ಕೊಕ್ಕಡದಲ್ಲಿ ಅಖಿಲ ಭಾರತ ಮುಷ್ಕರ ಪ್ರಚಾರ ಜಾಥಾಗೆ ಅಡ್ಡಿ: ‘ಮೋದಿ ಮೋದಿ’ ಘೋಷಣೆ

ಮಂಗಳೂರು : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡದಲ್ಲಿ ಅಖಿಲ ಭಾರತ ಮುಷ್ಕರ ಪ್ರಚಾರದ ಅಂಗವಾಗಿ ನಡೆದ ವಾಹನ ಜಾಥಾ ಕಾರ್ಯಕ್ರಮದ ವೇಳೆ ತಂಡವೊಂದು ʼಮೋದಿ ಮೋದಿʼ ಎಂಬ ಘೋಷಣೆ ಕೂಗಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಪ್ರಯತ್ನಿಸಿದ ಘಟನೆ ನಡೆದಿದೆ. ವಾಹನ ಜಾಥಾದ ಅಂಗವಾಗಿ ಕೊಕ್ಕಡದಲ್ಲಿ ಸಭಾ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ಕಾರ್ಮಿಕ‌ ಮುಖಂಡ ಸುನಿಲ್ ಕುಮಾರ್ ಬಜಾಲ್ ಮಾತನಾಡುತ್ತಿದ್ದರು.ಈ ಸಂದರ್ಭ ಏಕಾಏಕಿ ಗುಂಪೊಂದು ಸೇರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದು,…

Read More

ಸಾಹಿತಿ, ಸಂಘಟಕಿ, ಕವಯತ್ರಿ, ಶ್ರೀಮತಿ ಹಂಚಿಕಟ್ಟೇರ ಫ್ಯಾನ್ಸಿ ಮುತ್ತಣ್ಣ ಇವರಿಗೆ ಕವಿ ಕಾವ್ಯ ವಿಭೂಷಣ ಪ್ರಶಸ್ತಿ

ಮಂಗಳೂರು : ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ 22.02.2026.ಭಾನುವಾರ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ “ವೇದಿಕೆಯಲ್ಲಿ ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ಸರ್ವಾಧ್ಯಕ್ಷತೆಯಲ್ಲಿ, ಶ್ರೀಮದ್ ಎಡನೀರ್ ಶ್ರೀಗಳ ಹಾಗೂ ಗದಗ ಜಿಲ್ಲೆಯ ಶ್ರೀ ಶ್ರೀ ರಮೇಶ ಮಹಾಸ್ವಾಮಿ, ಗೋವಿನಾಳ ಇವರ…

Read More

ಸಂಸದರ ಕಚೇರಿ, ಎಂಎಸ್‌ಇಜೆಡ್ಎಲ್ ವತಿಯಿಂದ ವಿಶೇಷ ಚೇತನರಿಗೆ ಅತ್ಯಾಧುನಿಕ ವೀಲ್‌ಚೇರ್‌ಗಳ ವಿತರಣೆ

ಮಂಗಳೂರು: ವಿಶೇಷ ಚೇತನರಿಗೆ ಅತ್ಯಾಧುನಿಕ ಎಲೆಕ್ಟ್ರಿಕ್ ವೀಲ್‌ಚೇರ್ ಸಹಿತ ಅಗತ್ಯ ಸಾಧನಾ ಸಲಕರಣೆಗಳ ವಿತರಣಾ ಕಾರ್ಯಕ್ರಮವು ದಕ್ಷಿಣ ಕನ್ನಡ ಸಂಸದರ ಕಚೇರಿಯಲ್ಲಿ ಇಂದು ನಡೆಯಿತು. ಕ್ಷೇತ್ರದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಚೇತನ ಫಲಾನುಭವಿಗಳಿಗೆ ಅತ್ಯಾಧುನಿಕ ಎಲೆಕ್ಟ್ರಿಕ್ ವೀಲ್‌ಚೇರ್‌ಗಳು ಹಾಗೂ ಇತರ ಸಾಧನಗಳನ್ನು ವಿತರಿಸಿದ್ದಾರೆ. ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ಅವರ ಉಪಸ್ಥಿತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಈ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗಿದೆ. ಸಂಸದ ಕ್ಯಾ. ಚೌಟ ಅವರ ವಿಶೇಷ ಮನವಿಗೆ ಸ್ಪಂದಿಸಿರುವ ಮಂಗಳೂರು…

Read More

ಕನ್ನಡ ಸೇನೆ ಕರಾವಳಿ ಜಿಲ್ಲೆಗಳಿಗೆ ವಿಸ್ತರಣೆಯಾಗಿ ಕನ್ನಡ ಕಟ್ಟುವ ಮನಸುಗಳನ್ನು ಒಂದು ಮಾಡಲಿದೆ : ಸಮಿತಿಯ ಉಪಾಧ್ಯಕ್ಷ ಎನ್ ನಾಗೇಂದ್ರ

ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಕನ್ನಡ ಸೇನೆಯು ಸುಮಾರು ನಾಲ್ಕು ದಶಕಗಳಿಂದಲೂ ಸತತವಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಾ ಬಂದಿರುತ್ತದೆ. ಇದರ ರಾಜ್ಯಾಧ್ಯಕ್ಷರಾಗಿ ಕೆ ಆರ್ ಕುಮಾರ್ ಅವರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುತ್ತಾರೆ. ಕನ್ನಡ ಸೇನೆ ಘಟಕಗಳು ಎಲ್ಲಾ ಜಿಲ್ಲೆಯಲ್ಲೂ ರೂಪುಗೊಂಡಿದ್ದು ಅದರಂತೆ ದಕ್ಷಿಣ ಕನ್ನಡ ಜಿಲ್ಲೆಗೂ ಸಹ ವಿಸ್ತರಿಸುವ ಉದ್ದೇಶವನ್ನು ಹೊಂದಿದೆ ಎಂದು ಸಮಿತಿಯ ಉಪಾಧ್ಯಕ್ಷರಾದ ಎನ್ ನಾಗೇಂದ್ರ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿಯಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಿತಿಯು ಈಗಾಗಲೇಹೊಸ ಪ್ರತಿನಿಧಿಗಳನ್ನು ಆಯ್ಕೆ…

Read More

ಬೆಳ್ತಂಗಡಿ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ

ಮಂಗಳೂರು :ಬೆಳ್ತಂಗಡಿಯ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧ ವಿಧಿಸಲಾಗಿದೆ.ಗಡಾಯಿಕಲ್ಲು ಚಾರಣವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ. ಬೇಸಿಗೆಯಿಂದ ಕಾಡ್ಕಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು ಚಾರಣ ಅವಕಾಶವನ್ನು ಫೆ.7ರಿಂದ ಮುಂದಿನ ಆದೇಶ ದವರೆಗೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

Read More

ಎಂಸಿಎಫ್ ಹೆಸರನ್ನು ಪಾರಾದೀಪ್ ಫಾಸ್ಟೇಟ್ಸ್ ಲಿಮಿಟಿಡ್ ನಾಮಫಲಕಕ್ಕೆ ಸೇರಿಲಾಯಾಗಿದ್ದು ಹೋರಾಟಕ್ಕೆ ಸಿಕ್ಕ ಜಯ : ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ

ಮಂಗಳೂರು: ಮಂಗಳೂರಿನ ಹೆಮ್ಮೆಯ ಗುರುತಾದ ಎಂಸಿಎಫ್ ಹೆಸರನ್ನು ತೆಗೆದು ಪಾರಾದೀಪ್ ಫಾಸ್ಟೇಟ್ಸ್ ಲಿಮಿಟಿಡ್ ಎಂದು ನಾಮಫಲಕವನ್ನು ಈ ಹಿಂದೆ ಹಾಕಲಾಗಿತ್ತು . ಈ ಬಗ್ಗೆ ವಿರೋಧಿಸಿದ ಮೇಲೆ ಮತ್ತೊಮ್ಮೆ ಎಂಸಿಎಫ್ ಹೆಸರನ್ನು ನಾಮಫಲಕಕ್ಕೆ ಸೇರ್ಪಡೆ ಮಾಡಲಾಯಿತ್ತು ಇದು ಹೋರಾಟಕ್ಕೆ ಸಿಕ್ಕ ಫಲವಾಗಿದೆ ಎಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ ತಿಳಿಸಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಎಂಸಿಎಫ್ ಹೆಸರನ್ನು ಕೂಡಲೇ ನಾಮಫಲಕ್ಕೆ ಮರುಸ್ಥಾಪಿಸುವಂತೆ ಪಾರಾದೀಪ್ ಫಾಸ್ಟೇಟ್ಸ್ ಲಿಮಿಟಿಡ್ ಆಡಳಿತ ಮಂಡಳಿಗೆ…

