ತಲಪಾಡಿ ಅಪಘಾತಕ್ಕೆ ಬ್ರೇಕ್ ವೈಫಲ್ಯ ಕಾರಣವಲ್ಲ, ಚಾಲಕನ ಅತೀಯಾದ ವೇಗವೇ ಕಾರಣ ; ಕರ್ನಾಟಕ ಸಾರಿಗೆ ಸ್ಪಷಣೆ

ತಲಪಾಡಿ ಟೋಲ್‌ಗೇಟ್ ಸಮೀಪ ಸಂಭವಿಸಿದ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ ಕೆಲವೊಂದು ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ‘ಬ್ರೇಕ್ ವೈಫಲ್ಯ’ ಎಂಬ ವದಂತಿಗಳು ಹರಡುತ್ತಿದ್ದರೂ, ಕೆಎಸ್‌ಆರ್‌ಟಿಸಿ ಈ ಅಪಘಾತಕ್ಕೆ ಬಸ್‌ನ ತಾಂತ್ರಿಕ ದೋಷ ಅಥವಾ ಬ್ರೇಕ್ ವೈಫಲ್ಯ ಕಾರಣವಲ್ಲ ಎಂದು ಸ್ಪಷ್ಟಪಡಿಸಿದೆ. ಇಲಾಖೆಯ ತಾಂತ್ರಿಕ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಬಸ್ ಸಂಪೂರ್ಣವಾಗಿ ಫಿಟ್ ಆಗಿತ್ತು ಹಾಗೂ ಇತ್ತೀಚೆಗೆ ಎಫ್‌ಸಿ ನವೀಕರಣವೂ ಮಾಡಿಕೊಂಡಿತ್ತು ಎಂಬುದು ದೃಢವಾಗಿದೆ. ಬಸ್ ಚಾಲಕನ ಅಜಾಗರೂಕ, ನಿರ್ಲಕ್ಷ್ಯಪೂರ್ಣ ಹಾಗೂ ಅತಿವೇಗದ ಚಾಲನೆಯೇ ಈ ದುರ್ಘಟನೆಗೆ…

Read More

ಎಸ್‌ಸಿಡಿಸಿಸಿ ಬ್ಯಾಂಕ್ ಗೆ ಸತತ ನಾಲ್ಕನೇ ಬಾರಿ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ.

ಮಂಗಳೂರು : ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಎಸ್ ಸಿಡಿಸಿಸಿ ಬ್ಯಾಂಕ್) 2024-25ನೇ ಸಾಲಿನಲ್ಲೂ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರವಾಗಿದ್ದು, ಈ ಪ್ರಶಸ್ತಿಯನ್ನು ಬ್ಯಾಂಕ್ ಸತತ ನಾಲ್ಕನೇ ಬಾರಿಗೆ ಮುಡಿಗೇರಿಸಿಕೊಂಡಿದೆ.ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ 2024-25ನೇ ಸಾಲಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಚಂದಾದಾರರ ದಾಖಲಾತಿಯಲ್ಲಿ 3179 ಚಂದಾದಾರರನ್ನು ನೋಂದಾಯಿಸುವ ಮೂಲಕ ಗುರಿ ಮೀರಿದ ಸಾಧನೆ ಮಾಡಿದೆ. ಬ್ಯಾಂಕಿನ…

Read More

ಮಂಗಳೂರು ವಿಶ್ವವಿದ್ಯಾನಿಲಯ ಶುಲ್ಕ ಏರಿಕೆ – ವಿದ್ಯಾರ್ಥಿ ಸಮೂಹದಲ್ಲಿ ಆತಂಕ.

