ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ,ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ – ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ : ಡಾ . ಎಂ. ಎನ್. ರಾಜೇಂದ್ರ ಕುಮಾರ್

ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್‌ ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆಯೊಂದಿಗೆ ಆರ್ ಟಿಜಿಎಸ್ / ನೆಫ್ಟ್, ಸಿಟಿಎಸ್, ಎಸ್‌ಎಂಎಸ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ (POS) ಸೌಲಭ್ಯ ಸೇರಿದಂತೆ ಹಲವಾರು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ ಈ ಸಾಲಿನಲ್ಲಿ ಯುಪಿಐ ಮತ್ತು ಐಎಂಪಿಎಸ್ ಸೇವೆಯು ಸೇರ್ಪಡೆಯಾಗಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ನಾಳೆ…

Read More

ಐವನ್ ಡಿ’ಸೋಜಾರಿಂದ ಪಂಪ್‌ವೆಲ್–ಕಂಕನಾಡಿ ರಸ್ತೆ ಕಾಮಗಾರಿ ಪರಿಶೀಲನೆ

ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ರವರು ಮಂಗಳೂರು ನಗರದ ಪಂಪ್‌ವೆಲ್–ಕಂಕನಾಡಿ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ರಸ್ತೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಂಚಾರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಸಾರ್ವಜನಿಕರಿಗೆ ಈ ರಸ್ತೆ ಅತ್ಯಂತ ಮಹತ್ವದ್ದಾಗಿರುವುದರಿಂದ ಯಾವುದೇ ವಿಳಂಬವಿಲ್ಲದೆ, ಉನ್ನತ ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ…

Read More

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ, ತಪ್ಪಿದ ದುರಂತ

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರೊಂದು ಢಿಕ್ಕಿ ಹೊಡೆದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ಸಂಭವಿದೆ.ಘಟನೆ ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ. ವಿದ್ಯುತ್ ಪ್ರವಹಿಸುವ ತಂತಿಗಳು ರಸ್ತೆಗೆ ಬಿದ್ದರೂ ಸಂಭವನೀಯ ದುರಂತ ತಪ್ಪಿಹೋಗಿದೆ. ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Read More

ಫೆ. 22 ರಂದು ಜಪ್ಪುಗುಡ್ಡೆಚಾವಡಿ ಗೃಹ ಪ್ರವೇಶ ಮತ್ತು ಪಂಚದಿನಗಳ ಧಾರ್ಮಿಕ ಉತ್ಸವ … !

ಮಂಗಳೂರು ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಜಪ್ಪುಗುಡ್ಡೆಚಾವಡಿಯ ಪುನರ್ನವೀಕರಣಗೊಂಡ ಮನೆಯ ಪ್ರವೇಶೋತ್ಸವ ಮತ್ತು ಧರ್ಮನೇಮವು ಫೆಬ್ರವರಿ 20 ರಿಂದ 25ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅವರು ತಿಳಿಸಿದರು. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಿಯಾಲಗುತ್ತು, ಜಪ್ಪುಗುಡ್ಡೆಗುತ್ತು ಮತ್ತು ಬಡಿಲಗುತ್ತು ಮನೆತನಗಳು ತುಳುನಾಡಿನ ಕಟ್ಟು ಕಟ್ಟಳೆಗಳನ್ನು ಮತ್ತು ದೈವದೇವರ ಆರಾಧನಾ ಕ್ಷೇತ್ರಗಳ ಸೇವೆಗಳನ್ನು ಸತ್ಯ-ಧರ್ಮದ ಹಾದಿಯಲ್ಲಿ ನಡೆಸಿಕೊಂಡು ಬರುತ್ತಿರುವ ಜವಾಬ್ದಾರಿಯುತ ಮನೆತನಗಳಾಗಿವೆ ಎಂದು ಹೇಳಿದರು….

Read More

ರೋಸಾರಿಯೋ ಶಾಲೆಯಲ್ಲಿ ಸ್ಮಾರ್ಟ್ ಕಿಡ್ ಶೋ

ಫೆಬ್ರವರಿ 14ರಂದು ಶಾಲೆಯಲ್ಲಿ ಆಯೋಜಿಸಲಾಗಿದ್ದ “ಸ್ಮಾರ್ಟ್ ಕಿಡ್ ಶೋ” ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀ ಸಿರಿಲ್ ರೋಸಾರಿಯೋ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆವ್. ಫ್ರಾ. ವ್ಯಾಲೆರಿಯನ್ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೇವಿಸ್ ಸೆರ್ರಾವ್ ಅವರು ಅತಿಥಿಗಳಿಗೆ ಹಾಗೂ ಸಭಿಕರಿಗೆ ಆತ್ಮೀಯ ಸ್ವಾಗತ ಕೋರಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ರಮ್ಯಾ ಅವರು ಸಮರ್ಥವಾಗಿ ನಿರ್ವಹಿಸಿ, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.ವಿದ್ಯಾರ್ಥಿಗಳು ತಮ್ಮ ಪ್ರತಿಭೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಮನಮೋಹಕವಾಗಿ ಪ್ರದರ್ಶಿಸಿ…

