗಳೂರಿನ ಭಟ್ಕಳ ಬಜಾರ್ ನಲ್ಲಿ ವಾಸವಾಗಿದ್ದರು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಹಲವು ತಿಂಗಳುಗಳಿಂದ ಪತ್ನಿ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದರು. ನೇರ ನಡೆ ನುಡಿಯ ಸರಳ ಸಜ್ಜನಿಕೆಯ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು ಜಿಲ್ಲೆಯ ಎಲ್ಲ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ದೂರದರ್ಶಿತ್ವ,…

Read More

ಫಿಶ್ ಕಟ್ಟಿಂಗ್ ಕಾರ್ಖಾನೆ ಮೇಲೆ ಕಾರ್ಮಿಕ ಇಲಾಖೆಯಿಂದ ಮಿಂಚಿನ ದಾಳಿ: 10 ಅಪ್ರಾಪ್ತ ಬಾಲ ಕಾರ್ಮಿಕರು ಪತ್ತೆ.

ಮಂಗಳೂರು: ಕಾರ್ಮಿಕ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಫಿಶ್ ಕಟ್ಟಿಂಗ್ ಯೂನಿಟ್ ಸಂಸ್ಥೆಗೆ ದಾಳಿ ನಡೆಸಿ, 10 ಬಾಲಕಾರ್ಮಿಕ/ ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ. ಸಾರ್ವಜನಿಕರ ದೂರಿನ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ಮಕ್ಕಳು ಬಿಹಾರ ಮತ್ತು ನೇಪಾಳ ಮೂಲದವರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತ ನಾಜಿಯಾ ಸುಲ್ತಾನ, ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್, ಹಿರಿಯ ಕಾರ್ಮಿಕ ನಿರೀಕ್ಷಕ ರಾಜಶೇಖರ ರೆಡ್ಡಿ, ಯೋಜನಾ ನಿರ್ದೇಶಕ…

Read More

ಉಡುಪಿ: ರಾಷ್ಟ್ರೀಯ ಲಾಂಛನ ಸ್ತಂಭ ನಿರ್ಮಿಸಲು ಆಗ್ರಹ.

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ, ಇಂದ್ರಾಳಿಯ ಹಳೆ ಮೇಲ್ಸೇತುವೆಯ ಅಶೋಕ ಸ್ತಂಭಗಳು ಧರೆಗುರುಳಿ ಹಲವು ವರ್ಷಗಳು ಕಳೆದಿವೆ. ಹಳೆ ಸೇತುವೆ ನಿರ್ಮಾಣದ‌ ಸಮಯದಲ್ಲಿಯೇ ನಿರ್ಮಿಸಲ್ಪಟ್ಟ ಸ್ತಂಭಗಳು ಇವಾಗಿವೆ. ಶಿಥಿಲಗೊಂಡ ರಾಷ್ಟ್ರಲಾಂಛನದ ಅವಶೇಷಗಳು ಹೆದ್ದಾರಿಯ ಸನಿಹದ ಪೊದೆಗಳಲ್ಲಿ ಎಸೆದಿರುವುದು ಕಂಡುಬಂದಿದೆ. ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ತಕ್ಷಣವಾಗಿ ಸೇತುವೆಗೆ ಅಶೋಕ ಸ್ತಂಭಗಳನ್ನು ಹೊಸದಾಗಿ ನಿರ್ಮಿಸಬೇಕೆಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ. ಭಾರತ ಸರಕಾರವು 1950 ರಲ್ಲಿ ಅಧಿಕೃತವಾಗಿ ಸಾರಾನಾಥದ…

Read More

ಗೋಹತ್ಯೆ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣಾ ಪೊಲೀಸರು.

ಬಂಟ್ವಾಳ: ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸರು ಆರೋಪಿಯೋರ್ವನನ್ನು ಬಂಧಿಸಿದ್ದಾರೆ. ದಂದೆಗೆ ಬಳಸಿದ ರಿಕ್ಷಾ ಹಾಗೂ ಮಾಂಸ ಮಾಡಲು ಕಟ್ಟಿ ಹಾಕಿದ ದನಗಳ ಸಹಿತ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.ಪೋಲೀಸರ ದಾಳಿ ವೇಳೆ ಪ್ರಮುಖ ಆರೋಪಿ ನಾಸೀರ್ ಸಹಿತ ಇತರರು ಪರಾರಿಯಾಗಿದ್ದು, ಮುಲ್ಕಿ ಕೃಷ್ಣಾಪುರ ಕಾರ್ನಾಡು ನಿವಾಸಿ ತೌಸೀಫ ಎಂಬಾತನನ್ನು ಬಂಧಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಕೆರೆ ಬಳಿ ನಾಸಿರ್ ಯಾನೆ…

Read More

ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯ ಕಿಸೆಯಲ್ಲಿದ್ದ ಲಕ್ಷ ರೂಪಾಯಿಗಳನ್ನು ಕಳವು ಮಾಡಿದ್ದ ಆರೋಪಿ ಬಂಧನ.

ಬಂಟ್ವಾಳ: ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯ ಕಿಸೆಯಲ್ಲಿದ್ದ ಲಕ್ಷ ರೂಪಾಯಿಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೋಲೀಸರು ತಿಂಗಳ ಬಳಿಕ ಕಳ್ಳತನ ಮಾಡಿದ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.ತ್ರಿಶೂರ್ ಜಿಲ್ಲೆಯ ಕೇರಳ ರಾಜ್ಯದ ನಜೀರ್ ಪುನ್ನಯ್ಯೂರು ಎಂಬಾತನ ಬಂಧಿಸಲಾಗಿದೆ. ಅಗಸ್ಟ್ 15 ರಂದು ಕುಂದಾಪುರದ ನಿವಾಸಿಯಾಗಿರುವ ರಂಗನಾಥ ಬೆಳ್ಳಾಲ ಅವರು ಕೊಟ್ಟಿಗೆ ಹಾರಕ್ಕೆ ಹೋಗುವ ಉದ್ದೇಶದಿಂದ ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೇಳೆ ಇವರ ಕಿಸೆಯಲ್ಲಿದ್ದ 50…

Read More

ಮಂಗಳೂರು:ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ಪರಿಹಾರಕ್ಕೆ ಜಿಲ್ಲಾಧಿಕಾರಿ ಸೂಚನೆ.

ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ದಾಖಲಾದ ಎಲ್ಲಾ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರವನ್ನು ತ್ವರಿತವಾಗಿ ಒದಗಿಸುವಂತೆ ಜಿಲ್ಲಾಧಿಕಾರಿ (ಡಿಸಿ) ದರ್ಶನ್ ಎಚ್. ವಿ. ಅವರು ನಿರ್ದೇಶನ ನೀಡಿದ್ದಾರೆ.ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾಯ್ದೆಯಡಿ ಜಿಲ್ಲೆಯಲ್ಲಿ ದಾಖಲಾದ ಎಲ್ಲಾ ದೌರ್ಜನ್ಯ ಪ್ರಕರಣಗಳಿಗೂ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು….

Read More
error: Content is protected !!