‘ಕೃಷಿಯೇ ನಮ್ಮ ಜೀವನವಾಗಿದೆ’ -ಶಾಸಕ ರಾಜೇಶ್ ನಾಯ್ಕ್
ಬಂಟ್ವಾಳ:ದ.ಕ.ಜಿಲ್ಲೆಯ ಪ್ರತಿ ಮನೆಯಲ್ಲೂ ಒಂದಲ್ಲ ಒಂದು ಕೃಷಿಯನ್ನು ಮಾಡುತ್ತಿದ್ದು, ನಾವೆಲ್ಲರೂ ಕೃಷಿಕರಾಗಿದ್ದೇವೆ ,ಕೃಷಿಯೇ ನಮ್ಮ ಜೀವನವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.ಅವರು ಕೃಷಿ ಇಲಾಖೆ ಬಂಟ್ವಾಳ ಇದರ , 2025 -26 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಉಪ ಅಭಿಯಾನ,ATMA ( ಆತ್ಮ) ಯೋಜನೆಯಡಿ ” ಕಿಸಾನ್ ಗೋಷ್ಠಿ “ವಿವೇಚನಾತ್ಮಕ ಕೀಟನಾಶಕಗಳ ಬಳಕೆ ಹಾಗೂ ಬೆಳೆಗಳಲ್ಲಿ ಶೇಷಾಂಶ ತಗ್ಗಿಸಲು ಅಗತ್ಯ ಕ್ರಮಗಳ ಕುರಿತು ತರಬೇತಿ ಕಾರ್ಯಕ್ರಮ ಖಾಸಗಿ ನಿವಾಸಿಗಳಿಗೆ ಬೆಳೆ ಸಮೀಕ್ಷೆ…