ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಆಯೋಜನೆ

ಬೆಂಗಳೂರು: ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು ಇಂದು ಧರ್ಮಸ್ಥಳದಲ್ಲಿ ಸುಮಾರು ಅರ್ಧ ಕಿಲೋಮೀಟರ್ ವರೆಗೂ ಪಾದಯಾತ್ರೆ ನಡೆಸಿ ಬಳಿಕ ಮಧ್ಯಾಹ್ನ 2ರಿಂದ 4.30 ವರೆಗೆ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು. ಮಧ್ಯಾಹ್ನ ಧರ್ಮಸ್ಥಳದಲ್ಲಿ ಬಿಜೆಪಿ ನಾಯಕರಿಂದ ಪಾದಯಾತ್ರೆ ನಡೆಯಲಿದೆ. ಅರ್ಧ ಕಿಲೋಮೀಟರ್ ವರೆಗೂ ಪಾದಯಾತ್ರೆ ನಡೆಸಿದ ಬಳಿಕ ಬೃಹತ್ ಸಮಾವೇಶ ಮಾಡಲಿದ್ದಾರೆ. ಧರ್ಮಸ್ಥಳದಲ್ಲಿ ಎಸ್‌ ಡಿ ಎಮ್…

Read More

ಭತ್ತದ ಕೃಷಿ ಮಾಡಿ ಗಮನ ಸೆಳೆದ ಸಭಾಧ್ಯಕ್ಷ ಯು.ಟಿ. ಖಾದರ್.

ಯುವ ಸಮುದಾಯಕ್ಕೆ ಭತ್ತವನ್ನ ಹೇಗೆ ಬೆಳೆಯಲಾಗುತ್ತದೆ ಮತ್ತು ಅದರ ಬೆಗೆಗಿನ ಸಮಗ್ರ ಮಾಹಿತಿಯ ಜೊತೆಗೆ ಕೃಷಿ ಕಾಯಕದಲ್ಲೂ ಅವರನ್ನು ತೊಡಗಿಸುವ ಕಾರ್ಯ ಅತ್ಯಂತ ಅರ್ಥ ಪೂರ್ಣವಾಗಿದೆ. ಉಳ್ಳಾಲ ತಾಲೂಕು ವ್ಯಾಪ್ತಿಯ ಹಡಿಲು ಬಿದ್ದ ಕೃಷಿ ಭೂಮಿಗಳನ್ನು ಕಂದಾಯ ಇಲಾಖೆಯ ಮೂಲಕ ಸರ್ವೆ ಮಾಡಿಸಿ ಕೃಷಿ ಇಲಾಖೆ ಮೂಲಕ ಗ್ರಾಮವಾರು ಕೇಂದ್ರೀಕರಿಸಿ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಜೊತೆ ಸೇರಿ ಫಲವತ್ತಾದ ಉಳ್ಳಾಲ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗುವುದೆಂದು ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ತೊಕ್ಕೊಟ್ಟು…

Read More

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ.

ಮಂಗಳೂರು: ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇದ್ದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ . ಸೆ.1 ಮತ್ತು ಸೆ.4ರಿಂದ ಸೆ.6ರವರೆಗೆ ಕರಾವಳಿಯ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಸೆ.2 ಮತ್ತು ಸೆ.3ಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡು, ಉತ್ತರ ಒಳ ನಾಡಿನಲ್ಲಿ ಸಾಧಾರಣದಿಂದ ಹಗುರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಈ ಮೂಲಕ ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಮುಂಗಾರು…

Read More

ರಾಜ್ಯ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ.

ಬಂಟ್ವಾಳ :ಸಜೀಪಮನ್ನೂರು ಗಣೇಶೋತ್ಸವದಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಸಮಯಕ್ಕಿಂತ ಮೊದಲೇ ಪೊಲೀಸರು ನಿಲ್ಲಿಸಿದಕ್ಕೆ ಇದೀಗ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಈ ಕುರಿತಂತೆ ಟೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ದಿಕ್ಕು ತಪ್ಪುತ್ತಿದೆ, ಹಿಂದೂ ಉತ್ಸವಗಳು ಧಾರ್ಮಿಕ ಆಚರಣೆಗಳನ್ನು ಅಪಮಾನಿಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಗಣೇಶೋತ್ಸವದಲ್ಲಿ ಡಿಜೆ ನಿಷೇಧಿಸುವ ಸರ್ಕಾರ ಸಾಂಸ್ಕೃತಿಕ ಚಟುವಟಿಕೆಗಳನ್ನೂ ಹತ್ತಿಕ್ಕುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ನಿಗದಿತ ಸಮಯಕ್ಕೆ ಮುನ್ನವೇ ಪರಂಪರೆಯಿಂದ ನಡೆದುಬಂದ ಯಕ್ಷಗಾನ…

