ನಂತೂರು ಅಪಘಾತ ಪ್ರಕರಣ: ನ್ಯಾಯಕ್ಕೆ ಆಗ್ರಹಿಸಿ ಶವವಿಟ್ಟು ರಸ್ತೆ ತಡೆ, ಸ್ಥಳೀಯರ ಆಕ್ರೋಶ

ನಂತೂರು:ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ, ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸ್ಥಳೀಯರು ಇಂದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮೃತ ಯುವತಿಯ ಶವವನ್ನು ಸ್ಥಳಕ್ಕೆ ತಂದು ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಬಸ್ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಗರದ ನಂತೂರು ವೃತ್ತದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ, ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ಯುವತಿ ಬಸ್ ಅಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ…

Read More

ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತ -ಕಾರ್ಮಿಕ ವರ್ಗ ಮತ್ತೆ ಗುಲಾಮಗಿರಿಯತ್ತ – ಫಣೀಂದ್ರ ಕೆ

ಮಂಗಳೂರು: ಕಾರ್ಮಿಕ ವರ್ಗದ ಹಿತಾಸಕ್ತಿಗಳನ್ನು ಕಾಪಾಡಬೇಕಾದ ಕೇಂದ್ರ ಸರಕಾರವು ನಿತ್ಯ ನಿರಂತರವಾಗಿ ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ.ಆ ಮೂಲಕ ಕಾರ್ಪೊರೇಟ್ ಸರಕಾರವಾಗಿದೆ. ಹಸಿವು ಮುಕ್ತ,ಬಡತನ ಮುಕ್ತ, ನಿರುದ್ಯೋಗ ಮುಕ್ತ ಭಾರತವಾಗಿ ನಿರ್ಮಾಣ ಮಾಡುವ ಬದಲು ಯೂನಿಯನ್ ಮುಕ್ತ ಭಾರತವನ್ನಾಗಿ ನಿರ್ಮಿಸಲು ಹೊರಟಿದೆ.ಈ ಮೂಲಕ ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮರನ್ನಾಗಿಸಿ ಅತ್ಯಂತ ಹೀನಾಯವಾಗಿ ಶೋಷಣೆ ಮಾಡಲು ಹೊರಟಿದೆ ಎಂದು ಕರ್ನಾಟಕ ಬ್ಯಾಂಕ್ ನೌಕರರ ಸಂಘಟನೆಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಫಣೀಂದ್ರ ಕೆ ಯವರು ಆಕ್ರೋಶ ವ್ಯಕ್ತಪಡಿಸಿದರು. ಅವರು…

Read More

ರೈತರೊಂದಿಗೆ ಉತ್ಪಾದಕ ಮೈತ್ರಿಗಳನ್ನು ರೂಪಿಸಲು KERA ಯೋಜನೆಯಡಿ ಕಂಪನಿಗಳಿಗೆ ಆಹ್ವಾನ….. !

ಮಂಗಳೂರು:ಕೇರಳ ಸರ್ಕಾರವು ವಿಶ್ವಬ್ಯಾಂಕ್‌ ಸಹಕಾರದೊಂದಿಗೆ ಅನುಷ್ಠಾನಗೊಳಿಸುತ್ತಿರುವ ಕೇರಳ ಹವಾಮಾನ ಸ್ಥಿತಿಸ್ತಾಪಕ ಕೃಷಿ-ಮೌಲ, ಸರಪಳಿ ಆಧುನೀಕರಣ (KERA)ಯೋಜನೆಯಡಿಯಲ್ಲಿ, ರೈತ ಉತ್ಪಾದಕ ಕಂಪನಿಗಳು (FPG) ಹಾಗೂ ಪ್ರಮುಖ ಕೃಷಿ ವ್ಯವಹಾರ ಸಂಸ್ಥೆಗಳ ನಡುವಿನ ಬಲಿಷ್ಠ , ಉತ್ಪಾದಕ ಮೈತ್ರಿಗಳನ್ನು ರೂಪಿಸುವ ಉದ್ದೇಶದಿಂದ ಒಂದು ಐತಿಹಾಸಿಕ ಉಪಕ್ರಮವನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ಸಂಬಂಧಿತ ಕೃಷಿ ಮತ್ತು ಕೃಷಿಯೇತರ ಸಂಸ್ಥೆಗಳು, ಸೂಪರ್‌ಮಾರ್ಕೆಟ್ ಸರವಳಿಗಳು, ರಫ್ತುದಾರರು ಹಾಗೂ ಇ-ಕಾಮರ್ಸ್ ವೇದಿಕೆಗಳನ್ನು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ ಎಂದು KERA ಯೋಜನಾ ಇದರ ಉಪ ಕೃಷಿ ನಿರ್ದೇಶಕರಾದ…

