ಹನಿಟ್ರ್ಯಾಪ್‌ ಜಾಲವನ್ನು ಬೇಧಿಸಿದ ಕುಂದಾಪುರ ಪೊಲೀಸರು.

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹನಿಟ್ರ್ಯಾಪ್ ಪ್ರಕರಣವೊಂದು ನಡೆದ ಬಗ್ಗೆ ವರದಿಯಾಗಿದ್ದು, ಹನಿಟ್ರ್ಯಾಪ್‌ ಜಾಲವನ್ನು ಬೇಧಿಸಿದ ಕುಂದಾಪುರ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧೀ ಕಟ್ಟೆಯ ಸೈಪುಲ್ಲಾ(38), ಹ0ಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್(36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್(23), ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗೋಡಿಯ ಅಬ್ದುಲ್ ಅಝೀಝ್(26), ಕುಂದಾಪುರ ಎಂ.ಕೋಡಿಯ ಆಸ್ಮಾ(43) ಬಂಧಿತ ಆರೋಪಿಗಳು. ಆರೋಪಿಗಳಿಂದ…

Read More

ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ, ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು. ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಪ್ರಕರಣಗಳು ನಡೆದಿದೆ. ವಿಪರೀತ ಮಳೆಯಿದ್ದರೂ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು, ಗಾಂಧಿನಗರದ ಶಾಲೆಯ ಹತ್ತಿರ, ಮರೋಳಿಯ ಬಸ್…

Read More

ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರುನಲ್ಲಿ-ಈದ್ ಮೀಲಾದುನ್ನೆಬಿ ಸಡಗರ.

ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರು ಮಂಗಳೂರು ಇದರ ಅದೀನದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ. ಅ) ತಂಗಳ್ ರವರ 1500ನೇ ಈದ್ ಮೀಲಾದುನ್ನೆಬಿ ಸಡಗರ ಸಂಭ್ರಮದಿಂದ ದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಮಾಅತ್ ಅಧ್ಯಕ್ಷರಾದ ಅಬ್ದುಲ್ ರವೂಫ್ ರವರು ಧ್ವಜಾರೋಹಣ ಗೈದು ಪ್ರಸ್ತುತ ರ್ಯಾಲಿಗೆ ಚಾಲನೆ ನೀಡಿದರು.ಕಾರ್ಯಕ್ರಮನ್ನು ಜಮಾಅತ್ ಖತೀಬರಾದ ಅಬ್ದುಲ್ ನಾಸಿರ್ ಸಅದಿಯವರು ದುಆ ಮಾಡಿ ಉದ್ಘಾಟನೆ ಮಾಡಿದರು.ತನ್ನ ಭಾಷಣದಲ್ಲಿ ಈ ಮೀಲಾದ್ ರ್ಯಾಲಿ ಶಾಂತಿ ಸಮಾಧಾನ ಸೌಹಾರ್ದತೆಯನ್ನು ಸಾರುವುದಾಗಿದೆ.ಪರಸ್ಪರ ಸೌಹಾರ್ದತೆಯೊಂದಿಗೆ ಬಾಳೋಣ…

Read More

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತ ಗುಂಡಿಮಯ.

ಮಂಗಳೂರಿನ ಪ್ರತಿಷ್ಠಿತ ವೃತ್ತಗಳಲ್ಲಿ ಒಂದಾದ ಬಂಟ್ಸ್ ಹಾಸ್ಟೆಲ್ ವೃತ್ತದ ಆಸುಪಾಸಿನ ಮಾರ್ಗವು ಗುಂಡಿಗಳಿಂದ ತುಂಬಿದ್ದು ದುರಸ್ತಿ ಮರೀಚಿಕೆಯಾಗಿದೆ. ದಿನ ನಿತ್ಯವೂ ಈ ಮಾರ್ಗವಾಗಿ ಸಂಚಾರ ನಡೆಸುವ ವಾಹನಗಳು ಗು0ಡಿಗೆ ಬಿದ್ದು ಏಳುತ್ತಿವೆ. ಮಳೆ‌ ಬಂದರೆ ವಾಹನಗಳು ದೌಡಾಯಿಸುವಾಗ ಹೊಂಡದ ನೀರು ಪಾದಚಾರಿಗಳಿಗೆ ಕೆಸರು ನೀರಿನ ಅಭಿಷೇಕ ಮಾಡುತ್ತದೆ. ಮಾರ್ಗದ ತಿರುವಿನಲ್ಲಿ ಉಂಟಾದ ಗುಂಡಿಯಂತೂ‌ ಅಪಾಯಕ್ಕೆ ಆಸ್ಪದವನ್ನು ನೀಡುತ್ತಿದೆ. ಚರಂಡಿಗೆ ಹೊದಿಸಲಾದ ಸ್ಲಾಬ್ ನ ಸಿಮೆಂಟ್ ಎದ್ದು‌ ಹೋಗಿದ್ದು ಕಬ್ಬಿಣದ ಕಂಬಿ ಹೊರಗೆ ಬಂದಿದೆ. ಅದರ ದುರಸ್ತಿ ಕಾರ್ಯಗಳು…

