ಉಡುಪಿ: ಅಪರಿಚಿತ ವಾಹನ ಡಿಕ್ಕಿ; ಯುವಕ ಮೃತ್ಯು.

ಉಡುಪಿ: ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಸ್ಕೂಟರ್ ಗೆ ಡಿಕ್ಕಿ ಹೊಡೆದ ಚಾಲಕ ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದಾನೆ. ಮೃತ ಯುವಕನನ್ನು ಸಂತೆಕಟ್ಟೆಯ ನಿವಾಸಿ ಅನೂಶ್ ಭಂಡಾರಿ (21) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಅನೂಶ್ ಭಂಡಾರಿ ಸೋಮವಾರ ರಾತ್ರಿ ಸ್ಕೂಟಿಯಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಬೇರೆ ವಾಹನಗಳು ದೇಹದ ಮೇಲೆ…

Read More

ಸ್ಕೂಟರ್ ಮತ್ತು ಪೊಲೀಸ್ ವಾಹನ ನಡುವೆ ಅಪಘಾತ: ವಿದ್ಯಾರ್ಥಿ ಸ್ಥಿತಿ ಗಂಭೀರ.

ಬೆಳ್ತಂಗಡಿ: ಪೂಂಜಾಲಕಟ್ಟೆ ಸಮೀಪ ಪೊಲೀಸ್ ವಾಹನ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟರ್ ಸವಾರ ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಇದೀಗ ಸಂಭವಿಸಿದೆ. ಗಾಯಗೊಂಡ ಯುವಕ ಕೊಳ್ಳೆಬೈಲ್ ನಿವಾಸಿ ಹರ್ಷಿತ್ ಎಂದು ತಿಳಿದುಬಂದಿದ್ದು, ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರ ಮಾಹಿತಿಯ ಪ್ರಕಾರ, ಹರ್ಷಿತ್ ಪರೀಕ್ಷೆ ಬರೆಯಲು ತನ್ನ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ಪೊಲೀಸ್ ವಾಹನವು ಬೇರೊಂದು ವಾಹನವನ್ನು ಓವ‌‌ಟೇಕ್ ಮಾಡುವ ಸಂದರ್ಭದಲ್ಲಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದ್ದಾಗಿ ತಿಳಿದುಬಂದಿದೆ.

Read More

ಮುಂಬೈನಿಂದ ಮಂಗಳೂರಿಗೆ ಡ್ರಗ್ಸ್ ತಂದು ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳ ಬಂಧನ.

ಮಂಗಳೂರು :ಮುಂಬೈನಿಂದ ಮಂಗಳೂರಿಗೆ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರಿನ ಚಿರಾಗ್ ಸನಿಲ್, ಆಲ್ವಿನ್ ಕ್ಲಿಂಟನ್ ಡಿ ಸೋಜಾ,ಜನನ್ @ ಜನನ್ ಜಗನ್ನಾಥ, ರಾಜೇಶ್ ಬಂಗೇರ @ ಅಚ್ಚು @ ರಕ್ಷಿತ್, ವರುಣ್ ಗಾಣಿಗ ಮತ್ತು ಕೇರಳದ ಅಬ್ದುಲ್ ಕರೀಂ ಇ.ಕೆ ಎಂದು ಗುರುತಿಸಲಾಗಿದೆ. ಬಂಧಿತರಿಂದ ರೂ. 22,30,000/- ಮೌಲ್ಯದ 111.83 ಗ್ರಾಂ ಎಂಡಿಎಂಎ ಮತ್ತು ರೂ. 1,90.000/- ಮೌಲ್ಯದ 21.03 ಗ್ರಾಂ ಕೊಕೇನ್ ವಶಕ್ಕೆ ಪಡೆಯಲಾಗಿದೆ

Read More

ಸೆ.29ರಿಂದ ಅ.1ರ ತನಕ ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ.

ಮಂಗಳೂರು: ಉಳ್ಳಾಲ ತಾಲೂಕು ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯು ಆಯೋಜಿಸುವ 44ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 1ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಅಧ್ಯಕ್ಷರಾದ ಮೋಹನ್ ಶೆಟ್ಟಿ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು , 1982ರಲ್ಲಿ ಸ್ಥಾಪನೆಯಾದ ಸಮಿತಿಯು ಕಳೆದ 43 ವರ್ಷಗಳಿಂದ ನವರಾತ್ರಿ ಹಬ್ಬದ ಅಂಗವಾಗಿ ಶಾರದಾ ಮಹೋತ್ಸವವನ್ನು ಆಚರಿಸುತ್ತಿದ್ದು,…

Read More

ಸೆ .26 ರಂದು OTT ಯಲ್ಲಿ ಭರ್ಜರಿ ಬಿಡುಗಡೆಗೆ ಸಿದ್ದವಾದ ಮೀರಾ.

