ಕಡಬ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ!ಶಾಸಕ ಮಂಜುನಾಥ ಭಂಡಾರಿ ಹರ್ಷ

ಕಡಬ: ಭಾರೀ ಕುತೂಹಲ ಕೆರಳಿಸಿದ್ದ ಸುಳ್ಯ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ಚುನಾವಣೆಯು ಯಶಸ್ವಿಯಾಗಿದ್ದು ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. 13 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲುವ ಮೂಲಕ ಅಧಿಕಾರದ ಗದ್ದುಗೆಯೇರಿದೆ. ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಹುಮತ ಪಡೆದಿದ್ದಾರೆ….

Read More

ಮುಗ್ಡಾಲ್ ಗುಡ್ಡೆ: ‘5ನೇ ವರ್ಷದ ಆಟಿಡೊಂಜಿ ದಿನ’ಆಟಿದ ಅಟ್ಟನೆ’.

ಬಂಟ್ವಾಳ: ‘ ಮುಗ್ಡಾಲ್ ಗುಡ್ಡೆ’ ವತಿಯಿಂದ 5 ನೇ ವರ್ಷದ’ಆಟಿಡೊಂಜಿ ದಿನ ಕಾರ್ಯಕ್ರಮ”ಆಟಿದ ಅಟ್ಟನೆ “ವಿವಿಧ, ಸಂಸ್ಕೃತಿ ಸಂಸ್ಕಾರದ ಆಹಾರ ತಿಂಡಿ ತಿನಸಿನ ಜೊತೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಾಧನೆಯನ್ನು ಮಾಡಿದ ಸಾಧಕರಿಗೆ ಸನ್ಮಾನದೊಂದಿಗೆ ವಿಜೃಂಭನೆಯಿಂದ ಜರಗಿತು.ಸ್ಥಳೀಯ ಹಿರಿಯರಜೊತೆ ವಠಾರದ ಮಾತೆಯರು ದೀಪ ಬೆಳಗಿಸಿ ಉದ್ಘಾಟಿಸಿದರು. ತುಳುನಾಡಿನ ಸಾಂಸ್ಕೃತಿಕ ನೃತ್ಯಗಳು, ಆಟಿಕಳಂಜ ನಲಿಕೆ, ತುಳುಪದಕೊಲಿಕೆ ಆಟ, ಕಂಡಡೊಂಜಿ ದಿನ ಸ್ಪರ್ಧೆ ನಡೆಸಿದ ಸ್ಪರ್ಧಾಳುಗಳಿಗೆ ಬಹುಮಾನ ವಿತರಣೆ, ಹತ್ತನೇ ತರಗತಿಯಲ್ಲಿ ಉತ್ತಮ ಅಂಕ ಪಡದ ವಿದ್ಯಾರ್ಥಿಗಳನ್ನು ತುಳುನಾಡ ಶಾಲು ಹೊದಿಸಿ…

Read More

ಬಜಾಲ್ ನಂತೂರ್ ನಲ್ಲಿ ಜೆ.ಎಫ್ ಅಸೋಸಿಯೇಷನ್ ನಿಂದ 79ನೇ ಸ್ವಾತಂತ್ರ್ಯೋತ್ಸವ.

ಮಂಗಳೂರು: ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಎಲ್ಲ ಮಹಾತ್ಮಾರನ್ನು ನಾವು ಸ್ಮರಿಸಬೇಕು. ಸ್ವಾತಂತ್ರ್ಯವನ್ನು ಪಡೆಯಲು ಅವರು ಮಾಡಿದ ತ್ಯಾಗದಿಂದ ನಾವು ಇಂದು ನೆಮ್ಮದಿಯ ಉಸಿರಾಡುತ್ತಿದ್ದೇವೆ ಎಂದು ಮ.ನ.ಪಾ ನಿಕಟ ಪೂರ್ವ ಸದಸ್ಯ ಹಾಗೂ ಬಜಾಲ್ ನಂತೂರ್ ಬದ್ರಿಯಾ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಬ್ದುಲ್ ರವೂಫ್ ಹೇಳಿದ್ದಾರೆ.79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಜೆ.ಎಫ್ ಅಸೋಸಿಯೇಷನ್ (ರಿ) ಬಜಾಲ್ ನಂತೂರ್ ಇದರ ವತಿಯಿಂದ ಶುಕ್ರವಾ ಚೌಕ್ ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಗೈದು ಬಳಿಕ ಅವರು ಮಾತನಾಡುತ್ತಿದ್ದರು. ಜೆ.ಎಫ್.ಎ ಸಂಸ್ಥೆ ಹಲವಾರು ಜನಪರ…