Read More

ಮಕ್ಕಳನ್ನು ಸಮಾಜ, ದೇಶದ ಸಂಪತ್ತನ್ನಾಗಿ ರೂಪಿಸಿ: ಖಾದರ್

ಮಂಗಳೂರು: ವಿದ್ಯಾರ್ಥಿಗಳು ದೇಶದ ಪರಂಪರೆ ಉಳಿಸಿಕೊಂಡು ಹೋಗುವಂತೆ ಮಾಡುವಲ್ಲಿ ಶಿಕ್ಷಕರ ಶ್ರಮ ಅಗತ್ಯ. ಮಕ್ಕಳನ್ನು ತಂದೆ, ತಾಯಂದಿರ ಮಾತ್ರವಲ್ಲದೆ ಸಮಾಜ, ದೇಶದ ಸಂಪತ್ತನ್ನಾಗಿ ರೂಪಿಸಬೇಕಿದೆ ಎಂದು ವಿದಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಜಪ್ಪಿನಮೊಗರು ಪ್ರೆಸ್ಟೀಜ್ ಶಾಲಾ ಸಭಾಂಗಣದಲ್ಲಿ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ…

Read More

ಆನ್‌ಲೈನ್ ಟ್ರೇಡಿಂಗ್ ವಂಚನೆ: 6 ಮಂದಿ ಬಂಧನ

ಮಂಗಳೂರು: ಲೈನ್ ವಂಚನೆ ಪ್ರಕರಣಗಳಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿ, ಒಟ್ಟು ೬ಲಕ್ಷ ರೂ. ನಗದು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಪು ತಾಲೂಕಿನ ಶಂಕರಪುರದ ಜೊಸ್ಸಿ ರವೀಂದ್ರ ಡಿಕ್ರೂಸ್(೫೪), ಎಂಬವರಿಗೆ ಹೂಡಿಕೆ ಹೆಸರಿನಲ್ಲಿ ಒಟ್ಟು ೭೫,೦೦,೦೦೦ರೂ. ಹಣವನ್ನು ಆನ್‌ಲೈನ್ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸೆನ್ ಪೊಲೀಸರು, ಸುರತ್ಕಲ್ ಕೋಡಿಕೆರೆಯ ಮೊಹಮದ್ ಕೈಸ್(೨೦), ಹೆಜಮಾಡಿ ಕನ್ನಂಗಾರಿನ ಅಹಮದ್ ಅನ್ವೀಜ್ (೨೦), ಬಂಟ್ವಾಳ ಜೋಡುಮಾರ್ಗದ ಸಫ್ವಾನ್(೩೦), ತಾಸೀರ್(೩೧) ಎಂಬವರನ್ನು ಬಂಧಿಸಿ, ಮೊಬೈಲ್ ಫೋನ್‌ಗಳನ್ನು…

Read More

ಮ . ನ . ಪಾ ದಲ್ಲಿ ಕನ್ನಡ ಬಾರದ ಅನ್ಯ ಭಾಷೆಯ ಅಧಿಕಾರಿಯ ನೇಮಕ: ಕನ್ನಡ ಪರ ಸಂಘಟನೆಗಳು ಕಿಡಿ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕನ್ನಡ ಓದಲು ಬರೆಯಲು ಬಾರದ ಅಧಿಕಾರಿ ಕಾನೂನು ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಕನ್ನಡಪರ ಸಂಘಟನೆಗಳು ಕಿಡಿಕಾರಿವೆ. ಕೇರಳ ಮೂಲದ ಮಹಿಳೆಯು ಕೇರಳದ ಮಲಯಾಳಂ ಮಾಧ್ಯಮದಲ್ಲಿ ವಿಧ್ಯಾಭ್ಯಾಸವನ್ನು ಮಾಡಿರುವುದು ಕನ್ನಡ, ತುಳು ಭಾಷೆ ಬಾರದಿರುವುದು ಜನಸಾಮಾನ್ಯರಿಗೆ ವ್ಯವಹರಿಸಲು ಸಮಸ್ಯೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದರ ಹಿಂದೆ ರಾಜಕೀಯ ಒತ್ತಡ ಇದೆ ಎನ್ನುವುದು ಕನ್ನಡ ಸಂಘಗಳ ಆಕ್ರೋಶವಾಗಿದೆ. ಕೆ.ಸಿ.ಎಸ್.ಆರ್ ನಿಯಮಗಳು 1974ರಲ್ಲಿ ಸರಕಾರಿ SSLC/10ನೇ ತರಗತಿಯಲ್ಲಿ ಕನ್ನಡ ಭಾಷೆ…

Read More

ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ವತಿಯಿಂದ ನಡೆದ ಹನ್ನೊಂದನೇ ವರ್ಷದ ಗಣೇಶೋತ್ಸವ.