ಮಂಗಳೂರು: ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡ ಮಹಿಳಾ ಪ್ರಧಾನ ತುಳು ಚಲನಚಿತ್ರ “ಮೀರಾ” ಇದೀಗ OTT ಯಲ್ಲಿ ಬಿಡುಗಡೆಗೆ ಸಿದ್ಧವಾಗಿದೆ . ಅಸ್ತ್ರ, ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ ಈ ಚಿತ್ರ, ಸೆಪ್ಟೆಂಬರ್ 26 (ಶುಕ್ರವಾರ) ರಂದು “ಟಾಕೀಸ್ OTT ಆ್ಯಪ್” ನಲ್ಲಿ ಬಿಡುಗಡೆಯಾಗಲಿದೆ ಎಂದು ಅಸ್ತ್ರ ಗ್ರೂಪ್ ಸಿಇಒ, ಚಿತ್ರ ನಿರ್ಮಾಪಕ ಲಂಚುಲಾಲ್ ಮಾಹಿತಿ ನೀಡಿದ್ದಾರೆ. ಚಿತ್ರವು ಪ್ರೀಮಿಯರ್ ಶೋ ನಲ್ಲೆ ಯಶಸ್ಸು ಕಂಡು ಜನಮನ ಗೆದ್ದಿತ್ತು. ನಾಯಕಿಯಾಗಿ ಇಶಿತಾ ಶೆಟ್ಟಿ ಅಭಿನಯಿಸಿದ್ದು, ಜೊತೆಗೆ ಅರವಿಂದ್ ಬೋಳಾರ್, ಜೆ.ಪಿ….

Read More

ಮೈಸೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವಕ ಹೃದಯಾಘಾತದಿಂದ ನಿಧನ.

ಕಡಬ ತಾಲೂಕಿನ ಕಡಬ ಗ್ರಾಮದ ಪಿಜಕಳ ಪರಪ್ಪು ನಿವಾಸಿ ಜನಾರ್ದನ ನಾಯ್ಕ ಅವರ ಪುತ್ರ ವಿನೋದ್ ಪಿ.ಜೆ.(23 ವ.) ಹೃದಯಾಘಾತದಿಂದ ಮೈಸೂರಿನಲ್ಲಿ ಭಾನುವಾರ ರಾತ್ರಿ ನಿಧನ ಹೊಂದಿದರು. ಮೈಸೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ವಿನೋದ್ ಅವರಿಗೆ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡು ಕಡಿಮೆಯಾಗಿತ್ತು. ಭಾನುವಾರ ರಾತ್ರಿ ತನ್ನ ರೂಂನಲ್ಲಿ ಊಟ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಅಷ್ಟರಲ್ಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಅವಿವಾಹಿತರಾಗಿದ್ದ ಮೃತರು ತಂದೆ, ತಾಯಿ…

Read More

ಮಂಗಳೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ.

ಮಂಗಳೂರು: ದಸರಾ ಹಬ್ಬ ಮಾತ್ರವಲ್ಲ, ನಂಬಿಕೆ, ಸಂಸ್ಕೃತಿ ಹಾಗು ಒಗಟ್ಟಿನ ಪ್ರತೀಕ. ಕುದ್ರೋಳಿಯಲ್ಲಿ ನಡೆಯುತ್ತಿರು ಈ ಉತ್ಸವ ಮಂಗಳೂರನ್ನು ಮತ್ತಷ್ಟು ವಿಭಿನ್ನವಾಗಿಸಿದೆ ಎಂದು ನವಮಂಗಳೂರು ಬಂದರು ಪ್ರಾಧಿಕಾರ ( ಎನ್ಎಂಪಿಎ) ಅಧ್ಯಕ್ಷ ಡಾ.ಎ.ವೆಂಕಟರಮಣ ಅಕ್ಕರಾಜು ಹೇಳಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.ಮಂಗಳೂರು ದಸರಾ ಮೈಸೂರ ದಸರಾದಷ್ಟೇ ಪ್ರಸಿದ್ಧಿ‌ ಪಡೆದಿದೆ. ಭಾರತೀಯ ಧರ್ಮ, ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.ತಾಸೆ ಮತ್ತು ಡೋಲು ಬಡಿಯುವ ಮೂಲಕ ತುಳುನಾಡಿನ…

