“ಅನುಭವಿ ಮತ್ತು ವಂಶಪಾರಂಪರಿಕ ವೈದ್ಯರು’ಗಳನ್ನು “ನಕಲಿ” ವೈದ್ಯರೆಂದು ಕೆರೆದು ಕಾನೂನು ದಬ್ಬಾಳಿಕೆ ಮಾಡುತ್ತಿದೆ. -ಬಿ.ಎಸ್ ಚಂದ್ರು

ಮಂಗಳೂರು: ದೇಶದಲ್ಲಿಯೇ ಕರ್ನಾಟಕ ಸರ್ಕಾರ ಮಾತ್ರ ಕರ್ನಾಟಕ ಖಾಸಗಿ ವೈದ್ಯಕೀಯ ಅಧಿನಿಯಮ 2007 ಮತ್ತು ತಿದ್ದುಪಡಿಗಳನ್ನು ಜಾರಿಗೆ ತಂದು ರಾಜ್ಯದಲ್ಲಿ ಸರ್ಕಾರದ ಫಲಪೇಕ್ಷೆಯಿಲ್ಲದೆ, ಜನ ಸಾಮಾನ್ಯರಿಗೆ ಅತಿ ಕಡಿಮೆ ವೆಚ್ಚದಲ್ಲಿ ಸೇವೆ ನೀಡುತ್ತಿರುವ “ಅನುಭವಿ ಮತ್ತು ವಂಶಪಾರಂಪರಿಕ ವೈದ್ಯರು’ಗಳನ್ನು “ನಕಲಿ” ವೈದ್ಯರೆಂದು ಕೆರೆದು ಕಾನೂನು ಕಠಣಗೊಳಿಸಿ ಅವರ ಬದುಕಿನ ಮೇಲೆ ದಬ್ಬಾಳಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಸಂಸ್ಥೆಯ ಪ್ರಧಾನ ಸಂಯೋಜಕರಾದ ಬಿ.ಎಸ್ ಚಂದ್ರು ಖಂಡಿಸಿದರು . ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕರ್ನಾಟಕ ರಾಜ್ಯ…

Read More

ತುಳು ಸಿನಿಮಾ ‘ಪಿದಾಯಿ’ ಸೆಪ್ಟೆಂಬರ್ 12ನೇ ತಾರೀಕಿನಂದು ತೆರೆಗೆ

ಮಂಗಳೂರು: ನಮ್ಮ ಕನಸು ಬ್ಯಾನರ್ ಅಡಿಯಲ್ಲಿ ಕೆ. ಸುರೇಶ್ ಅವರ ನಿರ್ಮಾಣದ , ರಮೇಶ್ ಶೆಟ್ಟಿಗಾರ್ ಕಥೆ ಬರೆದು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ ತುಳು ಸಿನಿಮಾ ಪಿದಾಯಿ ಸೆಪ್ಟೆಂಬರ್ 12ನೇ ತಾರೀಕಿನಂದು ಕರಾವಳಿಯಾದ್ಯಂತ ಬೆಳ್ಳಿ ತೆರೆಯ ಮೇಲೆ ಬಿಡುಗಡೆಯಾಗಲಿದೆ‌ ಎಂದು ನಟಿ ರೂಪಾ ವರ್ಕಾಡಿ ತಿಳಿಸಿದರು . ಪಿದಾಯಿ ಚಿತ್ರವು ಕೊಲ್ಕತ್ತ, ಸಿಮ್ಮಾ, ಜಾರ್ಖಂಡ್‌ ಹಾಗೂ ಕ್ಯಾಲಿಫೋರ್ನಿಯಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಧಿಕೃತ ಆಯ್ಕೆಯಾಗುವುದರ ಜೊತೆಗೆ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ…

Read More

ಮಿಥುನ್ ರೈ ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-10” ಅಕ್ಟೋಬರ್ 1 ರಂದು

ಮಂಗಳೂರು :ಪಿಲಿನಲಿಕೆ ಪ್ರತಿಷ್ಠಾನ(ರಿ.) ಮಂಗಳೂರು ಇದರ ಅಧ್ಯಕ್ಷರಾದ ಮಿಥುನ್ ರೈ ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-10” ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ಕರಾವಳಿ ಉತ್ಸವ ಮೈದಾನದಲ್ಲಿ ಅಕ್ಟೋಬರ್ 1 ಬುಧವಾರ ಬೆಳಿಗ್ಗೆ 10.00 ಗಂಟೆಯಿಂದ ನಡೆಯಲಿರುವುದು ಎಂದು ಮಿಥುನ್ ರೈ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ತುಳುನಾಡಿನ ಅದ್ಭುತ ಕಲಾ ಪರಂಪರೆ ಮತ್ತು ಇಂದು ಇಡೀ ವಿಶ್ವದ ಗಮನವನ್ನು ಸೆಳೆದಿರುವ ಹುಲಿವೇಷ ಕುಣಿತದ ಮೂಲ ಸ್ವರೂಪವನ್ನು ಉಳಿಸುವ, ಅದನ್ನು…

