ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಫೆಬ್ರವರಿ 12 ರಂದು ಬೆಳ್ಳಿ ಹಬ್ಬ ಮಹೋತ್ಸವ …. !

ಮಂಗಳೂರು:ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು 25 ವರ್ಷದ ಹೊಸ್ತಿಲಿನಲ್ಲಿದ್ದು ಇದರ ಭಾಗವಾಗಿ ಸಂಸ್ಥೆಯು ಫೆಬ್ರವರಿ 12 ರಂದು ಬೆಳ್ಳಿ ಹಬ್ಬ ಮಹೋತ್ಸವ ಆಚರಣೆ ನಡೆಸಲು ತೀರ್ಮಾನಿಸಿದೆ ಇದರ ಉದ್ಘಾಟನಾ ಕಾರ್ಯಕ್ರಮವು 10.30 ಕ್ಕೆ ಎಸ್ ಜೆಇಸಿ ಕ್ಯಾಂಪಸ್ ನಲ್ಲಿ ನಡೆಯಲಿದ್ದು ಉದ್ಘಾಟನೆಯನ್ನು ವಿಧಾನ ಸಭಾಧ್ಯಕ್ಷರಾದ ಯು, ಟಿ, ಖಾದರ್ ನೆರವೇರಿಸಲಿದ್ದಾರೆ ಎಂದು ಪ್ರಾಂಶುಪಾಲರಾದ ಡಾ. ರಿಯೋ ಡಿ’ಸೋಜಾ ತಿಳಿಸಿದರು . ಅವರು ನಗರದ ಪಾತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಳೆದ ಹಲವು ವರ್ಷಗಳಿಂದ ಕಾಲೇಜು…

Read More

ನಗದು ಕಳ್ಳತನ ಕೇಸ್: ವ್ಯಕ್ತಿ ಅರೆಸ್ಟ್

ಮಂಗಳೂರು ನಗರದ ಪೊಲೀಸರು‌ ನಗದು ಕಳವು ಪ್ರಕರಣವನ್ನು ಭೇಧಿಸಿ ಕ್ಷಿಪ್ರ ಕಾರ್ಯಾಚರಣೆಯನ್ನು ನಡೆಸಿ ಆರೋಪಿತನನ್ನು ಬಂಧಿಸಿದ್ದಾರೆ.ಮಹಮ್ಮದ್ ನಿಜಾಮುದ್ದಿನ್ ಎಂಬವರು ದಿನಾಂಕ 07/02/2026 ರಂದು ಶ್ರೀಧರ ಆಳ್ವರವರಿಗೆ ಸೇರಿದ ಅಡಿಕೆಯನ್ನು ಕೆಎ-19-AE-8663 ನೇ ಟಾಟಾ ಇಂಟ್ರಾ ವಾಹನದಲ್ಲಿ ತುಂಬಿಸಿಕೊಂಡು ಬೀಬಿ ಅಲಾಬಿಯಲ್ಲಿರುವ ಅಂಬಾರ ಸುಪಾರಿ ಅಂಗಡಿಗೆ ಮಾರಾಟ ಮಾಡಿ ಅವರು ನೀಡಿದ 1,28740ನ್ನು ತನ್ನ ವಾಹನದ ಡ್ಯಾಶ್ ಬೋರ್ಡ್ ನಲ್ಲಿಟ್ಟು ವಾಹನವನ್ನು ಚಲಾಯಿಸಿಕೊಂಡು 10.30ಕ್ಕೆ ಬಂದರ್ ನ ಜೆ.ಎಂ.ರೋಡ್ ನಲ್ಲಿರುವ ಸದರ್ನ್ ಏಜೆನ್ಸಿಯಲ್ಲಿ ಎಸಿಪಿ ಶೀಟ್ ಖರೀದಿ ಮಾಡಿ…

Read More

ಫೆ.11ರಿಂದ 14ರ ತನಕ ಕದಿಕೆ ಹಳೆಯಂಗಡಿ ಹರ್ಝತ್ ಸೈಯದ್ ಮೌಲಾನವಲಿಯುಲ್ಲಾಹಿ ದರ್ಗಾದಲ್ಲಿ ಸಂಭ್ರಮದ ಉರೂಸ್ ಆಚರಣೆ

ಮಂಗಳೂರು:ಕದಿಕೆ ಹಳೆಯಂಗಡಿಯ ಹಝತ್ ಸೈಯದ್ ಮೌಲಾನವಲಿಯುಲ್ಲಾಹಿ (ಖ.ಸಿ) ದರ್ಗಾ ಶರೀಫ್ ಇದರ ವಾರ್ಷಿಕ ಉರೂಸ್ ಸಮಾರಂಭವು ಫೆಬ್ರವರಿ 11ರಿಂದ 14ರವರೆಗೆ ಭಕ್ತಿಭಾವದಿಂದ ನಡೆಯಲಿದೆ ಎಂದು ಉರೂಸ್ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಕುಡುಂಬೂರು ತಿಳಿಸಿದ್ದಾರೆ.ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ದಿನಗಳ ಕಾಲ ನಡೆಯುವ ಉರೂಸ್ ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರವಚನಗಳು, ಸ್ವಲಾತ್ ಮಜ್ಜಿಸ್, ಸಂದಲ್ ಮೆರವಣಿಗೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಉರೂಸ್ ಉದ್ಘಾಟನಾ ಸಮಾರಂಭವು ಫೆಬ್ರವರಿ 11ರ ಬುಧವಾರ…