ಮಂಗಳೂರು ವಿವಿ 2025–26ನೇ ಶೈಕ್ಷಣಿಕ ಸಾಲಿನ ಪದವಿಪೂರ್ವ (ಯುಜಿ) ಮತ್ತು ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ಶುಲ್ಕವನ್ನು ಶೇಕಡಾ 5 ರಿಂದ 10 ರಷ್ಟು ಹೆಚ್ಚಿಸುವುದಾಗಿ ನಿರ್ಧರಿಸಿದೆ .ಈ ಹಿಂದಿನ ಶೈಕ್ಷಣಿಕ ವರ್ಷದಲ್ಲೂ ವಿವಿ ಎಲ್ಲಾ ವಿಷಯಗಳ ಪ್ರವೇಶ ಶುಲ್ಕವನ್ನು ಹೆಚ್ಚಿಸಿ ವಿದ್ಯಾರ್ಥಿಗಳ ಕೆಂಗಣಿಗೆ ಕಾರಣವಾಗಿತ್ತು . ವಿದ್ಯಾರ್ಥಿ ವಲಯಗಳಿಂದ ತೀವ್ರ ಆಕ್ಷೇಪಣೆಗಳು ಮತ್ತು ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಆದರೂ ವಿವಿ ಪಟ್ಟು ಹಿಡಿದು ಶುಲ್ಕವನ್ನು ಏರಿಸಿತ್ತು . ಇದೀಗ ಮತ್ತೊಮ್ಮೆ ಶುಲ್ಕವನ್ನು ಏರಿಸಿದೆ ಇದಕ್ಕೆ ವಿಶ್ವವಿದ್ಯಾಲಯ ಸಿಂಡಿಕೇಟ್ ಅನುಮೋದನೆ…

Read More

ಸಂಸ್ಕಾರಯುತ ಸಮಾಜ ನಿರ್ಮಾಣ: ನಳಿನ್ ಕುಮಾರ್ ಕಟೀಲ್.ಬಂಟ್ಸ್ ಹಾಸ್ಟೇಲ್ ನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ.

ಮಂಗಳೂರು: ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಗಣೇಶೋತ್ಸವ ಪೂರಕವಾಗಿದ್ದು, ಆಡಂಬರವಿಲ್ಲದೆ ಇಲ್ಲಿ ಕೇವಲ ದೇವರ ಸಂಕೀರ್ತನೆಯ ಭಜನೆಯ ಮೂಲಕ ಗಣಪತಿಯ ಶೋಭಾಯಾತ್ರೆ ಸಾಗುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ನಡೆಯುತ್ತಿರುವ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.ಶಾಸಕ ವೇದವ್ಯಾಸ ಕಾಮತ್…

Read More

ತಲಪಾಡಿ : ಸಂಚಾರಕ್ಕೆ ಯೋಗ್ಯವಲ್ಲದ KSRTC BUS .ಆರು ಮಂದಿಯ ಸಾವಿಗೆ ಕಾರಣ.

ಗುರುವಾರ ಚಾಲಕನ ಅಜಾಗರೂಕತೆ ಹಾಗೂ ಬಸ್‌ನ ಸವೆದ ಚಕ್ರದಿಂದ ತಲಪಾಡಿಯಲ್ಲಿ ಉಂಟಾದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣಕ್ಕೀಡಾದ ಘಟನೆ ರಾಜ್ಯಾದ್ಯಂತ ಶೋಕ ಮತ್ತು ಆಕ್ರೋಶಕ್ಕೆ ಕಾರಣವಾಯಿತು. ಈ ಘಟನೆಗೆ ಪ್ರತಿಕ್ರಿಯೆ ನೀಡಿದ ಊರವರು ಇಂದು ಬೆಳಿಗ್ಗೆ ಗಡಿ ಪ್ರದೇಶದಲ್ಲಿರುವ ಮುಖ್ಯ ರಸ್ತೆಯಲ್ಲಿ ಸಾರಿಗೆ ಬಸ್‌ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಮುಖ್ಯವಾಗಿ ಸವೆದ ಚಕ್ರಗಳುಳ್ಳ ಹಾಗೂ ಸಾರಿ ಹೋಗಿರುವ ಬಸ್‌ಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಲುಪಿದ ಪೊಲೀಸರು ಹಾಗೂ ಮೋಟಾರು…

