ಬಾರ್‌ಗಳಿಗೆ ಅಡುಗೆ ಅನಿಲ ಕೊರತೆ: ಗ್ಯಾಸ್ ವಿತರಣೆಗೆ ಅಡಿಟ್ ನಡೆಸಲು ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಆಗ್ರಹ

ಉಡುಪಿ, ಮೇ 7: ಕಳೆದ ಎರಡು ತಿಂಗಳಿನಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಿಗೆ ಅಡುಗೆ ಅನಿಲ ಸರಬರಾಜು ಆಗುತ್ತಿಲ್ಲ ಎಂದು ಆರೋಪಿಸಿರುವ ಉಡುಪಿ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್, ಜಿಲ್ಲೆಯ ಗ್ಯಾಸ್ ವಿತರಕ ಏಜೆನ್ಸಿಗಳ ಸರಬರಾಜು ವ್ಯವಸ್ಥೆಯ ಬಗ್ಗೆ ಅಡಿಟ್ ನಡೆಸಬೇಕು ಎಂದು ಆಗ್ರಹಿಸಿದೆ. ಉಡುಪಿ ಕರಾವಳಿ ಬೈಪಾಸ್‌ನ ಶಾರದಾ ಹೋಟೆಲ್ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅಸೋಸಿಯೇಶನ್ ಅಧ್ಯಕ್ಷ ಬಿ. ಗೋವಿಂದ ರಾಜ್ ಹೆಗ್ಡೆ, “ಕಾಳಸಂತೆಯಲ್ಲಿ ಗ್ಯಾಸ್ ದೊರೆಯುತ್ತಿದೆ. ಕೇಟರಿಂಗ್ ವಲಯಕ್ಕೂ ಪೂರೈಕೆ ನಡೆಯುತ್ತಿದೆ. ಆದರೆ ಸರ್ಕಾರಕ್ಕೆ ಜಿಎಸ್‌ಟಿ…

Read More

ಬಂಟ್ವಾಳ: ತಲಪಾಡಿ ಬದ್ರಿಯಾ ಜುಮಾ ಮಸೀದಿಯ ಮಾಜಿ ಅಧ್ಯಕ್ಷ ನಝೀರ್ ಟಿ.ಎಂ. ನಿಧನ

ಬಂಟ್ವಾಳ: ಬಿ.ಸಿ.ರೋಡ್ ಸಮೀಪದ ತಲಪಾಡಿ ಬದ್ರಿಯಾ ಜುಮಾ ಮಸೀದಿಯ ಮಾಜಿ ಅಧ್ಯಕ್ಷ ನಝೀರ್ ಟಿ.ಎಂ. (57) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಲಪಾಡಿ ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ನಝೀರ್ ಅವರು ಸೌಮ್ಯ ಸ್ವಭಾವ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನಮನ ಗೆದ್ದಿದ್ದರು. ಎಲ್ಲರೊಂದಿಗೆ ಆತ್ಮೀಯತೆಯಿಂದ ಬೆರೆಯುತ್ತಿದ್ದ ಅವರು ಸಮುದಾಯದಲ್ಲಿ ಅಪಾರ ಗೌರವಕ್ಕೆ ಪಾತ್ರರಾಗಿದ್ದರು. ಮೃತರು ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗ…