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ ಅಂಗವಾಗಿ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಶಾಸಕ ವೇದವ್ಯಾಸ ಕಾಮತ್ ರವರು ಪುಷ್ಪ ನಮನ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಶಾಸಕ ವೇದವ್ಯಾಸ ಕಾಮತ್ ರವರು ಪುಷ್ಪ ನಮನಗಳನ್ನು ಸಲ್ಲಿಸಿದರು. ನಂತರ ಮಾತನಾಡಿದ ಅವರು, ಪೂಜ್ಯರು ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಹಿಂದುಳಿದವರ ಸಹಿತ ಸರ್ವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ಸಂತ. ಕೇರಳದಲ್ಲಿ ಹುಟ್ಟಿದ ಅವರು ಅಲ್ಲಿನ ಅವ್ಯವಸ್ಥೆಯ ವಿರುದ್ಧ ಹಿಂದೂ ಸಮಾಜವನ್ನು ಎಚ್ಚರಿಸುವ ಕಾರ್ಯ ಮಾಡಿದ್ದರು. ಹಿಂದಿನ…

Read More

ʻಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಪಾರದರ್ಶಕತೆ ಕಾಯ್ದುಕೊಳ್ಳಲು ಸಹಕಾರಿʼ-ಮಂಜುನಾಥ ಭಂಡಾರಿ

ಮಂಗಳೂರು: ʻರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಮತ್ತು ಶ್ಲಾಘನೀಯ. ದೇಶದಲ್ಲಿ ಅಕ್ರಮ ಮತದಾನ, ಮತಗಳ್ಳತನ, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಮತಗಳ್ಳತನದ ಸಾಕಷ್ಟು ಪುರಾವೆಗಳು ಕಣ್ಣ ಮುಂದಿವೆʼ ಎಂದು ವಿಧಾನ ಪರಿಷತ್‌ ಶಾಸಕ ಮಂಜುನಾಥ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಹಾಗೂ ಕೇಂದ್ರ ಚುನಾವಣಾ…

Read More

ಎಸ್ಟೇಟ್‌ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ- ನೀರಿನ‌ ಟ್ಯಾಂಕ್ ನಲ್ಲಿ ಪತ್ತೆ

ಎಸ್ಟೇಟ್‌ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ನೀರಿನ‌ ಟ್ಯಾಂಕ್ ನಲ್ಲಿ ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಮಂಗಳೂರಿನ ಸುರತ್ಕಲ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಪರಂಪುರ್, ರತುವಾ ನಿವಾಸಿ ಮುಖೇಶ್ ಮಂಡಲ್ ಎಂಬಾತನನ್ನು ಕೊಲೆ ಮಾಡಿದ ಆರೋಪದಲ್ಲಿ ಪಶ್ಚಿಮ‌ ಬಂಗಾಳ ನಿವಾಸಿ ಲಕ್ಷ್ಮಣ್ ಮಂಡಲ್ ಯಾನೆ ಲಖನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.‌ ಮುಕ್ಕದಲ್ಲಿರುವ ಖಾಸಗಿ ಎಸ್ಟೇಟ್ ನಲ್ಲಿ ಕೂಲಿ ನೌಕರನಾಗಿ ದುಡಿಯುತ್ತಿದ್ದ ಮುಖೇಶ್ ಮಂಡಲ್ 2025ರ ಜೂನ್ 24ರಂದು ಕಾಣೆಯಾಗಿದ್ದರು. ಈ ಬಗ್ಗೆ…