Read More

ಜಿಲ್ಲೆಯ ಶಾಸಕರುಗಳಿಗೆ ಪ್ರತಿಷ್ಟೆಗೆ ಕಂಬಳ ಬೇಕು, ಸರಕಾರಿ ಆಸ್ಪತ್ರೆಗಳು ಬೇಡ: ಸಂತೋಷ್ ಬಜಾಲ್ ಆರೋಪ

ಜಿಲ್ಲೆಯ ಸರಕಾರಿ ಆಸ್ಪತ್ರೆಗಳ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಮಂಗಳೂರು ಸೇರಿದಂತೆ 5 ತಾಲೂಕುಗಳಲ್ಲಿ ಸರಕಾರಿ ತಾಲೂಕು ಆಸ್ಪತ್ರೆಗಳೇ ಇಲ್ಲ. ಆದರೆ ಈ ಎಲ್ಲಾ ಕ್ದೇತ್ರದಲ್ಲಿರುವ ಶಾಸಕರುಗಳ ಪ್ರತಿಷ್ಟೆಗೆ ಕಂಬಳ ಬೇಕು ಅಲ್ಲಿಗೆ ಸರಕಾರಿ ಆಸ್ಪತ್ರೆ ಇರಬೇಕೆಂಬ ಇಚ್ಚಾಶಕ್ತಿಯೇ ಇಲ್ಲದಿರೋದು ಖೇದಕರ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ದ.ಕ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ, ಜಯದೇವ, ಕಿದ್ವಾಯಿ, ನಿಮಾನ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆಗೆ ಒತ್ತಾಯಿಸಿ,…

Read More

ಫೆ 23 ರಂದು ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘TEDxStAloysius’ ಕಾರ್ಯಕ್ರಮ … !

ಮಂಗಳೂರು:ನಗರದ ಪ್ರತಿಷ್ಠಿತ ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ವತಿಯಿಂದ ಫೆ 23 ರಂದು “ಅಲಿಖಿತ ಆಲೋಚನೆಗಳ ಎಳೆಗಳು ” (Threads of Unwritten Thoughts) ಎಂಬ ಪರಿಕಲ್ಪನೆಯ ಅಡಿಯಲ್ಲಿ ‘TEDxStAloysius’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯದ ಸಹಕುಲಪತಿ ರೆ. ಡಾ. ಮೆಲ್ವಿನ್ ಡಿ. ಕುನ್ಹಾ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . ಸಹ-ಸಂಚಾಲಕಿ ಕು. ಅನಾ ಮಾತನಾಡಿ , 146 ವರ್ಷಗಳ ಶೈಕ್ಷಣಿಕ ಇತಿಹಾಸ ಹೊಂದಿರುವ ಅಲೋಶಿಯಸ್ ಸಂಸ್ಥೆಯು ನವೀನ ಆಲೋಚನೆಗಳನ್ನು ಸಾರ್ವಜನಿಕವಾಗಿ ಚರ್ಚಿಸಲು ಈ…

Read More

ಕ್ಯಾನ್ಸರ್ ಬಗ್ಗೆ ಭಯ ಬೇಡ, ಅರಿವು ಇರಲಿ – ಡಾ. ಹೆಚ್. ಆರ್ ತಿಮ್ಮಯ್ಯ

ಮಂಗಳೂರು-ಕ್ಯಾನ್ಸರ್ ಎಂಬ ಮಾರಕ ಖಾಯಿಲೆಗೆ ಭಯ ಪಡದೆ ಆರಂಭದಲ್ಲಿಯೇ ಶೀಘ್ರ ಚಿಕಿತ್ಸೆ ಪಡೆದುಕೊಳ್ಳುವುದು ಅತ್ಯಗತ್ಯ. ಕ್ಯಾನ್ಸರ್ ಶೀಘ್ರ ಪತ್ತೆ ಮತ್ತು ತಪಾಸಣೆಯಿಂದ ತಡೆಗಟ್ಟಬಹುದು. ಈ ರೋಗದ ವಿರುದ್ಧ ಹೋರಾಡಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರಿಂದ ಸ್ವಸ್ಥ ಸಮಾಜ ನಿರ್ಮಾಣವಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್. ಆರ್ ತಿಮ್ಮಯ್ಯ ಹೇಳಿದರು.ಅವರು ಶನಿವಾರ ನಗರದ ಜಿಲ್ಲಾ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್‍ಲಾಕ್…