Read More

ನೇತಾಜಿ ಬೋಸ್ ಮೊಮ್ಮಗ ಪ್ರೊ. ಸುಮಂತ್ರ ಬೋಸ್ ರಿಂದ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ರಿಗೆ ಪುಸ್ತಕ ನೀಡಿ ಗೌರವ.

ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಅವರೀಗೆ ನೇತಾಜಿ ಸುಭಾಷ್ ಬೋಸ್ ಇವರ ಮೂರು ಕೃತಿಗಳನ್ನು ಬೋಸ್ ಅವರ ಮೊಮ್ಮಗ ಪ್ರೊ. ಸುಮಂತ್ರ ಬೋಸ್ ಪುಸ್ತಕ ಗೌರವ ಪ್ರತಿಗಳನ್ನು ನೀಡಿ ಗೌರವ ಸೂಚಿಸಿದರು. ಲೇಖಕ ಪ್ರೊ. ಕೆ. ಈ. ರಾಧಾಕೃಷ್ಣ ಸರ್ ನಿರ್ದೇಶನದಲ್ಲಿ ಕಾರ್ಯಕ್ರಮ ನಡೆಯಿತು.

Read More

ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಆಯ್ಕೆ!

ಮಂಗಳೂರು: ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಖ್ಯಾತ ನ್ಯಾಯವಾದಿ ಕರೀಷ್ಮಾ ಎಸ್. ಅವರು ಆಯ್ಕೆಯಾಗಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್, ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ| ಎಜೆ ಅಕ್ರಂ ಪಾಶಾ ಹಾಗೂ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಅಧ್ಯಕ್ಷ ಟಿ.ವೈ ಕುಮಾರ್ ಅವರಆದೇಶದ ಮೇರೆಗೆ ಈ ಆಯ್ಕೆ ನಡೆದಿದ್ದು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ) ಕಾಂಗ್ರೆಸ್ ವಿಭಾಗದ ಮಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಕರಿಷ್ಮಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ…

Read More

ಯೂಟ್ಯೂಬರ್ ಸಮೀರ್ ಎಂ.ಡಿ ದಾಖಲೆಗಳ ಸಮೇತ ಪೊಲೀಸರ ಮುಂದೆ ಹಾಜರು.

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಹಲವು ದಾಖಲೆಗಳ ಸಮೇತ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಬ್ಯಾಗ್ ಹಿಡಿದುಕೊಂಡು ವಕೀಲರ ಜೊತೆ ಸಮೀರ್ ಹಾಜರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಇಂದು ಸಮೀರ್ ವಿಚಾರಣೆ ಎದುರಿಸಲಿದ್ದು, ಹಲವು ದಾಖಲೆಗಳನ್ನು ನೀಡಲಿದ್ದಾರೆ. ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಗೆ ಬೆಳ್ತಂಗಡಿ ಪೊಲೀಸರು ಸೂಚನೆ ನೀಡಿದ್ದರು. ಅಲ್ಲದೇ ಪ್ರಕರಣಕ್ಕೆ…

Read More

ಧರ್ಮಸ್ಥಳ ಪ್ರಕರಣದಲ್ಲಿ : ‘ಎಸ್‌ಐಟಿ ತನಿಖೆ ನಡೆಸುವಾಗಲೇ ಎನ್‌ಐಎ ತನಿಖೆ ಅಸಾಧ್ಯ ‘- ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಪೂರ್ಣ ಮಾಡಲು ಸಮಯ ನಿಗದಿ ಆಗಿಲ್ಲ . ಎಸ್‌ಐಟಿ ತನಿಖೆ ಪ್ರಕ್ರಿಯೆ ನಡೆಯುವಾಗಲೇ ಎನ್‌ಐಎ ತನಿಖೆ ಅಸಾಧ್ಯ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ತನಿಖೆ ತ್ವರಿತವಾಗಿ ಆಗಬೇಕು ಎಂದು ಹೇಳಿದ್ರೆ ಎಸ್‌ಐಟಿ ಅವರಿಗೆ ಅವರದ್ದೇ ಆದ ತೀರ್ಮಾನ ಇರುತ್ತದೆ. ಎಸ್‌ಐಟಿ ಅವರು ತನಿಖೆ ಮಾಡುತ್ತಿದ್ದಾರೆ. ತನಿಖೆ ಮುಗಿಯೋವರೆಗೂ ಅವರು ಯಾವ ವಿಚಾರಗಳನ್ನು ಹೇಳುವ ಹಾಗೇ ಇಲ್ಲ. ತನಿಖೆ ತ್ವರಿತವಾಗಿ ಆಗಲಿ ಅಂತ ಹೇಳಬಹುದು….