Read More

ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ 21ನೇ ಪದವಿ ಪ್ರಧಾನ ಸಮಾರಂಭ.

“ಸಂಸ್ಥೆಯ ಹೆಮ್ಮೆಯ ಸಾಧನೆಗಳಲ್ಲಿ ನೀವು ಪಾಲುದಾರರು ” – ವಾಸುದೇವ ಕಾಮತ್ಮಂಗಳೂರು, ಆ. 16: “ನಮ್ಮ ಕಾಲೇಜಿನಲ್ಲಿ ನಿರ್ಮಿಸಿದ ಆಧುನಿಕ ಸೌಲಭ್ಯಗಳು, ಈ ತಾಂತ್ರಿಕ ಶಿಕ್ಷಣ ಸಂಸ್ಥೆಗೆ ದೊರಕಿದ ಸ್ವಾಯತ್ತ ಸ್ಥಾನಮಾನ, NAAC ಮಾನ್ಯತೆ, ಅನೇಕ ಶ್ರೇಣಿಗಳು ಹಾಗೂ ಚಿನ್ನದ ಪದಕ ಇವು ಸಂಸ್ಥೆಯ ಹೆಮ್ಮೆಯ ಸಾಧನೆಗಳು. ಈ ಸಾಧನೆಗಳ ಸಹಯಾತ್ರಿಗಳೆಂದರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು. ಬರುವ ಡಿಸೆಂಬರ್ 24, 2025ರಂದು ಜರುಗುವ ಜಾಗತಿಕ ಹಳೆಯ ವಿದ್ಯಾರ್ಥಿ ಸಮಾವೇಶದಲ್ಲಿ ಪ್ರತಿಯೊಬ್ಬ ಪದವೀಧರರೂ ಪಾಲ್ಗೊಳ್ಳಿ, ಸಂಸ್ಥೆಯ ಶಕ್ತಿಯನ್ನು ವಿಶ್ವಮಟ್ಟದಲ್ಲಿ…

Read More

ಮತ್ತೆ ಕರಾವಳಿಯಾದಂತ್ಯ ಅಬ್ಬರಿಸಲಿದೆ ಮಳೆರಾಯ.

ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಮಳೆ ಚುರುಕುಗೊಳ್ಳಲು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಕಾರಣವೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಋತುವಿನ ಆರಂಭದಿಂದಲೂ ಸಮುದ್ರ ಮಟ್ಟದಲ್ಲಿ ನಿರಂತರ ಬದಲಾವಣೆಗಳು ಮುಂದುವರಿದಿವೆ. ಕರಾವಳಿ ಕರ್ನಾಟಕವು ತೀವ್ರ ಮಳೆ ಎಚ್ಚರಿಕೆ ನೀಡಲಾಗಿದೆ. ಈ ಪ್ರದೇಶದಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಇನ್ನು ಆಗಸ್ಟ್ 16ರಂದು ಕರಾವಳಿ ಜಿಲ್ಲೆಗಳು ಬೆಳಗಾವಿ, ಬೀದರ್ ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ….

Read More

ಸಾಮರಸ್ಯದಿಂದ ಅಭಿವೃದ್ಧಿ ಸಾಧ್ಯ : ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್.