Read More

ಪಿಂಚಣಿ ವಿಳಂಬಕ್ಕೆ ಪುತ್ತೂರು ತಹಸೀಲ್ದಾರ್‌ಗೆ ಮನವಿ ಸಲ್ಲಿಕೆ

ಪುತ್ತೂರು: ರಾಜ್ಯದಾದಂತ್ಯ ವಿಕಲ ಚೇತನರಿಗೆ, ಮಲಗಿದ್ದಲೆ ಇರುವ ವಿಕಲಚೇತನರಿಗೆ ಎಂಡೊಪೀಡಿತ ವಿಕಲಚೇತನರಿಗೆ, ಹಿರಿಯ ನಾಗರಿಕರಿಗೆ ಮಾಶಾಸನ ಪಿಂಚಣಿ ಬಾರದೆ ಜೀವನ ನಿರ್ವಹಣೆ ಮಾಡಲು ತುಂಬಾ ಕಷ್ಟಕರ ವಾಗಿದೆ.ಈ ವಿಷಯದ ಬಗ್ಗೆ 6/5/26ರಂದು ಪುತ್ತೂರು ತಾಲ್ಲೂಕು ಪಂಚಾಯತ್ ಮಿನಿ ಸಭಾಂಗಣ ದಲ್ಲಿ ಪುತ್ತೂರು ತಾಲ್ಲೂಕು ಪಂಚಾಯತ್ ವ್ಯವಸ್ಥಾಪಕರಾದ ಶ್ರೀಮತಿ ತುಳಸಿ ಯವರ ಅಧ್ಯಕ್ಷ ತೆ ಯಲ್ಲಿ ನಡೆದ ವಿಕಲ ಚೇತನರ ಇಲಾಖೆ ಯಾಡಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ ವಸತಿ ಕಾರ್ಯಕರ್ತರ ಹಾಗೂ ಗ್ರಾಮೀಣ ಹಾಗೂ ನಗರ ಪುನರ್ವಸತಿ…

Read More

ಬಿಸಿಲಿನ ಆಘಾತ: ವೆನ್‍ಲಾಕ್‍ನಲ್ಲಿ ವಿಶೇಷ ಘಟಕ ಸ್ಥಾಪನೆ

ಮಂಗಳೂರಿನಲ್ಲಿ ಹೆಚ್ಚುತ್ತಿರುವ ಬಿಸಿಲಿನ ಹಿನ್ನೆಲೆಯಲ್ಲಿ, ವೆನ್‍ಲಾಕ್ ಆಸ್ಪತ್ರೆಯ ಹೊಸ ಶಸ್ತ್ರಚಿಕಿತ್ಸಾ ಬ್ಲಾಕ್‍ನ 5ನೇ ಮಹಡಿಯಲ್ಲಿ ಶಾಖಾಘಾತಕ್ಕಾಗಿ 10 ಹಾಸಿಗೆಗಳ ವಿಶೇಷ ಘಟಕವನ್ನು ವ್ಯವಸ್ಥೆ ಮಾಡಲಾಗಿದೆ. ಶಾಖಾಘಾತ: ಇದು ವೈದ್ಯಕೀಯ ತುರ್ತುಸ್ಥಿತಿ ದೇಹದ ಉಷ್ಣತೆ 104ಲಿಈ (40ಲಿಅ) ಅಥವಾ ಅದಕ್ಕಿಂತ ಹೆಚ್ಚು, ಗೊಂದಲ, ಪ್ರಜ್ಞೆ ತಪ್ಪುವುದು ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ತುರ್ತು ಸೇವೆಗೆ 108 ಕ್ಕೆ ಕರೆ ಮಾಡಬಹುದು.ಶಾಖಾಘಾತಕ್ಕೆ ತಕ್ಷಣದ ಚಿಕಿತ್ಸೆ: ಶಾಖಾಘಾತ ಜೀವಕ್ಕೆ ಅಪಾಯಕಾರಿ. ತಕ್ಷಣ ವೃತ್ತಿಪರ ಸಹಾಯ ಪಡೆಯಿರಿ. ವ್ಯಕ್ತಿಯನ್ನು ನೆರಳಿಗೆ, ಎಸಿ ರೂಮ್‍ಗೆ…

Read More

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ, ಮೇ 7: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಕ್ರ.260/2014, ಭಾರತೀಯ ದಂಡ ಸಂಹಿತೆ 306ರ ಪ್ರಕರಣದ ಆರೋಪಿ ದುನಿಯಾ ಶರೀಫ್ @ ಮಹಮ್ಮದ್ ಶರೀಫ್ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವಿದೇಶದಿಂದ ಭಾರತಕ್ಕೆ ಹಿಂದಿರುಗುತ್ತಿದ್ದ ವೇಳೆ, ಸಹರಾ ಪೊಲೀಸ್ ಠಾಣೆ ಪೊಲೀಸರ ಸಹಕಾರದೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ…