Read More

ನಂತೂರು ವೃತ್ತದಲ್ಲಿ ಭೀಕರ ಅಪಘಾತ: ಸ್ಕೂಟರ್‌ಗೆ ಬಸ್ ಡಿಕ್ಕಿ, ಯುವತಿ ಸ್ಥಳದಲ್ಲೇ ಸಾವು

ಮಂಗಳೂರು: ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ. ಈಕೆ ತನ್ನ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ತಾಗಿದ್ದು ಹಿಂಬದಿಯಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ,…

Read More

ಫೆ.12ರಂದು ಅಖಿಲ ಭಾರತ ಮಹಾಮುಷ್ಕರಕ್ಕೆ ವಿವಿಧ ಸಂಘಟನೆಗಳ ಬೆಂಬಲ : ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್

ಮಂಗಳೂರು: ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದರ ವಿರುದ್ಧ ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ 4 ಕಾರ್ಮಿಕ ಸಂಹಿತೆಗಳ ವಿರುದ್ಧ ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ವಿರುದ್ಧ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಕಾರ್ಮಿಕರ ನೇತೃತ್ವದಲ್ಲಿ ಫೆ.12ರಂದು ಅಖಿಲ ಭಾರತ ಮಹಾಮುಷ್ಕರ ನಡೆಯಲಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಹೇಳಿದ್ದಾರೆ. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಕೇಂದ್ರ…

Read More

ತ್ರಾಸಿ ರಾಜು ದೇವಾಡಿಗ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ: ಮಂಜುನಾಥ ಭಂಡಾರಿ

ಕುಂದಾಪುರ: ಉಡುಪಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ತ್ರಾಸಿ ರಾಜು ದೇವಾಡಿಗ ಅವರು ನಿಧನರಾಗಿದ್ದು ಇದರಿಂದ ಪಕ್ಷ ಮತ್ತು ಇಡೀ ಸಮಾಜಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಆಗಿರುವ ಮಂಜುನಾಥ ಭಂಡಾರಿ ಅವರು ಕಂಬನಿ ಮಿಡಿದಿದ್ದಾರೆ. ತ್ರಾಸಿ ರಾಜು ದೇವಾಡಿಗ ಅವರ ಜನಸೇವೆ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅವರ ಅಗ್ರಗಣ್ಯ ಸಾಧನೆ ಗಮನಾರ್ಹವಾಗಿದೆ. ಆಸ್ಕರ್ ಫೆರ್ನಾಂಡಿಸ್ ಅವರು ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಅವರೊಂದಿಗೆ ಪಕ್ಷದ ಕೆಲಸ ಮಾಡಿದ ನೆನಪು…

Read More

ಮೂಲ್ಕಿಯ ಯುವ ರಾಜಕೀಯ-ಸಾಮಾಜಿಕ ನೇತಾರ ಅಶೋಕ್ ಪೂಜಾರ್ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಆಯ್ಕೆ

ಮಂಗಳೂರು : ಮೂಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷ ಯುವ ನಾಯಕರಾಗಿರುವ ಅಶೋಕ್ ಪೂಜಾರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯದಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಟ್ ರವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ…

Read More

ಮಂಗಳೂರು: ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಅತ್ತೆ ಪುಷ್ಪಾವತಿ ಕಾರಂದೂರು ನಿಧನ

