ಸಿಪಿಐಎಂ ನಿಂದ ಜಿಲ್ಲೆಯಾದ್ಯಂತ ಹೋರಾಟ, ಮೇ 14 ರಂದು ಮಂಗಳೂರಿನಲ್ಲಿ ಬೃಹತ್ ಮೆರವಣಿಗೆ

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಹಿತ ಎಲ್ಲಾ ಹಂತದ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸಲು, ಪ್ರಥಮ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಅದಕ್ಕಾಗಿ ಗುರುತಿಸಿ, ಒಪ್ಪಂದದ ಆದೇಶ ಹೊರಡಿಸಿರುವುದನ್ನು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಇದು ಸಾರ್ವಜನಿಕ‌ ಆರೋಗ್ಯ ರಂಗವನ್ನು ಪೂರ್ಣ ಪ್ರಮಾಣದಲ್ಲಿ ಖಾಸಗೀಕರಣಗೊಳಿಸುವ ಸರಕಾರದ ಪ್ರತಿಗಾಮಿ ನಡೆಯಾಗಿದೆ. ರಾಜ್ಯ ಸರಕಾರವು ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ ಮಾಡಿಕೊಂಡಿರುವ ಈ ಒಪ್ಪಂದವನ್ನು ತಕ್ಷಣ ಕೈ ಬಿಡಬೇಕು, ವೈದ್ಯರು,…

Read More

ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವ : ಸಚಿವ ದಿನೇಶ್ ಗುಂಡೂರಾವ್ ಗೆ ಆಮಂತ್ರಣ

ಮಂಗಳೂರು : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ , ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ , ಕರ್ನಾಟಕ ಸರಕಾರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು – ಇವುಗಳ ಸಹಯೋಗದಲ್ಲಿ ಮೇ 16ರಂದು ಕಾಸರಗೋಡಿನ ಸುಬ್ಬಯಕಟ್ಟೆ ಅನುದಾನಿತ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯುವ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವಕ್ಕೆ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಮಂಗಳೂರು ಸರ್ಕ್ಯೂಟ್ ಹೌಸ್…

Read More

ಸಂತೆಕಟ್ಟೆ: ಇಂದಿನಿಂದ ಹಲಸು ಮತ್ತು ಹಣ್ಣು ಮೇಳ

ಉಡುಪಿ: ಸಂತೆಕಟ್ಟೆ ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್ ನಲ್ಲಿ ಮೇ 8ರಿಂದ 10ರ ವರೆಗೆ ಹಲಸು ಮತ್ತು ಹಣ್ಣು ಮೇಳವನ್ನು ಆಯೋಜಿಸಲಾಗಿದೆ ಎಂದು ಮೇಳದ ಆಯೋಜಕ ಮುಹಮ್ಮದ್ ಮುಕ್ತಾರ್ ಹುಸೇನ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ‌ ಮಾಹಿತಿ ನೀಡಿದ ಅವರು, ಚಂದ್ರ ಹಲಸು, ಕೇಸರ್ ಹಲಸು, ಏಕದಶಿ ಹಾಗೂ ರುದ್ರಾಕ್ಷಿ ಈ ನಾಲ್ಕು ತಳಿಯ ಹಲಸು ಈ ಬಾರಿ ಮೇಳದ ಪ್ರಮುಖ ಆಕರ್ಷಣೆಯಾಗಿದೆ. ಹಲಸಿನ ಹಣ್ಣನ್ನು ಆಂಧ್ರಪ್ರದೇಶದಿಂದ ತರಿಸಲಾಗಿದೆ. ಇದರ ಜೊತೆಗೆ ಹಲಸಿನ ಸಂಡಿಗೆ, ಹಪ್ಪಳ, ದೋಸೆ,…

Read More

ಉಡುಪಿ: ಗ್ಯಾಸ್‌ ದರ ಏರಿಕೆ ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ಉಡುಪಿ: ವಾಣಿಜ್ಯ ಗ್ಯಾಸ್ ದರ ತೀವ್ರ ಏರಿಕೆ ವಿರುದ್ಧ ಇಂದು ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ನಗರದ ಬ್ರಹ್ಮಗಿರಿ ಸರ್ಕಲ್ ನಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕಳೆದ ಮೂರು ತಿಂಗಳಲ್ಲಿ‌ ಮೂರು ಬಾರಿ ವಾಣಿಜ್ಯ ಗ್ಯಾಸ್ ಬೆಲೆ ಏರಿಸಲಾಗಿದೆ.ಈ ಬಾರಿ 993 ರೂ.ಏರಿಸಿದ್ದು ಸಾರ್ವಕಾಲಿಕ ದಾಖಲೆಯಾಗಿದೆ. ಯುದ್ಧದ ನೆಪ ಹೇಳಿ ಈ ಮಟ್ಟದಲ್ಲಿ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರ ಹೊಟೇಲ್ ಉದ್ಯಮಕ್ಕೆ ಭಾರೀ ಹೊಡೆತ ನೀಡಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.ಬೆಲೆ…