Read More

ಶೀಘ್ರ ಗುಣಮುಖರವಾಗುವಂತೆ ಮಾನ್ಯ ಶಾಸಕರಾದ ಶ್ರೀ.ಡಾ. ಮಂಜುನಾಥ ಭಂಡಾರಿಯರಿಗೆ – ಇತಿಹಾಸ ಪ್ರಸಿದ್ದ ಉಳ್ಳಾಲದಲ್ಲಿ ವಿಶೇಷ ಪ್ರಾರ್ಥನೆ

ಉಳ್ಳಾಲ: ಸಾರ್ವಜನಿಕ ಬದುಕಿನಲ್ಲಿ ನಿಸ್ವಾರ್ಥ ಸೇವೆಯ ಮೂಲಕ ಜನಮನ ಗೆದ್ದಿರುವ ಮಾನ್ಯ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಕಾರ್ಯದ್ಯಕ್ಷರೂ,ಶಾಸಕರಾದ ಶ್ರೀ.ಮಂಜುನಾಥ ಭಂಡಾರಿ ಅವರು ಶೀಘ್ರವೇ ಸಂಪೂರ್ಣ ಚೇತರಿಸಿಕೊಂಡು, ಹಿಂದಿನಂತೆ ಪಕ್ಷ ಸಂಘಟನೆ ರಾಜಕೀಯ,ಸಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ನಿಲ್ಲಲಿ. ಭಗವಂತನು ಅವರಿಗೆ ದೃಢ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿಯನ್ನು ನೀಡಲಿ ಎಂದು ಮುಸ್ಲಿಂ ಅಲ್ಪಸಂಖ್ಯಾತರ ನೇತೃತ್ವದಲ್ಲಿ ದಕ್ಷಿಣ ಭಾರತದ ಅಜ್ಮೀರ್ ಎಂದೇ ಕರೆಯಲ್ಪಡುವ ಇತಿಹಾಸ ಪ್ರಸಿದ್ದ ಮುಸ್ಲಿಮರ ಪುಣ್ಯಕ್ಷೇತ್ರವಾದ ಸೈಯದ್ ಮದನಿ ದರ್ಗಾ ಉಳ್ಳಾಲ…

Read More

‘ವೈಲ್ಡ್ ಟೈಗರ್ ಸಫಾರಿ’ ಚಿತ್ರದ ಮೊದಲ ಹಾಡು ಬಿಡುಗಡೆ

ವೈಲ್ಡ್ ಟೈಗರ್ ಸಫಾರಿ ಚಿತ್ರದ ತಂಡವು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿರುವುದನ್ನು ಸಂತೋಷದಿಂದ ಪ್ರಕಟಿಸುತ್ತದೆ.ಚಿತ್ರದ ಟೀಸರ್‌ಗೆ ಕನ್ನಡ ಮತ್ತು ಹಿಂದಿ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ಲಭಿಸಿದ ಬಳಿಕ ಚಿತ್ರದ ಬಗ್ಗೆ ನಿರೀಕ್ಷೆಗಳು ಇನ್ನಷ್ಟು ಹೆಚ್ಚಾಗಿವೆ. ದೊರೆತ ಅಪಾರ ಮೆಚ್ಚುಗೆಯು ವೈಲ್ಡ್ ಟೈಗರ್ ಸಫಾರಿ ಸಾಮಾನ್ಯ ಪ್ರೇಕ್ಷಕರ ಹೃದಯವನ್ನು ಸ್ಪರ್ಶಿಸುವ ಚಿತ್ರವಾಗಲಿದೆ ಎಂಬ ನಮ್ಮ ನಂಬಿಕೆಯನ್ನು ಬಲಪಡಿಸಿದೆ.ವಿ.ಕೆ. ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿನೋದ್ ಕುಮಾರ್ ನಿರ್ಮಿಸಿರುವ ಈ ಚಿತ್ರವನ್ನು ಕೆಜಿಎಫ್ ಚಿತ್ರದ ಲೇಖಕರಾಗಿ ಪ್ರಸಿದ್ಧರಾದ ಎಂ. ಚಂದ್ರಮೌಳಿ ನಿರ್ದೇಶಿಸಿದ್ದಾರೆ….