ದುಬೈ : ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ಇದರ ವತಿಯಿಂದ ನಡೆದ 11ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಆಗಸ್ಟ್ 31ರಂದು ಆದಿತ್ಯವಾರ ಇಂಡಿಯನ್ ಅಸೋಸಿಯೇಷನ್ ಹಾಲ್ ಅಜ್ಮಾನ್ ನಲ್ಲಿ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು. ಪುರೋಹಿತರಾದ ಸಂತೂರ್ ಶ್ರೀ ಲಕ್ಷ್ಮಿಕಾಂತ್ ಭಟ್ ಹಾಗೂ ಶ್ರೀ ರಾಜೇಶ್ ಅಡಿಗರವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳನ್ನು ನಡೆಸಿದರು.ಬೆಳಿಗ್ಗೆ ಗಣಹೋಮದೊಂದಿಗೆ ಪ್ರಾರಂಭವಾದ ಕಾರ್ಯಕ್ರಮ ಮಧ್ಯಾಹ್ನ ಮಹಾಪೂಜೆ ಮಹಾ ಅನ್ನದಾನದಲ್ಲಿ ಸಹಸ್ರ ಭಕ್ತಾದಿಗಳು ಪಾಲ್ಗೊಂಡು ಸಂಜೆ ವಿಸರ್ಜನಾ ಮೆರವಣಿಗೆ ನಡೆಯಿತು. ನಡೆದ ಸಭಾ…

Read More

ಎ ಟಿ ಎಂ ಕಳ್ಳತನದ ವಿಫಲ ಯತ್ನ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಉಳ್ಳಾಲ: ರಾತ್ರೋ ರಾತ್ರಿ ಕೋಟೆಕಾರು ಬೀರಿ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿಯ ಕಾವಲು ವ್ಯವಸ್ಥೆಯ ಎಚ್ಚರಿಕೆಯ ಮೇರೆಗೆ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯ ನಿವಾಸಿ ನಾಗಪ್ಪ ಕೇರಳಟ್ಟಿ (41) ಎಂಬಾತನನ್ನು ಮುಂಜಾನೆ 3 ಗಂಟೆ ಸುಮಾರಿಗೆ ಎಸ್‌ಬಿಐ ಎಟಿಎಂನಲ್ಲಿದ್ದ ಕ್ಯಾಶ್ ಬಾಕ್ಸ್ ಒಡೆಯಲು ಯತ್ನಿಸುತ್ತಿದ್ದಾಗ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪೊಲೀಸರ ಪ್ರಕಾರ, ನಾಗಪ್ಪ ಬೆಳಗಿನ ಜಾವ 2:30 ರ ಸುಮಾರಿಗೆ ಎಟಿಎಂ ಒಳಗೆ ಪ್ರವೇಶಿಸಿ, ತಾನು ತಂದಿದ್ದ ಉಪಕರಣಗಳನ್ನು…

Read More

7ರಂದು ನಗರದಲ್ಲಿ ಫಾತಿಮಾ ರಲಿಯಾ ಅವರ ‘ಕೀಮೋ’ ಪುಸ್ತಕ ಬಿಡುಗಡೆ.

ಭಾನುವಾರ  ಸಂಜೆ‌ ನಾಲ್ಕು ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್‌ ಸಿಕ್ವೇರಾ ಸಭಾಂಗಣದಲ್ಲಿ ಫಾತಿಮಾ ರಲಿಯಾ ಅವರ ಅನುಭವ ಕಥನ ‘ಕೀಮೋ’ ಬಿಡುಗಡೆಯಾಗಲಿದೆ.  ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ರಮ್ಯ ಕೆ.ಜಿ. ಮೂರ್ನಾಡು ಮತ್ತು ಶರೀಫ್ ಹಿಮಮಿ ಶುಟ್ಟಿಕೊಪ್ಪ ಮಾತನಾಡಲಿದ್ದಾರೆ‌. ಈ ಪುಸ್ತಕವನ್ನು ‘ಜೀರುಂಡೆ ಪುಸ್ತಕ’ ಪ್ರಕಟಿಸಿದ್ದು ಇದು ಫಾತಿಮಾ ರಲಿಯಾರ ನಾಲ್ಕನೇ ಕೃತಿಯಾಗಿದೆ. ‘ಜೀರುಂಡೆ ಪುಸ್ತಕ’ದ ಎಲ್ಲಾ ಕೃತಿಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ ಎಂದು ಪ್ರಕಟಣೆ…

Read More
error: Content is protected !!