Read More

ದಸರಾ ಹಬ್ಬದ ಪ್ರಯುಕ್ತ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು -ಶಾಸಕ ವೇದವ್ಯಾಸ ಕಾಮತ್

ಮುಂಬರುವ ಪ್ರಸಿದ್ದ ಮಂಗಳೂರು ದಸರಾ ಹಬ್ಬವು ಸುವ್ಯವಸ್ಥಿತವಾಗಿ ನಡೆಯುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಶಾಸಕ ವೇದವ್ಯಾಸ ಕಾಮತ್ ರವರು ಸೂಚನೆ ನೀಡಿದರು. ದಸರ ಮೆರವಣಿಗೆ ಸಾಗುವ ರಸ್ತೆಗಳ ಕಾಮಗಾರಿಗಳನ್ನು ವಿಶೇಷ ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕುದ್ರೋಳಿ ದೇವಸ್ಥಾನದಿಂದ ಲೇಡಿಹಿಲ್, ಲಾಲ್‌ ಭಾಗ್, ಪಿ.ವಿ.ಎಸ್ ಸರ್ಕಲ್, ವೆನ್‌ಲಾಕ್ ಆಸ್ಪತ್ರೆ, ಮೋಹಿನಿ ವಿಲಾಸ್, ನ್ಯೂಚಿತ್ರ ಟಾಕೀಸ್, ಅಳಕೆ, ಮೊದಲಾದ ರಸ್ತೆಗಳ ದಾರಿ ದೀಪ ಸರಿಪಡಿಸುವುದು, ರಸ್ತೆ ವಿಭಜಕಗಳನ್ನು ಶುಚಿಗೊಳಿಸುವುದು, ರಸ್ತೆಗಳ ಹೊಂಡ ಮುಚ್ಚುವುದು, ಕಸ,…

Read More

ಸುಜಾತಾ ಭಟ್‌ಗೆ ಬಿಗ್ ರಿಲೀಫ್ ….. !?

ಮಂಗಳೂರು: ಪ್ರಸ್ತುತ ವಿವಾದದ ಸುಳಿಯಲ್ಲಿ ಸಿಲುಕಿದ್ದ ಸಾಮಾಜಿಕ ಕಾರ್ಯಕರ್ತೆ ಸುಜಾತಾ ಭಟ್ ಗೆ ತಾತ್ಕಾಲಿಕವಾಗಿ ಕಾನೂನು ಕ್ರಮದಿಂದ ಬಿಗ್ ರಿಲೀಫ್ ಸಿಕ್ಕಿದೆ . ಅವರ ವಿರುದ್ಧದ ಕಠಿಣ ಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಆದರೆ, ವಿಚಾರಣೆಗೆ ಹಾಜರಾಗುವುದು ಅನಿವಾರ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಸುಜಾತಾ ಭಟ್ ವಿರುದ್ಧ ದಾಖಲಾಗಿದ್ದ ಕೆಲವೊಂದು ದೂರಿನ ಪರಿಶೀಲನೆ ನಡೆದಿದೆ. ಪ್ರಥಮ ದೃಷ್ಟಿಯಿಂದ ಗಂಭೀರ ಕಾನೂನು ಉಲ್ಲಂಘನೆಯ ಲಕ್ಷಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ, ತಕ್ಷಣದ ಬಂಧನ ಅಥವಾ ಬಂಧನಾತ್ಮಕ ಕ್ರಮ ಕೈಗೊಳ್ಳುವುದನ್ನು ತಪ್ಪಿಸಲಾಗಿದೆ….

Read More
error: Content is protected !!