Read More

ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು ಹಿಂಪಡೆದು ಸರ್ಕಾರದ ಆದೇಶ; ನಿವೃತ್ತಿಗೂ ಮುನ್ನ ಹೊಸ ಹುದ್ದೆ ನೇಮಕ

ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ವಿರುದ್ಧದ ವಿವಾದಾತ್ಮಕ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಅವರ ಮೇಲಿನ ಅಮಾನತು ಆದೇಶವನ್ನು ಹಿಂತೆಗೆದುಕೊಂಡಿದೆ. ಐಜಿಪಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ, ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಪ್ರಕರಣ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾದ ಹಿನ್ನೆಲೆ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಅವರನ್ನು ಅಮಾನತು ಮಾಡಿತ್ತು. ಆದರೆ…

Read More

ಉಳ್ಳಾಲ ಪುರಸಭೆ ಮಾಜಿ ಉಪಾಧ್ಯಕ್ಷೆ ಭವಾನಿ ನಿಧನ

ಉಳ್ಳಾಲ: ಉಳ್ಳಾಲ ಪುರಸಭೆಗೆ ಎರಡು ಬಾರಿ ಕಾಪಿಕಾಡು ವಾರ್ಡಿನಿಂದ ಸ್ಪರ್ಥಿಸಿ ಕೌನ್ಸಿಲರ್ ಆಗಿದ್ದ ಭವಾನಿ (70) ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿಯಾದ ಭಾವಕಣಿ ಇವರು ಅವಿವಾಹಿತರಾಗಿದ್ದು , ಬಿಜೆಪಿ ಸಕ್ರಿಯ ಮಹಿಳಾ ಸದಸ್ಯೆಯಾಗಿದ್ದರು. ಪುಲ್ಕೆದಡಿ ಆದಿ ಕ್ಷೇತ್ರ ಬಂಡಿಕೊಟ್ಯ ಕೋರ್ದಬ್ಬು ದೈವಸ್ಥಾನದ ಸಮಿತಿಯಲ್ಲಿ ಸಕ್ರಿಯ ಸದಸ್ಯೆಯಾಗಿದ್ದರು. ಅವಿವಾಹಿತರಾಗಿರುವ ಇವರು ಉಳ್ಳಾಲ ಪುರಸಭೆ ಗೆ ಎರಡು ಬಾರಿ ಕೌನ್ಸಿಲರ್ ಆಗಿ ಆಯ್ಕೆಗೊಂಡು ಒಂದು ಬಾರಿ ಉಪಾಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದರು.

Read More

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಹಿರಿಯ ಕವಿ, ಹಾಡುಗಾರ ರಹೀಮ್ ಬಿ.ಸಿ. ರೋಡ್ ಆಯ್ಕೆ

ಬಂಟ್ವಾಳ : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್‌ನ ಸಹಯೋಗ ದೊಂದಿಗೆ ಮೇ 12 ರಂದು ಪಾಣೆಮಂಗಳೂರು ಆಲಡ್ಕದ ಎಸ್‌. ಎಸ್‌ ಆಡಿಟೋರಿಯಂ ನಲ್ಲಿ ಹಮ್ಮಿಕೊಂಡಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಕವಿ, ಹಾಡುಗಾರ ರಹೀಂ ಬಿ.ಸಿ. ರೋಡ್‌ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್‌ ಯು.ಹೆಚ್.‌ ತಿಳಿಸಿದ್ದಾರೆ. ಬಾಲ್ಯದಲ್ಲಿಯೇ ಹಾಡುಗಾರಿಕೆ ಯಲ್ಲಿ ಆಸಕ್ತಿ ಬೆಳೆಸಿಕೊಂಡ ರಹೀಂ ಬಿ.ಸಿ.ರೋಡ್‌ ತನ್ನ ತಾಯಿ ಪರಿಸರದ…

