ದಸರಾದಲ್ಲಿ ಕಂಬಳಕ್ಕೆ ₹8 ಕೋಟಿ? ಮೊದಲು ಕರಾವಳಿಯ ಕಂಬಳಗಳಿಗೆ ನ್ಯಾಯ ನೀಡಿ

ಮೈಸೂರು ದಸರಾದಲ್ಲಿ ಕಂಬಳ ಕ್ರೀಡೆಯನ್ನು ಪರಿಚಯಿಸುವ ಬಗ್ಗೆ ಈಗ ಮಾಧ್ಯಮದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಸರ್ಕಾರವೇಕೋ ಮೈಸೂರಿನಲ್ಲಿ ಕಂಬಳ ನಡೆಸಲೇಬೇಕೆಂಬ ಹಠಕ್ಕೆ ಬಿದ್ದಿರುವುದು ಮೇಲ್ನೋಟಕ್ಕೆ ಭಾಸವಾಗುತ್ತಿದೆ. ಆದರೆ ಈ ಬಗ್ಗೆ ನಿರ್ಣಯಕ್ಕೆ ಬರುವುದಕ್ಕೆ ಮೊದಲು ಎಲ್ಲ ದೃಷ್ಟಿಕೋನಗಳಿಂದಲೂ ಯೋಚನೆ ಮಾಡಬೇಕಾದ ಅಗತ್ಯವಿದೆ. ಕಂಬಳ ಕರಾವಳಿಯ ಸಾಂಸ್ಕೃತಿಕ ಕ್ರೀಡೆ. ಇದಕ್ಕೆ ಅದರದ್ದೇ ಆದ ಇತಿಹಾಸ ಹಾಗೂ ಸ್ಥಳೀಯ ಮೆರಗುಗಳಿವೆ. ಭಾಷೆ, ಸಂಸ್ಕ್ರತಿ, ಕಲೆ, ಆಚರಣೆಗಳು ಪ್ರದೇಶದಿಂದ ಪ್ರದೇಶಕ್ಕೆ ಬದಲಾಗುವುದು ಮಾತ್ರವಲ್ಲ, ಅದರ ಆಕರ್ಷಣೆ ಹಾಗೂ ಮೆಚ್ಚುವಿಕೆಯಲ್ಲೂ ವ್ಯತ್ಯಾಸಕ್ಕೆ ಒಳಪಡುತ್ತವೆ. ಹೀಗಾಗಿ…

Read More

ಜು.18ರಂದು ಐಎಟಿ ದಕ್ಷಿಣ ಕನ್ನಡ-ಉಡುಪಿ ಜಂಟಿ ಘಟಕ ಉದ್ಘಾಟನೆ

ಮಂಗಳೂರು: ಕೃಷಿ ತಂತ್ರಜ್ಞರ ಸಂಸ್ಥೆ (ಐಎಟಿ) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಜಂಟಿ ಘಟಕದ (23ನೇ ಘಟಕ) ಉದ್ಘಾಟನಾ ಸಮಾರಂಭವು ಜುಲೈ 18ರಂದು ಬೆಳಿಗ್ಗೆ 10 ರಿಂದ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆಯಲಿದೆ ಎಂದು ಐಎಟಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎಸ್.ಎಂ. ಶಿವಪ್ರಕಾಶ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್…

Read More

ಕೋರಿಯಾರ್ ಸೇತುವೆ ನಿರ್ಮಾಣಕ್ಕೆ ೩೦ ಕೋಟಿ ರೂ ಮಂಜೂರು: ಶಾಸಕಿ ಭಾಗೀರಥಿ ಮುರುಳ್ಯ

ಕಡಬ ತಾಲೂಕಿನ ೧೦೨ ನೇ ನೆಕ್ಕಿಲಾಡಿ ಗ್ರಾಮದ ಕೋರಿಯಾರ್ ಎಂಬಲ್ಲಿ ಕುಮಾರಾಧಾರ ನದಿಗೆ ಸರ್ವಋತು ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರಕಾರ ಲೋಕೋಪಯೋಗಿ ಇಲಾಖಾ ಮುಖಾಂತರ ೩೦ ಕೋಟಿ ರೂ ಮಂಜೂರುಗೊಳಿಸಿದೆ, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಬುಧವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೋರಿಯಾರ್ ನಿಂದ ಸಂಸದರ ಆದರ್ಶ ಗ್ರಾಮ ಬಳ್ಪವನ್ನು ಸಂಪರ್ಕಿಸುವ ಈ ಸೇತುವೆ ನಿರ್ಮಾಣವಾಗಬೇಕು ಎಂದು ಕಳೆದ ಹತ್ತಾರು ವರ್ಷಗಳಿಂದ ಈ ಭಾಗದ ಜನತೆ ಅಹವಾಲು…