Read More

ಮಂಗಳೂರು ದಸರಾ ದೀಪಾಲಂಕಾರ ಉದ್ಘಾಟನೆ:- ಶಾಸಕ ಕಾಮತ್

ಪ್ರಸಿದ್ದ ಮಂಗಳೂರು ದಸರಾ ಹಬ್ಬಕ್ಕೆ ಇಡೀ ನಗರವು ವಿದ್ಯುತ್ ದೀಪಾಲಂಕಾರದಿಂದ ಸಿಂಗಾರಗೊಂಡಿದ್ದು ನಗರದ ಪಿವಿಎಸ್ ವೃತ್ತದ ಬಳಿ ನವರಾತ್ರಿಯ ಮೊದಲನೇ ದಿನದಂದು ಶಾಸಕ ವೇದವ್ಯಾಸ ಕಾಮತ್ ರವರು ದೀಪಾಲಂಕಾರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ದಸರಾ ನಮ್ಮ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ದೇಶ ವಿದೇಶಗಳಿಂದ ಭಕ್ತರನ್ನು, ಪ್ರವಾಸಿಗರನ್ನು ಸೆಳೆಯುವ ಇಂತಹ ಹಬ್ಬದ ಸಂದರ್ಭದಲ್ಲಿ ಇಡೀ ನಗರಕ್ಕೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಶೇಷವಾಗಿ ಚಿಂತನೆ ನಡೆಸಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿತ್ತು….

Read More

ಮುಗುಳು ನಗೆಯ ಶಾರದಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ಜಗತ್ ಪ್ರಸಿದ್ಧ ಮಂಗಳೂರು ದಸರಾಗೆ ಚಾಲನೆ…..!

ಮಂಗಳೂರು: ಕರ್ನಾಟಕದಲ್ಲಿ ಮೈಸೂರಿನಂತೆ ಸಂಭ್ರಮದಿಂದ ಇನ್ನೊಂದು ಕಡೆ ದಸರಾವನ್ನು ಆಚರಿಸುವ ಊರೆಂದರೆ ಅದು ಕರಾವಳಿ ನಗರಿ ಮಂಗಳೂರು. ಇದನ್ನು ಮಂಗಳೂರು ದಸರಾ ಎಂದೇ ಕರೆಯುತ್ತಾರೆ.ಇಲ್ಲಿ ನವರಾತ್ರಿಗೆ ಶಾರದಾದೇವಿಯನ್ನು ಪ್ರತಿಷ್ಠಾಪಿಸುವುದೇ ವಿಶೇಷ. ಮಂಗಳೂರು ದಸರಾ 2025ರ ಉದ್ಘಾಟನೆಯು ಇಂದು, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳನ್ನು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮತ್ತು ಬ್ರಹ್ಮಕುಮಾರಿಗಳ ಮುಖ್ಯಸ್ಥೆ ಬ್ರಹ್ಮಕುಮಾರಿ ವಿಶ್ವೇಶ್ವರೀ ಜಿ ಅವರ ಉಪಸ್ಥಿತಿಯಲ್ಲಿ, ಜನಾರ್ದನ ಪೂಜಾರಿ ಅವರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಎ.ವಿ….

Read More

ಹುಟ್ಟಿನ ಸಾರ್ಥಕತೆ ಮೆರೆಯುವ ರೀತಿಯಲ್ಲಿ ಹುಟ್ಟು ಹಬ್ಬವನ್ನ ಆಚರಿಸಿದ ಲಂಚುಲಾಲ್.

ಅಸ್ತ್ರ ಗ್ರೂಪ್ CEO, ಸಿನೆಮಾ ನಟ,ನಿರ್ಮಾಪಕ, CATCA ದ ಅಧ್ಯಕ್ಷ ಕೊಡುಗೈ ದಾನಿ ಲಂಚು ಲಾಲ್ ಅವರು ಹತ್ತು ಹಲವು ಸಮಾಜಮುಖಿ ಚಟುವಟಿಕೆಗಳನ್ನು ಮಾಡುವ ಮೂಲಕ ಜನಪ್ರಿಯತೆ ಪಡೆದಿದ್ದು ,ಇವರು ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುವ ಮೂಲಕ ಮತ್ತೆ ಎಲ್ಲರ ಗಮನ ಸೆಳೆದಿದ್ದಾರೆ. ತೊಕ್ಕೋಟು ಸಮೀಪದ ಗಟ್ಟಿ ಸಮಾಜ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಳ್ಳಾಲ, ತೊಕ್ಕೊಟ್ಟು ಪರಿಸರದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್, ಅಕ್ಕಿ, ಹಾಗೂ ದಿನಸಿ ಕಿಟ್ ನೀಡುವ ಮೂಲಕ ವಿಶೇಷವಾಗಿ ತಮ್ಮ…

Read More
error: Content is protected !!