ಪುತ್ತೂರಿನಲ್ಲಿ ದಲಿತ ನಿಂದನೆ ಆರೋಪ ತಳ್ಳಿ ಹಾಕಿದ ಕಾಂಗ್ರೆಸ್ ಎಸ್ಸಿ ಘಟಕ; ಅಶೋಕ್ ರೈ ವಿರುದ್ಧದ ಆರೋಪ ರಾಜಕೀಯ ಪ್ರೇರಿತವೆಂದ ಬಾಬು ಮರಿಕೆ
ಪುತ್ತೂರು: ವಿಧಾನ ಪರಿಷತ್ ವಿರೋಧÀ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಉಪ್ಪಿನಂಗಡಿಯಲ್ಲಿ ಶಾಸಕ ಅಶೋಕ್ ರೈ ವಿರುದ್ಧ ರಾಜಕೀಯ ಹೇಳಿಕೆ ನೀಡಿ ಲೇವಡಿ ಮಾಡಿದ್ದರು. ಇದಕ್ಕೆ ಶಾಸಕರು ಕೂಡ ರಾಜಕೀಯ ಹೇಳಿಕೆ ಮೂಲಕ ಪ್ರತ್ಯುತ್ತರ ನೀಡಿದ್ದಾರೆಯೇ ಹೊರತು ಎಲ್ಲೂ ಕೂಡ ಅವರು ದಲಿತ ಸಮುದಾಯವನ್ನು ನಿಂದಿಸುವ ಹೇಳಿಕೆ ನೀಡಿಲ್ಲ ಎಂದು ಪುತ್ತೂರು ಕಾಂಗ್ರೆಸ್ ಎಸ್ಸಿ ಘಟಕ ಹೇಳಿದೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಬಾಬು ಮರಿಕೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಶೋಕ್ ರೈ…