Read More

ಬರ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ: ಜೆಡಿಎಸ್ ಎಂ ಎಲ್‌ ಸಿ ಎಸ್.ಎಲ್. ಬೋಜೇಗೌಡ

ಮಂಗಳೂರು:ರಾಜ್ಯದಲ್ಲಿ ಮಳೆ ಕೊರತೆಯಿಂದ ಬರದ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿಯ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು. ರಾಜ್ಯ ಸರ್ಕಾರ ಇದುವರೆಗೆ ಯಾವುದೇ ತಾಲೂಕು ಅಥವಾ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿಲ್ಲ. ಶ್ರಾವಣ…

Read More

ಉಳ್ಳಾಲ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸಿ: ಸಚಿವರಿಗೆ ಎಸ್.ಎಲ್. ಬೋಜೇಗೌಡ ಆಗ್ರಹ

ಮಂಗಳೂರು, ಜು. 16: ಉಳ್ಳಾಲದಲ್ಲಿ ವರ್ಷಂಪ್ರತಿ ಮರುಕಳಿಸುತ್ತಿರುವ ಕಡಲ್ಕೊರೆತ ಸಮಸ್ಯೆಗೆ ತಾತ್ಕಾಲಿಕ ಕಾಮಗಾರಿಗಳ ಬದಲಾಗಿ ಶಾಶ್ವತ ಹಾಗೂ ವೈಜ್ಞಾನಿಕ ಪರಿಹಾರ ಕಲ್ಪಿಸುವಂತೆ ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಆಗ್ರಹಿಸಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಳ್ಳಾಲ ಕ್ಷೇತ್ರವನ್ನು ಹಲವು ಬಾರಿ ಪ್ರತಿನಿಧಿಸಿರುವ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅವರ ಕುಟುಂಬಕ್ಕೆ ಈ ಭಾಗದ ಸಮಸ್ಯೆಗಳ ಕುರಿತು ಸಂಪೂರ್ಣ ಅರಿವಿದ್ದರೂ, ಕಡಲ್ಕೊರೆತಕ್ಕೆ…

Read More

ಪ್ರಾರ್ಥನೆಯೊಂದಿಗೆ ಶಿರೂರಿನತ್ತ ಕಾದು ನೋಡಿದ ದಿನಗಳು; ಕಣ್ಣೀರಿನ ನೆನಪಾಗಿ ಅರ್ಜುನ್; ಶಿರೂರು ಭೂಕುಸಿತ ದುರಂತಕ್ಕೆ ಎರಡು ವರ್ಷ

ಕರ್ನಾಟಕದ ಶಿರೂರಿನಲ್ಲಿ ಸಂಭವಿಸಿದ ಭೂಕುಸಿತ ದುರಂತಕ್ಕೆ ಇಂದು ಎರಡು ವರ್ಷಗಳು ಪೂರ್ಣಗೊಂಡಿವೆ. 2024ರ ಜುಲೈ 16ರ ಬೆಳಿಗ್ಗೆ ಸಂಭವಿಸಿದ ಭಾರಿ ಭೂಕುಸಿತ ದೊಡ್ಡ ದುರಂತಕ್ಕೆ ಕಾರಣವಾಯಿತು. ಮಲಯಾಳಿ ಲಾರಿ ಚಾಲಕ ಅರ್ಜುನ್ ಅವರನ್ನು ಪತ್ತೆಹಚ್ಚಲು ನಡೆದ ಶೋಧ ಕಾರ್ಯ ದೇಶದ ಗಮನ ಸೆಳೆದಿತ್ತು. 72 ದಿನಗಳ ನಂತರ ಗಂಗಾವಳಿ ನದಿಯಲ್ಲಿ ಪತ್ತೆಯಾದ ಲಾರಿಯೊಳಗಿಂದ ಅರ್ಜುನ್ ಅವರ ಮೃತದೇಹವನ್ನು ಹೊರತೆಗೆಯಲಾಯಿತು. 2024ರ ಜುಲೈ 16ರಂದು ಬೆಳಿಗ್ಗೆ ಸುಮಾರು 8.15ಕ್ಕೆ ಕರ್ನಾಟಕದ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ದುರಂತ…