Read More

ಪಲ್ಗುಣಿ ನದಿಯಲ್ಲಿ ಮೀನುಗಳ ಮಾರಣಹೋಮ: ಮಾಲಿನ್ಯಕ್ಕೆ ಜನರ ಆಕ್ರೋಶ

ಮಂಗಳೂರು: ಪಲ್ಗುಣಿ ನದಿ‌ ಕಲುಶಿತಗೊಂಡಿದೆ. ಅದರ ದೇಖಿ ರೇಖಿ ನೋಡಬೇಕಾದ ಮಂಗಳೂರು‌ ಮಹಾನಗರ ಪಾಲಿಕೆ ಕಣ್ಣು‌ಮುಚ್ಚಿ,‌ಕಿವಿ ಮುಚ್ಚಿ, ಬಾಯಿ ಮುಚ್ಚಿ ಕುಳಿತಿದೆ. ಪಾಲಿಕೆ ನಿರ್ಲಕ್ಷಕ್ಕೆ ರಾಶಿ ರಾಶಿ‌ ಮೀನುಗಳು ಸಾಯುತ್ತಿವೆ. ಮಂಗಳೂರು ನಗರದ ಹೊರವಲಯದ ಮಳವೂರು ಕೆಂಜಾರ್ ವ್ಯಾಪ್ತಿಯಲ್ಲಿ ಹರಿಯುವ ಪಲ್ಗುಣಿ ನದಿ ಕೆಲ ವರ್ಷಗಳ‌ ಹಿಂದೆ ಜೀವಂತ ನದಿಯಾಗಿತ್ತು. ಮೀನುಗಳು ಬದುಕಿಕೊಂಡಿದ್ದವು. ನೀರೂ ಸ್ವಚ್ಚವಾಗಿತ್ತು. ಈಗ ಅದು‌ ಮೀನುಗಳಿಗೆ ರುದ್ರಭೂಮಿಯಾಗಿದೆ. ಎಲ್ಲಿ ನೋಡಿದರೂ ಸತ್ತು ತೇಲುತ್ತಿರುವ ಜಲಚರಗಳ ರಾಶಿ‌ ಕಾಣುತ್ತಿದೆ. ಇತ್ತೀಚೆಗಷ್ಟೇ ಕಪ್ಪು ಬಣ್ಣಕ್ಕೆ ತಿರುಗಿದ್ದ…

Read More

ಮೇ.೧೦ ಕೆಮ್ಮಾಯಿಯಲ್ಲಿ ಆರ್.ಕೆ ಸ್ಪೋಟ್ಸ್ ಮತ್ತು ಆರ್ಟ್ಸ್ ಕ್ಲಬ್‌ನಿಂದ ಉಚಿತ ಪುಸ್ತಕ ವಿತರಣೆ

ಪುತ್ತೂರು:ಆರ್‌ಕೆ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಕ್ಲಬ್ ಪುತ್ತೂರು ಇದರ ವತಿಯಿಂದ ವಿದ್ಯೆಯ ಹಾಡಿಗೆ ಪ್ರೇರಣೆಯ ಕೈ ಹಿಡಿತ ಎಂಬ ಧ್ಯೇಯ ವಾಕ್ಯದಲ್ಲಿ ೨೦೦ ವಿದ್ಯಾರ್ಥಿಗಳ:ಇಗೆ ಉಚಿತ ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮವು ಮೇ.೧೦ರಂದು ಬೆಳಿಗ್ಗೆ ಕೆಮ್ಮಾಯಿ ಜಂಕ್ಷನ್‌ನಲ್ಲಿ ನಡೆಯಲಿದೆ ಎಂದು ಆಶೀರ್ ಕೆಮ್ಮಾಯಿ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.ಕ್ರೀಡೆ, ಕಲೆ, ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ಉತ್ತೇಜನ ನೀಡುವ ನಿಟ್ಟಿನಲ್ಲಿ ಸ್ಥಾಪನೆಗೊಂಡ ಆರ್‌ಕೆ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಕ್ಲಬ್ ಶಾಲಾ ಕಾಲೇಜು ಪ್ರಾರಂಭವಾಗುವ ಮುನ್ನ ಬಡ ವಿದ್ಯಾರ್ಥಿಗಳನ್ನು ಗುರುತಿಸಿ…