ಮಂಗಳೂರು: ಸಾಮರಸ್ಯದಿಂದ ಅಭಿವೃದ್ಧಿ ಸಾಧ್ಯ ಎಂಬುದನ್ನು ಸಮಾಜದ ಜನರಿಗೆ ಮತ್ತು ಚರ್ಚ್‌, ಮಸೀದಿ ಮಂದಿರಗಳ ಮುಖ್ಯಸ್ಥರಿಗೆ ಮನದಟ್ಟು ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ನಗರದ ನೆಹರೂ ಮೈದಾನದಲ್ಲಿ ನಡೆದ ಪಥಸಂಚಲನದೊಂದಿಗೆ 79ನೇ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸಂದೇಶ ಭಾಷಣದಲ್ಲಿ ಅವರು ಕರೆ ನೀಡಿದರು. ಕಲೆ, ನಾಟಕ, ಯಕ್ಷಗಾನ ಕ್ಷೇತ್ರಗಳಲ್ಲೂ ಸಹ ಸಾಮರಸ್ಯ ಸಂದೇಶ ಸಾರುವತ್ತ ಕಲಾವಿದರು ಹೆಚ್ಚಿನ ಗಮನ ಹರಿಸಬೇಕು. ಹಿಂಸೆಗೆ ಅವಕಾಶ ನೀಡದೇ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೈ…

Read More

ಐಎಂಸಿ ವತಿಯಿಂದ ಪುರಸ್ಕಾರ ಸಮಾರಂಭ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗಡಿಯಾರ ಜೋಗಿಬೆಟ್ಟುವಿನ ಐಎಂಸಿ ಸಂಘಟನೆಯ ನೇತೃತ್ವದಲ್ಲಿ ಎಸೆಸೆಲ್ಸಿಯಲ್ಲಿ ಉತ್ತಮ ಅಂಕ ಪಡೆದ ಊರಿನ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭವು ಶುಕ್ರವಾರ ಗಡಿಯಾರ ಜುಮಾ‌ ಮಸೀದಿ ಆವರಣದಲ್ಲಿ ‌ನಡೆಯಿತು. ಇದೇ ವೇಳೆ ಉತ್ತಮ ಅಂಕಗಳನ್ನು ಪಡೆದ ದುಲ್ಖತ್ಹುಲ್ ಅಫೀಫಾ (ಅಂಕ 617), ಮುಹಮ್ಮದ್ ಶಬೀರ್ ಕೆ (ಅಂಕ 590), ಮುಹಮ್ಮದ್ ರಾಫಿ (ಅಂಕ 566),ಮುಹಮ್ಮದ್ ನಿಹಾಲ್ (ಅಂಕ 560), ಮರಿಯಂ ರಾಯಿದ್ (ಅಂಕ 549) ಇವರನ್ನು ಪೋಷಕರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಸಮಾರಂಭದ ಮುಖ್ಯ…

Read More

ಪಿವಿಎಸ್ ವೃತ್ತ ಬಳಿಯ ಆಟೋರಿಕ್ಷಾ ನಿಲ್ದಾಣಕ್ಕೆ ನೂತನವಾಗಿ ನಿರ್ಮಿಸಲಾದ ಮೇಲ್ಚಾವಣಿಯ ಉದ್ಘಾಟನೆ ಇಂದು.