Read More

ತುಳುಭಾಷೆಯ 150ನೇ ಚಿತ್ರ “ನೆತ್ತೆರೆಕೆರೆ” ಬೆಳ್ಳಿ ತೆರೆಗೆ

ಮಂಗಳೂರು: “ವಿಭಿನ್ನ ಪರಿಕಲ್ಪನೆಯ * ತುಳುವಲ್ಲಿ ಬರುತ್ತಿದೆ. ನಿರ್ದೇಶಕ ಸ್ವರಾಜ್ ಶೆಟ್ಟಿಯ ಹಲವು ದಿನಗಳ ಕನಸು ‘ನೆತ್ತರೆಕೆರೆ’ ಮೂಲಕ ತುಳುಭಾಷೆಯ 150ನೇ ಚಿತ್ರ ಯಶಸ್ವಿಯಾಗಲಿ“ ಎಂದು ಹಿರಿಯ ರಂಗಭೂಮಿ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್‌ಬೈಲ್ ಹೇಳಿದರು.ಅವರು ಮಂಗಳೂರಿನ ಬಿಗ್ ಸಿನಿಮಾಸ್ ‌ನಲ್ಲಿ ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಲಂಚುಲಾಲ್ ಕೆ.ಎಸ್. ನಿರ್ಮಾಣದ ಸ್ವರಾಜ್ ಶೆಟ್ಟಿ ನಿರ್ದೇಶನದ “ನೆತ್ತರಕೆರೆ”ತುಳು ಚಿತ್ರವನ್ನು ದೀಪ ಬೆಳಗಿಸುವ ಮೂಲಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಮಾತನಾಡಿ, “ಇದುವರೆಗೆ ತುಳುವಲ್ಲಿ…

Read More

“ಬಂಟರ ಸಂಘದ ಗಣೇಶೋತ್ಸವ ಲೋಕಕ್ಕೆ ಮಾದರಿ“ -ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.-ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ, ಧಾರ್ಮಿಕ ಸಭೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವ ಎರಡನೇ ದಿನದ ಧಾರ್ಮಿಕ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ನಾನು ಮೊದಲ ಬಾರಿ ಇಲ್ಲಿಗೆ ಆಗಮಿಸಿದ್ದೇನೆ. ಬಹಳ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತಿದ್ದೀರಿ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಇಡೀ ಲೋಕಕ್ಕೆ ಒಳೆಯದಾಗಲಿ….

Read More

ನಗರದ ಹೃದಯ ಭಾಗದಲ್ಲಿ ಮತ್ತೆ ಕಲಶ ಸ್ಥಾಪನೆ

ಮಂಗಳೂರು: ಮಹಾವೀರ ವೃತ್ತದಲ್ಲಿ ಮೇಲ್ಸ್ತುವೆ ಕಾಮಗಾರಿ ಹಿನ್ನಲೆ ತೆರವುಗೊಳಿಸಿದ್ದ ಭಾರಿ ಗಾತ್ರದ ‘ಕಲಶ’ದ ಆಕೃತಿಯನ್ನು ಮರುಸ್ಥಾಪಿಸಲಾಗುತ್ತಿದ್ದು, ಸೋಮವಾರ ರಾತ್ರಿ ಪೀಠದ ಮೇಲೆ ತಂದಿರಿಸಲಾಗಿದೆ. ಪಂಪ್‌ವೆಲ್ ಗೆ 2003ರಲ್ಲಿ ಬೃಹತ್ ಕಲಶವಿಟ್ಟು ಮಹಾವೀರ ಸರ್ಕಲ್ ನಾಮಕರಣ ಮಾಡಲಾಗಿತ್ತು. ಮಂಗಳೂರು ಜೈನ್‌ ಸೊಸೈಟಿ ಇದರ ಉಸ್ತುವಾರಿ ವಹಿಸಿದ್ದರು. ರಾಷ್ಟ್ರೀಯ ಹೆದ್ದಾರಿ 66ರ ಮೇತುವೆಯು ಈ ವೃತ್ತದ ಮೇಲೆಯೇ ಹಾದು ಹೋಗಿದ್ದು, ಅದರ ಕಾಮಗಾರಿ ಸಲುವಾಗಿ 2016ರ ಮಾರ್ಚ್‌ನಲ್ಲಿ ಕಲಶವನ್ನು ತೆರವುಗೊಳಿಸಲಾಗಿತ್ತು. ಈಗ ಮೇಲ್ವೇತುವೆ ಪಕ್ಕದಲ್ಲಿ ಕಲಶಕ್ಕಾಗಿ ಮೀಸಲಿಟ್ಟಿರುವ ಜಾಗದಲ್ಲಿ ವೃತ್ತಾಕಾರದ…