Read More

ಉಳ್ಳಾಲಿಗೆ ₹186 ಕೋಟಿ ವೆಚ್ಚದ ಅಂಡರ್‌ಗ್ರೌಂಡ್ ವಿದ್ಯುತ್ ಕೇಬಲ್ ಯೋಜನೆ

ಮಂಗಳೂರು: ಉಳ್ಳಾಲ ಪಟ್ಟಣದಲ್ಲಿ ಅಂಡರ್‌ಗ್ರೌಂಡ್ ವಿದ್ಯುತ್ ಕೇಬಲಿಂಗ್ ಯೋಜನೆಗೆ ರಾಜ್ಯ ಸರ್ಕಾರ ₹186 ಕೋಟಿ ಮಂಜೂರು ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಉಳ್ಳಾಲ ಪಟ್ಟಣದ ಸುಂದರೀಕರಣ ಯೋಜನೆಯ ಭಾಗವಾಗಿ ಅಂಡರ್‌ಗ್ರೌಂಡ್ ಕೇಬಲಿಂಗ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭಗೊಂಡಿದೆ ಎಂದರು. ಕಾಮಗಾರಿ ಪೂರ್ಣಗೊಂಡ ಬಳಿಕ ಪಟ್ಟಣದಲ್ಲಿ ಮೇಲ್ಭಾಗದಲ್ಲಿ ಹಾದು ಹೋಗುತ್ತಿರುವ ಜೀವಂತ ವಿದ್ಯುತ್ ತಂತಿಗಳ ಸಮಸ್ಯೆ…

Read More

ಒಂಭತ್ತು ಗುಳಿಗ ದೈವಗಳ ಆವೇಷ, ವಿಶೇಷ ಕೋಲ ಸೇವೆ ಕಾಣಲು ಬರ್ಕಜೆಯಲ್ಲಿ ಜನಸ್ತೋಮ

ಕರಾವಳಿಯಲ್ಲಿ ಗುಳಿಗ ದೈವದ ಕೋಲ ಸೇವೆಯೇ ವಿಶಿಷ್ಟ. ಕರಾವಳಿಯ ಇತಿಹಾಸದಲ್ಲೇ ಅತ್ಯಂತ ವಿಶೇಷ ಆಗಿರುವ ಈ ಆಚರಣೆಗಳು ವರ್ಷಕ್ಕೊಮ್ಮೆ ಜರಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿಯ ನಿಟ್ಟೆಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ, ನವಗುಳಿಗ ಕ್ಷೇತ್ರದಲ್ಲಿ ನಡೆಯುವ ಒಂಬತ್ತು ಗುಳಿಗ ದೈವಗಳ ಏಕಕಾಲದ ಸೇವೆ ತುಳುನಾಡಿನಲ್ಲಿ ಅತಿ ವಿಶಿಷ್ಟ ಸೇವೆಗಳಲ್ಲಿ ಒಂದು. ಈ ಬಾರಿಯ ವಾರ್ಷಿಕ ಉತ್ಸವ ಗುರುವಾರ ರಾತ್ರಿ ನಡೆದಿದ್ದು ಒಂಭತ್ತು ಗುಳಿಗ ದೈವಗಳ ಗಗ್ಗರ ಸೇವೆ. ಆ ಒಂಭತ್ತು ಗುಳಿಗಗಳ…

Read More

ಕುಂದಾಪುರ: ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಉಡುಪಿ: ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಅಪ್ಪಣ್ಣ ಹೆಗ್ಡೆ ಅವರು 1960ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ಬಳಿಕ ಅಧ್ಯಕ್ಷರಾಗಿ ಸಾರ್ವಜನಿಕ ಬದುಕಿಗೆ ಕಾಲಿರಿಸಿದ್ದರು. ಅಪ್ಪಣ್ಣ ಹೆಗ್ಡೆ 1983-85ರ ಅವಧಿಯಲ್ಲಿ ಬೈಂದೂರಿನಿಂದ ಜನತಾ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು. ಆನಂತರ 1988-94ರ ಅವಧಿಗೆ ವಿಧಾನ ಪರಿಷತ್ ಗೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಅಪ್ಪಣ್ಣ ಹೆಗ್ಡೆ…

Read More

ಫೆ 10 ರಿಂದ ಮಾರ್ಚ್ 10 ರ ತನಕ ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ : ನವಾಝ್ ಕಟ್ಟೆ ಕರೆ

ಮಂಗಳೂರು: ದೇಶದಲ್ಲಿ ಶೋಷಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಧ್ವನಿಯಾಗಿ ನಿರಂತರ ಹೋರಾಟ ನಡೆಸುತ್ತಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷವು ಫೆಬ್ರವರಿ 10 ರಿಂದ ಮಾರ್ಚ್ 10 ರವರೆಗೆ ಎಸ್‌ಡಿಪಿಐ ಸೇರೋಣ ಜನ ಸಾಮಾನ್ಯರ ಧ್ವನಿಗೆ ಶಕ್ತಿ ನೀಡೋಣ ಎಂಬ ಘೋಷ ವಾಕ್ಯದೊಂದಿಗೆ ಬೃಹತ್ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2009ರಲ್ಲಿ ಪಕ್ಷ ಸ್ಥಾಪನೆಯಾದ ದಿನದಿಂದಲೂ ಎಸ್‌ಡಿಪಿಐ ಕೇವಲ ಅಧಿಕಾರಕ್ಕಾಗಿ ರಾಜಕಾರಣ…

Read More
error: Content is protected !!