Read More

ಬನ್ನೂರಿನಲ್ಲಿ ಸುವರ್ಣ ಮಹೋತ್ಸವ: ಮೇ 7ರಿಂದ ಧಾರ್ಮಿಕ ಕಾರ್ಯಕ್ರಮ, ಅಂತರ್‌ರಾಜ್ಯ ದಫ್ ಸ್ಪರ್ಧೆ

ಪುತ್ತೂರು; ಧಾರ್ಮಿಕ ಜಾಗೃತಿ ಹಾಗೂ ಸಾಂಪ್ರದಾಯಿಕ ಕಲಾಪ್ರಕಾರಗಳನ್ನು ಉಳಿಸಿಕೊಳ್ಳುವ ಉದ್ದೇಶದೊಂದಿಗೆ ಬನ್ನೂರು ದಖೀರತುಲ್ ಉಖ್ರಾ ಯಂಗ್ ಮೆನ್ಸ್ ಅಸೋಸಿಯೇಶನ್ ಸಂಸ್ಥೆ ತನ್ನ 50ನೇ ವರ್ಷದ ಸುವರ್ಣಮಹೋತ್ಸವ ಆಚರಣೆ ಪ್ರಯುಕ್ತ ಮೇ.7ರಿಂದ 9 ತನಕ 3 ದಿನಗಳ ಧಾರ್ಮಿಕ ಕಾರ್ಯಕ್ರಮ ಹಾಗೂ ಅಂತರ್‍ರಾಜ್ಯ ಮಟ್ಟದ ದಫ್ ಸ್ಪರ್ಧೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಅಝರ್ ಬನ್ನೂರು ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಇಂದಿನ ಯುವಜನತೆಯನ್ನು ಅನೈತಿಕ ಚಟುವಟಿಕೆಗಳು, ಡ್ರಗ್ಸ್ ಮುಂತಾದ ತಪ್ಪು ಹಾದಿಗಳಿಂದ ದೂರ ಮಾಡುವ ನಿಟ್ಟಿನಲ್ಲಿ…

Read More

ಮಟಪಾಡಿಯಲ್ಲಿ ನೂತನ ಸಾರಿಗೆ ಬಸ್ಸಿಗೆ ಸಂಭ್ರಮದ ಸ್ವಾಗತ

ಉಡುಪಿ: ಉಡುಪಿ–ಕೊಕ್ಕರ್ಣೆ ಮಾರ್ಗದಲ್ಲಿ ಬ್ರಹ್ಮಾವರ, ಮಟಪಾಡಿ–ನೀಲಾವರ ಮೂಲಕ ಸಂಚರಿಸಲಿರುವ ನೂತನ ಸರ್ಕಾರಿ ಸಾರಿಗೆ ಬಸ್ಸಿಗೆ ಮಟಪಾಡಿ ಗ್ರಾಮದಲ್ಲಿ ಸಂಭ್ರಮದ ಸ್ವಾಗತ ಕೋರಲಾಯಿತು. ಫ್ರೆಂಡ್ಸ್ ಮಟಪಾಡಿ ಯೂಥ್ ಕ್ಲಬ್ ವತಿಯಿಂದ ಗ್ರಾಮಕ್ಕೆ ಆಗಮಿಸಿದ ಬಸ್ಸಿಗೆ ಹೂವಿನ ಹಾರ ಹಾಕಿ, ಆರತಿ ಬೆಳಗಿ, ತೆಂಗಿನಕಾಯಿ ಒಡೆದು ಹಾಗೂ ಪಟಾಕಿ ಸಿಡಿಸಿ ಭವ್ಯ ಸ್ವಾಗತ ನೀಡಲಾಯಿತು. ಇದೇ ವೇಳೆ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರಿಗೆ ತಂಪು ಪಾನೀಯ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಮಟಪಾಡಿ ಯೂಥ್ ಕ್ಲಬ್ ಅಧ್ಯಕ್ಷ ಚೇತನ್ ಜಿ ಪೂಜಾರಿ, ಪ್ರಧಾನ…

Read More
error: Content is protected !!