Read More

ಮಂಗಳೂರಿನಲ್ಲಿ ಏಕಬಳಕೆ ಪ್ಲಾಸ್ಟಿಕ್ ವಿರುದ್ಧ ಕಠಿಣ ಕ್ರಮ: ₹10,000 ದಂಡ, ಜಾಗೃತಿ ಅಭಿಯಾನ ಆರಂಭ

ಮಂಗಳೂರು : ಏಕ ಬಳಕೆ ಪ್ಲಾಸ್ಟಿಕ್, ಕೈ ಚೀಲ ಬಳಕೆ ನಿಷೇದ ಹಿನ್ನಲೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಂಗಳೂರು ಮಹಾನಗರ ಪಾಲಿಕೆ ಕೈಗೆತ್ತಿಕೊಂಡಿದೆ.ಏಕ ಬಳಕೆ ಪ್ಲಾಸ್ಟಿಕ್, ಕೈ ಚೀಲ ಬಳಕೆಮಾಡಿದಲ್ಲಿ 10 ,000 ದಂಡ ವಿಧಿಸಲಾಗುತ್ತದೆ.ಹಸಿಕಸ-ಒಣಕಸವನ್ನು ವಿಂಗಡಿಸಿ ಕೊಡುವ ಬಗ್ಗೆಯೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ.ಅಂಗಡಿ ,ಫ್ಲಾಟ್ ,ಸಾರ್ವಜನಿಕರಿಗೆ sticker ನೀಡಿ ಮಾಹಿತಿ ಪ್ರಸಾರದ ಕಾರ್ಯ ನಡೆಸಲಾಗುತ್ತಿದೆ. ಪ್ಲಾಸ್ಟಿಕ್ ಬಳಕೆ ವಿರುದ್ಧ ಶೀಘ್ರದಲ್ಲೇ ಎಲ್ಲಾ ಕಡೆ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ವಲಯ ಆಯುಕ್ತರಾದ ರೇಖಾ ಶೆಟ್ಟಿ ತಿಳಿಸಿದ್ದಾರೆ.ನಗರದಲ್ಲಿ ಬಹುತೇಕ…

Read More

ಫೆ.14 ರಂದು ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಸಂಗೀತ ನೃತ್ಯ ವಿಚಾರ ಸಂಕಿರಣ ಸಂಭ್ರಮ-2026 … !

ಮಂಗಳೂರು:ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಫೆ.14 ರಂದು ಬೆಳಗ್ಗೆ 10 ಗಂಟೆಗೆ ತುಳು ಸಾಹಿತ್ಯ ಅಕಾಡೆಮಿಯ ಸಭಾಂಗಣದಲ್ಲಿ ಸಂಗೀತ ನೃತ್ಯ ವಿಚಾರ ಸಂಕಿರಣ ಸಂಭ್ರಮ-2026 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಸದಸ್ಯ ಸಂಚಾಲಕರಾದ ಡಾ|ಗೀತಾ ಬಿ.ವಿ. ತಿಳಿಸಿದರು. ಅವರು ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರಾದ ಶುಭ ಧನಂಜಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಚಾರ ಸಂಕಿರಣವನ್ನು ಶಾಸ್ತ್ರೀಯ ಕನ್ನಡ ಅತ್ಯುನ್ನತ ಕೇಂದ್ರದ ನಿಕಟಪೂರ್ವ ಯೋಜನಾ ನಿರ್ದೇಶಕ ಪ್ರೊ|ಬೋಳಾರ ಶಿವರಾಮ ಶೆಟ್ಟಿಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ…

Read More

ಫೆ.21ರಂದು ಕುದ್ರೋಳಿ ತೀರ್ಥಾಟನೆ ‘ ನಡಿಗೆ ದೇವರ ಕಡೆಗೆ … !

ಮಂಗಳೂರು:ನಗರದ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಶಿವಲಿಂಗ ಪ್ರತಿಷ್ಟಾಪನೆ ಮಾಡಿದ ಸವಿ ನೆನಪಿಗಾಗಿ ಫೆ. 21ರಂದು ಕ್ಷೇತ್ರದ ವತಿಯಿಂದ ‘ಕುದ್ರೋಳಿ ತೀರ್ಥಾಟನೆ’ ನಡಿಗೆಯನ್ನು ಆಯೋಜಿಸಲಾಗಿದ್ದು ಬೆಳಗ್ಗೆ 9 ಗಂಟೆಗೆ ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಆರಂಭಗೊಳ್ಳುವ ತೀರ್ಥಾಟನೆಯು ನಗರದಲ್ಲಿ ಸುಮಾರು 7 ಕಿ.ಮೀ.ಗಳ ನಡಿಗೆಯ ಮೂಲಕ 11. 30 ಕ್ಕೆ ಶ್ರೀ ಸನ್ನಿಧಿಯನ್ನು ತಲುಪಲಿದೆ ಎಂದು ಕ್ಷೇತ್ರದ ಅಧ್ಯಕ್ಷ ಜಯರಾಜ್ ಸೋಮಸುಂದರ ದೇವಾಲಯದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . ಈ ಬಗ್ಗೆ ಹೆಚ್ಚಿನ…

Read More
error: Content is protected !!