ಪಿವಿಎಸ್ ವೃತ್ತ ಬಳಿಯ ಆಟೋರಿಕ್ಷಾ ನಿಲ್ದಾಣಕ್ಕೆ ನೂತನವಾಗಿ ನಿರ್ಮಿಸಲಾದ ಮೇಲ್ಚಾವಣಿಯ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ನಿಮ್ಮೆಲ್ಲರ ಅನುಕೂಲಕ್ಕಾಗಿ ಶಾಸಕರ ನಿಧಿಯಿಂದ ಅನುದಾನವನ್ನು ಹೊಂದಿಸಿಕೊಂಡು ಈ ಆಟೋರಿಕ್ಷಾ ನಿಲ್ದಾಣದ ಮೇಲ್ಚಾವಣಿಯನ್ನು ನಿರ್ಮಿಸಲಾಗಿದ್ದು, 79ನೇ ಸ್ವಾತಂತ್ರ್ಯೋತ್ಸವದ ಶುಭ ದಿನದಂದೇ ಉದ್ಘಾಟನೆಗೊಳ್ಳುತ್ತಿದೆ. ಇಲ್ಲಿನ ಚಾಲಕ ಬಂಧುಗಳಿಗೆ ಇದರ ಉಪಯೋಗವಾದರೆ ಅದಕ್ಕಿಂತ ಸಂತೋಷ ಬೇರೇನಿಲ್ಲ, ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು. ನಿಕಟಪೂರ್ವ ಪಾಲಿಕೆ ಸದಸ್ಯೆ ಪೂರ್ಣಿಮಾ, ರಮೇಶ್ ಹೆಗ್ಡೆ, ಮೋಹನ್ ಪೂಜಾರಿ, ಭಾಗ್ಯ…

Read More

ದಕ್ಷಿಣಕನ್ನಡದ ಹೆಸರು ಮಂಗಳೂರು ಎಂದಾಗಲಿ :- ಅಧಿವೇಶನದಲ್ಲಿ ಆಗ್ರಹಿಸಿದ ಶಾಸಕ ಕಾಮತ್

ಕೇವಲ ಒಂದೆರಡು ತಿಂಗಳಲ್ಲಿಯೇ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ತೋರಿದ ಉತ್ಸಾಹವನ್ನು ದಕ್ಷಿಣಕನ್ನಡದ ಹೆಸರನ್ನು ಮಂಗಳೂರು ಎಂದು ಬದಲಿಸುವಲ್ಲಿಯೂ ರಾಜ್ಯ ಸರ್ಕಾರ ತೋರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಗ್ರಹಿಸಿದರು. ಗಮನ ಸೆಳೆಯುವ ವೇಳೆ ನಡೆದ ಚರ್ಚೆಯಲ್ಲಿ ಮಾತನಾಡಿದ ಶಾಸಕರು, ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾಧಿಕಾರಿಗಳಿಂದ ವರದಿ ಬರಲು ಬಾಕಿ ಇದ್ದು ಪ್ರಸ್ತಾವನೆ ಸ್ವೀಕೃತಗೊಂಡಿರುವುದಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ಆ ಪ್ರಸ್ತಾವನೆ ಸಲ್ಲಿಕೆಯಾಗಲು ಸರ್ಕಾರದಿಂದ ಪೂರಕವಾದ ವಾತಾವರಣ…

Read More

ಸದನದಲ್ಲಿ ಯಶಸ್ವಿಯಾಗಿ ಕಲಾಪ ನಡೆಸಿಕೊಟ್ಟ ಶಾಸಕ ಮಂಜುನಾಥ ಭಂಡಾರಿ!

ಬೆಂಗಳೂರು: ಇಂದು ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರು ಸಭಾಪತಿ ಪೀಠದಲ್ಲಿ ಕುಳಿತು ಶೂನ್ಯ ವೇಳೆಯ ಚರ್ಚೆಯನ್ನು ಹಾಗೂ ವಿವಿಧ ವಿಧೇಯಕಗಳ ಅಂಗೀಕಾರದ ಮೇಲಿನ ಚರ್ಚೆಯನ್ನು ಬಹಳ ಸುಧೀರ್ಘವಾಗಿ ಹಾಗೂ ಅರ್ಥಗರ್ಭಿತವಾಗಿ ನಡೆಸಿಕೊಟ್ಟರು. ಶಾಸಕ ಭಂಡಾರಿ ಅವರು ಈ ಹಿಂದೆಯೂ ಅನೇಕ ಬಾರಿ ಯಶಸ್ವಿಯಾಗಿ ವಿಧಾನ ಪರಿಷತ್ ಕಲಾಪವನ್ನು ನಿರ್ವಹಿಸುವ ಮೂಲಕ ಸೈ ಅನ್ನಿಸಿಕೊಂಡಿದ್ದಾರೆ.

Read More
error: Content is protected !!