ಮಂಗಳೂರು: ಕೇಂದ್ರದ ಮಾಜಿ ಸಚಿವರಾದ ಬಿ.ಜನಾರ್ದನ ಪೂಜಾರಿಯವರ ಅತ್ತೆ (ಪತ್ನಿಯ ತಾಯಿ) ಪುಷ್ಪಾವತಿ ಕಾರಂದೂರು (96) ವಯೋಸಹಜ ಅಸೌಖ್ಯದಿಂದ ಬುಧವಾರ (ಫೆ.4) ಮುಂಜಾನೆ ನಿಧನರಾದರು. ಪುತ್ರರಾದ ವಕೀಲ ರಮಾನಾಥ ಕಾರಂದೂರು, ಡಾ.ದೇವದಾಸ್ ಕಾರಂದೂರು, ಉದ್ಯಮಿ ಸತೀಶ್ ಕಾರಂದೂರು, ಪುತ್ರಿಯರಾದ ಮಾಲತಿ ಜೆ. ಪೂಜಾರಿ, ಜಾನಕಿ ವಿಶ್ವನಾಥ್, ವಿಜಯ ಪ್ರಕಾಶ್ (ಶೀಲಾ), ಸೇರಿದಂತೆ ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಮರಿಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಫೆ.4ರಂದು ಸಂಜೆ 5.30ಕ್ಕೆ ಮಚ್ಚಿನ ಕಾರಂದೂರು ಮನೆಯಲ್ಲಿ ನಡೆಯಲಿದೆ.

Read More

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

ಹಳೆಯಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಕೇಂದ್ರ ಮಹಿಳಾ ಫಟಕದ ನವಮ ವಾರ್ಷಿಕೋತ್ಸವ ಪಾವಂಜೆ ದೇವಸ್ಥಾನದ ಆವರಣದಲ್ಲಿ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಅಶೋಕ್ ಶೆಟ್ಟಿ ತಡಂಬೈಲ್ ವಹಿಸಿದ್ದರು.ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಗುತ್ತು ಸತೀಶ್ ಶೆಟ್ಟಿ ಅವರು ಅಸಕ್ತ ಕಲಾವಿದರ ಬದುಕಿಗೆ ಶಕ್ತಿ ತುಂಬಿದ್ದಾರೆ. ಕಲಾವಿದರ ವೈಯಕ್ತಿಕ ಬದುಕಿನ ಸತ್ಯವನ್ನು ಶೋಧಿಸಿದ ಪಟ್ಲರವರು ಆ ಕಾರಣಕ್ಕಾಗಿಯೇ ಪಟ್ಲ ಫೌಂಡೇಶನ್…

Read More

ಉಡುಪಿ: ನಡುರಸ್ತೆಯಲ್ಲಿ ವಿದ್ಯಾರ್ಥಿಗಳ ಪುಂಡಾಟ—ಹೆಜಮಾಡಿ ಟೋಲ್ ಗೇಟ್ ಬಳಿ ಪಟಾಕಿ ಸಿಡಿಸಿ ಹುಚ್ಚಾಟ

ಉಡುಪಿ: ನಡುರಸ್ತೆಯಲ್ಲೇ ವಿದ್ಯಾರ್ಥಿಗಳು ಕುಣಿದು, ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ. ಕೇರಳದಿಂದ ಉಡುಪಿ ಕಡೆ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ಆಗಮಿಸಿದ್ದರು. ಈ ವೇಳೆ ಟೋಲ್ ಗೇಟ್ ಬಳಿ ಬಸ್‌ಗಳನ್ನು ನಿಲ್ಲಿಸಿ, ವಿದ್ಯಾರ್ಥಿಗಳು ರಸ್ತೆಯ ಮಧ್ಯದಲ್ಲೇ ಕುಣಿದು, ಪಟಾಕಿ ಸಿಡಿಸಿ ಹುಚ್ಚಾಟ ನಡೆಸಿದರು. ಈ ಕಾರಣದಿಂದ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾದುದಾಗಿ ತಿಳಿದು ಬಂದಿದೆ. ವಿದ್ಯಾರ್ಥಿಗಳ ಈ ಪುಂಡಾಟದ ದೃಶ್ಯಗಳು…

Read More
error: Content is protected !!