Read More

ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ನೀಡಲು ಸ್ಪೀಕರ್ ಸೂಚನೆ

ಕುಡಿಯುವ ನೀರಿನ ಯೋಜನೆಗಳಿಗೆ ವಿಳಂಬವಿಲ್ಲದೇ ವಿದ್ಯುತ್ ಸಂಪರ್ಕ ನೀಡಲು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಸೂಚಿಸಿದ್ದಾರೆ.ಅವರು ಗುರುವಾರ ಪ್ರಜಾ ಸೌಧ ದಲ್ಲಿ ಉಳ್ಳಾಲ ತಾಲೂಕು ಬರ ನಿರ್ವಹಣೆ ಮತ್ತು ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಲವೆಡೆ ಟ್ಯಾಂಕ್ ನಿರ್ಮಿಸಿ ಬೋರ್ ವೆಲ್ ಕೊರೆಯಲಾಗಿದ್ದರೂ ವಿದ್ಯುತ್ ಸಂಪರ್ಕ ವಿಳಂಬವಾಗಿ ನೀರು ಪೂರೈಕೆಗೆ ತೊಂದರೆಯಾಗುತ್ತಿವೆ. ಡೆಪಾಸಿಟ್ ಮೊತ್ತಕ್ಕೆ ಕಾಯದೆ, ವಿದ್ಯುತ್ ಸಂಪರ್ಕ ನೀಡಲು ಈಗಾಗಲೇ ಸರಕಾರ ಸೂಚಿಸಿದೆ. ಮುಂದೆ ಗ್ರಾಮ ಪಂಚಾಯತ್…

Read More

ಮನ್ರೇಗಾ ರದ್ದು ವಿರುದ್ಧ ಸುಪ್ರೀಂ ಕೋರ್ಟ್ ಮೊರೆ: ರಾಜ್ಯ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್‌ಆರ್‌ಇಜಿಎ) ರದ್ದುಪಡಿಸಿ ಜಾರಿಗೆ ತಂದಿರುವ ‘ವಿಕಸಿತ ಭಾರತ್-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ)’ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಕೇಂದ್ರ ಸರ್ಕಾರ ಮನ್ರೇಗಾಗೆ ಬದಲಾಗಿ VB-G RAM-G ಕಾಯ್ದೆ ಜಾರಿಗೊಳಿಸಿರುವುದಕ್ಕೆ ರಾಜ್ಯ ಸರ್ಕಾರ ಈಗಾಗಲೇ ವಿರೋಧ ವ್ಯಕ್ತಪಡಿಸಿ, ಎಂಎನ್‌ಆರ್‌ಇಜಿಎ ಪುನರ್ ಸ್ಥಾಪನೆಗೆ ಆಗ್ರಹಿಸಿತ್ತು. ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು…

Read More

ಐಕಳ ಬಳಿ ಕಾರು ಪಲ್ಟಿ: ಚಾಲಕ ಪವಾಡಸದೃಶವಾಗಿ ಪಾರು

ಮೂಡುಬಿದಿರೆ: ಪಕ್ಷಿಕೆರೆಯಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ಬಳಿ ಬುಧವಾರ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಪವಾಡಸದೃಶ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾನೆ. ಮೂಲಗಳ ಪ್ರಕಾರ, ಕೆಎ-20 ನೋಂದಣಿ ಸಂಖ್ಯೆಯ ಕಾರು ಬೆಳಗಿನ ಜಾವ ಸುರಿದ ಮಳೆಯ ಹಿನ್ನೆಲೆಯಲ್ಲಿ ಜಾರುವ ರಸ್ತೆಯಲ್ಲಿ ತಿರುವು ಪಡೆಯುವ ವೇಳೆ ನಿಯಂತ್ರಣ ತಪ್ಪಿದೆ. ಪರಿಣಾಮ ವಾಹನ ಪಲ್ಟಿಯಾಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ ಸ್ಥಳದಲ್ಲಿ ರಸ್ತೆಯ ಮೇಲೆ ಎಣ್ಣೆಯ…

Read More

ಉಡುಪಿಯಲ್ಲಿ ಅಕಾಲಿಕ ಮಳೆ: ಬಿಸಿಲ ಬೇಗೆಯಿಂದ ಕಂಗೆಟ್ಟ ಜನರಿಗೆ ತಂಪಿನ ಅನುಭವ

ಉಡುಪಿ: ಉಡುಪಿ ತಾಲೂಕಿನಾದ್ಯಂತ ಇಂದು ಬೆಳಿಗ್ಗೆ ಅಕಾಲಿಕ ಮಳೆ ಸುರಿದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.ಬೆಳಿಗ್ಗೆ 10ಗಂಟೆಗೆ ಸುಮಾರಿಗೆ ಶುರುವಾದ ಗುಡುಗು ಸಹಿತ ಮಳೆಯು ಎರಡು ತಾಸುಗಿಂತಲೂ‌ ಹೆಚ್ಚು ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಿಂದ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ನಗರ, ಸಂತೆಕಟ್ಟೆ, ಮಣಿಪಾಲ, ಅಲೆವೂರು, ಪರ್ಕಳ, ಮಲ್ಪೆ ಮೊದಲಾದ ಕಡೆಗಳಲ್ಲಿ ಜೋರಾಗಿ ಮಳೆ ಸುರಿದಿದೆ. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಬಳಿಕ ಎಡಬಿಡದೆ ಸುರಿದ ಮಳೆಯು ಬಿಸಿಲಿನಿಂದ…

Read More
error: Content is protected !!