Read More

“ಬಾಲ್ಯ ವಿವಾಹ ಮುಕ್ತ ಭಾರತ” ಅಭಿಯಾನದಡಿ ಕಾನೂನು ಅರಿವು ಕಾರ್ಯಗಾರ

ಮಂಗಳೂರು:- ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಜಿಲ್ಲಾಡಳಿತ ಹಾಗೂ ವಿವಿಧ ಬ್ಯಾಂಕ್‍ಗಳ ಒಕ್ಕೂಟ, ದಕ್ಷಿಣ ಕನ್ನಡ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ಬಾಲ್ಯ ವಿವಾಹ ಮುಕ್ತ ಭಾರತ” ಅಭಿಯಾನದಡಿ ಕಾನೂನು ಅರಿವು ಕಾರ್ಯಗಾರ ಶನಿವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ನ್ಯಾಯಾಧೀಶ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್ ಶಶಿಧರ ಶೆಟ್ಟಿ ಮಾತನಾಡಿ,…

Read More

ಹರೇಕಳ ನ್ಯೂಪಡ್ಪು ಪಿಯು ಕಾಲೇಜು ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಪದ್ಮಶ್ರೀ ಹರೇಕಳ ಹಾಜಬ್ಬ ಅವರ ಪರಿಶ್ರಮದಿಂದ ನೂತನವಾಗಿ ಆರಂಭಗೊಂಡಿರುವ ಹರೇಕಳ ನ್ಯೂಪಡ್ಪು ಸರಕಾರಿ ಪದವಿಪೂರ್ವ ಕಾಲೇಜಿಗೆ ದಗನೆಪಡ್ಪುವಿನಲ್ಲಿ ಸರಕಾರದಿಂದ ಮಂಜೂರುಗೊಂಡಿರುವ ಜಾಗದಲ್ಲಿ ಎಂಆರ್ ಪಿಎಲ್ ಕಂಪೆನಿ ಮಂಗಳೂರು ಇದರ 45 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಕಾಲೇಜಿನ ನೂತನ ಕಟ್ಟಡದ 2 ಕೊಠಡಿಗಳಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಕರ್ನಾಟಕ ವಿಧಾನಸಭಾಧ್ಯಕ್ಷ ಡಾ.ಯು.ಟಿ.ಖಾದರ್ ಫರೀದ್ ಎಂಆರ್ ಪಿಎಲ್ ಕಂಪೆನಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಗೈದರು.ಬಳಿಕ ಮಾತನಾಡಿದ ಅವರು ,ನ್ಯೂಪಡ್ಪು ಸರಕಾರಿ ಪದವಿಪೂರ್ವ ಕಾಲೇಜಿನ ಮುಂದಿನ…

Read More

ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ

ಉಡುಪಿ: ಉಡುಪಿ ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ ಹೇಳಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಸಾಸ್ತಾನ ಟೋಲ್ ಗೇಟ್ ನಲ್ಲಿ ಮಾಜಿ ಸೈನಿಕರೊಬ್ಬರನ್ನು ಅವಮಾನಿಸಲಾಯಿತು. ಅಲ್ಲದೇ ಕನ್ನಡಪರ ಸಂಘಟನೆ ವಾಹನವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಅವಮಾನಿಸಿದ್ದಾರೆ. ಹಿಂದಿ ಭಾಷಿಕರಿಂದ ಕನ್ನಡಿಗರ ಮೇಲೆ ಪದೇ ಪದೇ ದೌರ್ಜನ್ಯ ನಡೆಯುತ್ತಿದೆ. ಈ…

Read More

ಲಾಡ್ಜ್ ನಲ್ಲಿ ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲೇ ವ್ಯಕ್ತಿ ಮೃತ್ಯು

ಉಡುಪಿ: ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಬಳಿ ಇರುವ ವಸತಿಗೃಹದಲ್ಲಿ ಯಾತ್ರಾರ್ಥಿಯೊಬ್ಬರು ಕುಳಿತ ಕುರ್ಚಿಯಲ್ಲಿಯೇ ಸಾವನಪ್ಪಿರುವ ಘಟನೆ‌ ನಡೆದಿದೆ.‌ವ್ಯಕ್ತಿಯು ಕೊಠಡಿಯಿಂದ‌ ಹೊರಬರದಿರುವುದನ್ನು ಗಮನಿಸಿದ ಲಾಡ್ಜ್ ಸಿಬ್ಬಂದಿ ‌ಸಂಶಯಪಟ್ಟು ಬಾಗಿಲು‌ ತೆರೆದು‌ ನೋಡಿದಾಗ ವ್ಯಕ್ತಿ ಮೃತಪಟ್ಟಿರುವುದು ಕಂಡುಬಂದಿದೆ. ಮೃತ ವ್ಯಕ್ತಿಯನ್ನು ದಾವಣಗೆರೆಯ ನಿವಾಸಿ ಮಹಾಂತೇಶ ಎಂ.ಜಿ. ಎಂದು ಗುರುತಿಸಲಾಗಿದೆ. ಸಾವಿಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಅನಾರೋಗ್ಯದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತ ವ್ಯಕ್ತಿ ಮನೆಯಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಹೋಗುವುದಾಗಿ ಹೇಳಿ ಬಂದಿದ್ದನೆಂದು ತಿಳಿದುಬಂದಿದೆ.ನಗರ ಪೋಲಿಸ್ ಠಾಣೆಯ…

Read More
error: Content is protected !!