Read More

ವಿದ್ವಾನ್ ರಮನಾಥ್ ಕೋಟೆಕಾರ್ ಜನ್ಮದಿನದ ಅಂಗವಾಗಿ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಯಶಸ್ವಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕೊಲ್ಯ ಘಟಕ ಇದರ ಆಶ್ರಯದಲ್ಲಿ ನಡೆದ ಕರಾವಳಿ ತೀರದ ಹೆಮ್ಮೆಯ ಸಾಹಿತಿ ಜಾನಪದ ವಿದ್ವಾಂಸರು, ಲೇಖಕರು ಆಗಿರುವ ವಿದ್ವಾನ್ ದಿ.ರಮನಾಥ್ ಕೋಟೆಕಾರ್ ಇವರ ಜನುಮದಿನದ ಪ್ರಯುಕ್ತ ಆಯೋಜಿಸಲಾದ ರಾಜ್ಯ ಮಟ್ಟದ ಆನ್ಲೈನ್ ಕಥೆ ಮತ್ತು ಕವನ ಸ್ಪರ್ಧೆಗೆ ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಉತ್ತಮ ಪ್ರತಿಕ್ರಿಯೆಗಳು ಲಭ್ಯವಾಗಿದ್ದು, ಕಥಾ ವಿಭಾಗದಲ್ಲಿ ಒಟ್ಟು 133 ಕಥೆಗಳು ಹಾಗೂ ಕವನ ವಿಭಾಗದಲ್ಲಿ ಒಟ್ಟು 231 ಕವನಗಳು ಸ್ಫರ್ಧೆಗೆ ಬಂದಿರುತ್ತದೆ….

Read More

ಕಳವಿನ ವೇಳೆ ಕಬ್ಬಿಣದ ತಂತಿ ಕುತ್ತಿಗೆಗೆ ಸಿಲುಕಿ ಸಾವು: ಓರ್ವ ಆರೋಪಿ ಬಂಧನ

ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಯುಡಿಆರ್: 35/2026 ಕಲಂ: 194 (3)(iv)ಬಿ.ಎನ್. ಎಸ್ ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿ, ಸದ್ರಿ ಮುಶ್ತಕ್ ಮೃತಪಟ್ಟ ಸ್ಥಳದಲ್ಲಿ ಕಳವು ಕೃತ್ಯ ನಡೆದಿರುವುದು ಕಂಡುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಅಪರಾಧ ಕ್ರಮಾಂಕ 73/2026, ಕಲಂ 331(4),305 ಜೊತೆಗೆ 3(5) ಬಿಎನ್ ಎಸ್-2023 ಪ್ರಕರಣ ದಾಖಲಾಗಿದ್ದು, ಕಳವು ಕೃತ್ಯದ ತನಿಖೆ ನಡೆಸಲಾಗಿ ಆರೋಪಿ ಬೆಳ್ತಂಗಡಿ ಕಾಶಿಪಟ್ನ ನಿವಾಸಿ ಪಿ ಇಬ್ರಾಹಿಂ ಲತೀಫ್ (36) ಎಂಬಾತನನ್ನು ದಿನಾಂಕ: 14.07.2026 ರಂದು ಬೆಳ್ತಂಗಡಿ…

Read More

ಪಿಆರ್‌ಸಿ ಅಧಿಸೂಚನೆ ಹಿಂಪಡೆಯಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೆಂಗಳೂರು: ರಾಜ್ಯ ಸರ್ಕಾರ ಜೂನ್ 26, 2026ರಂದು ಹೊರಡಿಸಿರುವ ‘ಶಾಶ್ವತ ನಿವಾಸ ಪ್ರಮಾಣಪತ್ರ’ (PRC) ನೀಡುವ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಎನ್. ರವಿಕುಮಾರ್ ನೇತೃತ್ವದ ನಿಯೋಗವು ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ‘ಶಾಶ್ವತ ನಿವಾಸಿ’ ಎಂಬ ಹೊಸ ವರ್ಗವನ್ನು ಸೃಷ್ಟಿಸುವ ಅಧಿಕಾರ…

Read More

ಆಗುಂಬೆ ಘಾಟಿ ವೀಕ್ಷಿಸಿದ ಸಚಿವ ಸತೀಶ್ ಜಾರಕಿಹೊಳಿ

ಉಡುಪಿ: ಆಗುಂಬೆ ಘಾಟಿಯಲ್ಲಿ ಸುರಂಗ (ಟನಲ್) ನಿರ್ಮಾಣದ ಕುರಿತು ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ಆಗುಂಬೆ ಘಾಟಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಆಗುಂಬೆ ಸೂರ್ಯಾಸ್ತ ವೀಕ್ಷಣಾ ಸ್ಥಳದಿಂದ ಘಾಟಿಯ ಭೌಗೋಳಿಕ ಪರಿಸ್ಥಿತಿ ಹಾಗೂ ರಸ್ತೆ ಸ್ಥಿತಿಯನ್ನು ಅವಲೋಕಿಸಿದ ಸಚಿವರು, ಘಾಟಿಯ ಧಾರಣಾ ಸಾಮರ್ಥ್ಯ ಕುಸಿತ ಹಾಗೂ ಸುರಕ್ಷತೆ ಕುರಿತಂತೆ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳೊಂದಿಗೆ ಚರ್ಚಿಸಿದರು. ಸಚಿವರೊಂದಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ಉಪಸ್ಥಿತರಿದ್ದರು. ಇದಕ್ಕೂ ಮುನ್ನ…

Read More
error: Content is protected !!