Read More

ಹಟ್ಟಿಯಿಂದ ದನವನ್ನು ಕದ್ದು ದನದ ಮಾಲಕನ ತೋಟದಲ್ಲೇ ಅದನ್ನು ಕೊಂದ ಕಟುಕರನ್ನು ಬಂಧಿಸಿದ ಪೊಲೀಸರು

ಹಟ್ಟಿಯಿಂದ ದನವನ್ನು ಕದ್ದುಕೊಂಡು ಹೋಗಿ ದನದ ಮಾಲಕನ ತೋಟದಲ್ಲೇ ಅದನ್ನು ಕೊಂದು ಅದರ ಕರುಳು ಸಹಿತ ಹೊಟ್ಟೆಯೊಳಗಿನ ತ್ಯಾಜ್ಯವನ್ನು ಅಲ್ಲೇ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಇರ್ಷಾದ್ (34), ಮಹಮ್ಮದ್ ಮನ್ಸೂರ್ (48), ಅಬ್ದುಲ್ ಅಝೀಮ್ (18) ಎಂದು ಗುರುತಿಸಲಾಗಿದೆ. ಅವರು ಸೆ.4ರಂದು ನಸುಕಿನ ವೇಳೆ ಪೆರ್ನೆಯ ಕಡಂಬು ನಿವಾಸಿ ದೇಜಪ್ಪ ಮೂಲ್ಯರ ಹಟ್ಟಿಯಿಂದ ದನವನ್ನು ಕದ್ದು, ದೇಜಪ್ಪ ಮೂಲ್ಯರ ಜಾಗದಲ್ಲೇ ಅದನ್ನು ಕೊಂದು ಅದರ ಹೊಟ್ಟೆಯೊಳಗಿನ ಕರುಳು ಸೇರಿದಂತೆ…

Read More

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ-ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪೈಸ್ ರಿಗೆ ಅಭಿನಂದನೆ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಮ್ಮ ಕ್ಷೇತ್ರದವರೇ ಆಗಿರುವ ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪೈಸ್ ರವರನ್ನು ಅಭಿನಂದಿಸಲಾಯಿತು. ಇವರು ನಗರದ ಬಿಕರ್ನಕಟ್ಟೆಯ ನಾಲ್ಯಪದವು ಶಾಲೆಯಲ್ಲಿ ಹಲವು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ, ಪ್ರಸ್ತುತ ಈಗ ಬಂಟ್ವಾಳ ತಾಲೂಕಿನ ದೇವಸ್ಯ ಪಡೂರು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಈ ಬಾರಿ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ…

Read More

ಅಕ್ರಮ ಕಸಾಯಿಖಾನೆ ಮೇಲೆ ದಾಳಿಯಿಂದ 9 ಜಾನುವಾರಿನ ತಲೆಗಳ ವಶ.

ಬೆಳ್ತಂಗಡಿ: ಅಕ್ರಮವಾಗಿ ಜಾನುವಾರುಗಳನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಹಿನ್ನಲೆ ಬೆಳ್ತಂಗಡಿ ಇನ್‌ಸ್ಪೆಕ್ಟರ್ ಸುಬ್ಬಾಪುರ್ ಮಠ್ ಅವರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿ, ಒಂಬತ್ತು ಜಾನುವಾರುಗಳ ತಲೆಯನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಮೊಹಮ್ಮದ್ ರಫೀಕ್ ಅಲಿಯಾಸ್ ಅಪ್ಪಿ ಎಂಬಾತನ ಮನೆ ಮೇಲೆ ಈ ದಾಳಿ ನಡೆದಿದೆ. ಕಳವು ಮಾಡಿದ ಜಾನುವಾರುಗಳನ್ನು ಇಲ್ಲಿಗೆ ತಂದು ಅಕ್ರಮವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು….

Read More

ಮಂಗಳೂರಿನ ಪುರಭವನದಲ್ಲಿ ಇಷ್ಕೆ ರಸೂಲ್ ಕಾರ್ಯಕ್ರಮ ಹಾಗೂ ಗ್ರಾಂಡ್ ಮೀಲಾದ್ ಜಾಥಾ ಸೆಪ್ಟೆಂಬರ್ 09 ರಂದು.

ಮಂಗಳೂರು: ಸಮಸ್ತ ಕರ್ನಾಟಕ ಮಶಾವರ, ಎಸ್.ವೈ.ಎಸ್, ಎಸೈ.ಎಸ್.ಎಸ್.ಎಫ್ , ಸಮಸ್ತ ಜಂಇಯ್ಯತುಲ್ ಮುಅಲ್ಲಿಮೀನ್, ಮದರಸ ಮೇನೇಜೆಂಟ್, ಜಂಇಯ್ಯತುಲ್ ಖುತ್ಬಾ , ಜಂಇಯ್ಯತುಲ್ ಮುದ್ರಾಸಿನ್ , ಸಮಸ್ತ ಬಾಲ ವೇದಿ ಸಂಯುಕ್ತ ಆಶ್ರಯದಲ್ಲಿ ಇಷ್ಕೆ ರಸೂಲ್ ಕಾರ್ಯಕ್ರಮ ಹಾಗೂ ಗ್ರಾಂಡ್ ಮೀಲಾದ್ ಜಾಥಾವು ಸೆಪ್ಟೆಂಬರ್ 09 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಇಷ್ಕೆ ರಸೂಲ್ ಮೀಲಾದ್ ಸ್ವಾಗತ ಸಮಿತಿಯ ಸಂಚಾಲಕರಾದ ಯು ಕೆ ಅಬ್ದುಲ್ ಅಝೀಝ್ ದಾರಿಮಿ ತಿಳಿಸಿದರು . ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…

Read More
error: Content is protected !!