Read More

ಪುಣೆಯಲ್ಲಿ ಕಾರ್ಕಳ ಮೂಲದ ಹೋಟೆಲ್ ಮಾಲೀಕನ ಬರ್ಬರ್ ಹತ್ಯೆ

ಮಂಗಳವಾರ ರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ಕಾರ್ಕಳದ ಹೋಟೆಲ್ ಮಾಲೀಕನೊಬ್ಬನ ಕೊಲೆ ನಡೆದ ಘಟನೆಯೊಂದು ನಡೆದಿದೆ . ಮೃತ ವ್ಯಕ್ತಿಯನ್ನು ಕಾರ್ಕಳ ಮೂಲದ ಕುಮೇರುಮನೆಯ ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ (46) ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಕರ್ತವ್ಯದಲ್ಲಿರುವಾಗ ಕುಡಿದ ಅಮಲಿನಲ್ಲಿದ್ದ ಉತ್ತರ ಪ್ರದೇಶದ ಸಿಬ್ಬಂದಿಯೊಬ್ಬರಿಗೆ ಸಂತೋಷ್ ಶೆಟ್ಟಿ ಎಚ್ಚರಿಕೆ ನೀಡಿದ್ದರು. ಗದರಿಸುವಿಕೆಯಿಂದ ಕೋಪಗೊಂಡ ಸಿಬ್ಬಂದಿ ಅಡುಗೆ ಮನೆಯಿಂದ ಚಾಕುವನ್ನು ತಂದು ಶೆಟ್ಟಿ ಮೇಲೆ ಹಲ್ಲೆ ನಡೆಸಿದ್ದ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ…

Read More

ಸಂಚಾರಕ್ಕೆ ತೊಡಕಾಗಿರುವ ಡ್ರೈನೇಜ್ ನ ಗುಂಡಿ – ಮಳೆ‌ನೀರು ನಿಂತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ

ಮಂಗಳೂರು: ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣ ಸಮೀಪದ ಮುತ್ತಪ್ಪ ದೇವಾಲಯದ ಮುಂದಿರುವ ಮಾರ್ಗದ ಡ್ರೈನೇಜ್ ನ ಸ್ಪಚ್ಚತೆಗಾಗಿ ತೋಡಲಾದ ಗುಂಡಿಯೊಂದನ್ನು ಮುಚ್ಚದೆ ಬಿಡಲಾಗಿದೆ. ಮಳೆ‌ನೀರು ನಿಂತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ.ಎರಡು ದಿನಗಳಿಂದ ಕಾಮಗಾರಿ ನಡೆಯುತ್ತಿಲ್ಲ . ಈ ಮಾರ್ಗವಾಗಿ ಸಂಚರಿಸುವ ವಾಹನಗಳಿಗೆ , ಪಾದಚಾರಿಗಳಿಗೆ , ದೇವಾಲಯಕ್ಕೆ ಬರುವ ಭಕ್ತರಿಗೆ ಈ ಗುಂಡಿ ತೊಂದರೆಯನ್ನುಂಟು ಮಾಡುತ್ತಿದೆ.

Read More
error: Content is protected !!